Homeಮುಖಪುಟಭಾರತ ಗ್ರಂಥಾಲಯ ಮತ್ತು ಪುಸ್ತಕಗಳಿಗಾಗಿ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಮಾಡುವ ಖರ್ಚು ಎಷ್ಟು ಗೊತ್ತೇ?

ಭಾರತ ಗ್ರಂಥಾಲಯ ಮತ್ತು ಪುಸ್ತಕಗಳಿಗಾಗಿ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಮಾಡುವ ಖರ್ಚು ಎಷ್ಟು ಗೊತ್ತೇ?

ಈ ವಿದ್ಯಾರ್ಥಿಗಳು ಮತ್ತು ಅವರ ತಾಯಂದಿರು ಮೂರು ವಾರದಿಂದ ಹೋರಾಡುತ್ತಿರುವುದಾರೂ ಏಕೆ ಗೊತ್ತಾ?

- Advertisement -
- Advertisement -

ಪಿಥೋರಘಡದಲ್ಲಿ ಶಿಕ್ಷಕರು ಮತ್ತು ಪುಸ್ತಕಗಳಿಗಾಗಿ ನಿರಂತರ ಚಳುವಳಿ

ಉತ್ತರಾಖಂಡದ ಪಿಥೋರಘಡದಲ್ಲಿನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ 3 ವಾರಗಳಿಂದ ಉತ್ತಮ ಗ್ರಂಥಾಲಯಗಳು ಮತ್ತು ಹೆಚ್ಚಿನ ಪುಸ್ತಕಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿದಿನ ಕನಿಷ್ಠ 15-20 ವಿದ್ಯಾರ್ಥಿಗಳು ಭಾನುವಾರದಂದು ಸಹ ಧರಣಿಯಲ್ಲಿ ಕುಳಿತಿದ್ದಾರೆ. ಜೊತೆಗೆ ಪಿಥೋರಘಡದ ಬೀದಿಗಳಲ್ಲಿ ವಿದ್ಯಾರ್ಥಿಗಳು ಪೋಸ್ಟರ್‌ಗಳೊಂದಿಗೆ ಮೌನ ಮೆರವಣಿಗೆ ನಡೆಸುತ್ತಿದ್ದಾರೆ.

ಪಿಥೋರಘಡ ನೇಪಾಳ ಮತ್ತು ಚೀನಾವನ್ನು ಅದರ ಗಡಿಯಾಗಿ ಹೊಂದಿರುವ ಉತ್ತರಖಂಡ ರಾಜ್ಯದ ಪಟ್ಟಣ. 70 ರ ದಶಕದಲ್ಲಿ ಬೆಟ್ಟ ಪ್ರದೇಶಗಳಿಗಳಲ್ಲಿ ವಿಶ್ವವಿದ್ಯಾನಿಲಯಗಳು ಬೇಕೆಂಬ ದೊಡ್ಡ ವಿದ್ಯಾರ್ಥಿ ಚಳುವಳಿ ನಡೆದಿತ್ತು. ಆ ಹೋರಾಟದಲ್ಲಿ ಇಬ್ಬರು ಯುವ ವಿದ್ಯಾರ್ಥಿಗಳು ಪೊಲೀಸ್ ಶೂಟಿಂಗ್‌ನಲ್ಲಿ ಪ್ರಾಣ ಕಳೆದುಕೊಂಡರು. ನಂತರವಷ್ಟೇ ಅಲ್ಲಿ ಕುಮಾನ್ ಮತ್ತು ಗರ್ವಾಲ್ ವಿಶ್ವವಿದ್ಯಾಲಯವನ್ನು 1973 ರಲ್ಲಿ ತೆರೆಯಲಾಯಿತು.

ಈ ಕಾಲೇಜಿನಲ್ಲಿ 7000 ವಿದ್ಯಾರ್ಥಿಗಳಿದ್ದು, ಕಾಲೇಜಿನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಈ ವಿಷಯವನ್ನು ಸಚಿವರಿಗೆ ಮುಟ್ಟಿಸಲು ವಿದ್ಯಾರ್ಥಿಗಳು ಅಕ್ಟೋಬರ್ 2018 ರಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದರು. ಅಂದಿನಿಂದ ಅವರು ಡಿಸಿ ಕಚೇರಿಗೆ 5 ಬಾರಿ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಅವರ ಮನವಿ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ ಅವರು ಧರಣಿಗಳನ್ನು ಪ್ರಾರಂಭಿಸಿದ್ದಾರೆ. ಈ ವಿದ್ಯಾರ್ಥಿಗಳ ತಾಯಂದಿರು ಸಹ ಮೆರವಣಿಗೆಯಲ್ಲಿ ಸೇರಿಕೊಂಡು ಬೆಂಬಲ ಸೂಚಿಸಿದ್ದಾರೆ.

ಕಾಲೇಜು ಗ್ರಂಥಾಲಯದಲ್ಲಿನ ಪುಸ್ತಕಗಳು ತುಂಬಾ ಹಳೆಯವು, ತೇವ ಮತ್ತು ದೂಳಿಡಿದು ಕೂತಿವೆ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ. ಕಾಲೇಜಿನಲ್ಲಿ ಕಲಿಸಲಾಗುವ ವಿಷಯಗಳ ಕುರಿತ ಪುಸ್ತಕಗಳು ಗ್ರಂಥಾಲಯದಲ್ಲಿಲ್ಲ. ಅನೇಕ ವಿದ್ಯಾರ್ಥಿಗಳು ಇತರ ನಗರಗಳಿಂದ, ಕೆಲವೊಮ್ಮೆ ದೆಹಲಿಯಿಂದ ಪುಸ್ತಕಗಳನ್ನು ಪಡೆಯಲು 8-10 ಗಂಟೆಗಳ ಬಸ್ ಪ್ರಯಾಣವನ್ನು ಮಾಡಬೇಕಾಗುತ್ತದೆ. ಪ್ರಯೋಗಾಲಯಗಳು ಅತ್ಯಂತ ಕೆಟ್ಟ ಸ್ಥಿತಿಯಲ್ಲಿವೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

1990 ರ ದಶಕದಿಂದಲೂ ಸಣ್ಣ ಪಟ್ಟಣಗಳಲ್ಲಿನ ಕಾಲೇಜುಗಳನ್ನು ಮುಚ್ಚುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಶಿಕ್ಷಕರು ಇಲ್ಲ, ಗ್ರಂಥಾಲಯಗಳಿಲ್ಲ. ಭಾರತದ ವೆಚ್ಚ ವರದಿಯ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ 70,817 ಗ್ರಂಥಾಲಯಗಳು ಮತ್ತು ನಗರ ಪ್ರದೇಶಗಳಲ್ಲಿ 4,580 ಗಳು ಕ್ರಮವಾಗಿ 830 ದಶಲಕ್ಷ ಮತ್ತು 370 ದಶಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿವೆ,. 2011 ರ ಜನಗಣತಿಯ ಪ್ರಕಾರ ಮೊದಲ ಬಾರಿಗೆ ಗ್ರಂಥಾಲಯಗಳನ್ನು ಅಧಿಕೃತವಾಗಿ ಗುರುತಿಸಲಾಗಿದೆ. ಆ ಪ್ರಕಾರ ಸರಿಸುಮಾರು ಪ್ರತಿ 11,500 ಜನರಿಗೆ ಒಂದು ಗ್ರಾಮೀಣ ಗ್ರಂಥಾಲಯ ಮತ್ತು 80,000 ಕ್ಕೂ ಹೆಚ್ಚು ಜನರಿಗೆ ಒಂದು ನಗರ ಗ್ರಂಥಾಲಯ ಮಾತ್ರ ಇವೆ. ಆದಾಗ್ಯೂ, ಈ ಗ್ರಂಥಾಲಯಗಳ ಕಾರ್ಯಕ್ಷಮತೆ ಮತ್ತು ಸೇವಾ ಸಾಮರ್ಥ್ಯಗಳ ಬಗ್ಗೆ ಯಾವುದೇ ನಿಖರವಾದ ಮಾಹಿತಿಯಿಲ್ಲ – ಗ್ರಾಮೀಣ ಗ್ರಂಥಾಲಯಗಳು ಕೆಲವು ಪುಸ್ತಕಗಳನ್ನು ಹೊಂದಿರುವ ಕೋಣೆಯಾಗಿರಬಹುದು, ಆದರೆ ಇತರವು ಖಾಸಗಿ ದಾನಿಗಳು ಅಥವಾ ಎನ್‌ಜಿಒಗಳ ಬೆಂಬಲದ ಮೂಲಕ ನಡೆಯಬಹುದಾಗಿವೆ.

ಅಮೇರಿಕಾದಲ್ಲಿ  ಗ್ರಂಥಾಲಯಕ್ಕಾಗಿ ವರ್ಷಕ್ಕೆ ಒಬ್ಬ ವ್ಯಕ್ತಿಗೆ 36 ಡಾಲರ್ ಖರ್ಚು ಮಾಡುತ್ತದೆ, ಮತ್ತು ಭಾರತದಲ್ಲಿ ಭಾರತದಲ್ಲಿ ಒಬ್ಬ ವ್ಯಕ್ತಿಗೆ 7 ಪೈಸಾ ಖರ್ಚು ಮಾಡುತ್ತದೆ. ಹಾಗಾದರೆ ಭಾರತ ತನ್ನ ಹಣವನ್ನು ಎಲ್ಲಿ ಖರ್ಚು ಮಾಡುತ್ತಿದೆ? ನಮ್ಮ ಯುವಜನರಿಗೆ ಉತ್ತಮ ಪುಸ್ತಕಗಳು ಸಿಗದಿದ್ದರೆ ನಾವು ಹೇಗೆ ಮಹಾಶಕ್ತಿಯಾಗುತ್ತೇವೆ? ನಾವು ಹೇಗೆ ವಿಶ್ವಗುರು ಆಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...