Homeಕರ್ನಾಟಕಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

ಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

- Advertisement -
- Advertisement -

ಮಾತೃಭಾಷೆ ಎಂಬುದು ತಾಯಿಯ ಹಾಲಿನ ಜೊತೆಜೊತೆಗೆ ಪ್ರತಿಯೊಬ್ಬರ ನರನಾಡಿಗಳಲ್ಲಿ ಬೆರೆಯುತ್ತದೆ. ಜೀವನದ ಕೊನೆಯವರೆಗೂ ಯಾರೂ ತಮ್ಮ ಮಾತೃಭಾಷೆಯನ್ನು ಮರೆಯುವುದು ಸಾಧ್ಯವಿಲ್ಲ. ಕೆಲವು ಸಮಯ ವಿದೇಶಗಳಲ್ಲಿ ಇರುವ ಪ್ರಸಂಗ ಬಂದಾಗ ಅಲ್ಲಿನ ಭಾಷೆ ಮಾತಾಡುವವರೂ ಮರಳಿ ತಮ್ಮ ನೆಲಕ್ಕೆ ಬಂದಾಗ ತಮ್ಮ ನುಡಿಯಲ್ಲಿಯೇ ವ್ಯವಹರಿಸುತ್ತಾರೆ. ಅವರ ಉಚ್ಛಾರಣೆಯಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸವಾಗಬಹುದೇ ಹೊರತಾಗಿ ಅವರು ಭಾಷೆಯನ್ನು ಮರೆತಿರುವುದಿಲ್ಲ. ಅಲ್ಲದೆ ತಾಯಿ, ತಾಯಿನಾಡು, ತಾಯಿನುಡಿಯ ಮೇಲಿನ ಪ್ರೀತಿ ಯಾವುದನ್ನೂ ಮರೆಯಲು ಬಿಡುವುದಿಲ್ಲ.

ಜಯದೇವಿತಾಯಿ ಲಿಗಾಡೆಯವರ ಮಾತೃಭಾಷೆ ಕನ್ನಡ, ವ್ಯವಹಾರ ಭಾಷೆಯೂ ಅದೇ. ಆದರೆ ಅವರು ಮಹಾರಾಷ್ಟ್ರದಲ್ಲಿ ಇದ್ದ ಕಾರಣಕ್ಕೆ ಅಲ್ಲಿನ ಮರಾಠಿ ಭಾಷೆಯನ್ನು ಶಾಲಾಶಿಕ್ಷಣದಲ್ಲಿ ಕಲಿತರು. ಆದರೆ ಮಾತೃಭಾಷೆಯ ಮೇಲಿನ ಪ್ರೀತಿಯಿಂದ ಅವರು ಕನ್ನಡದತ್ತ ಹೊರಳಿದರು. ಬಹುಕಡಿಮೆ ಅವಧಿಯಲ್ಲಿಯೇ ಕನ್ನಡ ಕಲಿತರು. ಕನ್ನಡದಲ್ಲಿಯೇ ಉನ್ನತ ಅಧ್ಯಯನ ಮಾಡಿದರು. ಕನ್ನಡದಲ್ಲಿಯೇ ಮೇರು ಸಾಹಿತ್ಯ ಕೃತಿಗಳನ್ನು ರಚಿಸಿದರು. ಪಿ.ಎಚ್.ಡಿ. ಮತ್ತು ಡಿ.ಲಿಟ್. ಕೂಡ ಪಡೆದರು. ಭಾಷೆಯ ಮೇಲಿನ ಪ್ರೀತಿಯಿದು.

ಜಯದೇವಿತಾಯಿ ಲಿಗಾಡೆಯವರಂತೆಯೇ ಮಾತೃಭಾಷೆಯ ಪ್ರೀತಿ ಮತ್ತು ಪ್ರಭಾವಕ್ಕೊಳಗಾದವರು ಗೌರಿ ಲಂಕೇಶ್ ಅವರೂ ಕೂಡ. ವಿದೇಶದಲ್ಲಿ ಓದಿ, ಅಲ್ಲಿ ಇದ್ದು, ಅಲ್ಲಿನ ಪ್ರಗತಿಪರ ಅಂಶಗಳನ್ನು, ಅಲ್ಲಿನ ಸಮಾಜ ಜೀವನವನ್ನು ಕಂಡ ಗೌರಿ ಲಂಕೇಶ್ ಅವರು ಕನ್ನಡವನ್ನು ಮರೆತಿರಲಿಲ್ಲ. ಅವರು ದೇಶಕ್ಕೆ ಮರಳಿದ ಮೇಲೆ ಪುನಃ ಬಹುಆಸ್ಥೆಯಿಂದ ಕನ್ನಡ ಕಲಿತರು. ಕನ್ನಡದ ಪ್ರಮುಖ ಲೇಖಕರೂ, ಕನ್ನಡದ ಉಪನ್ಯಾಸಕರೂ ಆಗಿದ್ದ ಅವರ ತಂದೆ ಪಿ. ಲಂಕೇಶ್ ಅವರ ಪ್ರಭಾವ ಗೌರಿಯವರ ಮೇಲೆ ಇದ್ದೇ ಇತ್ತು. ಗೌರಿ ಬೇಕಿದ್ದರೆ ಹೈಪ್ರೋಫೈಲ್ ಜನರ ಸಲುವಾಗಿ ಒಂದು ಇಂಗ್ಲೀಷ್ ಪತ್ರಿಕೆಯನ್ನೂ ಹುಟ್ಟು ಹಾಕಬಹುದಿತ್ತು. ಆದರೆ ಅವರ ಕನ್ನಡ ಪ್ರೀತಿ ಹಾಗೆ ಮಾಡಗೊಡಲಿಲ್ಲ, ಜನಸಾಮಾನ್ಯರ ಮೇಲೆ ಅವರಿಗಿದ್ದ ಕಾಳಜಿ ಅವರನ್ನು ಇಂಗ್ಲೀಷ್ ಕಡೆಗೆ ಹೋಗದಂತೆ ತಡೆಯಿತು.

ಅವರು ಲಂಕೇಶ್ ಪತ್ರಿಕೆಯಲ್ಲಿ ಬರೆಯುತ್ತಿದ್ದ ಲೇಖಕರ, ಪತ್ರಿಕೆಯಲ್ಲಿ ಕೆಲಸಕ್ಕಿದ್ದವರ ಕನ್ನಡವನ್ನೂ ಶುದ್ಧಗೊಳಿಸುವಷ್ಟು, ಪ್ರೂಫ್ ನೋಡಿ ತಿದ್ದುವಷ್ಟು ಕನ್ನಡ ಕಲಿತರು. ಮುಂದೆ ತಾವೂ ಕೂಡ ಕನ್ನಡದಲ್ಲಿ ಬರೆದರು, ಪತ್ರಿಕೆ ನಡೆಸಿದರು. ತಮ್ಮ ವಿಚಾರಗಳನ್ನು ಕನ್ನಡದ ಮೂಲಕ ವ್ಯಕ್ತಪಡಿಸುವಷ್ಟು ಪ್ರಭಾವಿಯಾಗಿ ಹಾಗೂ ಕನ್ನಡದ ಮೂಲಕ ಓದುಗರಿಗೆ, ಜನಸಾಮಾನ್ಯರಿಗೆ ತಲುಪುವಷ್ಟು ವ್ಯಾಪಕವಾಗಿ ಅನ್ಯಭಾಷೆಯಿಂದ ತಲುಪುವುದು ಸಾಧ್ಯವಿಲ್ಲ ಎಂಬುದನ್ನು ಅವರು ಬಹುಬೇಗ ಮನಗಂಡಿದ್ದರು. ಅವರ ಹೋರಾಟದ ಹಿಂದಿನ ಶಕ್ತಿ ಕನ್ನಡ ನಾಡು, ನುಡಿಯೇ ಆಗಿತ್ತು. ಈ ನಾಡು, ನುಡಿ, ಗೌರಿಯವರೂ ಎಂದಿಗೂ ಅಮರ.

ಗಿರೀಶ ಜಕಾಪುರೆ, ಮೈಂದರ್ಗಿ, ಮಹಾರಾಷ್ಟ್ರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...