Homeಕರ್ನಾಟಕKRS ಪಕ್ಷದಿಂದ 'ಚಲಿಸು ಕರ್ನಾಟಕ' ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

KRS ಪಕ್ಷದಿಂದ ‘ಚಲಿಸು ಕರ್ನಾಟಕ’ ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

ನಾನೂ ಸೇರಿದಂತೆ ನಮ್ಮ ಪಕ್ಷದ ಹಲವು ಪದಾಧಿಕಾರಿಗಳು, ಸದಸ್ಯರು ಮತ್ತು ಬೆಂಬಲಿಗರು ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಯಾತ್ರೆಯ ಭಾಗವಾಗಿ ಮುಂದಿನ ಮೂರು ತಿಂಗಳ ಕಾಲ ಸಂಚರಿಸಲಿದ್ದೇವೆ - ರವಿಕೃಷ್ಣ ರೆಡ್ಡಿ

- Advertisement -
- Advertisement -

ಕೊರೊನಾದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಆಶಾವಾದ, ಚೈತನ್ಯ ತುಂಬಲು ಮತ್ತು ಜನಪರ ರಾಜಕಾರಣದ ಅವಶ್ಯಕತೆಯ ಬಗ್ಗೆ ತಿಳಿಸಲು, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ರವಿಕೃಷ್ಣಾ ರೆಡ್ಡಿಯವರ ನೇತೃತ್ವದಲ್ಲಿ “ಚಲಿಸು ಕರ್ನಾಟಕ” ಎಂಬ 2700 ಕಿ.ಮೀ. ಸೈಕಲ್ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕದಾದ್ಯಂತ 3 ಹಂತಗಳಲ್ಲಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಸೆಪ್ಟೆಂಬರ್ 14 ರಿಂದು ಕೋಲಾರದಿಂದ ಮೊದಲ ಹಂತದ ಯಾತ್ರೆಗೆ ಚಾಲನೆ ನೀಡಲಾಗುತ್ತಿದೆ.

“ಇತ್ತೀಚಿನ ತಿಂಗಳುಗಳಲ್ಲಿ ಜನಜೀವನವು ಏಳುಬೀಳುಗಳೊಂದಿಗೆ ನಡೆಯುತ್ತಿದೆ. ಕೆಲವರದು ಸ್ತಬ್ಧವಾಗಿದ್ದರೆ, ಬಹುತೇಕರದು ಮುಗ್ಗರಿಸಿದೆ. ಇದನ್ನು ಸರಿಪಡಿಸುವಲ್ಲಿ ಮತ್ತು ಜನರ ಬದುಕನ್ನು ಮೇಲೆತ್ತುವಲ್ಲಿ ಸರ್ಕಾರಗಳು ಮತ್ತು ಅಧಿಕಾರ-ಕೇಂದ್ರಿತ ರಾಜಕಾರಣಿಗಳು ಹಾಗೂ ಜನಪ್ರತಿನಿಧಿಗಳು ದಾರುಣವಾಗಿ ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸೈಕಲ್ ಯಾತ್ರೆಯನ್ನು ಹಮ್ಮಿಕೊಂಡಿದೆ. ನಾನೂ ಸೇರಿದಂತೆ ನಮ್ಮ ಪಕ್ಷದ ಹಲವು ಪದಾಧಿಕಾರಿಗಳು, ಸದಸ್ಯರು ಮತ್ತು ಬೆಂಬಲಿಗರು ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ‘ಚಲಿಸು ಕರ್ನಾಟಕ’ ಯಾತ್ರೆಯ ಭಾಗವಾಗಿ ಮುಂದಿನ ಮೂರು ತಿಂಗಳ ಕಾಲ ಸಂಚರಿಸಲಿದ್ದೇವೆ” ಎಂದು ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರು ರವಿಕೃಷ್ಣಾರೆಡ್ಡಿ ಮೇಲೆ ಗೂಂಡಾಗಿರಿ ನಡೆಸಿದ್ದು, ತಮ್ಮ ಸೆಕ್ಸ್ ಹಗರಣ ಮುಚ್ಚಿಡುವುದಕ್ಕಾ!?

“ಇಂತಹ ಚಾರಿತ್ರಿಕ ಯಾತ್ರೆಯು ತಮ್ಮ ಸಹಾಯವಿಲ್ಲದೆ ಸಾಧ್ಯವಾಗುವುದಿಲ್ಲ ಮತ್ತು ಅದು ಜನರಿಗೆ ಮುಟ್ಟದಿದ್ದರೆ ಸಾರ್ಥಕವೂ ಅಲ್ಲ. ಹಾಗಾಗಿ ತಾವು ಉದಾರ ಮನಸ್ಸಿನಿಂದ ನಮ್ಮ ಈ ಅಭಿಯಾನಕ್ಕೆ ಮತ್ತು ಹೋರಾಟಕ್ಕೆ ಬೆಂಬಲ ನೀಡಬೇಕೆಂದು ನಾನು ತಮ್ಮಲ್ಲಿ ಕೋರಿಕೊಳ್ಳುತ್ತೇನೆ. ದಯವಿಟ್ಟು ತಾವು ತಮ್ಮ ಕೈಲಾದಷ್ಟು ಧನಸಹಾಯ ಮಾಡಿ ಈ ಸೈಕಲ್ ಯಾತ್ರೆಯನ್ನು ಯಶಸ್ವಿಗೊಳಿಸಬೇಕು ಮತ್ತು ರಾಜ್ಯದ ಜನರಲ್ಲಿ ಭವಿಷ್ಯದ ಬಗ್ಗೆ ಆಶಾವಾದ ಮೂಡಿಸುವಲ್ಲಿ ಹಾಗೂ ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣವನ್ನು ಬೆಂಬಲಿಸುವಲ್ಲಿ ತಮ್ಮ ಪಾಲೂ ಇರಲಿ” ಎಂದು ಅವರು ಮನವಿ ಮಾಡಿದ್ದಾರೆ.

“ಕಳೆದ ಆರೇಳು ತಿಂಗಳಿನಿಂದ ರಾಜ್ಯದ ಜನರದೂ ಸೇರಿದಂತೆ ಜಗತ್ತಿನಾದ್ಯಂತ ಬಹುತೇಕ ಜನರ ಬದುಕು ಅಯೋಮಯವಾಗಿದೆ, ಅನಿಶ್ಚಿತತೆಯಿಂದ ಕೂಡಿದೆ. ಕೆಲವರದು ಮಾತ್ರ ಅಷ್ಟೇನೂ ತೊಂದರೆಗಳಿಲ್ಲದೆ ನಡೆಯುತ್ತಿದ್ದರೆ, ಬಹುತೇಕರದು ಮುಗ್ಗರಿಸಿದೆ, ಸ್ತಬ್ಧವಾಗಿದೆ, ನಿಶ್ಚಲವಾಗಿದೆ. ಆದರೂ ಜೀವನ ನಡೆಯಲೇಬೇಕು. ಆಶಾವಾದದಿಂದ, ಕ್ರಿಯಾಶೀಲತೆಯಿಂದ, ಎಚ್ಚರಿಕೆಯಿಂದ ನಾವು ಮುನ್ನಡೆಯಬೇಕು, ಚಲಿಸಬೇಕು, ಜೀವನವನ್ನು ಕಟ್ಟಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ, ಕೊರೊನಾ ವೈರಸ್ ತಂದೊಡ್ಡಿರುವ ವಿಪತ್ತು, ಜನರ ಸಮಸ್ಯೆಗಳು ಮತ್ತು ಅದರ ಪರಿಹಾರಗಳು, ಸರ್ಕಾರ ಮಾಡಬೇಕಾಗಿರುವ ಕೆಲಸ, ಜನರ ಸಹಭಾಗಿತ್ವ ಮತ್ತು ಜವಾಬ್ದಾರಿ, ಮುಂತಾದ ವಿಚಾರಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅವರು ಸ್ಥೈರ್ಯದಿಂದ ಮುನ್ನಡೆಯುವಂತೆ ಪ್ರೇರೇಪಿಸಲು ನಾಳೆಯಿಂದ ‘ಉಜ್ವಲ ಭವಿಷ್ಯದೆಡೆಗೆ, ಸುಭದ್ರ ಕರ್ನಾಟಕದೆಡೆಗೆ’ ಎಂಬ ಈ ಮಹತ್ವದ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ” ಎಂದರು.


ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...