Homeಮುಖಪುಟಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ಪ್ರಸ್ತುತ ಆಂದೋಲನವನ್ನು ಸ್ಥಗಿತಗೊಳಿಸಲಾಗಿದೆ, ಹೋರಾಟ ಗೆದ್ದಿದೆ; ರೈತರ ಹಕ್ಕುಗಳನ್ನು ಖಾತ್ರಿಪಡಿಸುವ ಹೋರಾಟ ಮುಂದುವರಿಯುತ್ತದೆ ಎಂದು ಎಸ್‌ಕೆಎಂ ಟ್ವೀಟ್ ಮಾಡಿದೆ.

- Advertisement -
- Advertisement -

ಐತಿಹಾಸಿಕ ರೈತ ಚಳವಳಿ ಗೆಲುವು ಸಾಧಿಸಿದೆ. ಕೃಷಿ ಕಾಯ್ದೆಗಳು ರದ್ದಾದ ನಂತರ ಎಂಎಸ್‌ಪಿ ಸೇರಿದಂತೆ ರೈತರ ಇತರ ಹಕ್ಕೊತ್ತಾಯಗಳ ಎದುರು ಮೋದಿ ಸರ್ಕಾರ ಮಂಡಿಯೂರಿದೆ. ಹಾಗಾಗಿ ದೆಹಲಿ ಗಡಿಗಳಲ್ಲಿ ಮತ್ತು ಪಂಜಾಬ್‌ನ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿದ್ದ ರೈತ ಹೋರಾಟಕ್ಕೆ ತೆರೆ ಎಳೆಯುವುದಾಗಿ ರೈತ ಹೋರಾಟದ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಘೋಷಿಸಿದೆ. ಆದರೆ ಎಂಎಸ್‌ಪಿ ಸಿಗುವವರೆಗೂ ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿಗಳಿಗೆ ಶಿಕ್ಷೆಯಾಗುವವರೆಗೂ ಚಳವಳಿ ನಿರಂತರವಾಗಿ ನಡೆಯಲಿದ್ದ, ಮುಂದಕ್ಕೂ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ ಎಂದು ಎಸ್‌ಕೆಎಂ ತಿಳಿಸಿದೆ.

ದೆಹಲಿ ಗಡಿಗಳಲ್ಲಿ, ರಾಷ್ಟ್ರೀಯ ಹೆದ್ದಾರಿಗಳು ಮತ್ತು ಇತರ ಸ್ಥಳಗಳಲ್ಲಿನ ಪ್ರತಿಭಟನಾ ಧರಣಿಗಳನ್ನು ತೆರವುಗೊಳಿಸುವುದಾಗಿ ಎಸ್‌ಕೆಎಂ ಔಪಚಾರಿಕವಾಗಿ ಘೋಷಿಸುತ್ತದೆ. ಪ್ರಸ್ತುತ ಆಂದೋಲನವನ್ನು ಸ್ಥಗಿತಗೊಳಿಸಲಾಗಿದೆ, ಹೋರಾಟ ಗೆದ್ದಿದೆ; ರೈತರ ಹಕ್ಕುಗಳನ್ನು ಖಾತ್ರಿಪಡಿಸುವ ಹೋರಾಟ ಮುಂದುವರಿಯುತ್ತದೆ ಎಂದು ಎಸ್‌ಕೆಎಂ ಟ್ವೀಟ್ ಮಾಡಿದೆ.

ಈ ಜಯವನ್ನು 715 ಹುತಾತ್ಮ ರೈತರಿಗೆ ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ಅರ್ಪಿಸುತ್ತೇವೆ. ಹೋರಾಟದಲ್ಲಿ ಜೊತೆಗೂಡಿದ ಬೆಂಬಲಿಸಿದ ದೇಶದ ಎಲ್ಲಾ ರೈತರು ಮತ್ತು ನಾಗರೀಕರನ್ನು ಅಭಿನಂದಿಸುತ್ತೇವೆ. ಪ್ರತಿಭಟನೆ ವೇಳೆ ತೊಂದರೆಗೊಳಗಾದವರಲ್ಲಿ ಕ್ಷಮೆಯಾಚಿಸುತ್ತೇವೆ. ಶಾಂತಿ, ತಾಳ್ಮೆ ಗೆಲುವಿನ ಸೂತ್ರವಾಗಿದ್ದ, ಮುಂದೆಯೂ ಅದನ್ನು ಕಾಪಿಟ್ಟುಕೊಳ್ಳಲಾಗುವುದು ಎಂದು ಎಸ್‌ಕೆಎಂ ಹೇಳಿದೆ.

ಕೇಂದ್ರ ಸರ್ಕಾರ ರೈತರಿಗೆ ಅಧಿಕೃತ ಪತ್ರ ಬರೆದಿದೆ. ಅದರಲ್ಲಿ ಎಂಎಸ್‌ಪಿಗೆ ಶಾಸನಬದ್ಧ ಮಾನ್ಯತೆ, ರೈತರ ಮೇಲಿನ ಎಲ್ಲಾ ಪೊಲೀಸ್ ಪ್ರಕರಣಗಳನ್ನು ವಾಪಸ್ ಪಡೆಯುವುದು, ಹುತಾತ್ಮ ರೈತ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗ, ವಿದ್ಯುತ್ ಮಸೂದೆ ಹಿಂಪಡೆಯುವುದು ಮತ್ತು ಕೃಷಿ ತ್ಯಾಜ್ಯ ಸುಡುವುದನ್ನು ಅಪರಾಧೀಕರಿಸುವುದಕ್ಕೆ ತಡೆಗೆ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.

ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಮಧ್ಯಪ್ರದೇಶ ಸರ್ಕಾರಗಳು ರೈತರ ಮೇಲಿನ ಎಲ್ಲಾ ಪ್ರಕರಣಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳುತ್ತವೆ. ದೆಹಲಿ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಕೇಸುಗಳನ್ನು ಹಿಂಪಡೆಯುವುದಾಗಿ ಕೇಂದ್ರ ಏಜೆನ್ಸಿಗಳು ಒಪ್ಪಿಕೊಂಡಿವೆ. ರೈತರಿಗೆ ಪರಿಹಾರ ನೀಡಲು ಹರಿಯಾಣ, ಯುಪಿ ಸರ್ಕಾರಗಳು ಸಿದ್ಧವಾಗಿವೆ. ರೈತ ಸಂಘಟನೆಗಳೊಂದಿಗೆ ಚರ್ಚಿಸದೆ ವಿದ್ಯುತ್ ಬಿಲ್ ತರುವುದಿಲ್ಲ ಎಂದು ಕೇಂದ್ರ ಸರ್ಕಾರ ಪತ್ರ ಬರೆದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ಚಳುವಳಿ ಮುಗಿದಿಲ್ಲ. ಎಂಎಸ್‌ಪಿ ಮತ್ತು ಲಖಿಂಪುರ ಮತ್ತಿತರ ಸಮಸ್ಯೆಗಳ ಕುರಿತು ಹೋರಾಟ ಮುಂದುವರಿಯಲಿದೆ. ಜನವರಿ 15 ರಂದು SKM ಮತ್ತೆ ಸಭೆ ಸೇರಲಿದೆ. ಸಂಯುಕ್ತ ಕಿಸಾನ್ ಮೋರ್ಚಾ ಮುಂದುವರಿಯುತ್ತದೆ ಎಂದು ಘೋಷಿಸಿದೆ.


ಇದನ್ನೂ ಓದಿ; ದೆಹಲಿ ಗಡಿಗಳಲ್ಲಿನ ಹೋರಾಟಕ್ಕೆ ತೆರೆ: ವಿಜಯೀ ಮೆರವಣಿಗೆ ಮೂಲಕ ಪಂಜಾಬ್‌ಗೆ ತೆರಳಲಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...