Homeಕರ್ನಾಟಕಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

ಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

- Advertisement -
- Advertisement -

ಮಾತೃಭಾಷೆ ಎಂಬುದು ತಾಯಿಯ ಹಾಲಿನ ಜೊತೆಜೊತೆಗೆ ಪ್ರತಿಯೊಬ್ಬರ ನರನಾಡಿಗಳಲ್ಲಿ ಬೆರೆಯುತ್ತದೆ. ಜೀವನದ ಕೊನೆಯವರೆಗೂ ಯಾರೂ ತಮ್ಮ ಮಾತೃಭಾಷೆಯನ್ನು ಮರೆಯುವುದು ಸಾಧ್ಯವಿಲ್ಲ. ಕೆಲವು ಸಮಯ ವಿದೇಶಗಳಲ್ಲಿ ಇರುವ ಪ್ರಸಂಗ ಬಂದಾಗ ಅಲ್ಲಿನ ಭಾಷೆ ಮಾತಾಡುವವರೂ ಮರಳಿ ತಮ್ಮ ನೆಲಕ್ಕೆ ಬಂದಾಗ ತಮ್ಮ ನುಡಿಯಲ್ಲಿಯೇ ವ್ಯವಹರಿಸುತ್ತಾರೆ. ಅವರ ಉಚ್ಛಾರಣೆಯಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸವಾಗಬಹುದೇ ಹೊರತಾಗಿ ಅವರು ಭಾಷೆಯನ್ನು ಮರೆತಿರುವುದಿಲ್ಲ. ಅಲ್ಲದೆ ತಾಯಿ, ತಾಯಿನಾಡು, ತಾಯಿನುಡಿಯ ಮೇಲಿನ ಪ್ರೀತಿ ಯಾವುದನ್ನೂ ಮರೆಯಲು ಬಿಡುವುದಿಲ್ಲ.

ಜಯದೇವಿತಾಯಿ ಲಿಗಾಡೆಯವರ ಮಾತೃಭಾಷೆ ಕನ್ನಡ, ವ್ಯವಹಾರ ಭಾಷೆಯೂ ಅದೇ. ಆದರೆ ಅವರು ಮಹಾರಾಷ್ಟ್ರದಲ್ಲಿ ಇದ್ದ ಕಾರಣಕ್ಕೆ ಅಲ್ಲಿನ ಮರಾಠಿ ಭಾಷೆಯನ್ನು ಶಾಲಾಶಿಕ್ಷಣದಲ್ಲಿ ಕಲಿತರು. ಆದರೆ ಮಾತೃಭಾಷೆಯ ಮೇಲಿನ ಪ್ರೀತಿಯಿಂದ ಅವರು ಕನ್ನಡದತ್ತ ಹೊರಳಿದರು. ಬಹುಕಡಿಮೆ ಅವಧಿಯಲ್ಲಿಯೇ ಕನ್ನಡ ಕಲಿತರು. ಕನ್ನಡದಲ್ಲಿಯೇ ಉನ್ನತ ಅಧ್ಯಯನ ಮಾಡಿದರು. ಕನ್ನಡದಲ್ಲಿಯೇ ಮೇರು ಸಾಹಿತ್ಯ ಕೃತಿಗಳನ್ನು ರಚಿಸಿದರು. ಪಿ.ಎಚ್.ಡಿ. ಮತ್ತು ಡಿ.ಲಿಟ್. ಕೂಡ ಪಡೆದರು. ಭಾಷೆಯ ಮೇಲಿನ ಪ್ರೀತಿಯಿದು.

ಜಯದೇವಿತಾಯಿ ಲಿಗಾಡೆಯವರಂತೆಯೇ ಮಾತೃಭಾಷೆಯ ಪ್ರೀತಿ ಮತ್ತು ಪ್ರಭಾವಕ್ಕೊಳಗಾದವರು ಗೌರಿ ಲಂಕೇಶ್ ಅವರೂ ಕೂಡ. ವಿದೇಶದಲ್ಲಿ ಓದಿ, ಅಲ್ಲಿ ಇದ್ದು, ಅಲ್ಲಿನ ಪ್ರಗತಿಪರ ಅಂಶಗಳನ್ನು, ಅಲ್ಲಿನ ಸಮಾಜ ಜೀವನವನ್ನು ಕಂಡ ಗೌರಿ ಲಂಕೇಶ್ ಅವರು ಕನ್ನಡವನ್ನು ಮರೆತಿರಲಿಲ್ಲ. ಅವರು ದೇಶಕ್ಕೆ ಮರಳಿದ ಮೇಲೆ ಪುನಃ ಬಹುಆಸ್ಥೆಯಿಂದ ಕನ್ನಡ ಕಲಿತರು. ಕನ್ನಡದ ಪ್ರಮುಖ ಲೇಖಕರೂ, ಕನ್ನಡದ ಉಪನ್ಯಾಸಕರೂ ಆಗಿದ್ದ ಅವರ ತಂದೆ ಪಿ. ಲಂಕೇಶ್ ಅವರ ಪ್ರಭಾವ ಗೌರಿಯವರ ಮೇಲೆ ಇದ್ದೇ ಇತ್ತು. ಗೌರಿ ಬೇಕಿದ್ದರೆ ಹೈಪ್ರೋಫೈಲ್ ಜನರ ಸಲುವಾಗಿ ಒಂದು ಇಂಗ್ಲೀಷ್ ಪತ್ರಿಕೆಯನ್ನೂ ಹುಟ್ಟು ಹಾಕಬಹುದಿತ್ತು. ಆದರೆ ಅವರ ಕನ್ನಡ ಪ್ರೀತಿ ಹಾಗೆ ಮಾಡಗೊಡಲಿಲ್ಲ, ಜನಸಾಮಾನ್ಯರ ಮೇಲೆ ಅವರಿಗಿದ್ದ ಕಾಳಜಿ ಅವರನ್ನು ಇಂಗ್ಲೀಷ್ ಕಡೆಗೆ ಹೋಗದಂತೆ ತಡೆಯಿತು.

ಅವರು ಲಂಕೇಶ್ ಪತ್ರಿಕೆಯಲ್ಲಿ ಬರೆಯುತ್ತಿದ್ದ ಲೇಖಕರ, ಪತ್ರಿಕೆಯಲ್ಲಿ ಕೆಲಸಕ್ಕಿದ್ದವರ ಕನ್ನಡವನ್ನೂ ಶುದ್ಧಗೊಳಿಸುವಷ್ಟು, ಪ್ರೂಫ್ ನೋಡಿ ತಿದ್ದುವಷ್ಟು ಕನ್ನಡ ಕಲಿತರು. ಮುಂದೆ ತಾವೂ ಕೂಡ ಕನ್ನಡದಲ್ಲಿ ಬರೆದರು, ಪತ್ರಿಕೆ ನಡೆಸಿದರು. ತಮ್ಮ ವಿಚಾರಗಳನ್ನು ಕನ್ನಡದ ಮೂಲಕ ವ್ಯಕ್ತಪಡಿಸುವಷ್ಟು ಪ್ರಭಾವಿಯಾಗಿ ಹಾಗೂ ಕನ್ನಡದ ಮೂಲಕ ಓದುಗರಿಗೆ, ಜನಸಾಮಾನ್ಯರಿಗೆ ತಲುಪುವಷ್ಟು ವ್ಯಾಪಕವಾಗಿ ಅನ್ಯಭಾಷೆಯಿಂದ ತಲುಪುವುದು ಸಾಧ್ಯವಿಲ್ಲ ಎಂಬುದನ್ನು ಅವರು ಬಹುಬೇಗ ಮನಗಂಡಿದ್ದರು. ಅವರ ಹೋರಾಟದ ಹಿಂದಿನ ಶಕ್ತಿ ಕನ್ನಡ ನಾಡು, ನುಡಿಯೇ ಆಗಿತ್ತು. ಈ ನಾಡು, ನುಡಿ, ಗೌರಿಯವರೂ ಎಂದಿಗೂ ಅಮರ.

ಗಿರೀಶ ಜಕಾಪುರೆ, ಮೈಂದರ್ಗಿ, ಮಹಾರಾಷ್ಟ್ರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...