Homeಕರ್ನಾಟಕಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

ಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

- Advertisement -
- Advertisement -

ಮಾತೃಭಾಷೆ ಎಂಬುದು ತಾಯಿಯ ಹಾಲಿನ ಜೊತೆಜೊತೆಗೆ ಪ್ರತಿಯೊಬ್ಬರ ನರನಾಡಿಗಳಲ್ಲಿ ಬೆರೆಯುತ್ತದೆ. ಜೀವನದ ಕೊನೆಯವರೆಗೂ ಯಾರೂ ತಮ್ಮ ಮಾತೃಭಾಷೆಯನ್ನು ಮರೆಯುವುದು ಸಾಧ್ಯವಿಲ್ಲ. ಕೆಲವು ಸಮಯ ವಿದೇಶಗಳಲ್ಲಿ ಇರುವ ಪ್ರಸಂಗ ಬಂದಾಗ ಅಲ್ಲಿನ ಭಾಷೆ ಮಾತಾಡುವವರೂ ಮರಳಿ ತಮ್ಮ ನೆಲಕ್ಕೆ ಬಂದಾಗ ತಮ್ಮ ನುಡಿಯಲ್ಲಿಯೇ ವ್ಯವಹರಿಸುತ್ತಾರೆ. ಅವರ ಉಚ್ಛಾರಣೆಯಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸವಾಗಬಹುದೇ ಹೊರತಾಗಿ ಅವರು ಭಾಷೆಯನ್ನು ಮರೆತಿರುವುದಿಲ್ಲ. ಅಲ್ಲದೆ ತಾಯಿ, ತಾಯಿನಾಡು, ತಾಯಿನುಡಿಯ ಮೇಲಿನ ಪ್ರೀತಿ ಯಾವುದನ್ನೂ ಮರೆಯಲು ಬಿಡುವುದಿಲ್ಲ.

ಜಯದೇವಿತಾಯಿ ಲಿಗಾಡೆಯವರ ಮಾತೃಭಾಷೆ ಕನ್ನಡ, ವ್ಯವಹಾರ ಭಾಷೆಯೂ ಅದೇ. ಆದರೆ ಅವರು ಮಹಾರಾಷ್ಟ್ರದಲ್ಲಿ ಇದ್ದ ಕಾರಣಕ್ಕೆ ಅಲ್ಲಿನ ಮರಾಠಿ ಭಾಷೆಯನ್ನು ಶಾಲಾಶಿಕ್ಷಣದಲ್ಲಿ ಕಲಿತರು. ಆದರೆ ಮಾತೃಭಾಷೆಯ ಮೇಲಿನ ಪ್ರೀತಿಯಿಂದ ಅವರು ಕನ್ನಡದತ್ತ ಹೊರಳಿದರು. ಬಹುಕಡಿಮೆ ಅವಧಿಯಲ್ಲಿಯೇ ಕನ್ನಡ ಕಲಿತರು. ಕನ್ನಡದಲ್ಲಿಯೇ ಉನ್ನತ ಅಧ್ಯಯನ ಮಾಡಿದರು. ಕನ್ನಡದಲ್ಲಿಯೇ ಮೇರು ಸಾಹಿತ್ಯ ಕೃತಿಗಳನ್ನು ರಚಿಸಿದರು. ಪಿ.ಎಚ್.ಡಿ. ಮತ್ತು ಡಿ.ಲಿಟ್. ಕೂಡ ಪಡೆದರು. ಭಾಷೆಯ ಮೇಲಿನ ಪ್ರೀತಿಯಿದು.

ಜಯದೇವಿತಾಯಿ ಲಿಗಾಡೆಯವರಂತೆಯೇ ಮಾತೃಭಾಷೆಯ ಪ್ರೀತಿ ಮತ್ತು ಪ್ರಭಾವಕ್ಕೊಳಗಾದವರು ಗೌರಿ ಲಂಕೇಶ್ ಅವರೂ ಕೂಡ. ವಿದೇಶದಲ್ಲಿ ಓದಿ, ಅಲ್ಲಿ ಇದ್ದು, ಅಲ್ಲಿನ ಪ್ರಗತಿಪರ ಅಂಶಗಳನ್ನು, ಅಲ್ಲಿನ ಸಮಾಜ ಜೀವನವನ್ನು ಕಂಡ ಗೌರಿ ಲಂಕೇಶ್ ಅವರು ಕನ್ನಡವನ್ನು ಮರೆತಿರಲಿಲ್ಲ. ಅವರು ದೇಶಕ್ಕೆ ಮರಳಿದ ಮೇಲೆ ಪುನಃ ಬಹುಆಸ್ಥೆಯಿಂದ ಕನ್ನಡ ಕಲಿತರು. ಕನ್ನಡದ ಪ್ರಮುಖ ಲೇಖಕರೂ, ಕನ್ನಡದ ಉಪನ್ಯಾಸಕರೂ ಆಗಿದ್ದ ಅವರ ತಂದೆ ಪಿ. ಲಂಕೇಶ್ ಅವರ ಪ್ರಭಾವ ಗೌರಿಯವರ ಮೇಲೆ ಇದ್ದೇ ಇತ್ತು. ಗೌರಿ ಬೇಕಿದ್ದರೆ ಹೈಪ್ರೋಫೈಲ್ ಜನರ ಸಲುವಾಗಿ ಒಂದು ಇಂಗ್ಲೀಷ್ ಪತ್ರಿಕೆಯನ್ನೂ ಹುಟ್ಟು ಹಾಕಬಹುದಿತ್ತು. ಆದರೆ ಅವರ ಕನ್ನಡ ಪ್ರೀತಿ ಹಾಗೆ ಮಾಡಗೊಡಲಿಲ್ಲ, ಜನಸಾಮಾನ್ಯರ ಮೇಲೆ ಅವರಿಗಿದ್ದ ಕಾಳಜಿ ಅವರನ್ನು ಇಂಗ್ಲೀಷ್ ಕಡೆಗೆ ಹೋಗದಂತೆ ತಡೆಯಿತು.

ಅವರು ಲಂಕೇಶ್ ಪತ್ರಿಕೆಯಲ್ಲಿ ಬರೆಯುತ್ತಿದ್ದ ಲೇಖಕರ, ಪತ್ರಿಕೆಯಲ್ಲಿ ಕೆಲಸಕ್ಕಿದ್ದವರ ಕನ್ನಡವನ್ನೂ ಶುದ್ಧಗೊಳಿಸುವಷ್ಟು, ಪ್ರೂಫ್ ನೋಡಿ ತಿದ್ದುವಷ್ಟು ಕನ್ನಡ ಕಲಿತರು. ಮುಂದೆ ತಾವೂ ಕೂಡ ಕನ್ನಡದಲ್ಲಿ ಬರೆದರು, ಪತ್ರಿಕೆ ನಡೆಸಿದರು. ತಮ್ಮ ವಿಚಾರಗಳನ್ನು ಕನ್ನಡದ ಮೂಲಕ ವ್ಯಕ್ತಪಡಿಸುವಷ್ಟು ಪ್ರಭಾವಿಯಾಗಿ ಹಾಗೂ ಕನ್ನಡದ ಮೂಲಕ ಓದುಗರಿಗೆ, ಜನಸಾಮಾನ್ಯರಿಗೆ ತಲುಪುವಷ್ಟು ವ್ಯಾಪಕವಾಗಿ ಅನ್ಯಭಾಷೆಯಿಂದ ತಲುಪುವುದು ಸಾಧ್ಯವಿಲ್ಲ ಎಂಬುದನ್ನು ಅವರು ಬಹುಬೇಗ ಮನಗಂಡಿದ್ದರು. ಅವರ ಹೋರಾಟದ ಹಿಂದಿನ ಶಕ್ತಿ ಕನ್ನಡ ನಾಡು, ನುಡಿಯೇ ಆಗಿತ್ತು. ಈ ನಾಡು, ನುಡಿ, ಗೌರಿಯವರೂ ಎಂದಿಗೂ ಅಮರ.

ಗಿರೀಶ ಜಕಾಪುರೆ, ಮೈಂದರ್ಗಿ, ಮಹಾರಾಷ್ಟ್ರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...