Homeಮುಖಪುಟಮದರ್ ತೆರೇಸಾ ಅವರ ಚಾರಿಟಿಯ ‘ವಿದೇಶಿ ನಿಧಿಗಳ ಪರವಾನಗಿ’ ಪುನಃಸ್ಥಾಪನೆ

ಮದರ್ ತೆರೇಸಾ ಅವರ ಚಾರಿಟಿಯ ‘ವಿದೇಶಿ ನಿಧಿಗಳ ಪರವಾನಗಿ’ ಪುನಃಸ್ಥಾಪನೆ

ಒಕ್ಕೂಟ ಸರ್ಕಾರ ಪರವಾನಗಿ ಸ್ಥಗಿತ ಮಾಡಿದ್ದರಿಂದ ಸಂಸ್ಥೆಯ ಸುಮಾರು 250 ಖಾತೆಗಳಿಗೆ ವಿದೇಶದಿಂದ ಧನ ಸಹಾಯ ಮಾಡಲು ಸಾಧ್ಯವಾಗಿರಲಿಲ್ಲ

- Advertisement -
- Advertisement -

ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗೆ ವಿದೇಶದಿಂದ ನಿಧಿಯನ್ನು ಪಡೆಯಲು ಅಗತ್ಯವಿದ್ದ ಪರವಾನಗಿ (FCRA)ಯನ್ನು ಶನಿವಾರ ಪುನಃಸ್ಥಾಪಿಸಲಾಗಿದೆ. ಕಳೆದ ಎರಡು ವಾರಗಳಿಂದ ‘ಪ್ರತಿಕೂಲ ವಿಷಯ’ಗಳನ್ನು ಉಲ್ಲೇಖಿಸಿ ಒಕ್ಕೂಟ ಸರ್ಕಾರವು ಸಂಸ್ಥೆಯ ನವೀಕರಣದ ವಿನಂತಿಯನ್ನು ನಿರಾಕರಿಸಿತ್ತು.

ಪರವಾನಗಿ ಇಲ್ಲದೆ ಇರುವುದರಿಂದಾಗಿ ಸಂಸ್ಥೆಯ ಸುಮಾರು 250 ಖಾತೆಗಳಿಗೆ ವಿದೇಶದಿಂದ ಧನ ಸಹಾಯ ಮಾಡಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಒಕ್ಕೂಟ ಸರ್ಕಾರವು ಇಲ್ಲಿಯವರೆಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದರೆ ಸುದ್ದಿ ಸಂಸ್ಥೆ ANI, ‘ಸಂಬಂಧಿತ ಇಲಾಖೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ನಂತರ ಪರವಾನಗಿಯನ್ನು ಮರುಸ್ಥಾಪಿಸಲಾಗಿದೆ’ ಎಂದು ವರದಿ ಮಾಡಿದೆ.

ಇದನ್ನೂ ಓದಿ:ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

FCRA ಪರವಾನಗಿಯನ್ನು ಮತ್ತೇ ಪುನಃಸ್ಥಾಪಿಸಿದ ನಂತರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತೃಣಮೂಲ ಸಂಸದ ಡೆರೆಕ್ ಒ’ಬ್ರೇನ್, “56 ಇಂಚಿನ ಶಕ್ತಿಗಿಂತ ಪ್ರೀತಿಯ ಶಕ್ತಿ ಪ್ರಬಲವಾಗಿದೆ” ಎಂದು ಪ್ರಧಾನಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

“ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗಾಗಿ FCRA ನೋಂದಣಿ ಮತ್ತೆ ಮಾಡಲಾಗಿದೆ. ‘ಪ್ರತಿಕೂಲ ವಿಷಯ’ಗಳು ಹಲವರಿಗೆ ಕಿರುಕುಳ ನೀಡಿತು, ಆದರೆ ಅದು ಎರಡು ವಾರಗಳಲ್ಲಿ ಕಣ್ಮರೆಯಾಯಿತು. ಪ್ರೀತಿಯ ಶಕ್ತಿಯು 56 ಇಂಚಿನ ಶಕ್ತಿಗಿಂತ ಪ್ರಬಲವಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಟ್ವೀಟ್ ಮಾಡಿ, “ಮಿಷನರೀಸ್ ಆಫ್ ಚಾರಿಟಿಗೆ ಎಫ್‌ಸಿಆರ್‌ಎ ಮತ್ತೆ ಅನುಮೋದನೆ ನೀಡಿದೆ. ಸಾರ್ವಜನಿಕ ಅಭಿಪ್ರಾಯ ಮತ್ತು ಅಂತರರಾಷ್ಟ್ರೀಯ ಪ್ರತಿಕ್ರಿಯೆಯಿಂದಾಗಿ ಇದು ಸಾಧ್ಯವಾಗಿದೆ” ಎಂದು ಹೇಳಿದ್ದಾರೆ.

ಚಾರಿಟಿಯ FCRA ಪರವಾನಗಿ ವಿವಾದ ಬ್ರಿಟನ್ ಸಂಸತ್ತಿನಲ್ಲೂ ಗುರುವಾರ ಸದ್ದು ಮಾಡಿತ್ತು. “ಚಾರಿಟಿಯ ಖಾತೆಗಳಿಗೆ FCRA ಯಾಕೆ ನಿರಾಕರಿಸಲಾಗಿದೆ, ಇದರ ಬಗ್ಗೆ ಭಾರತ ಸರ್ಕಾರ ಸ್ಪಷ್ಟನೆ ನೀಡಬೇಕು ಮತ್ತು ನಿರ್ಬಂಧಗಳನ್ನು ತಕ್ಷಣವೇ ತೆಗೆದುಹಾಕುವಂತೆ ಭಾರತ ಸರ್ಕಾರವನ್ನು ಕೇಳಬೇಕು” ಎಂದು ಅಲ್ಲಿನ ಸಂಸದರು ತಮ್ಮ ಸರ್ಕಾರದ ಮೇಲೆ ಒತ್ತಡ ಹೇರಿದ್ದರು.

ಇದನ್ನೂ ಓದಿ:ಜಾಮಿಯಾ ಮಿಲ್ಲಿಯಾ ಸೇರಿದಂತೆ ವಿದೇಶಿ ಫಂಡಿಂಗ್ ಪರವಾನಗಿ ಕಳೆದುಕೊಂಡ 12,000 ಎನ್‌ಜಿಒಗಳು!

ಮಿಷನರೀಸ್ ಆಫ್ ಚಾರಿಟಿಯ ಎಫ್‌ಸಿಆರ್‌ಎ ಪರವಾನಗಿಯನ್ನು ಕ್ರಿಸ್‌ಮಸ್ ದಿನದಂದು ಹಿಂತೆಗೆದುಕೊಳ್ಳಲಾಗಿತ್ತು. ಇದನ್ನು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ವ್ಯಾಪಕವಾಗಿ ಖಂಡಿಸಿದ್ದರು.

ತನ್ನ ನಿರ್ಧಾರವನ್ನು ಪರಿಶೀಲಿಸುವ ಮನವಿಯನ್ನು ಸ್ವೀಕರಿಸಿಲ್ಲ ಎಂದು ಗೃಹ ಸಚಿವಾಲಯ ಹೇಳಿತ್ತು. ಆದರೆ ಸಚಿವಾಲಯವು ಇದಕ್ಕೆ ವಿವರಗಳನ್ನು ನೀಡಿರಲಿಲ್ಲ. ಮಿಷನರೀಸ್‌‌ ಆಫ್‌ ಚಾರಿಟಿ ಯುವತಿಯರನ್ನು ಮತಾಂತರಿಸಲು ಯತ್ನಿಸಿಸುತ್ತಿದೆ ಎಂದು ಗುಜರಾತ್‌ನಲ್ಲಿ ದೂರು ದಾಖಲಾದ ವಾರಗಳ ನಂತರ ಚಾರಿಟಿಯ ಖಾತೆಗಳು ಸ್ಥಗಿತಗೊಂಡಿದ್ದವು.

ಕಳೆದ ವಾರ ಮಿಷನರೀಸ್ ಆಫ್ ಚಾರಿಟಿ ಸೇರಿದಂತೆ ಭಾರತದಲ್ಲಿನ 12,000 ಕ್ಕೂ ಹೆಚ್ಚು ಎನ್‌ಜಿಒಗಳು ಮತ್ತು ಚಾರಿಟಬಲ್ ಸಂಸ್ಥೆಗಳು ಅವಧಿ ಮುಗಿದ ನಂತರ ತಮ್ಮ ಎಫ್‌ಸಿಆರ್‌ಎ ಪರವಾನಗಿಗಳನ್ನು ಕಳೆದುಕೊಂಡಿವೆ ಎಂದು ಒಕ್ಕೂಟ ಸರ್ಕಾರ ಹೇಳಿದೆ. ಎಫ್‌ಸಿಆರ್‌ಎ ಪರವಾನಗಿ ಇಲ್ಲದ ಸಂಸ್ಥೆಗಳ ಪಟ್ಟಿಯಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ, ಆಕ್ಸ್‌ಫ್ಯಾಮ್ ಇಂಡಿಯಾ, ಭಾರತೀಯ ವೈದ್ಯಕೀಯ ಸಂಘ ಮತ್ತು ಕುಷ್ಠರೋಗ ಮಿಷನ್ ಸೇರಿದೆ.

ಇದನ್ನೂ ಓದಿ:ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆಮದರ್‌ ಥೆರೇಸಾ ಮದರ್‌ ಥರೇಸಾ ಮದರ್‌ ಥೆರೇಸಾ ಮದರ್‌ ಥರೆಸಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...