Homeಮುಖಪುಟಸಚಿವ ಅಶ್ವಥ್ ನಾರಾಯಣ್, ಡಾ.ಕೆ ಸುಧಾಕರ್‌ಗೆ ಪ್ರೋಟೋಕಾಲ್ ಪಾಠ ಮಾಡಿದ ಸಂಸದ ಡಿ.ಕೆ ಸುರೇಶ್

ಸಚಿವ ಅಶ್ವಥ್ ನಾರಾಯಣ್, ಡಾ.ಕೆ ಸುಧಾಕರ್‌ಗೆ ಪ್ರೋಟೋಕಾಲ್ ಪಾಠ ಮಾಡಿದ ಸಂಸದ ಡಿ.ಕೆ ಸುರೇಶ್

ಸಚಿವರಾಗಿರುವವರು, ಉಪ ಮುಖ್ಯಮಂತ್ರಿಗಳಾಗಿದ್ದವರು ನಿಮಗೆ ಪ್ರೋಟೋಕಾಲ್ ಏನೆಂದು ಹೇಳಿಕೊಡಬೇಕೆ ಎಂದು ಅಶ್ವಥ್ ನಾರಾಯಣ್ ವಿರುದ್ಧ ಕಿಡಿಕಾರಿದ್ದಾರೆ.

- Advertisement -
- Advertisement -

ರಾಮನಗರದ ನೂತನ ಜಿಲ್ಲಾಸ್ಪತ್ರೆ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕ ತಮಗೆ ಆಹ್ವಾನ ನೀಡದಿರುವುದರ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ಮತ್ತು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ರವರನ್ನು ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್‌ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ರಾಮನಗರದಲ್ಲಿ ಜರುಗಿದೆ.

ರಾಮನಗರ ಉಸ್ತುವಾರಿ ಸಚಿವ ಡಾ. ಅಶ್ವತ್ಥನಾರಾಯಣ ಮತ್ತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಇಂದು ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ, ತಡೆದು ನಿಲ್ಲಿಸಿದ ಸಂಸದ ಡಿ ಕೆ ಸುರೇಶ್‌ “ಏಯ್ ಮಂತ್ರಿಗಳೆ ನಿಂತ್ರ್ಕಳ್ಳಿ, ನನಗೂ ಪ್ರೋಟೋಕಾಲ್ ಇದೆ. ನಿಮಗೊಬ್ಬರಿಗೆ ಅಲ್ಲ” ಎಂದು ಕಿಡಿಕಾರಿದ್ದಾರೆ.

ಯಾರ್ರಿ ಅವನು ಡೆಪ್ಯೂಟಿ ಕಮಿಷನರ್‌ ಕರೀರಿ ಇಲ್ಲಿ, ನಾನು ಈ ಕ್ಷೇತ್ರದ ಪ್ರತಿನಿಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತ ಸಚಿವ ಡಾ.ಕೆ ಸುಧಾಕರ್ ಕಾಲ್ಕೀಳಲು ಪ್ರಯತ್ನಿಸುತ್ತಿದ್ದಂತೆ, “ಏಯ್‌ ನಿಲ್ರಿ ಮಂತ್ರಿಗಳೇ, ನಿಂತುಕೊಳ್ಳಿ, ನಾನು ಈ ಕ್ಷೇತ್ರದ ಪ್ರತಿನಿಧಿ. ನನಗೂ ಪ್ರೋಟೋಕಾಲ್‌ ಇದೆ. ನಿಮ್ಮೊಬ್ಬರಿಗೆ ಅಲ್ಲ” ಎಂದು ಏರುಧ್ವನಿಯಲ್ಲಿ ತರಾಟೆಗೆ ತೆಗೆದುಕೊಂಡರು. ಆಗ ಮಧ್ಯಪ್ರವೇಶಿಸಿದ ಡಾ.ಅಶ್ವತ್ಥನಾರಾಯಣ್ ಕೂಗಡಾಬೇಕಿಲ್ಲ ಎಂದರು. ಆಗ ಡಿ.ಕೆ ಸುರೇಶ್ ಅಭಿಮಾನಿಗಳು ಜೋರಾಗಿ ಕೂಗಿ ಎಲ್ಲಾ ಬಿಜೆಪಿ ಕಾರ್ಯಕ್ರಮ ಮಾಡಿಕೊಂಡುಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಾ.ಅಶ್ವತ್ಥನಾರಾಯಣ್ ಪ್ರೋಟೋಕಾಲ್ ಅಂದ್ರೆ ಏನ್ರಿ? ನಿಮ್ಮನ್ನು ಬರಬೇಡಿ ಎಂದು ತಡೆದವರು ಯಾರು ಎಂದಾಗ, ಜಿಲ್ಲಾ ಉಸ್ತುವಾರಿ ಸಚಿವರಾಗಿರುವವರು, ಉಪ ಮುಖ್ಯಮಂತ್ರಿಗಳಾಗಿದ್ದವರು ನಿಮಗೆ ಪ್ರೋಟೋಕಾಲ್ ಏನೆಂದು ಹೇಳಿಕೊಡಬೇಕೆ? ಕಾರ್ಯಕ್ರಮದ ವಿವರಗಳನ್ನು ಮೊದಲೇ ನೀಡಬೇಕು ಅಲ್ಲವೆ? ರಾತ್ರಿ ಆಹ್ವಾನ ಪತ್ರಿಕೆ ಹಂಚಿ ಬೆಳಿಗ್ಗೆ ಉದ್ಘಾಟನೆ ಮಾಡುವುದು ಯಾವ ಪ್ರೊಟೋಕಾಲ್ ಎಂದು ಡಿ.ಕೆ ಸುರೇಶ್ ಪ್ರಶ್ನಿಸಿದರು.

ಎಲ್ಲವನ್ನು ನಿಗಧಿ ಮಾಡಿಯೇ ಮಾಡುತ್ತಿದ್ದೇವೆ ಎಂದು ಡಾ.ಅಶ್ವತ್ಥನಾರಾಯಣ್ ಸಮರ್ಥಿಸಿಕೊಳ್ಳಲು ಮುಂದಾದರು. ಆಗ ಮಾತನಾಡಿದ ಡಿ.ಕೆ ಸುರೇಶ್, ನೀವು ಯಾವಾಗ ನಿಗದಿ ಮಾಡಿದ್ದೀರಿ ನನಗೆ ಗೊತ್ತಿಲ್ಲ, ನನಗೆ ಮುಂಚೆನೇ ಆಹ್ವಾನ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಡಾ. ಸುಧಾಕರ್ ತುಟಿಬಿಚ್ಚದೆ ಸುಮ್ಮನಿದ್ದರು.

ಕಳೆದ ವಾರ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕು ಉದ್ಘಾಟನಾ ಕಾರ್ಯಕ್ರಮಕ್ಕೂ ಸಂಸದ ಡಿ.ಕೆ ಸುರೇಶ್‌ರವರನ್ನು ಆಹ್ವಾನಿಸಲಾಗಿರಲಿಲ್ಲ. ಹಾಗಾಗಿ ಅವರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು. ಅಲ್ಲದೇ ಆ ಕಾರ್ಯಕ್ರಮದಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿಯವರು ಸಹ ನನ್ನನ್ನು ಕಾಟಾಚಾರಕ್ಕೆ ಕರೆದಿದ್ದಾರೆ ಎಂದು ಆರೋಪಿಸಿದ್ದರು. ಜೊತೆಗೆ ಹಾರೋಹಳ್ಳಿ ತಾಲ್ಲೂಕು ರಚನೆಗೆ ಶ್ರಮಿಸಿದ್ದು ನಾನು, ಆದರೆ ಸಚಿವರು ಬಿಜೆಪಿ ಸರ್ಕಾರ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ; ಹಾರೋಹಳ್ಳಿ: ಒಂದೇ ವೇದಿಕೆಯಲ್ಲಿ ಅಶ್ವಥ್ ನಾರಾಯಣ್, ಅನಿತಾ ಕುಮಾರಸ್ವಾಮಿ ಜಟಾಪಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...