Homeದಲಿತ್ ಫೈಲ್ಸ್ಮಧ್ಯಪ್ರದೇಶ: ದಲಿತ ಬಾಲಕಿ ಶಾಲೆಗೆ ಹೋಗದಂತೆ ಅಡ್ಡಿ, ಹಲ್ಲೆ; 7 ಜನ ಅರೆಸ್ಟ್‌

ಮಧ್ಯಪ್ರದೇಶ: ದಲಿತ ಬಾಲಕಿ ಶಾಲೆಗೆ ಹೋಗದಂತೆ ಅಡ್ಡಿ, ಹಲ್ಲೆ; 7 ಜನ ಅರೆಸ್ಟ್‌

- Advertisement -
- Advertisement -

“ಇತರ ಹುಡುಗಿಯರು ಸಹ ಓದುತ್ತಿಲ್ಲವಾದ ಕಾರಣ, ನೀನು ಶಾಲೆಗೆ ಹೋಗಬಾರದು” ಎಂದು  ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ಸ್ಥಳೀಯರ ಗುಂಪೊಂದು 16 ವರ್ಷದ ದಲಿತ ಬಾಲಕಿಗೆ ಬೆದರಿಕೆ ಹಾಕಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾವಲಿಯಖೇಡಿ ಗ್ರಾಮದಲ್ಲಿ ಬಾಲಕಿ ಮತ್ತು ಆರೋಪಿಗಳ ಕುಟುಂಬಗಳ ನಡುವೆ ಘರ್ಷಣೆ ನಡೆದು ಕೆಲವರಿಗೆ ಗಾಯಗಳಾಗಿದ್ದು, ಜುಲೈ 23ರ ಶನಿವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿಗಳು ತನ್ನ ಶಾಲಾ ಬ್ಯಾಗನ್ನು ಕಿತ್ತುಕೊಂಡು ತರಗತಿಗೆ ಹಾಜರಾಗಲು ಆಕ್ಷೇಪ ವ್ಯಕ್ತಪಡಿಸಿದ ವಿಡಿಯೋವನ್ನು ಬಾಲಕಿ ಬಿಡುಗಡೆ ಮಾಡಿದ್ದಾಳೆ. ಆರೋಪಿಗಳ ಅಭಿಪ್ರಾಯವನ್ನು ವಿರೋಧಿಸಿದಾಗ ನನ್ನ ಸಹೋದರನ ಮೇಲೆ ಹಲ್ಲೆ ನಡೆಸಿದರು. ಕುಟುಂಬದ ಇತರ ಸದಸ್ಯರನ್ನೂ ಥಳಿಸಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.

ಪರಿಶಿಷ್ಟ ಜಾತಿ ಸಮುದಾಯದ ಅಪ್ರಾಪ್ತ ಬಾಲಕಿ ಶನಿವಾರ ಮಧ್ಯಾಹ್ನ ಸ್ಥಳೀಯ ಶಾಲೆಗೆ ತೆರಳಿ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಪ್ರಭಾರಿ ಅವಧೇಶ್ ಕುಮಾರ್ ಶೇಷಾ ಹೇಳಿದ್ದಾರೆ.

ಗ್ರಾಮದ ಇತರ ಹುಡುಗಿಯರು ಶಾಲೆಗೆ ಹೋಗದ ಕಾರಣ, ಕೆಲವು ವ್ಯಕ್ತಿಗಳು ದಲಿತ ಬಾಲಕಿಯ ಶಾಲಾ ಬ್ಯಾಗ್ ಕಸಿದುಕೊಂಡು ‘ನೀನು ಶಾಲೆಗೆ ಹೋಗಬೇಡ’ ಎಂದು ಗದರಿಸಿದ್ದಾರೆ. ನಂತರ, ಬಾಲಕಿಯ ಕುಟುಂಬ ಮತ್ತು ಆರೋಪಿಗಳ ಸಂಬಂಧಿಕರ ನಡುವೆ ಘರ್ಷಣೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ದೂರಿನ ಅನ್ವಯ ಕ್ರಮ ಜರುಗಿಸಿರುವ ಪೊಲೀಸರು, ಏಳು ಜನರನ್ನು ಭಾರತೀಯ ದಂಡ ಸಂಹಿತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಿದ್ದಾರೆ.

ಕೌಂಟರ್‌ ದೂರು ಕೂಡ ದಾಖಲಾಗಿದ್ದು, ಹುಡುಗಿಯ ಸಹೋದರ ಮತ್ತು ಇತರ ಮೂವರ ವಿರುದ್ಧ ಹಲ್ಲೆ ಆರೋಪ ಮಾಡಲಾಗಿದೆ.

ಘರ್ಷಣೆಯಲ್ಲಿ ಗಾಯಗೊಂಡವರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾದ ಪ್ರಕಾರ, “ಘರ್ಷಣೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದೆ. ಲಾಠಿ ಬೀಸುವ ವ್ಯಕ್ತಿಗಳು ಬಾಲಕಿಯ ಕುಟುಂಬದ ಮೇಲೆ ಹಲ್ಲೆ ನಡೆಸುವುದು, ಅವರ ಮೇಲೆ ದೌರ್ಜನ್ಯ ಎಸಗುವುದು ವಿಡಿಯೋದಲ್ಲಿ ದಾಖಲಾಗಿದೆ.”

ಇದನ್ನೂ ಓದಿರಿ: ‘ನೀನು ಕೂಲಿ ಕೆಲಸ ಮಾಡಬೇಕು, ಶಾಲೆಯಲ್ಲಿ ಅಡುಗೆಯನ್ನಲ್ಲ’: 6 ತಿಂಗಳಾದರೂ ದಲಿತ ಮಹಿಳೆಗೆ ನಿಲ್ಲದ ಕಿರುಕುಳ

ಬಾಲಕಿ ಮನೆಗೆ ಹಿಂದಿರುಗುತ್ತಿದ್ದಾಗ ನಾಲ್ವರು ಯುವಕರು ಹಲ್ಲೆ ನಡೆಸಿದ್ದಾರೆ. “ನನ್ನ ಸೋದರಸಂಬಂಧಿ ಮಧ್ಯಪ್ರವೇಶಿಸಿದಾಗ, ಆತನನ್ನೂ ಹೊಡೆದರು. ಸುಮಾರು 15-20 ನಿಮಿಷಗಳ ನಂತರ ಯುವಕರ ಕುಟುಂಬಸ್ಥರು ನನ್ನ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ” ಬಾಲಕಿ ದೂರು ನೀಡಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಆದಾಗ್ಯೂ, ಜಿಲ್ಲಾಧಿಕಾರಿಯವರು ದಲಿತ ಕುಟುಂಬದ ಆರೋಪವನ್ನು ಅಲ್ಲಗಳೆದಿದ್ದಾರೆ. “ಹಿಂಸಾಚಾರವು ಜಾತಿ ಕಾರಣಕ್ಕಾಗಿ ನಡೆದಿದೆ ಅಥವಾ ಬಾಲಕಿ ಶಾಲೆಗೆ ಹೋಗುತ್ತಿರುವ ಕಾರಣಕ್ಕೆ ನಡೆದಿದೆ ಎಂಬುದು ಸುಳ್ಳು” ಎಂದಿದ್ದಾರೆ.

“ಹಳೇ ದ್ವೇಷದ ಹಿನ್ನೆಲೆಯಲ್ಲಿ ದಾಳಿ ನಡೆದಿರುವುದು ಸ್ಥಳೀಯ ತಹಸೀಲ್ದಾರ್ ನಡೆಸಿದ ತನಿಖೆಯಲ್ಲಿ ಬೆಳಕಿಗೆ ಬಂದಿದೆ” ಎಂದು ಜಿಲ್ಲಾಧಿಕಾರಿ ದಿನೇಶ್ ಜೈನ್ ಪ್ರತಿಕ್ರಿಯೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...