Homeಮುಖಪುಟಭಾರತ ಗ್ರಂಥಾಲಯ ಮತ್ತು ಪುಸ್ತಕಗಳಿಗಾಗಿ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಮಾಡುವ ಖರ್ಚು ಎಷ್ಟು ಗೊತ್ತೇ?

ಭಾರತ ಗ್ರಂಥಾಲಯ ಮತ್ತು ಪುಸ್ತಕಗಳಿಗಾಗಿ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ಮಾಡುವ ಖರ್ಚು ಎಷ್ಟು ಗೊತ್ತೇ?

ಈ ವಿದ್ಯಾರ್ಥಿಗಳು ಮತ್ತು ಅವರ ತಾಯಂದಿರು ಮೂರು ವಾರದಿಂದ ಹೋರಾಡುತ್ತಿರುವುದಾರೂ ಏಕೆ ಗೊತ್ತಾ?

- Advertisement -
- Advertisement -

ಪಿಥೋರಘಡದಲ್ಲಿ ಶಿಕ್ಷಕರು ಮತ್ತು ಪುಸ್ತಕಗಳಿಗಾಗಿ ನಿರಂತರ ಚಳುವಳಿ

ಉತ್ತರಾಖಂಡದ ಪಿಥೋರಘಡದಲ್ಲಿನ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಳೆದ 3 ವಾರಗಳಿಂದ ಉತ್ತಮ ಗ್ರಂಥಾಲಯಗಳು ಮತ್ತು ಹೆಚ್ಚಿನ ಪುಸ್ತಕಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿದಿನ ಕನಿಷ್ಠ 15-20 ವಿದ್ಯಾರ್ಥಿಗಳು ಭಾನುವಾರದಂದು ಸಹ ಧರಣಿಯಲ್ಲಿ ಕುಳಿತಿದ್ದಾರೆ. ಜೊತೆಗೆ ಪಿಥೋರಘಡದ ಬೀದಿಗಳಲ್ಲಿ ವಿದ್ಯಾರ್ಥಿಗಳು ಪೋಸ್ಟರ್‌ಗಳೊಂದಿಗೆ ಮೌನ ಮೆರವಣಿಗೆ ನಡೆಸುತ್ತಿದ್ದಾರೆ.

ಪಿಥೋರಘಡ ನೇಪಾಳ ಮತ್ತು ಚೀನಾವನ್ನು ಅದರ ಗಡಿಯಾಗಿ ಹೊಂದಿರುವ ಉತ್ತರಖಂಡ ರಾಜ್ಯದ ಪಟ್ಟಣ. 70 ರ ದಶಕದಲ್ಲಿ ಬೆಟ್ಟ ಪ್ರದೇಶಗಳಿಗಳಲ್ಲಿ ವಿಶ್ವವಿದ್ಯಾನಿಲಯಗಳು ಬೇಕೆಂಬ ದೊಡ್ಡ ವಿದ್ಯಾರ್ಥಿ ಚಳುವಳಿ ನಡೆದಿತ್ತು. ಆ ಹೋರಾಟದಲ್ಲಿ ಇಬ್ಬರು ಯುವ ವಿದ್ಯಾರ್ಥಿಗಳು ಪೊಲೀಸ್ ಶೂಟಿಂಗ್‌ನಲ್ಲಿ ಪ್ರಾಣ ಕಳೆದುಕೊಂಡರು. ನಂತರವಷ್ಟೇ ಅಲ್ಲಿ ಕುಮಾನ್ ಮತ್ತು ಗರ್ವಾಲ್ ವಿಶ್ವವಿದ್ಯಾಲಯವನ್ನು 1973 ರಲ್ಲಿ ತೆರೆಯಲಾಯಿತು.

ಈ ಕಾಲೇಜಿನಲ್ಲಿ 7000 ವಿದ್ಯಾರ್ಥಿಗಳಿದ್ದು, ಕಾಲೇಜಿನಲ್ಲಿ ಅನೇಕ ಹುದ್ದೆಗಳು ಖಾಲಿ ಇವೆ. ಈ ವಿಷಯವನ್ನು ಸಚಿವರಿಗೆ ಮುಟ್ಟಿಸಲು ವಿದ್ಯಾರ್ಥಿಗಳು ಅಕ್ಟೋಬರ್ 2018 ರಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದರು. ಅಂದಿನಿಂದ ಅವರು ಡಿಸಿ ಕಚೇರಿಗೆ 5 ಬಾರಿ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಅವರ ಮನವಿ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ ಅವರು ಧರಣಿಗಳನ್ನು ಪ್ರಾರಂಭಿಸಿದ್ದಾರೆ. ಈ ವಿದ್ಯಾರ್ಥಿಗಳ ತಾಯಂದಿರು ಸಹ ಮೆರವಣಿಗೆಯಲ್ಲಿ ಸೇರಿಕೊಂಡು ಬೆಂಬಲ ಸೂಚಿಸಿದ್ದಾರೆ.

ಕಾಲೇಜು ಗ್ರಂಥಾಲಯದಲ್ಲಿನ ಪುಸ್ತಕಗಳು ತುಂಬಾ ಹಳೆಯವು, ತೇವ ಮತ್ತು ದೂಳಿಡಿದು ಕೂತಿವೆ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ. ಕಾಲೇಜಿನಲ್ಲಿ ಕಲಿಸಲಾಗುವ ವಿಷಯಗಳ ಕುರಿತ ಪುಸ್ತಕಗಳು ಗ್ರಂಥಾಲಯದಲ್ಲಿಲ್ಲ. ಅನೇಕ ವಿದ್ಯಾರ್ಥಿಗಳು ಇತರ ನಗರಗಳಿಂದ, ಕೆಲವೊಮ್ಮೆ ದೆಹಲಿಯಿಂದ ಪುಸ್ತಕಗಳನ್ನು ಪಡೆಯಲು 8-10 ಗಂಟೆಗಳ ಬಸ್ ಪ್ರಯಾಣವನ್ನು ಮಾಡಬೇಕಾಗುತ್ತದೆ. ಪ್ರಯೋಗಾಲಯಗಳು ಅತ್ಯಂತ ಕೆಟ್ಟ ಸ್ಥಿತಿಯಲ್ಲಿವೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

1990 ರ ದಶಕದಿಂದಲೂ ಸಣ್ಣ ಪಟ್ಟಣಗಳಲ್ಲಿನ ಕಾಲೇಜುಗಳನ್ನು ಮುಚ್ಚುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಶಿಕ್ಷಕರು ಇಲ್ಲ, ಗ್ರಂಥಾಲಯಗಳಿಲ್ಲ. ಭಾರತದ ವೆಚ್ಚ ವರದಿಯ ಪ್ರಕಾರ, ಗ್ರಾಮೀಣ ಪ್ರದೇಶಗಳಲ್ಲಿ 70,817 ಗ್ರಂಥಾಲಯಗಳು ಮತ್ತು ನಗರ ಪ್ರದೇಶಗಳಲ್ಲಿ 4,580 ಗಳು ಕ್ರಮವಾಗಿ 830 ದಶಲಕ್ಷ ಮತ್ತು 370 ದಶಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿವೆ,. 2011 ರ ಜನಗಣತಿಯ ಪ್ರಕಾರ ಮೊದಲ ಬಾರಿಗೆ ಗ್ರಂಥಾಲಯಗಳನ್ನು ಅಧಿಕೃತವಾಗಿ ಗುರುತಿಸಲಾಗಿದೆ. ಆ ಪ್ರಕಾರ ಸರಿಸುಮಾರು ಪ್ರತಿ 11,500 ಜನರಿಗೆ ಒಂದು ಗ್ರಾಮೀಣ ಗ್ರಂಥಾಲಯ ಮತ್ತು 80,000 ಕ್ಕೂ ಹೆಚ್ಚು ಜನರಿಗೆ ಒಂದು ನಗರ ಗ್ರಂಥಾಲಯ ಮಾತ್ರ ಇವೆ. ಆದಾಗ್ಯೂ, ಈ ಗ್ರಂಥಾಲಯಗಳ ಕಾರ್ಯಕ್ಷಮತೆ ಮತ್ತು ಸೇವಾ ಸಾಮರ್ಥ್ಯಗಳ ಬಗ್ಗೆ ಯಾವುದೇ ನಿಖರವಾದ ಮಾಹಿತಿಯಿಲ್ಲ – ಗ್ರಾಮೀಣ ಗ್ರಂಥಾಲಯಗಳು ಕೆಲವು ಪುಸ್ತಕಗಳನ್ನು ಹೊಂದಿರುವ ಕೋಣೆಯಾಗಿರಬಹುದು, ಆದರೆ ಇತರವು ಖಾಸಗಿ ದಾನಿಗಳು ಅಥವಾ ಎನ್‌ಜಿಒಗಳ ಬೆಂಬಲದ ಮೂಲಕ ನಡೆಯಬಹುದಾಗಿವೆ.

ಅಮೇರಿಕಾದಲ್ಲಿ  ಗ್ರಂಥಾಲಯಕ್ಕಾಗಿ ವರ್ಷಕ್ಕೆ ಒಬ್ಬ ವ್ಯಕ್ತಿಗೆ 36 ಡಾಲರ್ ಖರ್ಚು ಮಾಡುತ್ತದೆ, ಮತ್ತು ಭಾರತದಲ್ಲಿ ಭಾರತದಲ್ಲಿ ಒಬ್ಬ ವ್ಯಕ್ತಿಗೆ 7 ಪೈಸಾ ಖರ್ಚು ಮಾಡುತ್ತದೆ. ಹಾಗಾದರೆ ಭಾರತ ತನ್ನ ಹಣವನ್ನು ಎಲ್ಲಿ ಖರ್ಚು ಮಾಡುತ್ತಿದೆ? ನಮ್ಮ ಯುವಜನರಿಗೆ ಉತ್ತಮ ಪುಸ್ತಕಗಳು ಸಿಗದಿದ್ದರೆ ನಾವು ಹೇಗೆ ಮಹಾಶಕ್ತಿಯಾಗುತ್ತೇವೆ? ನಾವು ಹೇಗೆ ವಿಶ್ವಗುರು ಆಗಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...