Homeಕರ್ನಾಟಕKRS ಪಕ್ಷದಿಂದ 'ಚಲಿಸು ಕರ್ನಾಟಕ' ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

KRS ಪಕ್ಷದಿಂದ ‘ಚಲಿಸು ಕರ್ನಾಟಕ’ ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

ನಾನೂ ಸೇರಿದಂತೆ ನಮ್ಮ ಪಕ್ಷದ ಹಲವು ಪದಾಧಿಕಾರಿಗಳು, ಸದಸ್ಯರು ಮತ್ತು ಬೆಂಬಲಿಗರು ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಯಾತ್ರೆಯ ಭಾಗವಾಗಿ ಮುಂದಿನ ಮೂರು ತಿಂಗಳ ಕಾಲ ಸಂಚರಿಸಲಿದ್ದೇವೆ - ರವಿಕೃಷ್ಣ ರೆಡ್ಡಿ

- Advertisement -
- Advertisement -

ಕೊರೊನಾದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಆಶಾವಾದ, ಚೈತನ್ಯ ತುಂಬಲು ಮತ್ತು ಜನಪರ ರಾಜಕಾರಣದ ಅವಶ್ಯಕತೆಯ ಬಗ್ಗೆ ತಿಳಿಸಲು, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ರವಿಕೃಷ್ಣಾ ರೆಡ್ಡಿಯವರ ನೇತೃತ್ವದಲ್ಲಿ “ಚಲಿಸು ಕರ್ನಾಟಕ” ಎಂಬ 2700 ಕಿ.ಮೀ. ಸೈಕಲ್ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕದಾದ್ಯಂತ 3 ಹಂತಗಳಲ್ಲಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಸೆಪ್ಟೆಂಬರ್ 14 ರಿಂದು ಕೋಲಾರದಿಂದ ಮೊದಲ ಹಂತದ ಯಾತ್ರೆಗೆ ಚಾಲನೆ ನೀಡಲಾಗುತ್ತಿದೆ.

“ಇತ್ತೀಚಿನ ತಿಂಗಳುಗಳಲ್ಲಿ ಜನಜೀವನವು ಏಳುಬೀಳುಗಳೊಂದಿಗೆ ನಡೆಯುತ್ತಿದೆ. ಕೆಲವರದು ಸ್ತಬ್ಧವಾಗಿದ್ದರೆ, ಬಹುತೇಕರದು ಮುಗ್ಗರಿಸಿದೆ. ಇದನ್ನು ಸರಿಪಡಿಸುವಲ್ಲಿ ಮತ್ತು ಜನರ ಬದುಕನ್ನು ಮೇಲೆತ್ತುವಲ್ಲಿ ಸರ್ಕಾರಗಳು ಮತ್ತು ಅಧಿಕಾರ-ಕೇಂದ್ರಿತ ರಾಜಕಾರಣಿಗಳು ಹಾಗೂ ಜನಪ್ರತಿನಿಧಿಗಳು ದಾರುಣವಾಗಿ ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸೈಕಲ್ ಯಾತ್ರೆಯನ್ನು ಹಮ್ಮಿಕೊಂಡಿದೆ. ನಾನೂ ಸೇರಿದಂತೆ ನಮ್ಮ ಪಕ್ಷದ ಹಲವು ಪದಾಧಿಕಾರಿಗಳು, ಸದಸ್ಯರು ಮತ್ತು ಬೆಂಬಲಿಗರು ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ‘ಚಲಿಸು ಕರ್ನಾಟಕ’ ಯಾತ್ರೆಯ ಭಾಗವಾಗಿ ಮುಂದಿನ ಮೂರು ತಿಂಗಳ ಕಾಲ ಸಂಚರಿಸಲಿದ್ದೇವೆ” ಎಂದು ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರು ರವಿಕೃಷ್ಣಾರೆಡ್ಡಿ ಮೇಲೆ ಗೂಂಡಾಗಿರಿ ನಡೆಸಿದ್ದು, ತಮ್ಮ ಸೆಕ್ಸ್ ಹಗರಣ ಮುಚ್ಚಿಡುವುದಕ್ಕಾ!?

“ಇಂತಹ ಚಾರಿತ್ರಿಕ ಯಾತ್ರೆಯು ತಮ್ಮ ಸಹಾಯವಿಲ್ಲದೆ ಸಾಧ್ಯವಾಗುವುದಿಲ್ಲ ಮತ್ತು ಅದು ಜನರಿಗೆ ಮುಟ್ಟದಿದ್ದರೆ ಸಾರ್ಥಕವೂ ಅಲ್ಲ. ಹಾಗಾಗಿ ತಾವು ಉದಾರ ಮನಸ್ಸಿನಿಂದ ನಮ್ಮ ಈ ಅಭಿಯಾನಕ್ಕೆ ಮತ್ತು ಹೋರಾಟಕ್ಕೆ ಬೆಂಬಲ ನೀಡಬೇಕೆಂದು ನಾನು ತಮ್ಮಲ್ಲಿ ಕೋರಿಕೊಳ್ಳುತ್ತೇನೆ. ದಯವಿಟ್ಟು ತಾವು ತಮ್ಮ ಕೈಲಾದಷ್ಟು ಧನಸಹಾಯ ಮಾಡಿ ಈ ಸೈಕಲ್ ಯಾತ್ರೆಯನ್ನು ಯಶಸ್ವಿಗೊಳಿಸಬೇಕು ಮತ್ತು ರಾಜ್ಯದ ಜನರಲ್ಲಿ ಭವಿಷ್ಯದ ಬಗ್ಗೆ ಆಶಾವಾದ ಮೂಡಿಸುವಲ್ಲಿ ಹಾಗೂ ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣವನ್ನು ಬೆಂಬಲಿಸುವಲ್ಲಿ ತಮ್ಮ ಪಾಲೂ ಇರಲಿ” ಎಂದು ಅವರು ಮನವಿ ಮಾಡಿದ್ದಾರೆ.

“ಕಳೆದ ಆರೇಳು ತಿಂಗಳಿನಿಂದ ರಾಜ್ಯದ ಜನರದೂ ಸೇರಿದಂತೆ ಜಗತ್ತಿನಾದ್ಯಂತ ಬಹುತೇಕ ಜನರ ಬದುಕು ಅಯೋಮಯವಾಗಿದೆ, ಅನಿಶ್ಚಿತತೆಯಿಂದ ಕೂಡಿದೆ. ಕೆಲವರದು ಮಾತ್ರ ಅಷ್ಟೇನೂ ತೊಂದರೆಗಳಿಲ್ಲದೆ ನಡೆಯುತ್ತಿದ್ದರೆ, ಬಹುತೇಕರದು ಮುಗ್ಗರಿಸಿದೆ, ಸ್ತಬ್ಧವಾಗಿದೆ, ನಿಶ್ಚಲವಾಗಿದೆ. ಆದರೂ ಜೀವನ ನಡೆಯಲೇಬೇಕು. ಆಶಾವಾದದಿಂದ, ಕ್ರಿಯಾಶೀಲತೆಯಿಂದ, ಎಚ್ಚರಿಕೆಯಿಂದ ನಾವು ಮುನ್ನಡೆಯಬೇಕು, ಚಲಿಸಬೇಕು, ಜೀವನವನ್ನು ಕಟ್ಟಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ, ಕೊರೊನಾ ವೈರಸ್ ತಂದೊಡ್ಡಿರುವ ವಿಪತ್ತು, ಜನರ ಸಮಸ್ಯೆಗಳು ಮತ್ತು ಅದರ ಪರಿಹಾರಗಳು, ಸರ್ಕಾರ ಮಾಡಬೇಕಾಗಿರುವ ಕೆಲಸ, ಜನರ ಸಹಭಾಗಿತ್ವ ಮತ್ತು ಜವಾಬ್ದಾರಿ, ಮುಂತಾದ ವಿಚಾರಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅವರು ಸ್ಥೈರ್ಯದಿಂದ ಮುನ್ನಡೆಯುವಂತೆ ಪ್ರೇರೇಪಿಸಲು ನಾಳೆಯಿಂದ ‘ಉಜ್ವಲ ಭವಿಷ್ಯದೆಡೆಗೆ, ಸುಭದ್ರ ಕರ್ನಾಟಕದೆಡೆಗೆ’ ಎಂಬ ಈ ಮಹತ್ವದ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ” ಎಂದರು.


ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...