Homeಮುಖಪುಟನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : 'ಉತ್ತಮ ಸಂಸ್ಕಾರ ಕಲಿಸಿಲ್ಲ' ಎಂದು ತಾಯಂದಿರನ್ನು ಬಂಧಿಸಿದ...

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

- Advertisement -
- Advertisement -

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು ‘ಪ್ರಿವೆಂಟಿವ್ ಅರೆಸ್ಟ್’ ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ ಮಾಡಿದೆ.

ಆರೋಪಿತ ಬಾಲಕರನ್ನು ಅವರ ತಾಯಂದಿರು ಸರಿಯಾಗಿ ಬೆಳೆಸಿಲ್ಲ, ಉತ್ತಮ ಸಂಸ್ಕಾರ ಕೊಟ್ಟಿಲ್ಲ. ಹಾಗಾಗಿ, ಅವರಿಗೆ ಪಾಠ ಕಲಿಸಲು ಬಂಧಿಸಿರುವುದಾಗಿ ಪೊಲೀಸ್ ಠಾಣೆಯ ಠಾಣಾಧಿಕಾರಿ (ಎಸ್‌ಹೆಚ್‌ಒ) ಸಮರ್ಥಿಸಿಕೊಂಡಿರುವುದಾಗಿ ವರದಿ ಉಲ್ಲೇಖಿಸಿದೆ.

ಈ ಬಗ್ಗೆ ಮಾಹಿತಿ ಪಡೆಯಲು ನಾವು ಬದೌನ್ ಎಸ್‌ಎಸ್‌ಪಿ ಬ್ರಿಜೇಶ್ ಕುಮಾರ್ ಸಿಂಗ್ ಅವರನ್ನು ಸಂಪರ್ಕಿಸಿದ್ದೇವೆ. ಅವರ ಅಧಿಕೃತ ಸಂಖ್ಯೆಗೆ ಕರೆ ಮಾಡಿದಾಗ ಪಿಆರ್‌ಒ ಕರೆ ಸ್ವೀಕರಿಸಿದ್ದಾರೆ. ಆದರೆ, ಪಿಆರ್‌ಒಗೆ ಈ ಪ್ರಕರಣದ ಬಗ್ಗೆ ಗೊತ್ತಿರಲಿಲ್ಲ. ಬರೇಲಿ ಡಿಐಜಿ ಅಜಯ್ ಕುಮಾರ್ ಸಾಹ್ನಿ ಅವರಿಗೂ ನಾವು ಕರೆ ಮಾಡಿದ್ದೇವೆ ಮತ್ತು ಮಾಹಿತಿ ಕೋರಿ ಮೆಸೇಜ್ ಕಳುಹಿಸಿದ್ದೇವೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ವರದಿ ಹೇಳಿದೆ.

ಪೊಲೀಸ್ ಠಾಣೆಯ ಎಸ್‌ಹೆಚ್‌ಒ ಅಜಯ್ ಪಾಲ್ ಸಿಂಗ್, ಬುಧವಾರ ಅಪ್ರಾಪ್ತ ಹುಡುಗಿಯ ಪೋಷಕರು ಒಂದೇ ಗ್ರಾಮದ ನಾಲ್ವರು ಹುಡುಗರು ಶಾಲೆಗೆ ಹೋಗಿ ಹಿಂತಿರುಗುವಾಗ ಅಶ್ಲೀಲವಾಗಿ ಮಾತನಾಡುತ್ತಾ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಬಿಎನ್‌ಎಸ್ ಮತ್ತು ಪೋಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. 13 ವರ್ಷದೊಳಗಿನ ಬಾಲಕರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಎಂದು ಎಸ್‌ಎಚ್‌ಒ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಬಾಲಕರು ಅಪ್ರಾಪ್ತ ವಯಸ್ಕರಾಗಿರುವುದರಿಂದ, ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಗಳಿಗೆ ನೋಟಿಸ್ ನೀಡಿದ ನಂತರ ಶುಕ್ರವಾರ ಅವರ ತಾಯಂದಿರನ್ನು ಬಿಎನ್‌ಎಸ್‌ಎಸ್ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ. ಅಪರಾಧ ಎದುರಿಸುತ್ತಿರುವ ಅಪ್ರಾಪ್ತ ವಯಸ್ಕರ ಪ್ರಕರಣಗಳಲ್ಲಿ ಪೋಷಕರಿಗೆ ನೋಟಿಸ್ ನೀಡಲಾಗುತ್ತದೆ ಎಂದು ಠಾಣಾಧಿಕಾರಿ ಸಿಂಗ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ತಾಯಂದಿರನ್ನು ಏಕೆ ಬಂಧಿಸಲಾಗಿದೆ? ಎಂದು ಕೇಳಿದಾಗ, “ಆ ನಾಲ್ವರು ಹುಡುಗರು ಅಸಭ್ಯ ವರ್ತನೆಯುಳ್ಳವರು ಮತ್ತು ದುಷ್ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವುದರಲ್ಲಿ ಹೆಸರುವಾಸಿಯಾಗಿದ್ದಾರೆ. ಹಾಗಾಗಿ, ಉತ್ತಮ ಮೌಲ್ಯಗಳನ್ನು ಕಲಿಸದ ಮತ್ತು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡದ ಕಾರಣ ಅವರು ಇಂತಹ ಅಪರಾಧಗಳನ್ನು ಮಾಡುತ್ತಾರೆ ಎಂದು ಪೋಷಕರಿಗೆ ಸಂದೇಶ ಕಳುಹಿಸಬೇಕಿದೆ ಮತ್ತು ಪಾಠ ಕಲಿಸಬೇಕಿದೆ ಎಸ್‌ಎಚ್‌ಒ ಸಿಂಗ್ ಹೇಳಿದ್ದಾರೆ ಎಂದು ವರದಿ ವಿವರಿಸಿದೆ.

ನಾಲ್ವರ ತಂದೆಯಂದಿರು ಉತ್ತರ ಪ್ರದೇಶದ ಹೊರಗೆ ಉದ್ಯೋಗದಲ್ಲಿದ್ದು, ಮನೆಗೆ ಬಂದ ನಂತರ ಅವರನ್ನೂ ಬಂಧಿಸಲಾಗುವುದು.ಕಳೆದ ಹಲವು ದಿನಗಳಿಂದ ಬಾಲಕಿ ಹುಡುಗರಿಂದ ಕಿರುಕುಳಕ್ಕೊಳಗಾಗುತ್ತಿದ್ದಳು ಎಂದು ಸಿಂಗ್ ತಿಳಿಸಿದ್ದಾರೆ.

ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ವೈಯಕ್ತಿಕ ಬಾಂಡ್‌ಗಳನ್ನು ಸಲ್ಲಿಸಿದ ನಂತರ ತಾಯಂದಿರನ್ನು ಬಿಡುಗಡೆ ಮಾಡಲಾಗಿದೆ. ಬಂಧನದ ದಿನವೇ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...