Homeಕರ್ನಾಟಕಮಹೇಂದ್ರ ಕುಮಾರ್‌ ನಿಧನಕ್ಕೆ ತೀವ್ರ ಸಂತಾಪ: ಕಂಬನಿ ಮಿಡಿದ ಹಲವರು

ಮಹೇಂದ್ರ ಕುಮಾರ್‌ ನಿಧನಕ್ಕೆ ತೀವ್ರ ಸಂತಾಪ: ಕಂಬನಿ ಮಿಡಿದ ಹಲವರು

- Advertisement -
- Advertisement -

ನಮ್ಮ ಧ್ವನಿ ಬಳಗದ ಮುಖ್ಯಸ್ಥರು ಮತ್ತು ಸಾಮಾಜಿಕ ಚಿಂತಕರಾದ ಮಹೇಂದ್ರ ಕುಮಾರ್‌ರವರ ನಿಧನಕ್ಕೆ ರಾಜ್ಯಾದ್ಯಂತ ಸಾವಿರಾರು ಜನ ತೀವ್ರ ಸಂತಾಪ ಸೂಚಿಸಿದ್ದು, ಕಂಬನಿ ಮಿಡಿದಿದ್ದಾರೆ.

ಮುಖ್ಯಮಂತ್ರಿಗಳಾದ ಬಿ.ಎಸ್‌ ಯಡಿಯೂರಪ್ಪನವರು ಟ್ವೀಟ್‌ ಮಾಡಿ “ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರ ಅಗಲಿಕೆ ನೋವು ತಂದಿದೆ. ಬಜರಂಗದಳದ ಮಾಜಿ ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ಸಾಮಾಜಿಕ ಹೋರಾಟಗಾರ‌ ಮಹೇಂದ್ರಕುಮಾರ್ ಅವರ ಅನಿರೀಕ್ಷಿತ ಸಾವಿನಿಂದ ದುಃಖಿತನಾಗಿದ್ದೇನೆ.
ಜಾತ್ಯತೀತ ಶಕ್ತಿಗಳನ್ನು ಸಂಘಟಿಸಲು ಅವಿರತವಾಗಿ ಶ್ರಮಿಸುತ್ತಿದ್ದ ಈ ಯುವನಾಯಕ ಒಂದೆರಡು ಭೇಟಿಗಳಲ್ಲಿಯೇ ನನ್ನಲ್ಲಿ ಭರವಸೆ ಮೂಡಿಸಿದ್ದರು. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಸಾಮಾಜಿಕ ಹೋರಾಟಗಾರ‌ ಮಹೇಂದ್ರಕುಮಾರ್ ಅವರ ಅನಿರೀಕ್ಷಿತ ಸಾವಿನಿಂದ ದು:ಖಿತನಾಗಿದ್ದೇನೆ.ಜಾತ್ಯತೀತ ಶಕ್ತಿಗಳನ್ನು ಸಂಘಟಿಸಲು ಅವಿರತವಾಗಿ…

Posted by Siddaramaiah on Friday, April 24, 2020

ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿಯವರು ಟ್ವೀಟ್‌ ಮಾಡಿ “ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ಹಠಾತ್ ನಿಧನದ ಸುದ್ದಿ ಕೇಳಿ ದಿಗ್ಬ್ರಮೆಯಾಗಿದೆ. ವ್ಯವಸ್ಥೆಯ ತಲ್ಲಣಗಳಿಗೆ ಮಿಡಿಯುತ್ತಿದ್ದ ಜೀವ ಕಮರಿ ಹೋದಂತಾಗಿದೆ.

ಹಿಂದೂಪರ ಸಂಘಟನೆಗಳ ಮೂಲಕ ಗುರುತಿಸಿಕೊಂಡಿದ್ದ ಮಹೇಂದ್ರಕುಮಾರ್ ಇದ್ದಕ್ಕಿದ್ದಂತೆ ಬದಲಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ನನ್ನೊಂದಿಗೆ ಮುಕ್ತವಾಗಿ ಸಮಾಜದ ತಲ್ಲಣಗಳ ಬಗ್ಗೆ ಚರ್ಚಿಸುತ್ತಿದ್ದರು.

ಆನಂತರ ಪಕ್ಷ ರಾಜಕೀಯದಿಂದ ದೂರ ಸರಿದ ಅವರು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪ್ರಗತಿಪರ ಚಿಂತಕ ಗುಣವನ್ನು ಬಿಡಲೇ ಇಲ್ಲ. ಆದರೆ ಸಿದ್ಧಾಂತಗಳು ಬದಲಾಗಿದ್ದನ್ನು ನಾನು ಹತ್ತಿರದಿಂದ ಕಂಡಿದ್ದೆ.

‘ನಮ್ಮ ಧ್ವನಿ’ ಸಂಘಟನೆ ಹುಟ್ಟುಹಾಕಿದ್ದ ಮಹೇಂದ್ರಕುಮಾರ್ ಈ ಮೂಲಕ ರಾಜ್ಯದಾದ್ಯಂತ ಜೀವಪರ ನಿಲುವನ್ನು ಜಾಗೃತಗೊಳಿಸುವ ಕ್ರಿಯೆಯಲ್ಲಿ ಸಕ್ರಿಯರಾಗಿದ್ದರು.

ಅಕಾಲಿಕ ಸಾವನ್ನಪ್ಪಿದ ಮಹೇಂದ್ರ ಕುಮಾರ್ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ದಕ್ಕಲಿ” ಎಂದು ವಿದಾಯ ಹೇಳಿದ್ದಾರೆ.

ಇದಲ್ಲದೇ ಮಹೇಂದ್ರ ಕುಮಾರ್‌ ನಿಧನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅವರ ನಿಕಟವರ್ತಿಗಳು, ಸ್ನೇಹಿತರು, ಬೆಂಬಲಿಗರು, ಅಭಿಮಾನಿಗಳು ಮಹೇಂದ್ರ ಕುಮಾರ್‌ರವರ ಚಿತ್ರವನ್ನು ತಮ್ಮ ಪ್ರೊಫೈಲ್‌ ಫೋಟೊ ಆಗಿ ಹಾಕಿಕೊಳ್ಳುವ ಮೂಲಕ ಅಗಲಿದ ಚಿಂತಕನಿಗೆ ಗೌರವ ಸಲ್ಲಿಸಿದ್ದಾರೆ.

ಸದ್ಯಕ್ಕೆ ಅವರ ಪಾರ್ಥಿವ ಶರೀರವು ಎಂ.ಎಸ್‌ ರಾಮಯ್ಯ ಆಸ್ಪತ್ರೆಯಲ್ಲಿದ್ದು, 12 ಗಂಟೆಯ ಸುಮಾರಾಗಿ ಅವರ ಸ್ವಗ್ರಾಮವಾದ ಕೊಪ್ಪದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.


ಇದನ್ನೂ ಓದಿ: ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಇನ್ನಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...