Homeಮುಖಪುಟಭಾರತ ಗ್ರಂಥಾಲಯ ಮತ್ತು ಪುಸ್ತಕಗಳಿಗಾಗಿ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಮಾಡುವ ಖರ್ಚು ಎಷ್ಟು ಗೊತ್ತೇ?

ಭಾರತ ಗ್ರಂಥಾಲಯ ಮತ್ತು ಪುಸ್ತಕಗಳಿಗಾಗಿ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಮಾಡುವ ಖರ್ಚು ಎಷ್ಟು ಗೊತ್ತೇ?

ಈ ವಿದ್ಯಾರ್ಥಿಗಳು ಮತ್ತು ಅವರ ತಾಯಂದಿರು ಮೂರು ವಾರದಿಂದ ಹೋರಾಡುತ್ತಿರುವುದಾರೂ ಏಕೆ ಗೊತ್ತಾ?

- Advertisement -
- Advertisement -

ಪಿಥೋರಘಡದಲ್ಲಿ ಶಿಕ್ಷಕರು ಮತ್ತು ಪುಸ್ತಕಗಳಿಗಾಗಿ ನಿರಂತರ ಚಳುವಳಿ

ಉತ್ತರಾಖಂಡದ ಪಿಥೋರಘಡದಲ್ಲಿನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ 3 ವಾರಗಳಿಂದ ಉತ್ತಮ ಗ್ರಂಥಾಲಯಗಳು ಮತ್ತು ಹೆಚ್ಚಿನ ಪುಸ್ತಕಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿದಿನ ಕನಿಷ್ಠ 15-20 ವಿದ್ಯಾರ್ಥಿಗಳು ಭಾನುವಾರದಂದು ಸಹ ಧರಣಿಯಲ್ಲಿ ಕುಳಿತಿದ್ದಾರೆ. ಜೊತೆಗೆ ಪಿಥೋರಘಡದ ಬೀದಿಗಳಲ್ಲಿ ವಿದ್ಯಾರ್ಥಿಗಳು ಪೋಸ್ಟರ್‌ಗಳೊಂದಿಗೆ ಮೌನ ಮೆರವಣಿಗೆ ನಡೆಸುತ್ತಿದ್ದಾರೆ.

ಪಿಥೋರಘಡ ನೇಪಾಳ ಮತ್ತು ಚೀನಾವನ್ನು ಅದರ ಗಡಿಯಾಗಿ ಹೊಂದಿರುವ ಉತ್ತರಖಂಡ ರಾಜ್ಯದ ಪಟ್ಟಣ. 70 ರ ದಶಕದಲ್ಲಿ ಬೆಟ್ಟ ಪ್ರದೇಶಗಳಿಗಳಲ್ಲಿ ವಿಶ್ವವಿದ್ಯಾನಿಲಯಗಳು ಬೇಕೆಂಬ ದೊಡ್ಡ ವಿದ್ಯಾರ್ಥಿ ಚಳುವಳಿ ನಡೆದಿತ್ತು. ಆ ಹೋರಾಟದಲ್ಲಿ ಇಬ್ಬರು ಯುವ ವಿದ್ಯಾರ್ಥಿಗಳು ಪೊಲೀಸ್ ಶೂಟಿಂಗ್‌ನಲ್ಲಿ ಪ್ರಾಣ ಕಳೆದುಕೊಂಡರು. ನಂತರವಷ್ಟೇ ಅಲ್ಲಿ ಕುಮಾನ್ ಮತ್ತು ಗರ್ವಾಲ್ ವಿಶ್ವವಿದ್ಯಾಲಯವನ್ನು 1973 ರಲ್ಲಿ ತೆರೆಯಲಾಯಿತು.

ಈ ಕಾಲೇಜಿನಲ್ಲಿ 7000 ವಿದ್ಯಾರ್ಥಿಗಳಿದ್ದು, ಕಾಲೇಜಿನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಈ ವಿಷಯವನ್ನು ಸಚಿವರಿಗೆ ಮುಟ್ಟಿಸಲು ವಿದ್ಯಾರ್ಥಿಗಳು ಅಕ್ಟೋಬರ್ 2018 ರಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದರು. ಅಂದಿನಿಂದ ಅವರು ಡಿಸಿ ಕಚೇರಿಗೆ 5 ಬಾರಿ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಅವರ ಮನವಿ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ ಅವರು ಧರಣಿಗಳನ್ನು ಪ್ರಾರಂಭಿಸಿದ್ದಾರೆ. ಈ ವಿದ್ಯಾರ್ಥಿಗಳ ತಾಯಂದಿರು ಸಹ ಮೆರವಣಿಗೆಯಲ್ಲಿ ಸೇರಿಕೊಂಡು ಬೆಂಬಲ ಸೂಚಿಸಿದ್ದಾರೆ.

ಕಾಲೇಜು ಗ್ರಂಥಾಲಯದಲ್ಲಿನ ಪುಸ್ತಕಗಳು ತುಂಬಾ ಹಳೆಯವು, ತೇವ ಮತ್ತು ದೂಳಿಡಿದು ಕೂತಿವೆ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ. ಕಾಲೇಜಿನಲ್ಲಿ ಕಲಿಸಲಾಗುವ ವಿಷಯಗಳ ಕುರಿತ ಪುಸ್ತಕಗಳು ಗ್ರಂಥಾಲಯದಲ್ಲಿಲ್ಲ. ಅನೇಕ ವಿದ್ಯಾರ್ಥಿಗಳು ಇತರ ನಗರಗಳಿಂದ, ಕೆಲವೊಮ್ಮೆ ದೆಹಲಿಯಿಂದ ಪುಸ್ತಕಗಳನ್ನು ಪಡೆಯಲು 8-10 ಗಂಟೆಗಳ ಬಸ್ ಪ್ರಯಾಣವನ್ನು ಮಾಡಬೇಕಾಗುತ್ತದೆ. ಪ್ರಯೋಗಾಲಯಗಳು ಅತ್ಯಂತ ಕೆಟ್ಟ ಸ್ಥಿತಿಯಲ್ಲಿವೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

1990 ರ ದಶಕದಿಂದಲೂ ಸಣ್ಣ ಪಟ್ಟಣಗಳಲ್ಲಿನ ಕಾಲೇಜುಗಳನ್ನು ಮುಚ್ಚುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಶಿಕ್ಷಕರು ಇಲ್ಲ, ಗ್ರಂಥಾಲಯಗಳಿಲ್ಲ. ಭಾರತದ ವೆಚ್ಚ ವರದಿಯ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ 70,817 ಗ್ರಂಥಾಲಯಗಳು ಮತ್ತು ನಗರ ಪ್ರದೇಶಗಳಲ್ಲಿ 4,580 ಗಳು ಕ್ರಮವಾಗಿ 830 ದಶಲಕ್ಷ ಮತ್ತು 370 ದಶಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿವೆ,. 2011 ರ ಜನಗಣತಿಯ ಪ್ರಕಾರ ಮೊದಲ ಬಾರಿಗೆ ಗ್ರಂಥಾಲಯಗಳನ್ನು ಅಧಿಕೃತವಾಗಿ ಗುರುತಿಸಲಾಗಿದೆ. ಆ ಪ್ರಕಾರ ಸರಿಸುಮಾರು ಪ್ರತಿ 11,500 ಜನರಿಗೆ ಒಂದು ಗ್ರಾಮೀಣ ಗ್ರಂಥಾಲಯ ಮತ್ತು 80,000 ಕ್ಕೂ ಹೆಚ್ಚು ಜನರಿಗೆ ಒಂದು ನಗರ ಗ್ರಂಥಾಲಯ ಮಾತ್ರ ಇವೆ. ಆದಾಗ್ಯೂ, ಈ ಗ್ರಂಥಾಲಯಗಳ ಕಾರ್ಯಕ್ಷಮತೆ ಮತ್ತು ಸೇವಾ ಸಾಮರ್ಥ್ಯಗಳ ಬಗ್ಗೆ ಯಾವುದೇ ನಿಖರವಾದ ಮಾಹಿತಿಯಿಲ್ಲ – ಗ್ರಾಮೀಣ ಗ್ರಂಥಾಲಯಗಳು ಕೆಲವು ಪುಸ್ತಕಗಳನ್ನು ಹೊಂದಿರುವ ಕೋಣೆಯಾಗಿರಬಹುದು, ಆದರೆ ಇತರವು ಖಾಸಗಿ ದಾನಿಗಳು ಅಥವಾ ಎನ್‌ಜಿಒಗಳ ಬೆಂಬಲದ ಮೂಲಕ ನಡೆಯಬಹುದಾಗಿವೆ.

ಅಮೇರಿಕಾದಲ್ಲಿ  ಗ್ರಂಥಾಲಯಕ್ಕಾಗಿ ವರ್ಷಕ್ಕೆ ಒಬ್ಬ ವ್ಯಕ್ತಿಗೆ 36 ಡಾಲರ್ ಖರ್ಚು ಮಾಡುತ್ತದೆ, ಮತ್ತು ಭಾರತದಲ್ಲಿ ಭಾರತದಲ್ಲಿ ಒಬ್ಬ ವ್ಯಕ್ತಿಗೆ 7 ಪೈಸಾ ಖರ್ಚು ಮಾಡುತ್ತದೆ. ಹಾಗಾದರೆ ಭಾರತ ತನ್ನ ಹಣವನ್ನು ಎಲ್ಲಿ ಖರ್ಚು ಮಾಡುತ್ತಿದೆ? ನಮ್ಮ ಯುವಜನರಿಗೆ ಉತ್ತಮ ಪುಸ್ತಕಗಳು ಸಿಗದಿದ್ದರೆ ನಾವು ಹೇಗೆ ಮಹಾಶಕ್ತಿಯಾಗುತ್ತೇವೆ? ನಾವು ಹೇಗೆ ವಿಶ್ವಗುರು ಆಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...