Homeಮುಖಪುಟಮದರ್ ತೆರೇಸಾ ಅವರ ಚಾರಿಟಿಯ ‘ವಿದೇಶಿ ನಿಧಿಗಳ ಪರವಾನಗಿ’ ಪುನಃಸ್ಥಾಪನೆ

ಮದರ್ ತೆರೇಸಾ ಅವರ ಚಾರಿಟಿಯ ‘ವಿದೇಶಿ ನಿಧಿಗಳ ಪರವಾನಗಿ’ ಪುನಃಸ್ಥಾಪನೆ

ಒಕ್ಕೂಟ ಸರ್ಕಾರ ಪರವಾನಗಿ ಸ್ಥಗಿತ ಮಾಡಿದ್ದರಿಂದ ಸಂಸ್ಥೆಯ ಸುಮಾರು 250 ಖಾತೆಗಳಿಗೆ ವಿದೇಶದಿಂದ ಧನ ಸಹಾಯ ಮಾಡಲು ಸಾಧ್ಯವಾಗಿರಲಿಲ್ಲ

- Advertisement -
- Advertisement -

ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗೆ ವಿದೇಶದಿಂದ ನಿಧಿಯನ್ನು ಪಡೆಯಲು ಅಗತ್ಯವಿದ್ದ ಪರವಾನಗಿ (FCRA)ಯನ್ನು ಶನಿವಾರ ಪುನಃಸ್ಥಾಪಿಸಲಾಗಿದೆ. ಕಳೆದ ಎರಡು ವಾರಗಳಿಂದ ‘ಪ್ರತಿಕೂಲ ವಿಷಯ’ಗಳನ್ನು ಉಲ್ಲೇಖಿಸಿ ಒಕ್ಕೂಟ ಸರ್ಕಾರವು ಸಂಸ್ಥೆಯ ನವೀಕರಣದ ವಿನಂತಿಯನ್ನು ನಿರಾಕರಿಸಿತ್ತು.

ಪರವಾನಗಿ ಇಲ್ಲದೆ ಇರುವುದರಿಂದಾಗಿ ಸಂಸ್ಥೆಯ ಸುಮಾರು 250 ಖಾತೆಗಳಿಗೆ ವಿದೇಶದಿಂದ ಧನ ಸಹಾಯ ಮಾಡಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಒಕ್ಕೂಟ ಸರ್ಕಾರವು ಇಲ್ಲಿಯವರೆಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದರೆ ಸುದ್ದಿ ಸಂಸ್ಥೆ ANI, ‘ಸಂಬಂಧಿತ ಇಲಾಖೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ನಂತರ ಪರವಾನಗಿಯನ್ನು ಮರುಸ್ಥಾಪಿಸಲಾಗಿದೆ’ ಎಂದು ವರದಿ ಮಾಡಿದೆ.

ಇದನ್ನೂ ಓದಿ:ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

FCRA ಪರವಾನಗಿಯನ್ನು ಮತ್ತೇ ಪುನಃಸ್ಥಾಪಿಸಿದ ನಂತರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತೃಣಮೂಲ ಸಂಸದ ಡೆರೆಕ್ ಒ’ಬ್ರೇನ್, “56 ಇಂಚಿನ ಶಕ್ತಿಗಿಂತ ಪ್ರೀತಿಯ ಶಕ್ತಿ ಪ್ರಬಲವಾಗಿದೆ” ಎಂದು ಪ್ರಧಾನಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

“ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗಾಗಿ FCRA ನೋಂದಣಿ ಮತ್ತೆ ಮಾಡಲಾಗಿದೆ. ‘ಪ್ರತಿಕೂಲ ವಿಷಯ’ಗಳು ಹಲವರಿಗೆ ಕಿರುಕುಳ ನೀಡಿತು, ಆದರೆ ಅದು ಎರಡು ವಾರಗಳಲ್ಲಿ ಕಣ್ಮರೆಯಾಯಿತು. ಪ್ರೀತಿಯ ಶಕ್ತಿಯು 56 ಇಂಚಿನ ಶಕ್ತಿಗಿಂತ ಪ್ರಬಲವಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಟ್ವೀಟ್ ಮಾಡಿ, “ಮಿಷನರೀಸ್ ಆಫ್ ಚಾರಿಟಿಗೆ ಎಫ್‌ಸಿಆರ್‌ಎ ಮತ್ತೆ ಅನುಮೋದನೆ ನೀಡಿದೆ. ಸಾರ್ವಜನಿಕ ಅಭಿಪ್ರಾಯ ಮತ್ತು ಅಂತರರಾಷ್ಟ್ರೀಯ ಪ್ರತಿಕ್ರಿಯೆಯಿಂದಾಗಿ ಇದು ಸಾಧ್ಯವಾಗಿದೆ” ಎಂದು ಹೇಳಿದ್ದಾರೆ.

ಚಾರಿಟಿಯ FCRA ಪರವಾನಗಿ ವಿವಾದ ಬ್ರಿಟನ್ ಸಂಸತ್ತಿನಲ್ಲೂ ಗುರುವಾರ ಸದ್ದು ಮಾಡಿತ್ತು. “ಚಾರಿಟಿಯ ಖಾತೆಗಳಿಗೆ FCRA ಯಾಕೆ ನಿರಾಕರಿಸಲಾಗಿದೆ, ಇದರ ಬಗ್ಗೆ ಭಾರತ ಸರ್ಕಾರ ಸ್ಪಷ್ಟನೆ ನೀಡಬೇಕು ಮತ್ತು ನಿರ್ಬಂಧಗಳನ್ನು ತಕ್ಷಣವೇ ತೆಗೆದುಹಾಕುವಂತೆ ಭಾರತ ಸರ್ಕಾರವನ್ನು ಕೇಳಬೇಕು” ಎಂದು ಅಲ್ಲಿನ ಸಂಸದರು ತಮ್ಮ ಸರ್ಕಾರದ ಮೇಲೆ ಒತ್ತಡ ಹೇರಿದ್ದರು.

ಇದನ್ನೂ ಓದಿ:ಜಾಮಿಯಾ ಮಿಲ್ಲಿಯಾ ಸೇರಿದಂತೆ ವಿದೇಶಿ ಫಂಡಿಂಗ್ ಪರವಾನಗಿ ಕಳೆದುಕೊಂಡ 12,000 ಎನ್‌ಜಿಒಗಳು!

ಮಿಷನರೀಸ್ ಆಫ್ ಚಾರಿಟಿಯ ಎಫ್‌ಸಿಆರ್‌ಎ ಪರವಾನಗಿಯನ್ನು ಕ್ರಿಸ್‌ಮಸ್ ದಿನದಂದು ಹಿಂತೆಗೆದುಕೊಳ್ಳಲಾಗಿತ್ತು. ಇದನ್ನು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ವ್ಯಾಪಕವಾಗಿ ಖಂಡಿಸಿದ್ದರು.

ತನ್ನ ನಿರ್ಧಾರವನ್ನು ಪರಿಶೀಲಿಸುವ ಮನವಿಯನ್ನು ಸ್ವೀಕರಿಸಿಲ್ಲ ಎಂದು ಗೃಹ ಸಚಿವಾಲಯ ಹೇಳಿತ್ತು. ಆದರೆ ಸಚಿವಾಲಯವು ಇದಕ್ಕೆ ವಿವರಗಳನ್ನು ನೀಡಿರಲಿಲ್ಲ. ಮಿಷನರೀಸ್‌‌ ಆಫ್‌ ಚಾರಿಟಿ ಯುವತಿಯರನ್ನು ಮತಾಂತರಿಸಲು ಯತ್ನಿಸಿಸುತ್ತಿದೆ ಎಂದು ಗುಜರಾತ್‌ನಲ್ಲಿ ದೂರು ದಾಖಲಾದ ವಾರಗಳ ನಂತರ ಚಾರಿಟಿಯ ಖಾತೆಗಳು ಸ್ಥಗಿತಗೊಂಡಿದ್ದವು.

ಕಳೆದ ವಾರ ಮಿಷನರೀಸ್ ಆಫ್ ಚಾರಿಟಿ ಸೇರಿದಂತೆ ಭಾರತದಲ್ಲಿನ 12,000 ಕ್ಕೂ ಹೆಚ್ಚು ಎನ್‌ಜಿಒಗಳು ಮತ್ತು ಚಾರಿಟಬಲ್ ಸಂಸ್ಥೆಗಳು ಅವಧಿ ಮುಗಿದ ನಂತರ ತಮ್ಮ ಎಫ್‌ಸಿಆರ್‌ಎ ಪರವಾನಗಿಗಳನ್ನು ಕಳೆದುಕೊಂಡಿವೆ ಎಂದು ಒಕ್ಕೂಟ ಸರ್ಕಾರ ಹೇಳಿದೆ. ಎಫ್‌ಸಿಆರ್‌ಎ ಪರವಾನಗಿ ಇಲ್ಲದ ಸಂಸ್ಥೆಗಳ ಪಟ್ಟಿಯಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ, ಆಕ್ಸ್‌ಫ್ಯಾಮ್ ಇಂಡಿಯಾ, ಭಾರತೀಯ ವೈದ್ಯಕೀಯ ಸಂಘ ಮತ್ತು ಕುಷ್ಠರೋಗ ಮಿಷನ್ ಸೇರಿದೆ.

ಇದನ್ನೂ ಓದಿ:ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆಮದರ್‌ ಥೆರೇಸಾ ಮದರ್‌ ಥರೇಸಾ ಮದರ್‌ ಥೆರೇಸಾ ಮದರ್‌ ಥರೆಸಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....