Homeಮುಖಪುಟಭಾರತ ಗ್ರಂಥಾಲಯ ಮತ್ತು ಪುಸ್ತಕಗಳಿಗಾಗಿ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಮಾಡುವ ಖರ್ಚು ಎಷ್ಟು ಗೊತ್ತೇ?

ಭಾರತ ಗ್ರಂಥಾಲಯ ಮತ್ತು ಪುಸ್ತಕಗಳಿಗಾಗಿ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಮಾಡುವ ಖರ್ಚು ಎಷ್ಟು ಗೊತ್ತೇ?

ಈ ವಿದ್ಯಾರ್ಥಿಗಳು ಮತ್ತು ಅವರ ತಾಯಂದಿರು ಮೂರು ವಾರದಿಂದ ಹೋರಾಡುತ್ತಿರುವುದಾರೂ ಏಕೆ ಗೊತ್ತಾ?

- Advertisement -
- Advertisement -

ಪಿಥೋರಘಡದಲ್ಲಿ ಶಿಕ್ಷಕರು ಮತ್ತು ಪುಸ್ತಕಗಳಿಗಾಗಿ ನಿರಂತರ ಚಳುವಳಿ

ಉತ್ತರಾಖಂಡದ ಪಿಥೋರಘಡದಲ್ಲಿನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ 3 ವಾರಗಳಿಂದ ಉತ್ತಮ ಗ್ರಂಥಾಲಯಗಳು ಮತ್ತು ಹೆಚ್ಚಿನ ಪುಸ್ತಕಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿದಿನ ಕನಿಷ್ಠ 15-20 ವಿದ್ಯಾರ್ಥಿಗಳು ಭಾನುವಾರದಂದು ಸಹ ಧರಣಿಯಲ್ಲಿ ಕುಳಿತಿದ್ದಾರೆ. ಜೊತೆಗೆ ಪಿಥೋರಘಡದ ಬೀದಿಗಳಲ್ಲಿ ವಿದ್ಯಾರ್ಥಿಗಳು ಪೋಸ್ಟರ್‌ಗಳೊಂದಿಗೆ ಮೌನ ಮೆರವಣಿಗೆ ನಡೆಸುತ್ತಿದ್ದಾರೆ.

ಪಿಥೋರಘಡ ನೇಪಾಳ ಮತ್ತು ಚೀನಾವನ್ನು ಅದರ ಗಡಿಯಾಗಿ ಹೊಂದಿರುವ ಉತ್ತರಖಂಡ ರಾಜ್ಯದ ಪಟ್ಟಣ. 70 ರ ದಶಕದಲ್ಲಿ ಬೆಟ್ಟ ಪ್ರದೇಶಗಳಿಗಳಲ್ಲಿ ವಿಶ್ವವಿದ್ಯಾನಿಲಯಗಳು ಬೇಕೆಂಬ ದೊಡ್ಡ ವಿದ್ಯಾರ್ಥಿ ಚಳುವಳಿ ನಡೆದಿತ್ತು. ಆ ಹೋರಾಟದಲ್ಲಿ ಇಬ್ಬರು ಯುವ ವಿದ್ಯಾರ್ಥಿಗಳು ಪೊಲೀಸ್ ಶೂಟಿಂಗ್‌ನಲ್ಲಿ ಪ್ರಾಣ ಕಳೆದುಕೊಂಡರು. ನಂತರವಷ್ಟೇ ಅಲ್ಲಿ ಕುಮಾನ್ ಮತ್ತು ಗರ್ವಾಲ್ ವಿಶ್ವವಿದ್ಯಾಲಯವನ್ನು 1973 ರಲ್ಲಿ ತೆರೆಯಲಾಯಿತು.

ಈ ಕಾಲೇಜಿನಲ್ಲಿ 7000 ವಿದ್ಯಾರ್ಥಿಗಳಿದ್ದು, ಕಾಲೇಜಿನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಈ ವಿಷಯವನ್ನು ಸಚಿವರಿಗೆ ಮುಟ್ಟಿಸಲು ವಿದ್ಯಾರ್ಥಿಗಳು ಅಕ್ಟೋಬರ್ 2018 ರಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದರು. ಅಂದಿನಿಂದ ಅವರು ಡಿಸಿ ಕಚೇರಿಗೆ 5 ಬಾರಿ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಅವರ ಮನವಿ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ ಅವರು ಧರಣಿಗಳನ್ನು ಪ್ರಾರಂಭಿಸಿದ್ದಾರೆ. ಈ ವಿದ್ಯಾರ್ಥಿಗಳ ತಾಯಂದಿರು ಸಹ ಮೆರವಣಿಗೆಯಲ್ಲಿ ಸೇರಿಕೊಂಡು ಬೆಂಬಲ ಸೂಚಿಸಿದ್ದಾರೆ.

ಕಾಲೇಜು ಗ್ರಂಥಾಲಯದಲ್ಲಿನ ಪುಸ್ತಕಗಳು ತುಂಬಾ ಹಳೆಯವು, ತೇವ ಮತ್ತು ದೂಳಿಡಿದು ಕೂತಿವೆ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ. ಕಾಲೇಜಿನಲ್ಲಿ ಕಲಿಸಲಾಗುವ ವಿಷಯಗಳ ಕುರಿತ ಪುಸ್ತಕಗಳು ಗ್ರಂಥಾಲಯದಲ್ಲಿಲ್ಲ. ಅನೇಕ ವಿದ್ಯಾರ್ಥಿಗಳು ಇತರ ನಗರಗಳಿಂದ, ಕೆಲವೊಮ್ಮೆ ದೆಹಲಿಯಿಂದ ಪುಸ್ತಕಗಳನ್ನು ಪಡೆಯಲು 8-10 ಗಂಟೆಗಳ ಬಸ್ ಪ್ರಯಾಣವನ್ನು ಮಾಡಬೇಕಾಗುತ್ತದೆ. ಪ್ರಯೋಗಾಲಯಗಳು ಅತ್ಯಂತ ಕೆಟ್ಟ ಸ್ಥಿತಿಯಲ್ಲಿವೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

1990 ರ ದಶಕದಿಂದಲೂ ಸಣ್ಣ ಪಟ್ಟಣಗಳಲ್ಲಿನ ಕಾಲೇಜುಗಳನ್ನು ಮುಚ್ಚುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಶಿಕ್ಷಕರು ಇಲ್ಲ, ಗ್ರಂಥಾಲಯಗಳಿಲ್ಲ. ಭಾರತದ ವೆಚ್ಚ ವರದಿಯ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ 70,817 ಗ್ರಂಥಾಲಯಗಳು ಮತ್ತು ನಗರ ಪ್ರದೇಶಗಳಲ್ಲಿ 4,580 ಗಳು ಕ್ರಮವಾಗಿ 830 ದಶಲಕ್ಷ ಮತ್ತು 370 ದಶಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿವೆ,. 2011 ರ ಜನಗಣತಿಯ ಪ್ರಕಾರ ಮೊದಲ ಬಾರಿಗೆ ಗ್ರಂಥಾಲಯಗಳನ್ನು ಅಧಿಕೃತವಾಗಿ ಗುರುತಿಸಲಾಗಿದೆ. ಆ ಪ್ರಕಾರ ಸರಿಸುಮಾರು ಪ್ರತಿ 11,500 ಜನರಿಗೆ ಒಂದು ಗ್ರಾಮೀಣ ಗ್ರಂಥಾಲಯ ಮತ್ತು 80,000 ಕ್ಕೂ ಹೆಚ್ಚು ಜನರಿಗೆ ಒಂದು ನಗರ ಗ್ರಂಥಾಲಯ ಮಾತ್ರ ಇವೆ. ಆದಾಗ್ಯೂ, ಈ ಗ್ರಂಥಾಲಯಗಳ ಕಾರ್ಯಕ್ಷಮತೆ ಮತ್ತು ಸೇವಾ ಸಾಮರ್ಥ್ಯಗಳ ಬಗ್ಗೆ ಯಾವುದೇ ನಿಖರವಾದ ಮಾಹಿತಿಯಿಲ್ಲ – ಗ್ರಾಮೀಣ ಗ್ರಂಥಾಲಯಗಳು ಕೆಲವು ಪುಸ್ತಕಗಳನ್ನು ಹೊಂದಿರುವ ಕೋಣೆಯಾಗಿರಬಹುದು, ಆದರೆ ಇತರವು ಖಾಸಗಿ ದಾನಿಗಳು ಅಥವಾ ಎನ್‌ಜಿಒಗಳ ಬೆಂಬಲದ ಮೂಲಕ ನಡೆಯಬಹುದಾಗಿವೆ.

ಅಮೇರಿಕಾದಲ್ಲಿ  ಗ್ರಂಥಾಲಯಕ್ಕಾಗಿ ವರ್ಷಕ್ಕೆ ಒಬ್ಬ ವ್ಯಕ್ತಿಗೆ 36 ಡಾಲರ್ ಖರ್ಚು ಮಾಡುತ್ತದೆ, ಮತ್ತು ಭಾರತದಲ್ಲಿ ಭಾರತದಲ್ಲಿ ಒಬ್ಬ ವ್ಯಕ್ತಿಗೆ 7 ಪೈಸಾ ಖರ್ಚು ಮಾಡುತ್ತದೆ. ಹಾಗಾದರೆ ಭಾರತ ತನ್ನ ಹಣವನ್ನು ಎಲ್ಲಿ ಖರ್ಚು ಮಾಡುತ್ತಿದೆ? ನಮ್ಮ ಯುವಜನರಿಗೆ ಉತ್ತಮ ಪುಸ್ತಕಗಳು ಸಿಗದಿದ್ದರೆ ನಾವು ಹೇಗೆ ಮಹಾಶಕ್ತಿಯಾಗುತ್ತೇವೆ? ನಾವು ಹೇಗೆ ವಿಶ್ವಗುರು ಆಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...