Homeಕರ್ನಾಟಕಮಹೇಂದ್ರ ಕುಮಾರ್‌ ನಿಧನಕ್ಕೆ ತೀವ್ರ ಸಂತಾಪ: ಕಂಬನಿ ಮಿಡಿದ ಹಲವರು

ಮಹೇಂದ್ರ ಕುಮಾರ್‌ ನಿಧನಕ್ಕೆ ತೀವ್ರ ಸಂತಾಪ: ಕಂಬನಿ ಮಿಡಿದ ಹಲವರು

- Advertisement -
- Advertisement -

ನಮ್ಮ ಧ್ವನಿ ಬಳಗದ ಮುಖ್ಯಸ್ಥರು ಮತ್ತು ಸಾಮಾಜಿಕ ಚಿಂತಕರಾದ ಮಹೇಂದ್ರ ಕುಮಾರ್‌ರವರ ನಿಧನಕ್ಕೆ ರಾಜ್ಯಾದ್ಯಂತ ಸಾವಿರಾರು ಜನ ತೀವ್ರ ಸಂತಾಪ ಸೂಚಿಸಿದ್ದು, ಕಂಬನಿ ಮಿಡಿದಿದ್ದಾರೆ.

ಮುಖ್ಯಮಂತ್ರಿಗಳಾದ ಬಿ.ಎಸ್‌ ಯಡಿಯೂರಪ್ಪನವರು ಟ್ವೀಟ್‌ ಮಾಡಿ “ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರ ಅಗಲಿಕೆ ನೋವು ತಂದಿದೆ. ಬಜರಂಗದಳದ ಮಾಜಿ ಸಂಚಾಲಕರಾಗಿದ್ದ ಮಹೇಂದ್ರ ಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ಸಾಮಾಜಿಕ ಹೋರಾಟಗಾರ‌ ಮಹೇಂದ್ರಕುಮಾರ್ ಅವರ ಅನಿರೀಕ್ಷಿತ ಸಾವಿನಿಂದ ದುಃಖಿತನಾಗಿದ್ದೇನೆ.
ಜಾತ್ಯತೀತ ಶಕ್ತಿಗಳನ್ನು ಸಂಘಟಿಸಲು ಅವಿರತವಾಗಿ ಶ್ರಮಿಸುತ್ತಿದ್ದ ಈ ಯುವನಾಯಕ ಒಂದೆರಡು ಭೇಟಿಗಳಲ್ಲಿಯೇ ನನ್ನಲ್ಲಿ ಭರವಸೆ ಮೂಡಿಸಿದ್ದರು. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಸಾಮಾಜಿಕ ಹೋರಾಟಗಾರ‌ ಮಹೇಂದ್ರಕುಮಾರ್ ಅವರ ಅನಿರೀಕ್ಷಿತ ಸಾವಿನಿಂದ ದು:ಖಿತನಾಗಿದ್ದೇನೆ.ಜಾತ್ಯತೀತ ಶಕ್ತಿಗಳನ್ನು ಸಂಘಟಿಸಲು ಅವಿರತವಾಗಿ…

Posted by Siddaramaiah on Friday, April 24, 2020

ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿಯವರು ಟ್ವೀಟ್‌ ಮಾಡಿ “ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ಹಠಾತ್ ನಿಧನದ ಸುದ್ದಿ ಕೇಳಿ ದಿಗ್ಬ್ರಮೆಯಾಗಿದೆ. ವ್ಯವಸ್ಥೆಯ ತಲ್ಲಣಗಳಿಗೆ ಮಿಡಿಯುತ್ತಿದ್ದ ಜೀವ ಕಮರಿ ಹೋದಂತಾಗಿದೆ.

ಹಿಂದೂಪರ ಸಂಘಟನೆಗಳ ಮೂಲಕ ಗುರುತಿಸಿಕೊಂಡಿದ್ದ ಮಹೇಂದ್ರಕುಮಾರ್ ಇದ್ದಕ್ಕಿದ್ದಂತೆ ಬದಲಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ನನ್ನೊಂದಿಗೆ ಮುಕ್ತವಾಗಿ ಸಮಾಜದ ತಲ್ಲಣಗಳ ಬಗ್ಗೆ ಚರ್ಚಿಸುತ್ತಿದ್ದರು.

ಆನಂತರ ಪಕ್ಷ ರಾಜಕೀಯದಿಂದ ದೂರ ಸರಿದ ಅವರು ವ್ಯವಸ್ಥೆಯ ವಿರುದ್ಧ ಸಿಡಿದೇಳುವ ಪ್ರಗತಿಪರ ಚಿಂತಕ ಗುಣವನ್ನು ಬಿಡಲೇ ಇಲ್ಲ. ಆದರೆ ಸಿದ್ಧಾಂತಗಳು ಬದಲಾಗಿದ್ದನ್ನು ನಾನು ಹತ್ತಿರದಿಂದ ಕಂಡಿದ್ದೆ.

‘ನಮ್ಮ ಧ್ವನಿ’ ಸಂಘಟನೆ ಹುಟ್ಟುಹಾಕಿದ್ದ ಮಹೇಂದ್ರಕುಮಾರ್ ಈ ಮೂಲಕ ರಾಜ್ಯದಾದ್ಯಂತ ಜೀವಪರ ನಿಲುವನ್ನು ಜಾಗೃತಗೊಳಿಸುವ ಕ್ರಿಯೆಯಲ್ಲಿ ಸಕ್ರಿಯರಾಗಿದ್ದರು.

ಅಕಾಲಿಕ ಸಾವನ್ನಪ್ಪಿದ ಮಹೇಂದ್ರ ಕುಮಾರ್ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಅವರ ಕುಟುಂಬ ಸದಸ್ಯರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ದಕ್ಕಲಿ” ಎಂದು ವಿದಾಯ ಹೇಳಿದ್ದಾರೆ.

ಇದಲ್ಲದೇ ಮಹೇಂದ್ರ ಕುಮಾರ್‌ ನಿಧನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅವರ ನಿಕಟವರ್ತಿಗಳು, ಸ್ನೇಹಿತರು, ಬೆಂಬಲಿಗರು, ಅಭಿಮಾನಿಗಳು ಮಹೇಂದ್ರ ಕುಮಾರ್‌ರವರ ಚಿತ್ರವನ್ನು ತಮ್ಮ ಪ್ರೊಫೈಲ್‌ ಫೋಟೊ ಆಗಿ ಹಾಕಿಕೊಳ್ಳುವ ಮೂಲಕ ಅಗಲಿದ ಚಿಂತಕನಿಗೆ ಗೌರವ ಸಲ್ಲಿಸಿದ್ದಾರೆ.

ಸದ್ಯಕ್ಕೆ ಅವರ ಪಾರ್ಥಿವ ಶರೀರವು ಎಂ.ಎಸ್‌ ರಾಮಯ್ಯ ಆಸ್ಪತ್ರೆಯಲ್ಲಿದ್ದು, 12 ಗಂಟೆಯ ಸುಮಾರಾಗಿ ಅವರ ಸ್ವಗ್ರಾಮವಾದ ಕೊಪ್ಪದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ.


ಇದನ್ನೂ ಓದಿ: ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಇನ್ನಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...