Homeಕರ್ನಾಟಕಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

ಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

- Advertisement -
- Advertisement -

ಮಾತೃಭಾಷೆ ಎಂಬುದು ತಾಯಿಯ ಹಾಲಿನ ಜೊತೆಜೊತೆಗೆ ಪ್ರತಿಯೊಬ್ಬರ ನರನಾಡಿಗಳಲ್ಲಿ ಬೆರೆಯುತ್ತದೆ. ಜೀವನದ ಕೊನೆಯವರೆಗೂ ಯಾರೂ ತಮ್ಮ ಮಾತೃಭಾಷೆಯನ್ನು ಮರೆಯುವುದು ಸಾಧ್ಯವಿಲ್ಲ. ಕೆಲವು ಸಮಯ ವಿದೇಶಗಳಲ್ಲಿ ಇರುವ ಪ್ರಸಂಗ ಬಂದಾಗ ಅಲ್ಲಿನ ಭಾಷೆ ಮಾತಾಡುವವರೂ ಮರಳಿ ತಮ್ಮ ನೆಲಕ್ಕೆ ಬಂದಾಗ ತಮ್ಮ ನುಡಿಯಲ್ಲಿಯೇ ವ್ಯವಹರಿಸುತ್ತಾರೆ. ಅವರ ಉಚ್ಛಾರಣೆಯಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸವಾಗಬಹುದೇ ಹೊರತಾಗಿ ಅವರು ಭಾಷೆಯನ್ನು ಮರೆತಿರುವುದಿಲ್ಲ. ಅಲ್ಲದೆ ತಾಯಿ, ತಾಯಿನಾಡು, ತಾಯಿನುಡಿಯ ಮೇಲಿನ ಪ್ರೀತಿ ಯಾವುದನ್ನೂ ಮರೆಯಲು ಬಿಡುವುದಿಲ್ಲ.

ಜಯದೇವಿತಾಯಿ ಲಿಗಾಡೆಯವರ ಮಾತೃಭಾಷೆ ಕನ್ನಡ, ವ್ಯವಹಾರ ಭಾಷೆಯೂ ಅದೇ. ಆದರೆ ಅವರು ಮಹಾರಾಷ್ಟ್ರದಲ್ಲಿ ಇದ್ದ ಕಾರಣಕ್ಕೆ ಅಲ್ಲಿನ ಮರಾಠಿ ಭಾಷೆಯನ್ನು ಶಾಲಾಶಿಕ್ಷಣದಲ್ಲಿ ಕಲಿತರು. ಆದರೆ ಮಾತೃಭಾಷೆಯ ಮೇಲಿನ ಪ್ರೀತಿಯಿಂದ ಅವರು ಕನ್ನಡದತ್ತ ಹೊರಳಿದರು. ಬಹುಕಡಿಮೆ ಅವಧಿಯಲ್ಲಿಯೇ ಕನ್ನಡ ಕಲಿತರು. ಕನ್ನಡದಲ್ಲಿಯೇ ಉನ್ನತ ಅಧ್ಯಯನ ಮಾಡಿದರು. ಕನ್ನಡದಲ್ಲಿಯೇ ಮೇರು ಸಾಹಿತ್ಯ ಕೃತಿಗಳನ್ನು ರಚಿಸಿದರು. ಪಿ.ಎಚ್.ಡಿ. ಮತ್ತು ಡಿ.ಲಿಟ್. ಕೂಡ ಪಡೆದರು. ಭಾಷೆಯ ಮೇಲಿನ ಪ್ರೀತಿಯಿದು.

ಜಯದೇವಿತಾಯಿ ಲಿಗಾಡೆಯವರಂತೆಯೇ ಮಾತೃಭಾಷೆಯ ಪ್ರೀತಿ ಮತ್ತು ಪ್ರಭಾವಕ್ಕೊಳಗಾದವರು ಗೌರಿ ಲಂಕೇಶ್ ಅವರೂ ಕೂಡ. ವಿದೇಶದಲ್ಲಿ ಓದಿ, ಅಲ್ಲಿ ಇದ್ದು, ಅಲ್ಲಿನ ಪ್ರಗತಿಪರ ಅಂಶಗಳನ್ನು, ಅಲ್ಲಿನ ಸಮಾಜ ಜೀವನವನ್ನು ಕಂಡ ಗೌರಿ ಲಂಕೇಶ್ ಅವರು ಕನ್ನಡವನ್ನು ಮರೆತಿರಲಿಲ್ಲ. ಅವರು ದೇಶಕ್ಕೆ ಮರಳಿದ ಮೇಲೆ ಪುನಃ ಬಹುಆಸ್ಥೆಯಿಂದ ಕನ್ನಡ ಕಲಿತರು. ಕನ್ನಡದ ಪ್ರಮುಖ ಲೇಖಕರೂ, ಕನ್ನಡದ ಉಪನ್ಯಾಸಕರೂ ಆಗಿದ್ದ ಅವರ ತಂದೆ ಪಿ. ಲಂಕೇಶ್ ಅವರ ಪ್ರಭಾವ ಗೌರಿಯವರ ಮೇಲೆ ಇದ್ದೇ ಇತ್ತು. ಗೌರಿ ಬೇಕಿದ್ದರೆ ಹೈಪ್ರೋಫೈಲ್ ಜನರ ಸಲುವಾಗಿ ಒಂದು ಇಂಗ್ಲೀಷ್ ಪತ್ರಿಕೆಯನ್ನೂ ಹುಟ್ಟು ಹಾಕಬಹುದಿತ್ತು. ಆದರೆ ಅವರ ಕನ್ನಡ ಪ್ರೀತಿ ಹಾಗೆ ಮಾಡಗೊಡಲಿಲ್ಲ, ಜನಸಾಮಾನ್ಯರ ಮೇಲೆ ಅವರಿಗಿದ್ದ ಕಾಳಜಿ ಅವರನ್ನು ಇಂಗ್ಲೀಷ್ ಕಡೆಗೆ ಹೋಗದಂತೆ ತಡೆಯಿತು.

ಅವರು ಲಂಕೇಶ್ ಪತ್ರಿಕೆಯಲ್ಲಿ ಬರೆಯುತ್ತಿದ್ದ ಲೇಖಕರ, ಪತ್ರಿಕೆಯಲ್ಲಿ ಕೆಲಸಕ್ಕಿದ್ದವರ ಕನ್ನಡವನ್ನೂ ಶುದ್ಧಗೊಳಿಸುವಷ್ಟು, ಪ್ರೂಫ್ ನೋಡಿ ತಿದ್ದುವಷ್ಟು ಕನ್ನಡ ಕಲಿತರು. ಮುಂದೆ ತಾವೂ ಕೂಡ ಕನ್ನಡದಲ್ಲಿ ಬರೆದರು, ಪತ್ರಿಕೆ ನಡೆಸಿದರು. ತಮ್ಮ ವಿಚಾರಗಳನ್ನು ಕನ್ನಡದ ಮೂಲಕ ವ್ಯಕ್ತಪಡಿಸುವಷ್ಟು ಪ್ರಭಾವಿಯಾಗಿ ಹಾಗೂ ಕನ್ನಡದ ಮೂಲಕ ಓದುಗರಿಗೆ, ಜನಸಾಮಾನ್ಯರಿಗೆ ತಲುಪುವಷ್ಟು ವ್ಯಾಪಕವಾಗಿ ಅನ್ಯಭಾಷೆಯಿಂದ ತಲುಪುವುದು ಸಾಧ್ಯವಿಲ್ಲ ಎಂಬುದನ್ನು ಅವರು ಬಹುಬೇಗ ಮನಗಂಡಿದ್ದರು. ಅವರ ಹೋರಾಟದ ಹಿಂದಿನ ಶಕ್ತಿ ಕನ್ನಡ ನಾಡು, ನುಡಿಯೇ ಆಗಿತ್ತು. ಈ ನಾಡು, ನುಡಿ, ಗೌರಿಯವರೂ ಎಂದಿಗೂ ಅಮರ.

ಗಿರೀಶ ಜಕಾಪುರೆ, ಮೈಂದರ್ಗಿ, ಮಹಾರಾಷ್ಟ್ರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...