Homeಮುಖಪುಟಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ಚಳವಳಿ ನಿರಂತರ: ಸಂಯುಕ್ತ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ

ಪ್ರಸ್ತುತ ಆಂದೋಲನವನ್ನು ಸ್ಥಗಿತಗೊಳಿಸಲಾಗಿದೆ, ಹೋರಾಟ ಗೆದ್ದಿದೆ; ರೈತರ ಹಕ್ಕುಗಳನ್ನು ಖಾತ್ರಿಪಡಿಸುವ ಹೋರಾಟ ಮುಂದುವರಿಯುತ್ತದೆ ಎಂದು ಎಸ್‌ಕೆಎಂ ಟ್ವೀಟ್ ಮಾಡಿದೆ.

- Advertisement -
- Advertisement -

ಐತಿಹಾಸಿಕ ರೈತ ಚಳವಳಿ ಗೆಲುವು ಸಾಧಿಸಿದೆ. ಕೃಷಿ ಕಾಯ್ದೆಗಳು ರದ್ದಾದ ನಂತರ ಎಂಎಸ್‌ಪಿ ಸೇರಿದಂತೆ ರೈತರ ಇತರ ಹಕ್ಕೊತ್ತಾಯಗಳ ಎದುರು ಮೋದಿ ಸರ್ಕಾರ ಮಂಡಿಯೂರಿದೆ. ಹಾಗಾಗಿ ದೆಹಲಿ ಗಡಿಗಳಲ್ಲಿ ಮತ್ತು ಪಂಜಾಬ್‌ನ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತಿದ್ದ ರೈತ ಹೋರಾಟಕ್ಕೆ ತೆರೆ ಎಳೆಯುವುದಾಗಿ ರೈತ ಹೋರಾಟದ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಘೋಷಿಸಿದೆ. ಆದರೆ ಎಂಎಸ್‌ಪಿ ಸಿಗುವವರೆಗೂ ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿಗಳಿಗೆ ಶಿಕ್ಷೆಯಾಗುವವರೆಗೂ ಚಳವಳಿ ನಿರಂತರವಾಗಿ ನಡೆಯಲಿದ್ದ, ಮುಂದಕ್ಕೂ ಕಿಸಾನ್ ಮೋರ್ಚಾ ದೇಶಾದ್ಯಂತ ಮುಂದುವರೆಯುತ್ತದೆ ಎಂದು ಎಸ್‌ಕೆಎಂ ತಿಳಿಸಿದೆ.

ದೆಹಲಿ ಗಡಿಗಳಲ್ಲಿ, ರಾಷ್ಟ್ರೀಯ ಹೆದ್ದಾರಿಗಳು ಮತ್ತು ಇತರ ಸ್ಥಳಗಳಲ್ಲಿನ ಪ್ರತಿಭಟನಾ ಧರಣಿಗಳನ್ನು ತೆರವುಗೊಳಿಸುವುದಾಗಿ ಎಸ್‌ಕೆಎಂ ಔಪಚಾರಿಕವಾಗಿ ಘೋಷಿಸುತ್ತದೆ. ಪ್ರಸ್ತುತ ಆಂದೋಲನವನ್ನು ಸ್ಥಗಿತಗೊಳಿಸಲಾಗಿದೆ, ಹೋರಾಟ ಗೆದ್ದಿದೆ; ರೈತರ ಹಕ್ಕುಗಳನ್ನು ಖಾತ್ರಿಪಡಿಸುವ ಹೋರಾಟ ಮುಂದುವರಿಯುತ್ತದೆ ಎಂದು ಎಸ್‌ಕೆಎಂ ಟ್ವೀಟ್ ಮಾಡಿದೆ.

ಈ ಜಯವನ್ನು 715 ಹುತಾತ್ಮ ರೈತರಿಗೆ ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ಅರ್ಪಿಸುತ್ತೇವೆ. ಹೋರಾಟದಲ್ಲಿ ಜೊತೆಗೂಡಿದ ಬೆಂಬಲಿಸಿದ ದೇಶದ ಎಲ್ಲಾ ರೈತರು ಮತ್ತು ನಾಗರೀಕರನ್ನು ಅಭಿನಂದಿಸುತ್ತೇವೆ. ಪ್ರತಿಭಟನೆ ವೇಳೆ ತೊಂದರೆಗೊಳಗಾದವರಲ್ಲಿ ಕ್ಷಮೆಯಾಚಿಸುತ್ತೇವೆ. ಶಾಂತಿ, ತಾಳ್ಮೆ ಗೆಲುವಿನ ಸೂತ್ರವಾಗಿದ್ದ, ಮುಂದೆಯೂ ಅದನ್ನು ಕಾಪಿಟ್ಟುಕೊಳ್ಳಲಾಗುವುದು ಎಂದು ಎಸ್‌ಕೆಎಂ ಹೇಳಿದೆ.

ಕೇಂದ್ರ ಸರ್ಕಾರ ರೈತರಿಗೆ ಅಧಿಕೃತ ಪತ್ರ ಬರೆದಿದೆ. ಅದರಲ್ಲಿ ಎಂಎಸ್‌ಪಿಗೆ ಶಾಸನಬದ್ಧ ಮಾನ್ಯತೆ, ರೈತರ ಮೇಲಿನ ಎಲ್ಲಾ ಪೊಲೀಸ್ ಪ್ರಕರಣಗಳನ್ನು ವಾಪಸ್ ಪಡೆಯುವುದು, ಹುತಾತ್ಮ ರೈತ ಕುಟುಂಬಕ್ಕೆ ಪರಿಹಾರ ಮತ್ತು ಸರ್ಕಾರಿ ಉದ್ಯೋಗ, ವಿದ್ಯುತ್ ಮಸೂದೆ ಹಿಂಪಡೆಯುವುದು ಮತ್ತು ಕೃಷಿ ತ್ಯಾಜ್ಯ ಸುಡುವುದನ್ನು ಅಪರಾಧೀಕರಿಸುವುದಕ್ಕೆ ತಡೆಗೆ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.

ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಮಧ್ಯಪ್ರದೇಶ ಸರ್ಕಾರಗಳು ರೈತರ ಮೇಲಿನ ಎಲ್ಲಾ ಪ್ರಕರಣಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳುತ್ತವೆ. ದೆಹಲಿ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಲ್ಲಿನ ಕೇಸುಗಳನ್ನು ಹಿಂಪಡೆಯುವುದಾಗಿ ಕೇಂದ್ರ ಏಜೆನ್ಸಿಗಳು ಒಪ್ಪಿಕೊಂಡಿವೆ. ರೈತರಿಗೆ ಪರಿಹಾರ ನೀಡಲು ಹರಿಯಾಣ, ಯುಪಿ ಸರ್ಕಾರಗಳು ಸಿದ್ಧವಾಗಿವೆ. ರೈತ ಸಂಘಟನೆಗಳೊಂದಿಗೆ ಚರ್ಚಿಸದೆ ವಿದ್ಯುತ್ ಬಿಲ್ ತರುವುದಿಲ್ಲ ಎಂದು ಕೇಂದ್ರ ಸರ್ಕಾರ ಪತ್ರ ಬರೆದಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ, ಚಳುವಳಿ ಮುಗಿದಿಲ್ಲ. ಎಂಎಸ್‌ಪಿ ಮತ್ತು ಲಖಿಂಪುರ ಮತ್ತಿತರ ಸಮಸ್ಯೆಗಳ ಕುರಿತು ಹೋರಾಟ ಮುಂದುವರಿಯಲಿದೆ. ಜನವರಿ 15 ರಂದು SKM ಮತ್ತೆ ಸಭೆ ಸೇರಲಿದೆ. ಸಂಯುಕ್ತ ಕಿಸಾನ್ ಮೋರ್ಚಾ ಮುಂದುವರಿಯುತ್ತದೆ ಎಂದು ಘೋಷಿಸಿದೆ.


ಇದನ್ನೂ ಓದಿ; ದೆಹಲಿ ಗಡಿಗಳಲ್ಲಿನ ಹೋರಾಟಕ್ಕೆ ತೆರೆ: ವಿಜಯೀ ಮೆರವಣಿಗೆ ಮೂಲಕ ಪಂಜಾಬ್‌ಗೆ ತೆರಳಲಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...