Homeಕರ್ನಾಟಕಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

ಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

- Advertisement -
- Advertisement -

ಮಾತೃಭಾಷೆ ಎಂಬುದು ತಾಯಿಯ ಹಾಲಿನ ಜೊತೆಜೊತೆಗೆ ಪ್ರತಿಯೊಬ್ಬರ ನರನಾಡಿಗಳಲ್ಲಿ ಬೆರೆಯುತ್ತದೆ. ಜೀವನದ ಕೊನೆಯವರೆಗೂ ಯಾರೂ ತಮ್ಮ ಮಾತೃಭಾಷೆಯನ್ನು ಮರೆಯುವುದು ಸಾಧ್ಯವಿಲ್ಲ. ಕೆಲವು ಸಮಯ ವಿದೇಶಗಳಲ್ಲಿ ಇರುವ ಪ್ರಸಂಗ ಬಂದಾಗ ಅಲ್ಲಿನ ಭಾಷೆ ಮಾತಾಡುವವರೂ ಮರಳಿ ತಮ್ಮ ನೆಲಕ್ಕೆ ಬಂದಾಗ ತಮ್ಮ ನುಡಿಯಲ್ಲಿಯೇ ವ್ಯವಹರಿಸುತ್ತಾರೆ. ಅವರ ಉಚ್ಛಾರಣೆಯಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸವಾಗಬಹುದೇ ಹೊರತಾಗಿ ಅವರು ಭಾಷೆಯನ್ನು ಮರೆತಿರುವುದಿಲ್ಲ. ಅಲ್ಲದೆ ತಾಯಿ, ತಾಯಿನಾಡು, ತಾಯಿನುಡಿಯ ಮೇಲಿನ ಪ್ರೀತಿ ಯಾವುದನ್ನೂ ಮರೆಯಲು ಬಿಡುವುದಿಲ್ಲ.

ಜಯದೇವಿತಾಯಿ ಲಿಗಾಡೆಯವರ ಮಾತೃಭಾಷೆ ಕನ್ನಡ, ವ್ಯವಹಾರ ಭಾಷೆಯೂ ಅದೇ. ಆದರೆ ಅವರು ಮಹಾರಾಷ್ಟ್ರದಲ್ಲಿ ಇದ್ದ ಕಾರಣಕ್ಕೆ ಅಲ್ಲಿನ ಮರಾಠಿ ಭಾಷೆಯನ್ನು ಶಾಲಾಶಿಕ್ಷಣದಲ್ಲಿ ಕಲಿತರು. ಆದರೆ ಮಾತೃಭಾಷೆಯ ಮೇಲಿನ ಪ್ರೀತಿಯಿಂದ ಅವರು ಕನ್ನಡದತ್ತ ಹೊರಳಿದರು. ಬಹುಕಡಿಮೆ ಅವಧಿಯಲ್ಲಿಯೇ ಕನ್ನಡ ಕಲಿತರು. ಕನ್ನಡದಲ್ಲಿಯೇ ಉನ್ನತ ಅಧ್ಯಯನ ಮಾಡಿದರು. ಕನ್ನಡದಲ್ಲಿಯೇ ಮೇರು ಸಾಹಿತ್ಯ ಕೃತಿಗಳನ್ನು ರಚಿಸಿದರು. ಪಿ.ಎಚ್.ಡಿ. ಮತ್ತು ಡಿ.ಲಿಟ್. ಕೂಡ ಪಡೆದರು. ಭಾಷೆಯ ಮೇಲಿನ ಪ್ರೀತಿಯಿದು.

ಜಯದೇವಿತಾಯಿ ಲಿಗಾಡೆಯವರಂತೆಯೇ ಮಾತೃಭಾಷೆಯ ಪ್ರೀತಿ ಮತ್ತು ಪ್ರಭಾವಕ್ಕೊಳಗಾದವರು ಗೌರಿ ಲಂಕೇಶ್ ಅವರೂ ಕೂಡ. ವಿದೇಶದಲ್ಲಿ ಓದಿ, ಅಲ್ಲಿ ಇದ್ದು, ಅಲ್ಲಿನ ಪ್ರಗತಿಪರ ಅಂಶಗಳನ್ನು, ಅಲ್ಲಿನ ಸಮಾಜ ಜೀವನವನ್ನು ಕಂಡ ಗೌರಿ ಲಂಕೇಶ್ ಅವರು ಕನ್ನಡವನ್ನು ಮರೆತಿರಲಿಲ್ಲ. ಅವರು ದೇಶಕ್ಕೆ ಮರಳಿದ ಮೇಲೆ ಪುನಃ ಬಹುಆಸ್ಥೆಯಿಂದ ಕನ್ನಡ ಕಲಿತರು. ಕನ್ನಡದ ಪ್ರಮುಖ ಲೇಖಕರೂ, ಕನ್ನಡದ ಉಪನ್ಯಾಸಕರೂ ಆಗಿದ್ದ ಅವರ ತಂದೆ ಪಿ. ಲಂಕೇಶ್ ಅವರ ಪ್ರಭಾವ ಗೌರಿಯವರ ಮೇಲೆ ಇದ್ದೇ ಇತ್ತು. ಗೌರಿ ಬೇಕಿದ್ದರೆ ಹೈಪ್ರೋಫೈಲ್ ಜನರ ಸಲುವಾಗಿ ಒಂದು ಇಂಗ್ಲೀಷ್ ಪತ್ರಿಕೆಯನ್ನೂ ಹುಟ್ಟು ಹಾಕಬಹುದಿತ್ತು. ಆದರೆ ಅವರ ಕನ್ನಡ ಪ್ರೀತಿ ಹಾಗೆ ಮಾಡಗೊಡಲಿಲ್ಲ, ಜನಸಾಮಾನ್ಯರ ಮೇಲೆ ಅವರಿಗಿದ್ದ ಕಾಳಜಿ ಅವರನ್ನು ಇಂಗ್ಲೀಷ್ ಕಡೆಗೆ ಹೋಗದಂತೆ ತಡೆಯಿತು.

ಅವರು ಲಂಕೇಶ್ ಪತ್ರಿಕೆಯಲ್ಲಿ ಬರೆಯುತ್ತಿದ್ದ ಲೇಖಕರ, ಪತ್ರಿಕೆಯಲ್ಲಿ ಕೆಲಸಕ್ಕಿದ್ದವರ ಕನ್ನಡವನ್ನೂ ಶುದ್ಧಗೊಳಿಸುವಷ್ಟು, ಪ್ರೂಫ್ ನೋಡಿ ತಿದ್ದುವಷ್ಟು ಕನ್ನಡ ಕಲಿತರು. ಮುಂದೆ ತಾವೂ ಕೂಡ ಕನ್ನಡದಲ್ಲಿ ಬರೆದರು, ಪತ್ರಿಕೆ ನಡೆಸಿದರು. ತಮ್ಮ ವಿಚಾರಗಳನ್ನು ಕನ್ನಡದ ಮೂಲಕ ವ್ಯಕ್ತಪಡಿಸುವಷ್ಟು ಪ್ರಭಾವಿಯಾಗಿ ಹಾಗೂ ಕನ್ನಡದ ಮೂಲಕ ಓದುಗರಿಗೆ, ಜನಸಾಮಾನ್ಯರಿಗೆ ತಲುಪುವಷ್ಟು ವ್ಯಾಪಕವಾಗಿ ಅನ್ಯಭಾಷೆಯಿಂದ ತಲುಪುವುದು ಸಾಧ್ಯವಿಲ್ಲ ಎಂಬುದನ್ನು ಅವರು ಬಹುಬೇಗ ಮನಗಂಡಿದ್ದರು. ಅವರ ಹೋರಾಟದ ಹಿಂದಿನ ಶಕ್ತಿ ಕನ್ನಡ ನಾಡು, ನುಡಿಯೇ ಆಗಿತ್ತು. ಈ ನಾಡು, ನುಡಿ, ಗೌರಿಯವರೂ ಎಂದಿಗೂ ಅಮರ.

ಗಿರೀಶ ಜಕಾಪುರೆ, ಮೈಂದರ್ಗಿ, ಮಹಾರಾಷ್ಟ್ರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...