Homeಮುಖಪುಟಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ಪ್ರಸ್ತುತ ಆಂದೋಲನವನ್ನು ಸ್ಥಗಿತಗೊಳಿಸಲಾಗಿದೆ, ಹೋರಾಟ ಗೆದ್ದಿದೆ; ರೈತರ ಹಕ್ಕುಗಳನ್ನು ಖಾತ್ರಿಪಡಿಸುವ ಹೋರಾಟ ಮುಂದುವರಿಯುತ್ತದೆ ಎಂದು ಎಸ್‌ಕೆಎಂ ಟ್ವೀಟ್ ಮಾಡಿದೆ.

- Advertisement -
- Advertisement -

ಐತಿಹಾಸಿಕ ರೈತ ಚಳವಳಿ ಗೆಲುವು ಸಾಧಿಸಿದೆ. ಕೃಷಿ ಕಾಯ್ದೆಗಳು ರದ್ದಾದ ನಂತರ ಎಂಎಸ್‌ಪಿ ಸೇರಿದಂತೆ ರೈತರ ಇತರ ಹಕ್ಕೊತ್ತಾಯಗಳ ಎದುರು ಮೋದಿ ಸರ್ಕಾರ ಮಂಡಿಯೂರಿದೆ. ಹಾಗಾಗಿ ದೆಹಲಿ ಗಡಿಗಳಲ್ಲಿ ಮತ್ತು ಪಂಜಾಬ್‌ನ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿದ್ದ ರೈತ ಹೋರಾಟಕ್ಕೆ ತೆರೆ ಎಳೆಯುವುದಾಗಿ ರೈತ ಹೋರಾಟದ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಘೋಷಿಸಿದೆ. ಆದರೆ ಎಂಎಸ್‌ಪಿ ಸಿಗುವವರೆಗೂ ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿಗಳಿಗೆ ಶಿಕ್ಷೆಯಾಗುವವರೆಗೂ ಚಳವಳಿ ನಿರಂತರವಾಗಿ ನಡೆಯಲಿದ್ದ, ಮುಂದಕ್ಕೂ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ ಎಂದು ಎಸ್‌ಕೆಎಂ ತಿಳಿಸಿದೆ.

ದೆಹಲಿ ಗಡಿಗಳಲ್ಲಿ, ರಾಷ್ಟ್ರೀಯ ಹೆದ್ದಾರಿಗಳು ಮತ್ತು ಇತರ ಸ್ಥಳಗಳಲ್ಲಿನ ಪ್ರತಿಭಟನಾ ಧರಣಿಗಳನ್ನು ತೆರವುಗೊಳಿಸುವುದಾಗಿ ಎಸ್‌ಕೆಎಂ ಔಪಚಾರಿಕವಾಗಿ ಘೋಷಿಸುತ್ತದೆ. ಪ್ರಸ್ತುತ ಆಂದೋಲನವನ್ನು ಸ್ಥಗಿತಗೊಳಿಸಲಾಗಿದೆ, ಹೋರಾಟ ಗೆದ್ದಿದೆ; ರೈತರ ಹಕ್ಕುಗಳನ್ನು ಖಾತ್ರಿಪಡಿಸುವ ಹೋರಾಟ ಮುಂದುವರಿಯುತ್ತದೆ ಎಂದು ಎಸ್‌ಕೆಎಂ ಟ್ವೀಟ್ ಮಾಡಿದೆ.

ಈ ಜಯವನ್ನು 715 ಹುತಾತ್ಮ ರೈತರಿಗೆ ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ಅರ್ಪಿಸುತ್ತೇವೆ. ಹೋರಾಟದಲ್ಲಿ ಜೊತೆಗೂಡಿದ ಬೆಂಬಲಿಸಿದ ದೇಶದ ಎಲ್ಲಾ ರೈತರು ಮತ್ತು ನಾಗರೀಕರನ್ನು ಅಭಿನಂದಿಸುತ್ತೇವೆ. ಪ್ರತಿಭಟನೆ ವೇಳೆ ತೊಂದರೆಗೊಳಗಾದವರಲ್ಲಿ ಕ್ಷಮೆಯಾಚಿಸುತ್ತೇವೆ. ಶಾಂತಿ, ತಾಳ್ಮೆ ಗೆಲುವಿನ ಸೂತ್ರವಾಗಿದ್ದ, ಮುಂದೆಯೂ ಅದನ್ನು ಕಾಪಿಟ್ಟುಕೊಳ್ಳಲಾಗುವುದು ಎಂದು ಎಸ್‌ಕೆಎಂ ಹೇಳಿದೆ.

ಕೇಂದ್ರ ಸರ್ಕಾರ ರೈತರಿಗೆ ಅಧಿಕೃತ ಪತ್ರ ಬರೆದಿದೆ. ಅದರಲ್ಲಿ ಎಂಎಸ್‌ಪಿಗೆ ಶಾಸನಬದ್ಧ ಮಾನ್ಯತೆ, ರೈತರ ಮೇಲಿನ ಎಲ್ಲಾ ಪೊಲೀಸ್ ಪ್ರಕರಣಗಳನ್ನು ವಾಪಸ್ ಪಡೆಯುವುದು, ಹುತಾತ್ಮ ರೈತ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗ, ವಿದ್ಯುತ್ ಮಸೂದೆ ಹಿಂಪಡೆಯುವುದು ಮತ್ತು ಕೃಷಿ ತ್ಯಾಜ್ಯ ಸುಡುವುದನ್ನು ಅಪರಾಧೀಕರಿಸುವುದಕ್ಕೆ ತಡೆಗೆ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.

ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಮಧ್ಯಪ್ರದೇಶ ಸರ್ಕಾರಗಳು ರೈತರ ಮೇಲಿನ ಎಲ್ಲಾ ಪ್ರಕರಣಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳುತ್ತವೆ. ದೆಹಲಿ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಕೇಸುಗಳನ್ನು ಹಿಂಪಡೆಯುವುದಾಗಿ ಕೇಂದ್ರ ಏಜೆನ್ಸಿಗಳು ಒಪ್ಪಿಕೊಂಡಿವೆ. ರೈತರಿಗೆ ಪರಿಹಾರ ನೀಡಲು ಹರಿಯಾಣ, ಯುಪಿ ಸರ್ಕಾರಗಳು ಸಿದ್ಧವಾಗಿವೆ. ರೈತ ಸಂಘಟನೆಗಳೊಂದಿಗೆ ಚರ್ಚಿಸದೆ ವಿದ್ಯುತ್ ಬಿಲ್ ತರುವುದಿಲ್ಲ ಎಂದು ಕೇಂದ್ರ ಸರ್ಕಾರ ಪತ್ರ ಬರೆದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ಚಳುವಳಿ ಮುಗಿದಿಲ್ಲ. ಎಂಎಸ್‌ಪಿ ಮತ್ತು ಲಖಿಂಪುರ ಮತ್ತಿತರ ಸಮಸ್ಯೆಗಳ ಕುರಿತು ಹೋರಾಟ ಮುಂದುವರಿಯಲಿದೆ. ಜನವರಿ 15 ರಂದು SKM ಮತ್ತೆ ಸಭೆ ಸೇರಲಿದೆ. ಸಂಯುಕ್ತ ಕಿಸಾನ್ ಮೋರ್ಚಾ ಮುಂದುವರಿಯುತ್ತದೆ ಎಂದು ಘೋಷಿಸಿದೆ.


ಇದನ್ನೂ ಓದಿ; ದೆಹಲಿ ಗಡಿಗಳಲ್ಲಿನ ಹೋರಾಟಕ್ಕೆ ತೆರೆ: ವಿಜಯೀ ಮೆರವಣಿಗೆ ಮೂಲಕ ಪಂಜಾಬ್‌ಗೆ ತೆರಳಲಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...