Homeಕರ್ನಾಟಕಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

ಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

- Advertisement -
- Advertisement -

ಮಾತೃಭಾಷೆ ಎಂಬುದು ತಾಯಿಯ ಹಾಲಿನ ಜೊತೆಜೊತೆಗೆ ಪ್ರತಿಯೊಬ್ಬರ ನರನಾಡಿಗಳಲ್ಲಿ ಬೆರೆಯುತ್ತದೆ. ಜೀವನದ ಕೊನೆಯವರೆಗೂ ಯಾರೂ ತಮ್ಮ ಮಾತೃಭಾಷೆಯನ್ನು ಮರೆಯುವುದು ಸಾಧ್ಯವಿಲ್ಲ. ಕೆಲವು ಸಮಯ ವಿದೇಶಗಳಲ್ಲಿ ಇರುವ ಪ್ರಸಂಗ ಬಂದಾಗ ಅಲ್ಲಿನ ಭಾಷೆ ಮಾತಾಡುವವರೂ ಮರಳಿ ತಮ್ಮ ನೆಲಕ್ಕೆ ಬಂದಾಗ ತಮ್ಮ ನುಡಿಯಲ್ಲಿಯೇ ವ್ಯವಹರಿಸುತ್ತಾರೆ. ಅವರ ಉಚ್ಛಾರಣೆಯಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸವಾಗಬಹುದೇ ಹೊರತಾಗಿ ಅವರು ಭಾಷೆಯನ್ನು ಮರೆತಿರುವುದಿಲ್ಲ. ಅಲ್ಲದೆ ತಾಯಿ, ತಾಯಿನಾಡು, ತಾಯಿನುಡಿಯ ಮೇಲಿನ ಪ್ರೀತಿ ಯಾವುದನ್ನೂ ಮರೆಯಲು ಬಿಡುವುದಿಲ್ಲ.

ಜಯದೇವಿತಾಯಿ ಲಿಗಾಡೆಯವರ ಮಾತೃಭಾಷೆ ಕನ್ನಡ, ವ್ಯವಹಾರ ಭಾಷೆಯೂ ಅದೇ. ಆದರೆ ಅವರು ಮಹಾರಾಷ್ಟ್ರದಲ್ಲಿ ಇದ್ದ ಕಾರಣಕ್ಕೆ ಅಲ್ಲಿನ ಮರಾಠಿ ಭಾಷೆಯನ್ನು ಶಾಲಾಶಿಕ್ಷಣದಲ್ಲಿ ಕಲಿತರು. ಆದರೆ ಮಾತೃಭಾಷೆಯ ಮೇಲಿನ ಪ್ರೀತಿಯಿಂದ ಅವರು ಕನ್ನಡದತ್ತ ಹೊರಳಿದರು. ಬಹುಕಡಿಮೆ ಅವಧಿಯಲ್ಲಿಯೇ ಕನ್ನಡ ಕಲಿತರು. ಕನ್ನಡದಲ್ಲಿಯೇ ಉನ್ನತ ಅಧ್ಯಯನ ಮಾಡಿದರು. ಕನ್ನಡದಲ್ಲಿಯೇ ಮೇರು ಸಾಹಿತ್ಯ ಕೃತಿಗಳನ್ನು ರಚಿಸಿದರು. ಪಿ.ಎಚ್.ಡಿ. ಮತ್ತು ಡಿ.ಲಿಟ್. ಕೂಡ ಪಡೆದರು. ಭಾಷೆಯ ಮೇಲಿನ ಪ್ರೀತಿಯಿದು.

ಜಯದೇವಿತಾಯಿ ಲಿಗಾಡೆಯವರಂತೆಯೇ ಮಾತೃಭಾಷೆಯ ಪ್ರೀತಿ ಮತ್ತು ಪ್ರಭಾವಕ್ಕೊಳಗಾದವರು ಗೌರಿ ಲಂಕೇಶ್ ಅವರೂ ಕೂಡ. ವಿದೇಶದಲ್ಲಿ ಓದಿ, ಅಲ್ಲಿ ಇದ್ದು, ಅಲ್ಲಿನ ಪ್ರಗತಿಪರ ಅಂಶಗಳನ್ನು, ಅಲ್ಲಿನ ಸಮಾಜ ಜೀವನವನ್ನು ಕಂಡ ಗೌರಿ ಲಂಕೇಶ್ ಅವರು ಕನ್ನಡವನ್ನು ಮರೆತಿರಲಿಲ್ಲ. ಅವರು ದೇಶಕ್ಕೆ ಮರಳಿದ ಮೇಲೆ ಪುನಃ ಬಹುಆಸ್ಥೆಯಿಂದ ಕನ್ನಡ ಕಲಿತರು. ಕನ್ನಡದ ಪ್ರಮುಖ ಲೇಖಕರೂ, ಕನ್ನಡದ ಉಪನ್ಯಾಸಕರೂ ಆಗಿದ್ದ ಅವರ ತಂದೆ ಪಿ. ಲಂಕೇಶ್ ಅವರ ಪ್ರಭಾವ ಗೌರಿಯವರ ಮೇಲೆ ಇದ್ದೇ ಇತ್ತು. ಗೌರಿ ಬೇಕಿದ್ದರೆ ಹೈಪ್ರೋಫೈಲ್ ಜನರ ಸಲುವಾಗಿ ಒಂದು ಇಂಗ್ಲೀಷ್ ಪತ್ರಿಕೆಯನ್ನೂ ಹುಟ್ಟು ಹಾಕಬಹುದಿತ್ತು. ಆದರೆ ಅವರ ಕನ್ನಡ ಪ್ರೀತಿ ಹಾಗೆ ಮಾಡಗೊಡಲಿಲ್ಲ, ಜನಸಾಮಾನ್ಯರ ಮೇಲೆ ಅವರಿಗಿದ್ದ ಕಾಳಜಿ ಅವರನ್ನು ಇಂಗ್ಲೀಷ್ ಕಡೆಗೆ ಹೋಗದಂತೆ ತಡೆಯಿತು.

ಅವರು ಲಂಕೇಶ್ ಪತ್ರಿಕೆಯಲ್ಲಿ ಬರೆಯುತ್ತಿದ್ದ ಲೇಖಕರ, ಪತ್ರಿಕೆಯಲ್ಲಿ ಕೆಲಸಕ್ಕಿದ್ದವರ ಕನ್ನಡವನ್ನೂ ಶುದ್ಧಗೊಳಿಸುವಷ್ಟು, ಪ್ರೂಫ್ ನೋಡಿ ತಿದ್ದುವಷ್ಟು ಕನ್ನಡ ಕಲಿತರು. ಮುಂದೆ ತಾವೂ ಕೂಡ ಕನ್ನಡದಲ್ಲಿ ಬರೆದರು, ಪತ್ರಿಕೆ ನಡೆಸಿದರು. ತಮ್ಮ ವಿಚಾರಗಳನ್ನು ಕನ್ನಡದ ಮೂಲಕ ವ್ಯಕ್ತಪಡಿಸುವಷ್ಟು ಪ್ರಭಾವಿಯಾಗಿ ಹಾಗೂ ಕನ್ನಡದ ಮೂಲಕ ಓದುಗರಿಗೆ, ಜನಸಾಮಾನ್ಯರಿಗೆ ತಲುಪುವಷ್ಟು ವ್ಯಾಪಕವಾಗಿ ಅನ್ಯಭಾಷೆಯಿಂದ ತಲುಪುವುದು ಸಾಧ್ಯವಿಲ್ಲ ಎಂಬುದನ್ನು ಅವರು ಬಹುಬೇಗ ಮನಗಂಡಿದ್ದರು. ಅವರ ಹೋರಾಟದ ಹಿಂದಿನ ಶಕ್ತಿ ಕನ್ನಡ ನಾಡು, ನುಡಿಯೇ ಆಗಿತ್ತು. ಈ ನಾಡು, ನುಡಿ, ಗೌರಿಯವರೂ ಎಂದಿಗೂ ಅಮರ.

ಗಿರೀಶ ಜಕಾಪುರೆ, ಮೈಂದರ್ಗಿ, ಮಹಾರಾಷ್ಟ್ರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...