Homeಮುಖಪುಟಮದರ್ ತೆರೇಸಾ ಅವರ ಚಾರಿಟಿಯ ‘ವಿದೇಶಿ ನಿಧಿಗಳ ಪರವಾನಗಿ’ ಪುನಃಸ್ಥಾಪನೆ

ಮದರ್ ತೆರೇಸಾ ಅವರ ಚಾರಿಟಿಯ ‘ವಿದೇಶಿ ನಿಧಿಗಳ ಪರವಾನಗಿ’ ಪುನಃಸ್ಥಾಪನೆ

ಒಕ್ಕೂಟ ಸರ್ಕಾರ ಪರವಾನಗಿ ಸ್ಥಗಿತ ಮಾಡಿದ್ದರಿಂದ ಸಂಸ್ಥೆಯ ಸುಮಾರು 250 ಖಾತೆಗಳಿಗೆ ವಿದೇಶದಿಂದ ಧನ ಸಹಾಯ ಮಾಡಲು ಸಾಧ್ಯವಾಗಿರಲಿಲ್ಲ

- Advertisement -
- Advertisement -

ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗೆ ವಿದೇಶದಿಂದ ನಿಧಿಯನ್ನು ಪಡೆಯಲು ಅಗತ್ಯವಿದ್ದ ಪರವಾನಗಿ (FCRA)ಯನ್ನು ಶನಿವಾರ ಪುನಃಸ್ಥಾಪಿಸಲಾಗಿದೆ. ಕಳೆದ ಎರಡು ವಾರಗಳಿಂದ ‘ಪ್ರತಿಕೂಲ ವಿಷಯ’ಗಳನ್ನು ಉಲ್ಲೇಖಿಸಿ ಒಕ್ಕೂಟ ಸರ್ಕಾರವು ಸಂಸ್ಥೆಯ ನವೀಕರಣದ ವಿನಂತಿಯನ್ನು ನಿರಾಕರಿಸಿತ್ತು.

ಪರವಾನಗಿ ಇಲ್ಲದೆ ಇರುವುದರಿಂದಾಗಿ ಸಂಸ್ಥೆಯ ಸುಮಾರು 250 ಖಾತೆಗಳಿಗೆ ವಿದೇಶದಿಂದ ಧನ ಸಹಾಯ ಮಾಡಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಒಕ್ಕೂಟ ಸರ್ಕಾರವು ಇಲ್ಲಿಯವರೆಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದರೆ ಸುದ್ದಿ ಸಂಸ್ಥೆ ANI, ‘ಸಂಬಂಧಿತ ಇಲಾಖೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ನಂತರ ಪರವಾನಗಿಯನ್ನು ಮರುಸ್ಥಾಪಿಸಲಾಗಿದೆ’ ಎಂದು ವರದಿ ಮಾಡಿದೆ.

ಇದನ್ನೂ ಓದಿ:ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

FCRA ಪರವಾನಗಿಯನ್ನು ಮತ್ತೇ ಪುನಃಸ್ಥಾಪಿಸಿದ ನಂತರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತೃಣಮೂಲ ಸಂಸದ ಡೆರೆಕ್ ಒ’ಬ್ರೇನ್, “56 ಇಂಚಿನ ಶಕ್ತಿಗಿಂತ ಪ್ರೀತಿಯ ಶಕ್ತಿ ಪ್ರಬಲವಾಗಿದೆ” ಎಂದು ಪ್ರಧಾನಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

“ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗಾಗಿ FCRA ನೋಂದಣಿ ಮತ್ತೆ ಮಾಡಲಾಗಿದೆ. ‘ಪ್ರತಿಕೂಲ ವಿಷಯ’ಗಳು ಹಲವರಿಗೆ ಕಿರುಕುಳ ನೀಡಿತು, ಆದರೆ ಅದು ಎರಡು ವಾರಗಳಲ್ಲಿ ಕಣ್ಮರೆಯಾಯಿತು. ಪ್ರೀತಿಯ ಶಕ್ತಿಯು 56 ಇಂಚಿನ ಶಕ್ತಿಗಿಂತ ಪ್ರಬಲವಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಟ್ವೀಟ್ ಮಾಡಿ, “ಮಿಷನರೀಸ್ ಆಫ್ ಚಾರಿಟಿಗೆ ಎಫ್‌ಸಿಆರ್‌ಎ ಮತ್ತೆ ಅನುಮೋದನೆ ನೀಡಿದೆ. ಸಾರ್ವಜನಿಕ ಅಭಿಪ್ರಾಯ ಮತ್ತು ಅಂತರರಾಷ್ಟ್ರೀಯ ಪ್ರತಿಕ್ರಿಯೆಯಿಂದಾಗಿ ಇದು ಸಾಧ್ಯವಾಗಿದೆ” ಎಂದು ಹೇಳಿದ್ದಾರೆ.

ಚಾರಿಟಿಯ FCRA ಪರವಾನಗಿ ವಿವಾದ ಬ್ರಿಟನ್ ಸಂಸತ್ತಿನಲ್ಲೂ ಗುರುವಾರ ಸದ್ದು ಮಾಡಿತ್ತು. “ಚಾರಿಟಿಯ ಖಾತೆಗಳಿಗೆ FCRA ಯಾಕೆ ನಿರಾಕರಿಸಲಾಗಿದೆ, ಇದರ ಬಗ್ಗೆ ಭಾರತ ಸರ್ಕಾರ ಸ್ಪಷ್ಟನೆ ನೀಡಬೇಕು ಮತ್ತು ನಿರ್ಬಂಧಗಳನ್ನು ತಕ್ಷಣವೇ ತೆಗೆದುಹಾಕುವಂತೆ ಭಾರತ ಸರ್ಕಾರವನ್ನು ಕೇಳಬೇಕು” ಎಂದು ಅಲ್ಲಿನ ಸಂಸದರು ತಮ್ಮ ಸರ್ಕಾರದ ಮೇಲೆ ಒತ್ತಡ ಹೇರಿದ್ದರು.

ಇದನ್ನೂ ಓದಿ:ಜಾಮಿಯಾ ಮಿಲ್ಲಿಯಾ ಸೇರಿದಂತೆ ವಿದೇಶಿ ಫಂಡಿಂಗ್ ಪರವಾನಗಿ ಕಳೆದುಕೊಂಡ 12,000 ಎನ್‌ಜಿಒಗಳು!

ಮಿಷನರೀಸ್ ಆಫ್ ಚಾರಿಟಿಯ ಎಫ್‌ಸಿಆರ್‌ಎ ಪರವಾನಗಿಯನ್ನು ಕ್ರಿಸ್‌ಮಸ್ ದಿನದಂದು ಹಿಂತೆಗೆದುಕೊಳ್ಳಲಾಗಿತ್ತು. ಇದನ್ನು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ವ್ಯಾಪಕವಾಗಿ ಖಂಡಿಸಿದ್ದರು.

ತನ್ನ ನಿರ್ಧಾರವನ್ನು ಪರಿಶೀಲಿಸುವ ಮನವಿಯನ್ನು ಸ್ವೀಕರಿಸಿಲ್ಲ ಎಂದು ಗೃಹ ಸಚಿವಾಲಯ ಹೇಳಿತ್ತು. ಆದರೆ ಸಚಿವಾಲಯವು ಇದಕ್ಕೆ ವಿವರಗಳನ್ನು ನೀಡಿರಲಿಲ್ಲ. ಮಿಷನರೀಸ್‌‌ ಆಫ್‌ ಚಾರಿಟಿ ಯುವತಿಯರನ್ನು ಮತಾಂತರಿಸಲು ಯತ್ನಿಸಿಸುತ್ತಿದೆ ಎಂದು ಗುಜರಾತ್‌ನಲ್ಲಿ ದೂರು ದಾಖಲಾದ ವಾರಗಳ ನಂತರ ಚಾರಿಟಿಯ ಖಾತೆಗಳು ಸ್ಥಗಿತಗೊಂಡಿದ್ದವು.

ಕಳೆದ ವಾರ ಮಿಷನರೀಸ್ ಆಫ್ ಚಾರಿಟಿ ಸೇರಿದಂತೆ ಭಾರತದಲ್ಲಿನ 12,000 ಕ್ಕೂ ಹೆಚ್ಚು ಎನ್‌ಜಿಒಗಳು ಮತ್ತು ಚಾರಿಟಬಲ್ ಸಂಸ್ಥೆಗಳು ಅವಧಿ ಮುಗಿದ ನಂತರ ತಮ್ಮ ಎಫ್‌ಸಿಆರ್‌ಎ ಪರವಾನಗಿಗಳನ್ನು ಕಳೆದುಕೊಂಡಿವೆ ಎಂದು ಒಕ್ಕೂಟ ಸರ್ಕಾರ ಹೇಳಿದೆ. ಎಫ್‌ಸಿಆರ್‌ಎ ಪರವಾನಗಿ ಇಲ್ಲದ ಸಂಸ್ಥೆಗಳ ಪಟ್ಟಿಯಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ, ಆಕ್ಸ್‌ಫ್ಯಾಮ್ ಇಂಡಿಯಾ, ಭಾರತೀಯ ವೈದ್ಯಕೀಯ ಸಂಘ ಮತ್ತು ಕುಷ್ಠರೋಗ ಮಿಷನ್ ಸೇರಿದೆ.

ಇದನ್ನೂ ಓದಿ:ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆಮದರ್‌ ಥೆರೇಸಾ ಮದರ್‌ ಥರೇಸಾ ಮದರ್‌ ಥೆರೇಸಾ ಮದರ್‌ ಥರೆಸಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...