Homeಮುಖಪುಟರಸ್ತೆಯಲ್ಲಿ ಪಟಾಕಿ ಸಿಡಿಸಬೇಡಿಯೆಂದ ನಟ ಅಮೀರ್ ಖಾನ್ ಮೇಲೆ ಮುಗಿಬಿದ್ದ ಸಂಸದ ಅನಂತ್‌ಕುಮಾರ್ ಹೆಗಡೆ

ರಸ್ತೆಯಲ್ಲಿ ಪಟಾಕಿ ಸಿಡಿಸಬೇಡಿಯೆಂದ ನಟ ಅಮೀರ್ ಖಾನ್ ಮೇಲೆ ಮುಗಿಬಿದ್ದ ಸಂಸದ ಅನಂತ್‌ಕುಮಾರ್ ಹೆಗಡೆ

- Advertisement -
- Advertisement -

ಹಲವು ತಿಂಗಳಿಂದ ಕ್ಷೇತ್ರವಾಸಿಗಳಿಗೆ ನಾಟ್ ರಿಚೇಬಲ್ ಆಗಿದ್ದ ಉತ್ತರ ಕನ್ನಡದ ಸಂಸದ ಅನಂತ್‌ಕುಮಾರ್ ಹೆಗಡೆ ತಮ್ಮ ಮಾಮುಲಿ ಅಸಹಿಷ್ಟುತೆ ಮೂಲಕ ಪ್ರತ್ಯಕ್ಷರಾಗಿದ್ದಾರೆ! ದೀಪಾವಳಿ ಹಬ್ಬದ ಹೊತ್ತಲ್ಲಿ ರಸ್ತೆಗಳಲ್ಲಿ ಪಟಾಕಿ ಸಿಡಿಸಿ ಪರಿಸರ ಮಾಲಿನ್ಯ ಮಾಡಬೇಡಿಯೆಂದು ಜಾಹೀರಾತೊಂದರಲ್ಲಿ ಹೇಳಿದ್ದ ಬಾಲಿವುಡ್‌ನ ಖ್ಯಾತ ನಟ-ಪರಿಸರವಾದಿ ಅಮೀರ್ ಖಾನ್‌ರನ್ನು ಅನಂತ್ ಹೆಗಡೆ ಮೂದಲಿಸಿದ್ದಾರೆ. ಭಾರತದಲ್ಲಿ ಇಂಥ ಹಿಂದು ವಿರೋಧಿ ನಟರಿಗೇನು ಕೊರತೆಯಿಲ್ಲ ಎಂದು ಕಿಡಿಕಾರಿದ್ದಾರೆ.

ನಟ, ಪ್ರಾಣಿ ಪ್ರೇಮಿ ಅಮೀರ್ ಖಾನ್ ಸಿಯೆಟ್ ಬೈಕ್ ಟೈರ್ ಕಂಪನಿಯ ಜಾಹೀರಾತಲ್ಲಿ ನಟಿಸುತ್ತ ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿತದಿಂದಾಗುವ ಅನಾಹುತದ ಬಗ್ಗೆ ಜಾಗೃತಿ ಮೂಡಿಸಿದ್ದರು. ಇದರಿಂದ ಕೆರಳಿರಿರುವ ಅನಂತ್ ಹೆಗಡೆ ಮುಸ್ಲಿಮರಿಂದ ಸಾರ್ವಜನಿಕ ಪ್ರದೇಶಗಳಲ್ಲಿ ಆಗುತ್ತಿರುವ ಹಲವು ಮಾಲಿನ್ಯದತ್ತ ಅಮೀರ್ ಗಮನ ಹರಿಸಿದರೆ ಅದೆಷ್ಟೋ ಸಮಸ್ಯೆ ಪರಿಹಾರವಾಗುತ್ತದೆ ಎಂದಿದ್ದಾರೆ. ಸಿಯೆಟ್ ಟೈರ್ ಕಂಪನಿಯ ಮುಖ್ಯಸ್ಥ ಅನಂತ ವರದಾನ್ ಗೋಯೆಂಕಾಗೆ ಜಾಹೀರಾತಿನ ಕುರಿತು ಆಕ್ಷೇಪಗಳಿರುವ ಪತ್ರ ಬರೆದಿರುವ ಸಂಸದ ಹೆಗಡೆ ಅದನ್ನು ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪರಿಸರ ಮತ್ತು ಪ್ರಾಣಿಗಳ ಬಗ್ಗೆ ಅಮೀರ್ ಖಾನ್ ಕಾಳಜಿ ವ್ಯಕ್ತ ಪಡಿಸುತ್ತಿರುವುದಕ್ಕೆ ನನ್ನ ಮೆಚ್ಚುಗೆಯಿದೆ. ಆದರೆ ಅನ್ಯ ಧರ್ಮದಲ್ಲಿ ನಡೆಯುತ್ತಿರುವ ಹಲವು ಆಚರಣೆಗಳ ಬಗ್ಗೆ ಅವರೇಕೆ ಮೌನವಾಗಿದ್ದಾರೆ? ಪಟಾಕಿ ರಸ್ತೆ ಮೇಲೆ ಹೊಡೆಯುವುದರಿಂದ ಸಮಸ್ಯೆಯಾಗುತ್ತದೆಂದಾರೆ, ರಸ್ತೆ ಮೇಲೆ ನಮಾಜ್ ಮಾಡುವುದರಿಂದಲೂ ಟ್ರಾಫಿಕ್ ಸಮಸ್ಯೆಯಾಗತ್ತದೆ. ಧ್ವನಿವರ್ಧಕದಲ್ಲಿ ಆಝಾನ್ ಕೂಗುವುದರಿಂದ ಶಬ್ಧ ಮಾಲಿನ್ಯವಾಗುತ್ತದೆ. ಅದನ್ನೂ ಜಾಹೀರಾತಿನಲ್ಲಿ ತೋರಿಸಿರಿ, ಪ್ರತಿ ದಿನ ಬೆಳಗ್ಗೆ ಚೀರುವ ಧ್ವನಿ ವರ್ಧಕಗಳು, ನಡು ರಸ್ತೆಯಲ್ಲಿ ನಮಾಜ್ ಮಾಡುವುದು ಮತ್ತಿತರ ಆಚರಣೆಗಳತ್ತ ಅಮೀರ್ ಲಕ್ಷವಹಿಸಿದರೆ ಎಷ್ಟೋ ಸಮಸ್ಯೆ ಬಗೆಹರಿಯುತ್ತವೆ ಎಂದು ಅನಂತ ಹೆಗಡೆ ಸಿಯೆಟ್ ಕಂಪನಿ ಮಾಲೀಕರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ಇಂಥ ಜಾಹೀರಾತುಗಳು ಹಿಂದುಗಳ ಭಾವನೆಗಳನ್ನು ತುಳಿಯಲು ಮಾಡಿದ ಕ್ಷುಲ್ಲಕ ಕುತಂತ್ರವಲ್ಲದೆ ಮತ್ತೇನು ಅಲ್ಲ. ಈ ಜಾಹೀರಾತು ಹಿಂಪಡೆಯಬೇಕು: ಹಿಂದುಗಳೆ ಆಗಿರುವ ನೀವು ಹಿಂದುಗಳ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಂಸದ ಅನಂತ ಹೆಗಡೆ ಸಿಯೆಟ್ ಕಂಪನಿಯ ಗೋಯೆಂಕಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...