Homeಕರ್ನಾಟಕಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

ಮಾತೃಭಾಷೆ ಮೂಲಕವೇ ಜನರನ್ನು ತಲುಪಿದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್…

- Advertisement -
- Advertisement -

ಮಾತೃಭಾಷೆ ಎಂಬುದು ತಾಯಿಯ ಹಾಲಿನ ಜೊತೆಜೊತೆಗೆ ಪ್ರತಿಯೊಬ್ಬರ ನರನಾಡಿಗಳಲ್ಲಿ ಬೆರೆಯುತ್ತದೆ. ಜೀವನದ ಕೊನೆಯವರೆಗೂ ಯಾರೂ ತಮ್ಮ ಮಾತೃಭಾಷೆಯನ್ನು ಮರೆಯುವುದು ಸಾಧ್ಯವಿಲ್ಲ. ಕೆಲವು ಸಮಯ ವಿದೇಶಗಳಲ್ಲಿ ಇರುವ ಪ್ರಸಂಗ ಬಂದಾಗ ಅಲ್ಲಿನ ಭಾಷೆ ಮಾತಾಡುವವರೂ ಮರಳಿ ತಮ್ಮ ನೆಲಕ್ಕೆ ಬಂದಾಗ ತಮ್ಮ ನುಡಿಯಲ್ಲಿಯೇ ವ್ಯವಹರಿಸುತ್ತಾರೆ. ಅವರ ಉಚ್ಛಾರಣೆಯಲ್ಲಿ ಅಲ್ಪ ಸ್ವಲ್ಪ ವ್ಯತ್ಯಾಸವಾಗಬಹುದೇ ಹೊರತಾಗಿ ಅವರು ಭಾಷೆಯನ್ನು ಮರೆತಿರುವುದಿಲ್ಲ. ಅಲ್ಲದೆ ತಾಯಿ, ತಾಯಿನಾಡು, ತಾಯಿನುಡಿಯ ಮೇಲಿನ ಪ್ರೀತಿ ಯಾವುದನ್ನೂ ಮರೆಯಲು ಬಿಡುವುದಿಲ್ಲ.

ಜಯದೇವಿತಾಯಿ ಲಿಗಾಡೆಯವರ ಮಾತೃಭಾಷೆ ಕನ್ನಡ, ವ್ಯವಹಾರ ಭಾಷೆಯೂ ಅದೇ. ಆದರೆ ಅವರು ಮಹಾರಾಷ್ಟ್ರದಲ್ಲಿ ಇದ್ದ ಕಾರಣಕ್ಕೆ ಅಲ್ಲಿನ ಮರಾಠಿ ಭಾಷೆಯನ್ನು ಶಾಲಾಶಿಕ್ಷಣದಲ್ಲಿ ಕಲಿತರು. ಆದರೆ ಮಾತೃಭಾಷೆಯ ಮೇಲಿನ ಪ್ರೀತಿಯಿಂದ ಅವರು ಕನ್ನಡದತ್ತ ಹೊರಳಿದರು. ಬಹುಕಡಿಮೆ ಅವಧಿಯಲ್ಲಿಯೇ ಕನ್ನಡ ಕಲಿತರು. ಕನ್ನಡದಲ್ಲಿಯೇ ಉನ್ನತ ಅಧ್ಯಯನ ಮಾಡಿದರು. ಕನ್ನಡದಲ್ಲಿಯೇ ಮೇರು ಸಾಹಿತ್ಯ ಕೃತಿಗಳನ್ನು ರಚಿಸಿದರು. ಪಿ.ಎಚ್.ಡಿ. ಮತ್ತು ಡಿ.ಲಿಟ್. ಕೂಡ ಪಡೆದರು. ಭಾಷೆಯ ಮೇಲಿನ ಪ್ರೀತಿಯಿದು.

ಜಯದೇವಿತಾಯಿ ಲಿಗಾಡೆಯವರಂತೆಯೇ ಮಾತೃಭಾಷೆಯ ಪ್ರೀತಿ ಮತ್ತು ಪ್ರಭಾವಕ್ಕೊಳಗಾದವರು ಗೌರಿ ಲಂಕೇಶ್ ಅವರೂ ಕೂಡ. ವಿದೇಶದಲ್ಲಿ ಓದಿ, ಅಲ್ಲಿ ಇದ್ದು, ಅಲ್ಲಿನ ಪ್ರಗತಿಪರ ಅಂಶಗಳನ್ನು, ಅಲ್ಲಿನ ಸಮಾಜ ಜೀವನವನ್ನು ಕಂಡ ಗೌರಿ ಲಂಕೇಶ್ ಅವರು ಕನ್ನಡವನ್ನು ಮರೆತಿರಲಿಲ್ಲ. ಅವರು ದೇಶಕ್ಕೆ ಮರಳಿದ ಮೇಲೆ ಪುನಃ ಬಹುಆಸ್ಥೆಯಿಂದ ಕನ್ನಡ ಕಲಿತರು. ಕನ್ನಡದ ಪ್ರಮುಖ ಲೇಖಕರೂ, ಕನ್ನಡದ ಉಪನ್ಯಾಸಕರೂ ಆಗಿದ್ದ ಅವರ ತಂದೆ ಪಿ. ಲಂಕೇಶ್ ಅವರ ಪ್ರಭಾವ ಗೌರಿಯವರ ಮೇಲೆ ಇದ್ದೇ ಇತ್ತು. ಗೌರಿ ಬೇಕಿದ್ದರೆ ಹೈಪ್ರೋಫೈಲ್ ಜನರ ಸಲುವಾಗಿ ಒಂದು ಇಂಗ್ಲೀಷ್ ಪತ್ರಿಕೆಯನ್ನೂ ಹುಟ್ಟು ಹಾಕಬಹುದಿತ್ತು. ಆದರೆ ಅವರ ಕನ್ನಡ ಪ್ರೀತಿ ಹಾಗೆ ಮಾಡಗೊಡಲಿಲ್ಲ, ಜನಸಾಮಾನ್ಯರ ಮೇಲೆ ಅವರಿಗಿದ್ದ ಕಾಳಜಿ ಅವರನ್ನು ಇಂಗ್ಲೀಷ್ ಕಡೆಗೆ ಹೋಗದಂತೆ ತಡೆಯಿತು.

ಅವರು ಲಂಕೇಶ್ ಪತ್ರಿಕೆಯಲ್ಲಿ ಬರೆಯುತ್ತಿದ್ದ ಲೇಖಕರ, ಪತ್ರಿಕೆಯಲ್ಲಿ ಕೆಲಸಕ್ಕಿದ್ದವರ ಕನ್ನಡವನ್ನೂ ಶುದ್ಧಗೊಳಿಸುವಷ್ಟು, ಪ್ರೂಫ್ ನೋಡಿ ತಿದ್ದುವಷ್ಟು ಕನ್ನಡ ಕಲಿತರು. ಮುಂದೆ ತಾವೂ ಕೂಡ ಕನ್ನಡದಲ್ಲಿ ಬರೆದರು, ಪತ್ರಿಕೆ ನಡೆಸಿದರು. ತಮ್ಮ ವಿಚಾರಗಳನ್ನು ಕನ್ನಡದ ಮೂಲಕ ವ್ಯಕ್ತಪಡಿಸುವಷ್ಟು ಪ್ರಭಾವಿಯಾಗಿ ಹಾಗೂ ಕನ್ನಡದ ಮೂಲಕ ಓದುಗರಿಗೆ, ಜನಸಾಮಾನ್ಯರಿಗೆ ತಲುಪುವಷ್ಟು ವ್ಯಾಪಕವಾಗಿ ಅನ್ಯಭಾಷೆಯಿಂದ ತಲುಪುವುದು ಸಾಧ್ಯವಿಲ್ಲ ಎಂಬುದನ್ನು ಅವರು ಬಹುಬೇಗ ಮನಗಂಡಿದ್ದರು. ಅವರ ಹೋರಾಟದ ಹಿಂದಿನ ಶಕ್ತಿ ಕನ್ನಡ ನಾಡು, ನುಡಿಯೇ ಆಗಿತ್ತು. ಈ ನಾಡು, ನುಡಿ, ಗೌರಿಯವರೂ ಎಂದಿಗೂ ಅಮರ.

ಗಿರೀಶ ಜಕಾಪುರೆ, ಮೈಂದರ್ಗಿ, ಮಹಾರಾಷ್ಟ್ರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...