Homeಮುಖಪುಟಭಾರತ ಗ್ರಂಥಾಲಯ ಮತ್ತು ಪುಸ್ತಕಗಳಿಗಾಗಿ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಮಾಡುವ ಖರ್ಚು ಎಷ್ಟು ಗೊತ್ತೇ?

ಭಾರತ ಗ್ರಂಥಾಲಯ ಮತ್ತು ಪುಸ್ತಕಗಳಿಗಾಗಿ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಮಾಡುವ ಖರ್ಚು ಎಷ್ಟು ಗೊತ್ತೇ?

ಈ ವಿದ್ಯಾರ್ಥಿಗಳು ಮತ್ತು ಅವರ ತಾಯಂದಿರು ಮೂರು ವಾರದಿಂದ ಹೋರಾಡುತ್ತಿರುವುದಾರೂ ಏಕೆ ಗೊತ್ತಾ?

- Advertisement -
- Advertisement -

ಪಿಥೋರಘಡದಲ್ಲಿ ಶಿಕ್ಷಕರು ಮತ್ತು ಪುಸ್ತಕಗಳಿಗಾಗಿ ನಿರಂತರ ಚಳುವಳಿ

ಉತ್ತರಾಖಂಡದ ಪಿಥೋರಘಡದಲ್ಲಿನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ 3 ವಾರಗಳಿಂದ ಉತ್ತಮ ಗ್ರಂಥಾಲಯಗಳು ಮತ್ತು ಹೆಚ್ಚಿನ ಪುಸ್ತಕಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿದಿನ ಕನಿಷ್ಠ 15-20 ವಿದ್ಯಾರ್ಥಿಗಳು ಭಾನುವಾರದಂದು ಸಹ ಧರಣಿಯಲ್ಲಿ ಕುಳಿತಿದ್ದಾರೆ. ಜೊತೆಗೆ ಪಿಥೋರಘಡದ ಬೀದಿಗಳಲ್ಲಿ ವಿದ್ಯಾರ್ಥಿಗಳು ಪೋಸ್ಟರ್‌ಗಳೊಂದಿಗೆ ಮೌನ ಮೆರವಣಿಗೆ ನಡೆಸುತ್ತಿದ್ದಾರೆ.

ಪಿಥೋರಘಡ ನೇಪಾಳ ಮತ್ತು ಚೀನಾವನ್ನು ಅದರ ಗಡಿಯಾಗಿ ಹೊಂದಿರುವ ಉತ್ತರಖಂಡ ರಾಜ್ಯದ ಪಟ್ಟಣ. 70 ರ ದಶಕದಲ್ಲಿ ಬೆಟ್ಟ ಪ್ರದೇಶಗಳಿಗಳಲ್ಲಿ ವಿಶ್ವವಿದ್ಯಾನಿಲಯಗಳು ಬೇಕೆಂಬ ದೊಡ್ಡ ವಿದ್ಯಾರ್ಥಿ ಚಳುವಳಿ ನಡೆದಿತ್ತು. ಆ ಹೋರಾಟದಲ್ಲಿ ಇಬ್ಬರು ಯುವ ವಿದ್ಯಾರ್ಥಿಗಳು ಪೊಲೀಸ್ ಶೂಟಿಂಗ್‌ನಲ್ಲಿ ಪ್ರಾಣ ಕಳೆದುಕೊಂಡರು. ನಂತರವಷ್ಟೇ ಅಲ್ಲಿ ಕುಮಾನ್ ಮತ್ತು ಗರ್ವಾಲ್ ವಿಶ್ವವಿದ್ಯಾಲಯವನ್ನು 1973 ರಲ್ಲಿ ತೆರೆಯಲಾಯಿತು.

ಈ ಕಾಲೇಜಿನಲ್ಲಿ 7000 ವಿದ್ಯಾರ್ಥಿಗಳಿದ್ದು, ಕಾಲೇಜಿನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಈ ವಿಷಯವನ್ನು ಸಚಿವರಿಗೆ ಮುಟ್ಟಿಸಲು ವಿದ್ಯಾರ್ಥಿಗಳು ಅಕ್ಟೋಬರ್ 2018 ರಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದರು. ಅಂದಿನಿಂದ ಅವರು ಡಿಸಿ ಕಚೇರಿಗೆ 5 ಬಾರಿ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಅವರ ಮನವಿ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ ಅವರು ಧರಣಿಗಳನ್ನು ಪ್ರಾರಂಭಿಸಿದ್ದಾರೆ. ಈ ವಿದ್ಯಾರ್ಥಿಗಳ ತಾಯಂದಿರು ಸಹ ಮೆರವಣಿಗೆಯಲ್ಲಿ ಸೇರಿಕೊಂಡು ಬೆಂಬಲ ಸೂಚಿಸಿದ್ದಾರೆ.

ಕಾಲೇಜು ಗ್ರಂಥಾಲಯದಲ್ಲಿನ ಪುಸ್ತಕಗಳು ತುಂಬಾ ಹಳೆಯವು, ತೇವ ಮತ್ತು ದೂಳಿಡಿದು ಕೂತಿವೆ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ. ಕಾಲೇಜಿನಲ್ಲಿ ಕಲಿಸಲಾಗುವ ವಿಷಯಗಳ ಕುರಿತ ಪುಸ್ತಕಗಳು ಗ್ರಂಥಾಲಯದಲ್ಲಿಲ್ಲ. ಅನೇಕ ವಿದ್ಯಾರ್ಥಿಗಳು ಇತರ ನಗರಗಳಿಂದ, ಕೆಲವೊಮ್ಮೆ ದೆಹಲಿಯಿಂದ ಪುಸ್ತಕಗಳನ್ನು ಪಡೆಯಲು 8-10 ಗಂಟೆಗಳ ಬಸ್ ಪ್ರಯಾಣವನ್ನು ಮಾಡಬೇಕಾಗುತ್ತದೆ. ಪ್ರಯೋಗಾಲಯಗಳು ಅತ್ಯಂತ ಕೆಟ್ಟ ಸ್ಥಿತಿಯಲ್ಲಿವೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

1990 ರ ದಶಕದಿಂದಲೂ ಸಣ್ಣ ಪಟ್ಟಣಗಳಲ್ಲಿನ ಕಾಲೇಜುಗಳನ್ನು ಮುಚ್ಚುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಶಿಕ್ಷಕರು ಇಲ್ಲ, ಗ್ರಂಥಾಲಯಗಳಿಲ್ಲ. ಭಾರತದ ವೆಚ್ಚ ವರದಿಯ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ 70,817 ಗ್ರಂಥಾಲಯಗಳು ಮತ್ತು ನಗರ ಪ್ರದೇಶಗಳಲ್ಲಿ 4,580 ಗಳು ಕ್ರಮವಾಗಿ 830 ದಶಲಕ್ಷ ಮತ್ತು 370 ದಶಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿವೆ,. 2011 ರ ಜನಗಣತಿಯ ಪ್ರಕಾರ ಮೊದಲ ಬಾರಿಗೆ ಗ್ರಂಥಾಲಯಗಳನ್ನು ಅಧಿಕೃತವಾಗಿ ಗುರುತಿಸಲಾಗಿದೆ. ಆ ಪ್ರಕಾರ ಸರಿಸುಮಾರು ಪ್ರತಿ 11,500 ಜನರಿಗೆ ಒಂದು ಗ್ರಾಮೀಣ ಗ್ರಂಥಾಲಯ ಮತ್ತು 80,000 ಕ್ಕೂ ಹೆಚ್ಚು ಜನರಿಗೆ ಒಂದು ನಗರ ಗ್ರಂಥಾಲಯ ಮಾತ್ರ ಇವೆ. ಆದಾಗ್ಯೂ, ಈ ಗ್ರಂಥಾಲಯಗಳ ಕಾರ್ಯಕ್ಷಮತೆ ಮತ್ತು ಸೇವಾ ಸಾಮರ್ಥ್ಯಗಳ ಬಗ್ಗೆ ಯಾವುದೇ ನಿಖರವಾದ ಮಾಹಿತಿಯಿಲ್ಲ – ಗ್ರಾಮೀಣ ಗ್ರಂಥಾಲಯಗಳು ಕೆಲವು ಪುಸ್ತಕಗಳನ್ನು ಹೊಂದಿರುವ ಕೋಣೆಯಾಗಿರಬಹುದು, ಆದರೆ ಇತರವು ಖಾಸಗಿ ದಾನಿಗಳು ಅಥವಾ ಎನ್‌ಜಿಒಗಳ ಬೆಂಬಲದ ಮೂಲಕ ನಡೆಯಬಹುದಾಗಿವೆ.

ಅಮೇರಿಕಾದಲ್ಲಿ  ಗ್ರಂಥಾಲಯಕ್ಕಾಗಿ ವರ್ಷಕ್ಕೆ ಒಬ್ಬ ವ್ಯಕ್ತಿಗೆ 36 ಡಾಲರ್ ಖರ್ಚು ಮಾಡುತ್ತದೆ, ಮತ್ತು ಭಾರತದಲ್ಲಿ ಭಾರತದಲ್ಲಿ ಒಬ್ಬ ವ್ಯಕ್ತಿಗೆ 7 ಪೈಸಾ ಖರ್ಚು ಮಾಡುತ್ತದೆ. ಹಾಗಾದರೆ ಭಾರತ ತನ್ನ ಹಣವನ್ನು ಎಲ್ಲಿ ಖರ್ಚು ಮಾಡುತ್ತಿದೆ? ನಮ್ಮ ಯುವಜನರಿಗೆ ಉತ್ತಮ ಪುಸ್ತಕಗಳು ಸಿಗದಿದ್ದರೆ ನಾವು ಹೇಗೆ ಮಹಾಶಕ್ತಿಯಾಗುತ್ತೇವೆ? ನಾವು ಹೇಗೆ ವಿಶ್ವಗುರು ಆಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...