Homeಮುಖಪುಟರಸ್ತೆಯಲ್ಲಿ ಪಟಾಕಿ ಸಿಡಿಸಬೇಡಿಯೆಂದ ನಟ ಅಮೀರ್ ಖಾನ್ ಮೇಲೆ ಮುಗಿಬಿದ್ದ ಸಂಸದ ಅನಂತ್‌ಕುಮಾರ್ ಹೆಗಡೆ

ರಸ್ತೆಯಲ್ಲಿ ಪಟಾಕಿ ಸಿಡಿಸಬೇಡಿಯೆಂದ ನಟ ಅಮೀರ್ ಖಾನ್ ಮೇಲೆ ಮುಗಿಬಿದ್ದ ಸಂಸದ ಅನಂತ್‌ಕುಮಾರ್ ಹೆಗಡೆ

- Advertisement -
- Advertisement -

ಹಲವು ತಿಂಗಳಿಂದ ಕ್ಷೇತ್ರವಾಸಿಗಳಿಗೆ ನಾಟ್ ರಿಚೇಬಲ್ ಆಗಿದ್ದ ಉತ್ತರ ಕನ್ನಡದ ಸಂಸದ ಅನಂತ್‌ಕುಮಾರ್ ಹೆಗಡೆ ತಮ್ಮ ಮಾಮುಲಿ ಅಸಹಿಷ್ಟುತೆ ಮೂಲಕ ಪ್ರತ್ಯಕ್ಷರಾಗಿದ್ದಾರೆ! ದೀಪಾವಳಿ ಹಬ್ಬದ ಹೊತ್ತಲ್ಲಿ ರಸ್ತೆಗಳಲ್ಲಿ ಪಟಾಕಿ ಸಿಡಿಸಿ ಪರಿಸರ ಮಾಲಿನ್ಯ ಮಾಡಬೇಡಿಯೆಂದು ಜಾಹೀರಾತೊಂದರಲ್ಲಿ ಹೇಳಿದ್ದ ಬಾಲಿವುಡ್‌ನ ಖ್ಯಾತ ನಟ-ಪರಿಸರವಾದಿ ಅಮೀರ್ ಖಾನ್‌ರನ್ನು ಅನಂತ್ ಹೆಗಡೆ ಮೂದಲಿಸಿದ್ದಾರೆ. ಭಾರತದಲ್ಲಿ ಇಂಥ ಹಿಂದು ವಿರೋಧಿ ನಟರಿಗೇನು ಕೊರತೆಯಿಲ್ಲ ಎಂದು ಕಿಡಿಕಾರಿದ್ದಾರೆ.

ನಟ, ಪ್ರಾಣಿ ಪ್ರೇಮಿ ಅಮೀರ್ ಖಾನ್ ಸಿಯೆಟ್ ಬೈಕ್ ಟೈರ್ ಕಂಪನಿಯ ಜಾಹೀರಾತಲ್ಲಿ ನಟಿಸುತ್ತ ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿತದಿಂದಾಗುವ ಅನಾಹುತದ ಬಗ್ಗೆ ಜಾಗೃತಿ ಮೂಡಿಸಿದ್ದರು. ಇದರಿಂದ ಕೆರಳಿರಿರುವ ಅನಂತ್ ಹೆಗಡೆ ಮುಸ್ಲಿಮರಿಂದ ಸಾರ್ವಜನಿಕ ಪ್ರದೇಶಗಳಲ್ಲಿ ಆಗುತ್ತಿರುವ ಹಲವು ಮಾಲಿನ್ಯದತ್ತ ಅಮೀರ್ ಗಮನ ಹರಿಸಿದರೆ ಅದೆಷ್ಟೋ ಸಮಸ್ಯೆ ಪರಿಹಾರವಾಗುತ್ತದೆ ಎಂದಿದ್ದಾರೆ. ಸಿಯೆಟ್ ಟೈರ್ ಕಂಪನಿಯ ಮುಖ್ಯಸ್ಥ ಅನಂತ ವರದಾನ್ ಗೋಯೆಂಕಾಗೆ ಜಾಹೀರಾತಿನ ಕುರಿತು ಆಕ್ಷೇಪಗಳಿರುವ ಪತ್ರ ಬರೆದಿರುವ ಸಂಸದ ಹೆಗಡೆ ಅದನ್ನು ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪರಿಸರ ಮತ್ತು ಪ್ರಾಣಿಗಳ ಬಗ್ಗೆ ಅಮೀರ್ ಖಾನ್ ಕಾಳಜಿ ವ್ಯಕ್ತ ಪಡಿಸುತ್ತಿರುವುದಕ್ಕೆ ನನ್ನ ಮೆಚ್ಚುಗೆಯಿದೆ. ಆದರೆ ಅನ್ಯ ಧರ್ಮದಲ್ಲಿ ನಡೆಯುತ್ತಿರುವ ಹಲವು ಆಚರಣೆಗಳ ಬಗ್ಗೆ ಅವರೇಕೆ ಮೌನವಾಗಿದ್ದಾರೆ? ಪಟಾಕಿ ರಸ್ತೆ ಮೇಲೆ ಹೊಡೆಯುವುದರಿಂದ ಸಮಸ್ಯೆಯಾಗುತ್ತದೆಂದಾರೆ, ರಸ್ತೆ ಮೇಲೆ ನಮಾಜ್ ಮಾಡುವುದರಿಂದಲೂ ಟ್ರಾಫಿಕ್ ಸಮಸ್ಯೆಯಾಗತ್ತದೆ. ಧ್ವನಿವರ್ಧಕದಲ್ಲಿ ಆಝಾನ್ ಕೂಗುವುದರಿಂದ ಶಬ್ಧ ಮಾಲಿನ್ಯವಾಗುತ್ತದೆ. ಅದನ್ನೂ ಜಾಹೀರಾತಿನಲ್ಲಿ ತೋರಿಸಿರಿ, ಪ್ರತಿ ದಿನ ಬೆಳಗ್ಗೆ ಚೀರುವ ಧ್ವನಿ ವರ್ಧಕಗಳು, ನಡು ರಸ್ತೆಯಲ್ಲಿ ನಮಾಜ್ ಮಾಡುವುದು ಮತ್ತಿತರ ಆಚರಣೆಗಳತ್ತ ಅಮೀರ್ ಲಕ್ಷವಹಿಸಿದರೆ ಎಷ್ಟೋ ಸಮಸ್ಯೆ ಬಗೆಹರಿಯುತ್ತವೆ ಎಂದು ಅನಂತ ಹೆಗಡೆ ಸಿಯೆಟ್ ಕಂಪನಿ ಮಾಲೀಕರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ಇಂಥ ಜಾಹೀರಾತುಗಳು ಹಿಂದುಗಳ ಭಾವನೆಗಳನ್ನು ತುಳಿಯಲು ಮಾಡಿದ ಕ್ಷುಲ್ಲಕ ಕುತಂತ್ರವಲ್ಲದೆ ಮತ್ತೇನು ಅಲ್ಲ. ಈ ಜಾಹೀರಾತು ಹಿಂಪಡೆಯಬೇಕು: ಹಿಂದುಗಳೆ ಆಗಿರುವ ನೀವು ಹಿಂದುಗಳ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಂಸದ ಅನಂತ ಹೆಗಡೆ ಸಿಯೆಟ್ ಕಂಪನಿಯ ಗೋಯೆಂಕಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...