Homeಮುಖಪುಟಮದರ್ ತೆರೇಸಾ ಅವರ ಚಾರಿಟಿಯ ‘ವಿದೇಶಿ ನಿಧಿಗಳ ಪರವಾನಗಿ’ ಪುನಃಸ್ಥಾಪನೆ

ಮದರ್ ತೆರೇಸಾ ಅವರ ಚಾರಿಟಿಯ ‘ವಿದೇಶಿ ನಿಧಿಗಳ ಪರವಾನಗಿ’ ಪುನಃಸ್ಥಾಪನೆ

ಒಕ್ಕೂಟ ಸರ್ಕಾರ ಪರವಾನಗಿ ಸ್ಥಗಿತ ಮಾಡಿದ್ದರಿಂದ ಸಂಸ್ಥೆಯ ಸುಮಾರು 250 ಖಾತೆಗಳಿಗೆ ವಿದೇಶದಿಂದ ಧನ ಸಹಾಯ ಮಾಡಲು ಸಾಧ್ಯವಾಗಿರಲಿಲ್ಲ

- Advertisement -
- Advertisement -

ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗೆ ವಿದೇಶದಿಂದ ನಿಧಿಯನ್ನು ಪಡೆಯಲು ಅಗತ್ಯವಿದ್ದ ಪರವಾನಗಿ (FCRA)ಯನ್ನು ಶನಿವಾರ ಪುನಃಸ್ಥಾಪಿಸಲಾಗಿದೆ. ಕಳೆದ ಎರಡು ವಾರಗಳಿಂದ ‘ಪ್ರತಿಕೂಲ ವಿಷಯ’ಗಳನ್ನು ಉಲ್ಲೇಖಿಸಿ ಒಕ್ಕೂಟ ಸರ್ಕಾರವು ಸಂಸ್ಥೆಯ ನವೀಕರಣದ ವಿನಂತಿಯನ್ನು ನಿರಾಕರಿಸಿತ್ತು.

ಪರವಾನಗಿ ಇಲ್ಲದೆ ಇರುವುದರಿಂದಾಗಿ ಸಂಸ್ಥೆಯ ಸುಮಾರು 250 ಖಾತೆಗಳಿಗೆ ವಿದೇಶದಿಂದ ಧನ ಸಹಾಯ ಮಾಡಲು ಸಾಧ್ಯವಾಗಿರಲಿಲ್ಲ. ಈ ಬಗ್ಗೆ ಒಕ್ಕೂಟ ಸರ್ಕಾರವು ಇಲ್ಲಿಯವರೆಗೆ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದರೆ ಸುದ್ದಿ ಸಂಸ್ಥೆ ANI, ‘ಸಂಬಂಧಿತ ಇಲಾಖೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ನಂತರ ಪರವಾನಗಿಯನ್ನು ಮರುಸ್ಥಾಪಿಸಲಾಗಿದೆ’ ಎಂದು ವರದಿ ಮಾಡಿದೆ.

ಇದನ್ನೂ ಓದಿ:ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

FCRA ಪರವಾನಗಿಯನ್ನು ಮತ್ತೇ ಪುನಃಸ್ಥಾಪಿಸಿದ ನಂತರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ತೃಣಮೂಲ ಸಂಸದ ಡೆರೆಕ್ ಒ’ಬ್ರೇನ್, “56 ಇಂಚಿನ ಶಕ್ತಿಗಿಂತ ಪ್ರೀತಿಯ ಶಕ್ತಿ ಪ್ರಬಲವಾಗಿದೆ” ಎಂದು ಪ್ರಧಾನಿ ವಿರುದ್ಧ ವ್ಯಂಗ್ಯವಾಡಿದ್ದಾರೆ.

“ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗಾಗಿ FCRA ನೋಂದಣಿ ಮತ್ತೆ ಮಾಡಲಾಗಿದೆ. ‘ಪ್ರತಿಕೂಲ ವಿಷಯ’ಗಳು ಹಲವರಿಗೆ ಕಿರುಕುಳ ನೀಡಿತು, ಆದರೆ ಅದು ಎರಡು ವಾರಗಳಲ್ಲಿ ಕಣ್ಮರೆಯಾಯಿತು. ಪ್ರೀತಿಯ ಶಕ್ತಿಯು 56 ಇಂಚಿನ ಶಕ್ತಿಗಿಂತ ಪ್ರಬಲವಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಟ್ವೀಟ್ ಮಾಡಿ, “ಮಿಷನರೀಸ್ ಆಫ್ ಚಾರಿಟಿಗೆ ಎಫ್‌ಸಿಆರ್‌ಎ ಮತ್ತೆ ಅನುಮೋದನೆ ನೀಡಿದೆ. ಸಾರ್ವಜನಿಕ ಅಭಿಪ್ರಾಯ ಮತ್ತು ಅಂತರರಾಷ್ಟ್ರೀಯ ಪ್ರತಿಕ್ರಿಯೆಯಿಂದಾಗಿ ಇದು ಸಾಧ್ಯವಾಗಿದೆ” ಎಂದು ಹೇಳಿದ್ದಾರೆ.

ಚಾರಿಟಿಯ FCRA ಪರವಾನಗಿ ವಿವಾದ ಬ್ರಿಟನ್ ಸಂಸತ್ತಿನಲ್ಲೂ ಗುರುವಾರ ಸದ್ದು ಮಾಡಿತ್ತು. “ಚಾರಿಟಿಯ ಖಾತೆಗಳಿಗೆ FCRA ಯಾಕೆ ನಿರಾಕರಿಸಲಾಗಿದೆ, ಇದರ ಬಗ್ಗೆ ಭಾರತ ಸರ್ಕಾರ ಸ್ಪಷ್ಟನೆ ನೀಡಬೇಕು ಮತ್ತು ನಿರ್ಬಂಧಗಳನ್ನು ತಕ್ಷಣವೇ ತೆಗೆದುಹಾಕುವಂತೆ ಭಾರತ ಸರ್ಕಾರವನ್ನು ಕೇಳಬೇಕು” ಎಂದು ಅಲ್ಲಿನ ಸಂಸದರು ತಮ್ಮ ಸರ್ಕಾರದ ಮೇಲೆ ಒತ್ತಡ ಹೇರಿದ್ದರು.

ಇದನ್ನೂ ಓದಿ:ಜಾಮಿಯಾ ಮಿಲ್ಲಿಯಾ ಸೇರಿದಂತೆ ವಿದೇಶಿ ಫಂಡಿಂಗ್ ಪರವಾನಗಿ ಕಳೆದುಕೊಂಡ 12,000 ಎನ್‌ಜಿಒಗಳು!

ಮಿಷನರೀಸ್ ಆಫ್ ಚಾರಿಟಿಯ ಎಫ್‌ಸಿಆರ್‌ಎ ಪರವಾನಗಿಯನ್ನು ಕ್ರಿಸ್‌ಮಸ್ ದಿನದಂದು ಹಿಂತೆಗೆದುಕೊಳ್ಳಲಾಗಿತ್ತು. ಇದನ್ನು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ವ್ಯಾಪಕವಾಗಿ ಖಂಡಿಸಿದ್ದರು.

ತನ್ನ ನಿರ್ಧಾರವನ್ನು ಪರಿಶೀಲಿಸುವ ಮನವಿಯನ್ನು ಸ್ವೀಕರಿಸಿಲ್ಲ ಎಂದು ಗೃಹ ಸಚಿವಾಲಯ ಹೇಳಿತ್ತು. ಆದರೆ ಸಚಿವಾಲಯವು ಇದಕ್ಕೆ ವಿವರಗಳನ್ನು ನೀಡಿರಲಿಲ್ಲ. ಮಿಷನರೀಸ್‌‌ ಆಫ್‌ ಚಾರಿಟಿ ಯುವತಿಯರನ್ನು ಮತಾಂತರಿಸಲು ಯತ್ನಿಸಿಸುತ್ತಿದೆ ಎಂದು ಗುಜರಾತ್‌ನಲ್ಲಿ ದೂರು ದಾಖಲಾದ ವಾರಗಳ ನಂತರ ಚಾರಿಟಿಯ ಖಾತೆಗಳು ಸ್ಥಗಿತಗೊಂಡಿದ್ದವು.

ಕಳೆದ ವಾರ ಮಿಷನರೀಸ್ ಆಫ್ ಚಾರಿಟಿ ಸೇರಿದಂತೆ ಭಾರತದಲ್ಲಿನ 12,000 ಕ್ಕೂ ಹೆಚ್ಚು ಎನ್‌ಜಿಒಗಳು ಮತ್ತು ಚಾರಿಟಬಲ್ ಸಂಸ್ಥೆಗಳು ಅವಧಿ ಮುಗಿದ ನಂತರ ತಮ್ಮ ಎಫ್‌ಸಿಆರ್‌ಎ ಪರವಾನಗಿಗಳನ್ನು ಕಳೆದುಕೊಂಡಿವೆ ಎಂದು ಒಕ್ಕೂಟ ಸರ್ಕಾರ ಹೇಳಿದೆ. ಎಫ್‌ಸಿಆರ್‌ಎ ಪರವಾನಗಿ ಇಲ್ಲದ ಸಂಸ್ಥೆಗಳ ಪಟ್ಟಿಯಲ್ಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ, ಆಕ್ಸ್‌ಫ್ಯಾಮ್ ಇಂಡಿಯಾ, ಭಾರತೀಯ ವೈದ್ಯಕೀಯ ಸಂಘ ಮತ್ತು ಕುಷ್ಠರೋಗ ಮಿಷನ್ ಸೇರಿದೆ.

ಇದನ್ನೂ ಓದಿ:ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆಮದರ್‌ ಥೆರೇಸಾ ಮದರ್‌ ಥರೇಸಾ ಮದರ್‌ ಥೆರೇಸಾ ಮದರ್‌ ಥರೆಸಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...