Homeಮುಖಪುಟಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ಪ್ರಸ್ತುತ ಆಂದೋಲನವನ್ನು ಸ್ಥಗಿತಗೊಳಿಸಲಾಗಿದೆ, ಹೋರಾಟ ಗೆದ್ದಿದೆ; ರೈತರ ಹಕ್ಕುಗಳನ್ನು ಖಾತ್ರಿಪಡಿಸುವ ಹೋರಾಟ ಮುಂದುವರಿಯುತ್ತದೆ ಎಂದು ಎಸ್‌ಕೆಎಂ ಟ್ವೀಟ್ ಮಾಡಿದೆ.

- Advertisement -
- Advertisement -

ಐತಿಹಾಸಿಕ ರೈತ ಚಳವಳಿ ಗೆಲುವು ಸಾಧಿಸಿದೆ. ಕೃಷಿ ಕಾಯ್ದೆಗಳು ರದ್ದಾದ ನಂತರ ಎಂಎಸ್‌ಪಿ ಸೇರಿದಂತೆ ರೈತರ ಇತರ ಹಕ್ಕೊತ್ತಾಯಗಳ ಎದುರು ಮೋದಿ ಸರ್ಕಾರ ಮಂಡಿಯೂರಿದೆ. ಹಾಗಾಗಿ ದೆಹಲಿ ಗಡಿಗಳಲ್ಲಿ ಮತ್ತು ಪಂಜಾಬ್‌ನ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿದ್ದ ರೈತ ಹೋರಾಟಕ್ಕೆ ತೆರೆ ಎಳೆಯುವುದಾಗಿ ರೈತ ಹೋರಾಟದ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಘೋಷಿಸಿದೆ. ಆದರೆ ಎಂಎಸ್‌ಪಿ ಸಿಗುವವರೆಗೂ ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿಗಳಿಗೆ ಶಿಕ್ಷೆಯಾಗುವವರೆಗೂ ಚಳವಳಿ ನಿರಂತರವಾಗಿ ನಡೆಯಲಿದ್ದ, ಮುಂದಕ್ಕೂ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ ಎಂದು ಎಸ್‌ಕೆಎಂ ತಿಳಿಸಿದೆ.

ದೆಹಲಿ ಗಡಿಗಳಲ್ಲಿ, ರಾಷ್ಟ್ರೀಯ ಹೆದ್ದಾರಿಗಳು ಮತ್ತು ಇತರ ಸ್ಥಳಗಳಲ್ಲಿನ ಪ್ರತಿಭಟನಾ ಧರಣಿಗಳನ್ನು ತೆರವುಗೊಳಿಸುವುದಾಗಿ ಎಸ್‌ಕೆಎಂ ಔಪಚಾರಿಕವಾಗಿ ಘೋಷಿಸುತ್ತದೆ. ಪ್ರಸ್ತುತ ಆಂದೋಲನವನ್ನು ಸ್ಥಗಿತಗೊಳಿಸಲಾಗಿದೆ, ಹೋರಾಟ ಗೆದ್ದಿದೆ; ರೈತರ ಹಕ್ಕುಗಳನ್ನು ಖಾತ್ರಿಪಡಿಸುವ ಹೋರಾಟ ಮುಂದುವರಿಯುತ್ತದೆ ಎಂದು ಎಸ್‌ಕೆಎಂ ಟ್ವೀಟ್ ಮಾಡಿದೆ.

ಈ ಜಯವನ್ನು 715 ಹುತಾತ್ಮ ರೈತರಿಗೆ ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ಅರ್ಪಿಸುತ್ತೇವೆ. ಹೋರಾಟದಲ್ಲಿ ಜೊತೆಗೂಡಿದ ಬೆಂಬಲಿಸಿದ ದೇಶದ ಎಲ್ಲಾ ರೈತರು ಮತ್ತು ನಾಗರೀಕರನ್ನು ಅಭಿನಂದಿಸುತ್ತೇವೆ. ಪ್ರತಿಭಟನೆ ವೇಳೆ ತೊಂದರೆಗೊಳಗಾದವರಲ್ಲಿ ಕ್ಷಮೆಯಾಚಿಸುತ್ತೇವೆ. ಶಾಂತಿ, ತಾಳ್ಮೆ ಗೆಲುವಿನ ಸೂತ್ರವಾಗಿದ್ದ, ಮುಂದೆಯೂ ಅದನ್ನು ಕಾಪಿಟ್ಟುಕೊಳ್ಳಲಾಗುವುದು ಎಂದು ಎಸ್‌ಕೆಎಂ ಹೇಳಿದೆ.

ಕೇಂದ್ರ ಸರ್ಕಾರ ರೈತರಿಗೆ ಅಧಿಕೃತ ಪತ್ರ ಬರೆದಿದೆ. ಅದರಲ್ಲಿ ಎಂಎಸ್‌ಪಿಗೆ ಶಾಸನಬದ್ಧ ಮಾನ್ಯತೆ, ರೈತರ ಮೇಲಿನ ಎಲ್ಲಾ ಪೊಲೀಸ್ ಪ್ರಕರಣಗಳನ್ನು ವಾಪಸ್ ಪಡೆಯುವುದು, ಹುತಾತ್ಮ ರೈತ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗ, ವಿದ್ಯುತ್ ಮಸೂದೆ ಹಿಂಪಡೆಯುವುದು ಮತ್ತು ಕೃಷಿ ತ್ಯಾಜ್ಯ ಸುಡುವುದನ್ನು ಅಪರಾಧೀಕರಿಸುವುದಕ್ಕೆ ತಡೆಗೆ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.

ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಮಧ್ಯಪ್ರದೇಶ ಸರ್ಕಾರಗಳು ರೈತರ ಮೇಲಿನ ಎಲ್ಲಾ ಪ್ರಕರಣಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳುತ್ತವೆ. ದೆಹಲಿ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಕೇಸುಗಳನ್ನು ಹಿಂಪಡೆಯುವುದಾಗಿ ಕೇಂದ್ರ ಏಜೆನ್ಸಿಗಳು ಒಪ್ಪಿಕೊಂಡಿವೆ. ರೈತರಿಗೆ ಪರಿಹಾರ ನೀಡಲು ಹರಿಯಾಣ, ಯುಪಿ ಸರ್ಕಾರಗಳು ಸಿದ್ಧವಾಗಿವೆ. ರೈತ ಸಂಘಟನೆಗಳೊಂದಿಗೆ ಚರ್ಚಿಸದೆ ವಿದ್ಯುತ್ ಬಿಲ್ ತರುವುದಿಲ್ಲ ಎಂದು ಕೇಂದ್ರ ಸರ್ಕಾರ ಪತ್ರ ಬರೆದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ಚಳುವಳಿ ಮುಗಿದಿಲ್ಲ. ಎಂಎಸ್‌ಪಿ ಮತ್ತು ಲಖಿಂಪುರ ಮತ್ತಿತರ ಸಮಸ್ಯೆಗಳ ಕುರಿತು ಹೋರಾಟ ಮುಂದುವರಿಯಲಿದೆ. ಜನವರಿ 15 ರಂದು SKM ಮತ್ತೆ ಸಭೆ ಸೇರಲಿದೆ. ಸಂಯುಕ್ತ ಕಿಸಾನ್ ಮೋರ್ಚಾ ಮುಂದುವರಿಯುತ್ತದೆ ಎಂದು ಘೋಷಿಸಿದೆ.


ಇದನ್ನೂ ಓದಿ; ದೆಹಲಿ ಗಡಿಗಳಲ್ಲಿನ ಹೋರಾಟಕ್ಕೆ ತೆರೆ: ವಿಜಯೀ ಮೆರವಣಿಗೆ ಮೂಲಕ ಪಂಜಾಬ್‌ಗೆ ತೆರಳಲಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....