Homeಕರ್ನಾಟಕKRS ಪಕ್ಷದಿಂದ 'ಚಲಿಸು ಕರ್ನಾಟಕ' ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

KRS ಪಕ್ಷದಿಂದ ‘ಚಲಿಸು ಕರ್ನಾಟಕ’ ಅಭಿಯಾನ: 2700 ಕಿ.ಮೀ. ವಿಶೇಷ ಸೈಕಲ್ ಯಾತ್ರೆ

ನಾನೂ ಸೇರಿದಂತೆ ನಮ್ಮ ಪಕ್ಷದ ಹಲವು ಪದಾಧಿಕಾರಿಗಳು, ಸದಸ್ಯರು ಮತ್ತು ಬೆಂಬಲಿಗರು ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಯಾತ್ರೆಯ ಭಾಗವಾಗಿ ಮುಂದಿನ ಮೂರು ತಿಂಗಳ ಕಾಲ ಸಂಚರಿಸಲಿದ್ದೇವೆ - ರವಿಕೃಷ್ಣ ರೆಡ್ಡಿ

- Advertisement -
- Advertisement -

ಕೊರೊನಾದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಆಶಾವಾದ, ಚೈತನ್ಯ ತುಂಬಲು ಮತ್ತು ಜನಪರ ರಾಜಕಾರಣದ ಅವಶ್ಯಕತೆಯ ಬಗ್ಗೆ ತಿಳಿಸಲು, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ರವಿಕೃಷ್ಣಾ ರೆಡ್ಡಿಯವರ ನೇತೃತ್ವದಲ್ಲಿ “ಚಲಿಸು ಕರ್ನಾಟಕ” ಎಂಬ 2700 ಕಿ.ಮೀ. ಸೈಕಲ್ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕದಾದ್ಯಂತ 3 ಹಂತಗಳಲ್ಲಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಸೆಪ್ಟೆಂಬರ್ 14 ರಿಂದು ಕೋಲಾರದಿಂದ ಮೊದಲ ಹಂತದ ಯಾತ್ರೆಗೆ ಚಾಲನೆ ನೀಡಲಾಗುತ್ತಿದೆ.

“ಇತ್ತೀಚಿನ ತಿಂಗಳುಗಳಲ್ಲಿ ಜನಜೀವನವು ಏಳುಬೀಳುಗಳೊಂದಿಗೆ ನಡೆಯುತ್ತಿದೆ. ಕೆಲವರದು ಸ್ತಬ್ಧವಾಗಿದ್ದರೆ, ಬಹುತೇಕರದು ಮುಗ್ಗರಿಸಿದೆ. ಇದನ್ನು ಸರಿಪಡಿಸುವಲ್ಲಿ ಮತ್ತು ಜನರ ಬದುಕನ್ನು ಮೇಲೆತ್ತುವಲ್ಲಿ ಸರ್ಕಾರಗಳು ಮತ್ತು ಅಧಿಕಾರ-ಕೇಂದ್ರಿತ ರಾಜಕಾರಣಿಗಳು ಹಾಗೂ ಜನಪ್ರತಿನಿಧಿಗಳು ದಾರುಣವಾಗಿ ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸೈಕಲ್ ಯಾತ್ರೆಯನ್ನು ಹಮ್ಮಿಕೊಂಡಿದೆ. ನಾನೂ ಸೇರಿದಂತೆ ನಮ್ಮ ಪಕ್ಷದ ಹಲವು ಪದಾಧಿಕಾರಿಗಳು, ಸದಸ್ಯರು ಮತ್ತು ಬೆಂಬಲಿಗರು ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ‘ಚಲಿಸು ಕರ್ನಾಟಕ’ ಯಾತ್ರೆಯ ಭಾಗವಾಗಿ ಮುಂದಿನ ಮೂರು ತಿಂಗಳ ಕಾಲ ಸಂಚರಿಸಲಿದ್ದೇವೆ” ಎಂದು ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರು ರವಿಕೃಷ್ಣಾರೆಡ್ಡಿ ಮೇಲೆ ಗೂಂಡಾಗಿರಿ ನಡೆಸಿದ್ದು, ತಮ್ಮ ಸೆಕ್ಸ್ ಹಗರಣ ಮುಚ್ಚಿಡುವುದಕ್ಕಾ!?

“ಇಂತಹ ಚಾರಿತ್ರಿಕ ಯಾತ್ರೆಯು ತಮ್ಮ ಸಹಾಯವಿಲ್ಲದೆ ಸಾಧ್ಯವಾಗುವುದಿಲ್ಲ ಮತ್ತು ಅದು ಜನರಿಗೆ ಮುಟ್ಟದಿದ್ದರೆ ಸಾರ್ಥಕವೂ ಅಲ್ಲ. ಹಾಗಾಗಿ ತಾವು ಉದಾರ ಮನಸ್ಸಿನಿಂದ ನಮ್ಮ ಈ ಅಭಿಯಾನಕ್ಕೆ ಮತ್ತು ಹೋರಾಟಕ್ಕೆ ಬೆಂಬಲ ನೀಡಬೇಕೆಂದು ನಾನು ತಮ್ಮಲ್ಲಿ ಕೋರಿಕೊಳ್ಳುತ್ತೇನೆ. ದಯವಿಟ್ಟು ತಾವು ತಮ್ಮ ಕೈಲಾದಷ್ಟು ಧನಸಹಾಯ ಮಾಡಿ ಈ ಸೈಕಲ್ ಯಾತ್ರೆಯನ್ನು ಯಶಸ್ವಿಗೊಳಿಸಬೇಕು ಮತ್ತು ರಾಜ್ಯದ ಜನರಲ್ಲಿ ಭವಿಷ್ಯದ ಬಗ್ಗೆ ಆಶಾವಾದ ಮೂಡಿಸುವಲ್ಲಿ ಹಾಗೂ ಸ್ವಚ್ಛ, ಪ್ರಾಮಾಣಿಕ, ಜನಪರ ರಾಜಕಾರಣವನ್ನು ಬೆಂಬಲಿಸುವಲ್ಲಿ ತಮ್ಮ ಪಾಲೂ ಇರಲಿ” ಎಂದು ಅವರು ಮನವಿ ಮಾಡಿದ್ದಾರೆ.

“ಕಳೆದ ಆರೇಳು ತಿಂಗಳಿನಿಂದ ರಾಜ್ಯದ ಜನರದೂ ಸೇರಿದಂತೆ ಜಗತ್ತಿನಾದ್ಯಂತ ಬಹುತೇಕ ಜನರ ಬದುಕು ಅಯೋಮಯವಾಗಿದೆ, ಅನಿಶ್ಚಿತತೆಯಿಂದ ಕೂಡಿದೆ. ಕೆಲವರದು ಮಾತ್ರ ಅಷ್ಟೇನೂ ತೊಂದರೆಗಳಿಲ್ಲದೆ ನಡೆಯುತ್ತಿದ್ದರೆ, ಬಹುತೇಕರದು ಮುಗ್ಗರಿಸಿದೆ, ಸ್ತಬ್ಧವಾಗಿದೆ, ನಿಶ್ಚಲವಾಗಿದೆ. ಆದರೂ ಜೀವನ ನಡೆಯಲೇಬೇಕು. ಆಶಾವಾದದಿಂದ, ಕ್ರಿಯಾಶೀಲತೆಯಿಂದ, ಎಚ್ಚರಿಕೆಯಿಂದ ನಾವು ಮುನ್ನಡೆಯಬೇಕು, ಚಲಿಸಬೇಕು, ಜೀವನವನ್ನು ಕಟ್ಟಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ, ಕೊರೊನಾ ವೈರಸ್ ತಂದೊಡ್ಡಿರುವ ವಿಪತ್ತು, ಜನರ ಸಮಸ್ಯೆಗಳು ಮತ್ತು ಅದರ ಪರಿಹಾರಗಳು, ಸರ್ಕಾರ ಮಾಡಬೇಕಾಗಿರುವ ಕೆಲಸ, ಜನರ ಸಹಭಾಗಿತ್ವ ಮತ್ತು ಜವಾಬ್ದಾರಿ, ಮುಂತಾದ ವಿಚಾರಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅವರು ಸ್ಥೈರ್ಯದಿಂದ ಮುನ್ನಡೆಯುವಂತೆ ಪ್ರೇರೇಪಿಸಲು ನಾಳೆಯಿಂದ ‘ಉಜ್ವಲ ಭವಿಷ್ಯದೆಡೆಗೆ, ಸುಭದ್ರ ಕರ್ನಾಟಕದೆಡೆಗೆ’ ಎಂಬ ಈ ಮಹತ್ವದ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ” ಎಂದರು.


ಇದನ್ನೂ ಓದಿ: ಅಕ್ಕಿಬೇಳೆಯಿಂದ ಪಿಪಿಇ ಕಿಟ್‌ವರೆಗೂ ಭ್ರಷ್ಟಾಚಾರ ನಡೆಯುತ್ತಿದೆ: ರವಿಕೃಷ್ಣಾರೆಡ್ಡಿ ಸಂದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...