Homeಕರ್ನಾಟಕಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

ಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

- Advertisement -
- Advertisement -

ಮಾತೃಭಾಷೆ ಎಂಬುದು ತಾಯಿಯ ಹಾಲಿನ ಜೊತೆಜೊತೆಗೆ ಪ್ರತಿಯೊಬ್ಬರ ನರನಾಡಿಗಳಲ್ಲಿ ಬೆರೆಯುತ್ತದೆ. ಜೀವನದ ಕೊನೆಯವರೆಗೂ ಯಾರೂ ತಮ್ಮ ಮಾತೃಭಾಷೆಯನ್ನು ಮರೆಯುವುದು ಸಾಧ್ಯವಿಲ್ಲ. ಕೆಲವು ಸಮಯ ವಿದೇಶಗಳಲ್ಲಿ ಇರುವ ಪ್ರಸಂಗ ಬಂದಾಗ ಅಲ್ಲಿನ ಭಾಷೆ ಮಾತಾಡುವವರೂ ಮರಳಿ ತಮ್ಮ ನೆಲಕ್ಕೆ ಬಂದಾಗ ತಮ್ಮ ನುಡಿಯಲ್ಲಿಯೇ ವ್ಯವಹರಿಸುತ್ತಾರೆ. ಅವರ ಉಚ್ಛಾರಣೆಯಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸವಾಗಬಹುದೇ ಹೊರತಾಗಿ ಅವರು ಭಾಷೆಯನ್ನು ಮರೆತಿರುವುದಿಲ್ಲ. ಅಲ್ಲದೆ ತಾಯಿ, ತಾಯಿನಾಡು, ತಾಯಿನುಡಿಯ ಮೇಲಿನ ಪ್ರೀತಿ ಯಾವುದನ್ನೂ ಮರೆಯಲು ಬಿಡುವುದಿಲ್ಲ.

ಜಯದೇವಿತಾಯಿ ಲಿಗಾಡೆಯವರ ಮಾತೃಭಾಷೆ ಕನ್ನಡ, ವ್ಯವಹಾರ ಭಾಷೆಯೂ ಅದೇ. ಆದರೆ ಅವರು ಮಹಾರಾಷ್ಟ್ರದಲ್ಲಿ ಇದ್ದ ಕಾರಣಕ್ಕೆ ಅಲ್ಲಿನ ಮರಾಠಿ ಭಾಷೆಯನ್ನು ಶಾಲಾಶಿಕ್ಷಣದಲ್ಲಿ ಕಲಿತರು. ಆದರೆ ಮಾತೃಭಾಷೆಯ ಮೇಲಿನ ಪ್ರೀತಿಯಿಂದ ಅವರು ಕನ್ನಡದತ್ತ ಹೊರಳಿದರು. ಬಹುಕಡಿಮೆ ಅವಧಿಯಲ್ಲಿಯೇ ಕನ್ನಡ ಕಲಿತರು. ಕನ್ನಡದಲ್ಲಿಯೇ ಉನ್ನತ ಅಧ್ಯಯನ ಮಾಡಿದರು. ಕನ್ನಡದಲ್ಲಿಯೇ ಮೇರು ಸಾಹಿತ್ಯ ಕೃತಿಗಳನ್ನು ರಚಿಸಿದರು. ಪಿ.ಎಚ್.ಡಿ. ಮತ್ತು ಡಿ.ಲಿಟ್. ಕೂಡ ಪಡೆದರು. ಭಾಷೆಯ ಮೇಲಿನ ಪ್ರೀತಿಯಿದು.

ಜಯದೇವಿತಾಯಿ ಲಿಗಾಡೆಯವರಂತೆಯೇ ಮಾತೃಭಾಷೆಯ ಪ್ರೀತಿ ಮತ್ತು ಪ್ರಭಾವಕ್ಕೊಳಗಾದವರು ಗೌರಿ ಲಂಕೇಶ್ ಅವರೂ ಕೂಡ. ವಿದೇಶದಲ್ಲಿ ಓದಿ, ಅಲ್ಲಿ ಇದ್ದು, ಅಲ್ಲಿನ ಪ್ರಗತಿಪರ ಅಂಶಗಳನ್ನು, ಅಲ್ಲಿನ ಸಮಾಜ ಜೀವನವನ್ನು ಕಂಡ ಗೌರಿ ಲಂಕೇಶ್ ಅವರು ಕನ್ನಡವನ್ನು ಮರೆತಿರಲಿಲ್ಲ. ಅವರು ದೇಶಕ್ಕೆ ಮರಳಿದ ಮೇಲೆ ಪುನಃ ಬಹುಆಸ್ಥೆಯಿಂದ ಕನ್ನಡ ಕಲಿತರು. ಕನ್ನಡದ ಪ್ರಮುಖ ಲೇಖಕರೂ, ಕನ್ನಡದ ಉಪನ್ಯಾಸಕರೂ ಆಗಿದ್ದ ಅವರ ತಂದೆ ಪಿ. ಲಂಕೇಶ್ ಅವರ ಪ್ರಭಾವ ಗೌರಿಯವರ ಮೇಲೆ ಇದ್ದೇ ಇತ್ತು. ಗೌರಿ ಬೇಕಿದ್ದರೆ ಹೈಪ್ರೋಫೈಲ್ ಜನರ ಸಲುವಾಗಿ ಒಂದು ಇಂಗ್ಲೀಷ್ ಪತ್ರಿಕೆಯನ್ನೂ ಹುಟ್ಟು ಹಾಕಬಹುದಿತ್ತು. ಆದರೆ ಅವರ ಕನ್ನಡ ಪ್ರೀತಿ ಹಾಗೆ ಮಾಡಗೊಡಲಿಲ್ಲ, ಜನಸಾಮಾನ್ಯರ ಮೇಲೆ ಅವರಿಗಿದ್ದ ಕಾಳಜಿ ಅವರನ್ನು ಇಂಗ್ಲೀಷ್ ಕಡೆಗೆ ಹೋಗದಂತೆ ತಡೆಯಿತು.

ಅವರು ಲಂಕೇಶ್ ಪತ್ರಿಕೆಯಲ್ಲಿ ಬರೆಯುತ್ತಿದ್ದ ಲೇಖಕರ, ಪತ್ರಿಕೆಯಲ್ಲಿ ಕೆಲಸಕ್ಕಿದ್ದವರ ಕನ್ನಡವನ್ನೂ ಶುದ್ಧಗೊಳಿಸುವಷ್ಟು, ಪ್ರೂಫ್ ನೋಡಿ ತಿದ್ದುವಷ್ಟು ಕನ್ನಡ ಕಲಿತರು. ಮುಂದೆ ತಾವೂ ಕೂಡ ಕನ್ನಡದಲ್ಲಿ ಬರೆದರು, ಪತ್ರಿಕೆ ನಡೆಸಿದರು. ತಮ್ಮ ವಿಚಾರಗಳನ್ನು ಕನ್ನಡದ ಮೂಲಕ ವ್ಯಕ್ತಪಡಿಸುವಷ್ಟು ಪ್ರಭಾವಿಯಾಗಿ ಹಾಗೂ ಕನ್ನಡದ ಮೂಲಕ ಓದುಗರಿಗೆ, ಜನಸಾಮಾನ್ಯರಿಗೆ ತಲುಪುವಷ್ಟು ವ್ಯಾಪಕವಾಗಿ ಅನ್ಯಭಾಷೆಯಿಂದ ತಲುಪುವುದು ಸಾಧ್ಯವಿಲ್ಲ ಎಂಬುದನ್ನು ಅವರು ಬಹುಬೇಗ ಮನಗಂಡಿದ್ದರು. ಅವರ ಹೋರಾಟದ ಹಿಂದಿನ ಶಕ್ತಿ ಕನ್ನಡ ನಾಡು, ನುಡಿಯೇ ಆಗಿತ್ತು. ಈ ನಾಡು, ನುಡಿ, ಗೌರಿಯವರೂ ಎಂದಿಗೂ ಅಮರ.

ಗಿರೀಶ ಜಕಾಪುರೆ, ಮೈಂದರ್ಗಿ, ಮಹಾರಾಷ್ಟ್ರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...