Homeಮುಖಪುಟಅಮ್ಮಂದಿರ ದಿನ | ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ಮುಂಬೈಯ 7 ಆಸ್ಪತ್ರೆಗಳು

ಅಮ್ಮಂದಿರ ದಿನ | ಗರ್ಭಿಣಿಗೆ ಚಿಕಿತ್ಸೆ ನಿರಾಕರಿಸಿದ ಮುಂಬೈಯ 7 ಆಸ್ಪತ್ರೆಗಳು

- Advertisement -
- Advertisement -

ದೇಶವು ಅಮ್ಮಂದಿರ ದಿನ ಆಚರಿಸುತ್ತಿದ್ದಂತೆ, ಗರ್ಭಿಣಿ ಮಹಿಳೆಯೊಬ್ಬರಿಗೆ ಕೊರೊನಾ ಕಾರಣ ನೀಡಿ ಏಳು ಆಸ್ಪತ್ರೆಗಳು  ಚಿಕಿತ್ಸೆ ನಿರಾಕರಿಸಿದ ಘಟನೆ ಮುಂಬೈಯಲ್ಲಿ ನಡೆದಿದೆ.

ಕೊರೊನಾ ಸೋಂಕಿರಾಗಿರುವ ಮಹಿಳೆಯೊಬ್ಬರಿಗೆ ಮುಂಬೈಯ ಏಳು ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸಿದ್ದು, ನಂತರ ಆಸ್ಪತ್ರೆಯೊಂದಕ್ಕೆ ದಾಖಲಾದ ಮಹಿಳೆ ಎರಡು ಗಂಡು ಹಾಗೂ ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಮಹಿಳೆಗೆ ಗರ್ಭಧಾರಣೆಯ ಕೊನೆಯ ಹಂತದಲ್ಲಿ ಕೊರೊನ ಸೋಂಕು ಇರುವುದು ಪರೀಕ್ಷಿಸಲಾಗಿತ್ತು. ಆದಾಗ್ಯೂ, ಅಮ್ಮಂದಿರ ದಿನ ಜನಿಸಿದ ಅವರ ಮೂರೂ ನವಜಾತ ಮಕ್ಕಳಿಗೆ ಕೊರೊನಾ ವೈರಸ್ ಸೋಂಕಿಲ್ಲವೆಂದು ಡೃಡಪಟ್ಟಿದೆ.

ಗರ್ಭಧಾರಣೆಯ ಸಮಯದಲ್ಲಿ ನಿಯಮಿತವಾಗಿ ತಪಾಸಣೆ ನಡೆಸುತ್ತಿದ್ದ ಆಸ್ಪತ್ರೆ ಇದ್ದಕ್ಕಿದ್ದಂತೆ ಅವರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದವು. ಇದರಿಂದಾಗಿ ಮಹಿಳೆಯೂ ಒಟ್ಟು ಏಳು ಖಾಸಗಿ ಆಸ್ಪತ್ರೆಗನ್ನು ಸಂಪರ್ಕಿಸಿದ್ದರೂ ಆಸ್ಪತ್ರೆಗಳು ಚಿಕಿತ್ಸೆಯನ್ನು ನಿರಾಕರಿಸಿದವು.

ಅಂತಿಮವಾಗಿ, ಮುಂಬೈಯ “ನಾಯರ್ ಆಸ್ಪತ್ರ” ಅವರಿಗೆ ಚಿಕಿತ್ಸೆ ನೀಡಲು ಒಪ್ಪಿಕೊಂಡಿದೆ. ನಾಯರ್ ಆಸ್ಪತ್ರೆಯ ಸ್ತ್ರೀರೋಗ ಶಾಸ್ತ್ರ ವಿಭಾಗದ ಡಾ.ಗಣೇಶ್ ಶಿಂಧೆ ಮಾತನಾಡಿ “ಮಹಿಳೆ ಮತ್ತು ಅವಳ ಕುಟುಂಬ ಪವಾಡದಂತೆ ನಡೆದ ಘಟನೆಗಳಿಗೆ ಖುಷಿಗೊಂಡಿದ್ದಾರೆ ಅಲ್ಲದೆ ಇದು ನಮ್ಮ ಸಿಬ್ಬಂದಿಗಳಿಗೂ ಸಂತೋಷದ ಸಂದರ್ಭವಾಗಿದೆ.” ಎಂದು ಹೇಳಿದ್ದಾರೆ.

ದೇಶದಲ್ಲೆ ಅತೀ ಹೆಚ್ಚು ಕೊರೊನಾ ರೋಗಿಗಳಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರವೂ ಒಂದಾಗಿದೆ. ಇಲ್ಲಿ ಇದುವರೆಗೂ 20 ಸಾವಿರಕ್ಕಿಂತಲೂ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿದೆ ಹಾಗೂ 750 ಕ್ಕಿಂತಲೂ ಸಾವುಗಳಾಗಿದೆ.


ಇದನ್ನೂ ಓದಿ: ಕೊರೊನಾ ಭಯಕ್ಕೆ ಚಿಕಿತ್ಸೆ ನಿರಾಕರಿಸಿದ ಮುಂಬೈನ ಐದು ಆಸ್ಪತ್ರೆಗಳು: ವ್ಯಕ್ತಿ ಸಾವು


ವಿಡಿಯೊ ನೋಡಿ: ಸದ್ದು… ಈ ಸುದ್ದಿಗಳೇನಾದವು?-6: ‘….ವಾಹಿನಿ’ ಮಾಧ್ಯಮಗಳು ಹೇಳದ ಮಾಹಿತಿಗಳು, ಕೇಳದ ಪ್ರಶ್ನೆಗಳು ಇಲ್ಲಿವೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾಗರೀಕತೆಯ ಸವಲತ್ತುಗಳು ಹೆಚ್ಚಿದಂತೆಲ್ಲ ಮನುಷ್ಯ ಮಾನವೀಯತೆಯನ್ನು ಮರೆಯುತ್ತಿದ್ದಾನೆ. ಇದು ಆಗಬಾರದು.

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...