Homeಮುಖಪುಟಸಚಿವ ಅಶ್ವಥ್ ನಾರಾಯಣ್, ಡಾ.ಕೆ ಸುಧಾಕರ್‌ಗೆ ಪ್ರೋಟೋಕಾಲ್ ಪಾಠ ಮಾಡಿದ ಸಂಸದ ಡಿ.ಕೆ ಸುರೇಶ್

ಸಚಿವ ಅಶ್ವಥ್ ನಾರಾಯಣ್, ಡಾ.ಕೆ ಸುಧಾಕರ್‌ಗೆ ಪ್ರೋಟೋಕಾಲ್ ಪಾಠ ಮಾಡಿದ ಸಂಸದ ಡಿ.ಕೆ ಸುರೇಶ್

ಸಚಿವರಾಗಿರುವವರು, ಉಪ ಮುಖ್ಯಮಂತ್ರಿಗಳಾಗಿದ್ದವರು ನಿಮಗೆ ಪ್ರೋಟೋಕಾಲ್ ಏನೆಂದು ಹೇಳಿಕೊಡಬೇಕೆ ಎಂದು ಅಶ್ವಥ್ ನಾರಾಯಣ್ ವಿರುದ್ಧ ಕಿಡಿಕಾರಿದ್ದಾರೆ.

- Advertisement -
- Advertisement -

ರಾಮನಗರದ ನೂತನ ಜಿಲ್ಲಾಸ್ಪತ್ರೆ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕ ತಮಗೆ ಆಹ್ವಾನ ನೀಡದಿರುವುದರ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ಮತ್ತು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ರವರನ್ನು ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್‌ ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ರಾಮನಗರದಲ್ಲಿ ಜರುಗಿದೆ.

ರಾಮನಗರ ಉಸ್ತುವಾರಿ ಸಚಿವ ಡಾ. ಅಶ್ವತ್ಥನಾರಾಯಣ ಮತ್ತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಇಂದು ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ, ತಡೆದು ನಿಲ್ಲಿಸಿದ ಸಂಸದ ಡಿ ಕೆ ಸುರೇಶ್‌ “ಏಯ್ ಮಂತ್ರಿಗಳೆ ನಿಂತ್ರ್ಕಳ್ಳಿ, ನನಗೂ ಪ್ರೋಟೋಕಾಲ್ ಇದೆ. ನಿಮಗೊಬ್ಬರಿಗೆ ಅಲ್ಲ” ಎಂದು ಕಿಡಿಕಾರಿದ್ದಾರೆ.

ಯಾರ್ರಿ ಅವನು ಡೆಪ್ಯೂಟಿ ಕಮಿಷನರ್‌ ಕರೀರಿ ಇಲ್ಲಿ, ನಾನು ಈ ಕ್ಷೇತ್ರದ ಪ್ರತಿನಿಧಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತ ಸಚಿವ ಡಾ.ಕೆ ಸುಧಾಕರ್ ಕಾಲ್ಕೀಳಲು ಪ್ರಯತ್ನಿಸುತ್ತಿದ್ದಂತೆ, “ಏಯ್‌ ನಿಲ್ರಿ ಮಂತ್ರಿಗಳೇ, ನಿಂತುಕೊಳ್ಳಿ, ನಾನು ಈ ಕ್ಷೇತ್ರದ ಪ್ರತಿನಿಧಿ. ನನಗೂ ಪ್ರೋಟೋಕಾಲ್‌ ಇದೆ. ನಿಮ್ಮೊಬ್ಬರಿಗೆ ಅಲ್ಲ” ಎಂದು ಏರುಧ್ವನಿಯಲ್ಲಿ ತರಾಟೆಗೆ ತೆಗೆದುಕೊಂಡರು. ಆಗ ಮಧ್ಯಪ್ರವೇಶಿಸಿದ ಡಾ.ಅಶ್ವತ್ಥನಾರಾಯಣ್ ಕೂಗಡಾಬೇಕಿಲ್ಲ ಎಂದರು. ಆಗ ಡಿ.ಕೆ ಸುರೇಶ್ ಅಭಿಮಾನಿಗಳು ಜೋರಾಗಿ ಕೂಗಿ ಎಲ್ಲಾ ಬಿಜೆಪಿ ಕಾರ್ಯಕ್ರಮ ಮಾಡಿಕೊಂಡುಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಾ.ಅಶ್ವತ್ಥನಾರಾಯಣ್ ಪ್ರೋಟೋಕಾಲ್ ಅಂದ್ರೆ ಏನ್ರಿ? ನಿಮ್ಮನ್ನು ಬರಬೇಡಿ ಎಂದು ತಡೆದವರು ಯಾರು ಎಂದಾಗ, ಜಿಲ್ಲಾ ಉಸ್ತುವಾರಿ ಸಚಿವರಾಗಿರುವವರು, ಉಪ ಮುಖ್ಯಮಂತ್ರಿಗಳಾಗಿದ್ದವರು ನಿಮಗೆ ಪ್ರೋಟೋಕಾಲ್ ಏನೆಂದು ಹೇಳಿಕೊಡಬೇಕೆ? ಕಾರ್ಯಕ್ರಮದ ವಿವರಗಳನ್ನು ಮೊದಲೇ ನೀಡಬೇಕು ಅಲ್ಲವೆ? ರಾತ್ರಿ ಆಹ್ವಾನ ಪತ್ರಿಕೆ ಹಂಚಿ ಬೆಳಿಗ್ಗೆ ಉದ್ಘಾಟನೆ ಮಾಡುವುದು ಯಾವ ಪ್ರೊಟೋಕಾಲ್ ಎಂದು ಡಿ.ಕೆ ಸುರೇಶ್ ಪ್ರಶ್ನಿಸಿದರು.

ಎಲ್ಲವನ್ನು ನಿಗಧಿ ಮಾಡಿಯೇ ಮಾಡುತ್ತಿದ್ದೇವೆ ಎಂದು ಡಾ.ಅಶ್ವತ್ಥನಾರಾಯಣ್ ಸಮರ್ಥಿಸಿಕೊಳ್ಳಲು ಮುಂದಾದರು. ಆಗ ಮಾತನಾಡಿದ ಡಿ.ಕೆ ಸುರೇಶ್, ನೀವು ಯಾವಾಗ ನಿಗದಿ ಮಾಡಿದ್ದೀರಿ ನನಗೆ ಗೊತ್ತಿಲ್ಲ, ನನಗೆ ಮುಂಚೆನೇ ಆಹ್ವಾನ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಡಾ. ಸುಧಾಕರ್ ತುಟಿಬಿಚ್ಚದೆ ಸುಮ್ಮನಿದ್ದರು.

ಕಳೆದ ವಾರ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕು ಉದ್ಘಾಟನಾ ಕಾರ್ಯಕ್ರಮಕ್ಕೂ ಸಂಸದ ಡಿ.ಕೆ ಸುರೇಶ್‌ರವರನ್ನು ಆಹ್ವಾನಿಸಲಾಗಿರಲಿಲ್ಲ. ಹಾಗಾಗಿ ಅವರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು. ಅಲ್ಲದೇ ಆ ಕಾರ್ಯಕ್ರಮದಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿಯವರು ಸಹ ನನ್ನನ್ನು ಕಾಟಾಚಾರಕ್ಕೆ ಕರೆದಿದ್ದಾರೆ ಎಂದು ಆರೋಪಿಸಿದ್ದರು. ಜೊತೆಗೆ ಹಾರೋಹಳ್ಳಿ ತಾಲ್ಲೂಕು ರಚನೆಗೆ ಶ್ರಮಿಸಿದ್ದು ನಾನು, ಆದರೆ ಸಚಿವರು ಬಿಜೆಪಿ ಸರ್ಕಾರ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ; ಹಾರೋಹಳ್ಳಿ: ಒಂದೇ ವೇದಿಕೆಯಲ್ಲಿ ಅಶ್ವಥ್ ನಾರಾಯಣ್, ಅನಿತಾ ಕುಮಾರಸ್ವಾಮಿ ಜಟಾಪಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....