Homeಮುಖಪುಟಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ಪ್ರಸ್ತುತ ಆಂದೋಲನವನ್ನು ಸ್ಥಗಿತಗೊಳಿಸಲಾಗಿದೆ, ಹೋರಾಟ ಗೆದ್ದಿದೆ; ರೈತರ ಹಕ್ಕುಗಳನ್ನು ಖಾತ್ರಿಪಡಿಸುವ ಹೋರಾಟ ಮುಂದುವರಿಯುತ್ತದೆ ಎಂದು ಎಸ್‌ಕೆಎಂ ಟ್ವೀಟ್ ಮಾಡಿದೆ.

- Advertisement -
- Advertisement -

ಐತಿಹಾಸಿಕ ರೈತ ಚಳವಳಿ ಗೆಲುವು ಸಾಧಿಸಿದೆ. ಕೃಷಿ ಕಾಯ್ದೆಗಳು ರದ್ದಾದ ನಂತರ ಎಂಎಸ್‌ಪಿ ಸೇರಿದಂತೆ ರೈತರ ಇತರ ಹಕ್ಕೊತ್ತಾಯಗಳ ಎದುರು ಮೋದಿ ಸರ್ಕಾರ ಮಂಡಿಯೂರಿದೆ. ಹಾಗಾಗಿ ದೆಹಲಿ ಗಡಿಗಳಲ್ಲಿ ಮತ್ತು ಪಂಜಾಬ್‌ನ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿದ್ದ ರೈತ ಹೋರಾಟಕ್ಕೆ ತೆರೆ ಎಳೆಯುವುದಾಗಿ ರೈತ ಹೋರಾಟದ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಘೋಷಿಸಿದೆ. ಆದರೆ ಎಂಎಸ್‌ಪಿ ಸಿಗುವವರೆಗೂ ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿಗಳಿಗೆ ಶಿಕ್ಷೆಯಾಗುವವರೆಗೂ ಚಳವಳಿ ನಿರಂತರವಾಗಿ ನಡೆಯಲಿದ್ದ, ಮುಂದಕ್ಕೂ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ ಎಂದು ಎಸ್‌ಕೆಎಂ ತಿಳಿಸಿದೆ.

ದೆಹಲಿ ಗಡಿಗಳಲ್ಲಿ, ರಾಷ್ಟ್ರೀಯ ಹೆದ್ದಾರಿಗಳು ಮತ್ತು ಇತರ ಸ್ಥಳಗಳಲ್ಲಿನ ಪ್ರತಿಭಟನಾ ಧರಣಿಗಳನ್ನು ತೆರವುಗೊಳಿಸುವುದಾಗಿ ಎಸ್‌ಕೆಎಂ ಔಪಚಾರಿಕವಾಗಿ ಘೋಷಿಸುತ್ತದೆ. ಪ್ರಸ್ತುತ ಆಂದೋಲನವನ್ನು ಸ್ಥಗಿತಗೊಳಿಸಲಾಗಿದೆ, ಹೋರಾಟ ಗೆದ್ದಿದೆ; ರೈತರ ಹಕ್ಕುಗಳನ್ನು ಖಾತ್ರಿಪಡಿಸುವ ಹೋರಾಟ ಮುಂದುವರಿಯುತ್ತದೆ ಎಂದು ಎಸ್‌ಕೆಎಂ ಟ್ವೀಟ್ ಮಾಡಿದೆ.

ಈ ಜಯವನ್ನು 715 ಹುತಾತ್ಮ ರೈತರಿಗೆ ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ಅರ್ಪಿಸುತ್ತೇವೆ. ಹೋರಾಟದಲ್ಲಿ ಜೊತೆಗೂಡಿದ ಬೆಂಬಲಿಸಿದ ದೇಶದ ಎಲ್ಲಾ ರೈತರು ಮತ್ತು ನಾಗರೀಕರನ್ನು ಅಭಿನಂದಿಸುತ್ತೇವೆ. ಪ್ರತಿಭಟನೆ ವೇಳೆ ತೊಂದರೆಗೊಳಗಾದವರಲ್ಲಿ ಕ್ಷಮೆಯಾಚಿಸುತ್ತೇವೆ. ಶಾಂತಿ, ತಾಳ್ಮೆ ಗೆಲುವಿನ ಸೂತ್ರವಾಗಿದ್ದ, ಮುಂದೆಯೂ ಅದನ್ನು ಕಾಪಿಟ್ಟುಕೊಳ್ಳಲಾಗುವುದು ಎಂದು ಎಸ್‌ಕೆಎಂ ಹೇಳಿದೆ.

ಕೇಂದ್ರ ಸರ್ಕಾರ ರೈತರಿಗೆ ಅಧಿಕೃತ ಪತ್ರ ಬರೆದಿದೆ. ಅದರಲ್ಲಿ ಎಂಎಸ್‌ಪಿಗೆ ಶಾಸನಬದ್ಧ ಮಾನ್ಯತೆ, ರೈತರ ಮೇಲಿನ ಎಲ್ಲಾ ಪೊಲೀಸ್ ಪ್ರಕರಣಗಳನ್ನು ವಾಪಸ್ ಪಡೆಯುವುದು, ಹುತಾತ್ಮ ರೈತ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗ, ವಿದ್ಯುತ್ ಮಸೂದೆ ಹಿಂಪಡೆಯುವುದು ಮತ್ತು ಕೃಷಿ ತ್ಯಾಜ್ಯ ಸುಡುವುದನ್ನು ಅಪರಾಧೀಕರಿಸುವುದಕ್ಕೆ ತಡೆಗೆ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.

ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಮಧ್ಯಪ್ರದೇಶ ಸರ್ಕಾರಗಳು ರೈತರ ಮೇಲಿನ ಎಲ್ಲಾ ಪ್ರಕರಣಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳುತ್ತವೆ. ದೆಹಲಿ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಕೇಸುಗಳನ್ನು ಹಿಂಪಡೆಯುವುದಾಗಿ ಕೇಂದ್ರ ಏಜೆನ್ಸಿಗಳು ಒಪ್ಪಿಕೊಂಡಿವೆ. ರೈತರಿಗೆ ಪರಿಹಾರ ನೀಡಲು ಹರಿಯಾಣ, ಯುಪಿ ಸರ್ಕಾರಗಳು ಸಿದ್ಧವಾಗಿವೆ. ರೈತ ಸಂಘಟನೆಗಳೊಂದಿಗೆ ಚರ್ಚಿಸದೆ ವಿದ್ಯುತ್ ಬಿಲ್ ತರುವುದಿಲ್ಲ ಎಂದು ಕೇಂದ್ರ ಸರ್ಕಾರ ಪತ್ರ ಬರೆದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ಚಳುವಳಿ ಮುಗಿದಿಲ್ಲ. ಎಂಎಸ್‌ಪಿ ಮತ್ತು ಲಖಿಂಪುರ ಮತ್ತಿತರ ಸಮಸ್ಯೆಗಳ ಕುರಿತು ಹೋರಾಟ ಮುಂದುವರಿಯಲಿದೆ. ಜನವರಿ 15 ರಂದು SKM ಮತ್ತೆ ಸಭೆ ಸೇರಲಿದೆ. ಸಂಯುಕ್ತ ಕಿಸಾನ್ ಮೋರ್ಚಾ ಮುಂದುವರಿಯುತ್ತದೆ ಎಂದು ಘೋಷಿಸಿದೆ.


ಇದನ್ನೂ ಓದಿ; ದೆಹಲಿ ಗಡಿಗಳಲ್ಲಿನ ಹೋರಾಟಕ್ಕೆ ತೆರೆ: ವಿಜಯೀ ಮೆರವಣಿಗೆ ಮೂಲಕ ಪಂಜಾಬ್‌ಗೆ ತೆರಳಲಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....