Homeಮುಖಪುಟರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

- Advertisement -
- Advertisement -

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಶನಿವಾರ (ಡಿಸೆಂಬರ್ 6) ಪತ್ರ ಬರೆದಿದ್ದಾರೆ.

ವಿಮಾನ ಪ್ರಯಾಣಿಕರ ಸುರಕ್ಷತೆಗಾಗಿ ತಂದ ನಿಯಮವನ್ನು ವಿಮಾನಯಾನ ಸಂಸ್ಥೆಗಳು ತಮ್ಮ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡವರು, ಜನರಿಗೆ ಅತಿ ಹೆಚ್ಚು ದರ ವಿಧಿಸಿದವು. ಆ ನಂತರ ನಿಯಮವೇ ವಿಫಲವಾದಾಗ ಅದನ್ನು ರದ್ದುಗೊಳಿಸಿ ಸರ್ಕಾರ ಮತ್ತು ವಿಮಾನಯಾನ ನಿಯಂತ್ರಣ ಪ್ರಾಧಿಕಾರಗಳು ತಮ್ಮ ದೊಡ್ಡ ತಪ್ಪನ್ನು ಮುಚ್ಚಿಹಾಕಿದವು ಎಂಬುದು ಜಾನ್ ಬ್ರಿಟ್ಟಾಸ್ ಅವರ ಮುಖ್ಯ ಆರೋಪವಾಗಿದೆ.

“ದೇಶದ ಅತಿ ದೊಡ್ಡ ವಿಮಾನಯಾನ ಕಂಪನಿಯಾದ ಇಂಡಿಗೋ (ಇದು ದೇಶೀಯ ಮಾರುಕಟ್ಟೆಯಲ್ಲಿ 63-65% ಪಾಲನ್ನು ಹೊಂದಿದೆ) ಇದ್ದಕ್ಕಿದ್ದಂತೆ ಸಾವಿರಾರು ವಿಮಾನಗಳನ್ನು ರದ್ದುಗೊಳಿಸಿದ್ದರಿಂದ ಅಥವಾ ತಡಮಾಡಿದ್ದರಿಂದ ದೇಶದಾದ್ಯಂತ ವಿಮಾನ ಪ್ರಯಾಣ ವ್ಯವಸ್ಥೆ ಸಂಪೂರ್ಣವಾಗಿ ತತ್ತರಿಸಿ ಹೋಯಿತು”

“ಒಂದೇ ಖಾಸಗಿ ಕಂಪನಿಗೆ ಇಷ್ಟೊಂದು ದೊಡ್ಡ ಮಾರುಕಟ್ಟೆ ಪ್ರಾಬಲ್ಯ (monopoly) ಇರುವುದರಿಂದ, ಆ ಒಂದು ಕಂಪನಿಯ ವೈಫಲ್ಯವೇ ಒಟ್ಟಾರೆಯಾಗಿ ದೇಶದ ವಿಮಾನಯಾನ ವ್ಯವಸ್ಥೆಯ ವೈಫಲ್ಯವಾಗಿ ಪರಿಣಮಿಸಿತು”

“ಇದರಿಂದ ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ನೆಲದಲ್ಲಿ ಮಲಗುವ ಪರಿಸ್ಥಿತಿ ಉಂಟಾಯಿತು. ತೀವ್ರ ಆನಾರೋಗ್ಯದಿಂದ ಇದ್ದ ತಮ್ಮ ಸಂಬಂಧಿಕರನ್ನು ತುರ್ತಾಗಿ ನೋಡಲು ಹೊರಟವರು, ಮೃತ ಸಂಬಂಧಿಕರ ಮುಖವನ್ನು ಕೊನೆಯದಾಗಿ ಕಾಣಲು ತೆರಳುತ್ತಿದ್ದವರು, ಆಪ್ತರ ಮದುವೆಯಲ್ಲಿ ಪಾಲ್ಗೊಳ್ಳಲು ಹೊರಟವರು, ಉದ್ಯೋಗ ಸಂದರ್ಶನಕ್ಕೆ ಹಾಜರಾಗಲು ಅಥವಾ ಕೆಲಸದ ಮೊದಲ ದಿನ ಕಚೇರಿಗೆ ತೆರಳಲು ಹೊರವರು ಸೇರಿದಂತೆ ಸಾವಿರಾರು ಜನರು ಸಂಕಷ್ಟಗಳನ್ನು ಎದುರಿಸಿದರು. ಹಾಗಾಗಿ, ವಿಮಾನಯಾನ ಬಿಕ್ಕಟ್ಟಿನಿಂದ ಉಂಟಾದ ಮಾನವೀಯ ನೋವು ಮತ್ತು ಆರ್ಥಿಕ ನಷ್ಟ ಎರಡೂ ಎಂದಿಗೂ ಕಂಡಿರದಷ್ಟು ದೊಡ್ಡದು ಮತ್ತು ಸಾಕ್ಷ್ಯಕ್ಕೆ ನಿಲುಕದ್ದು” ಎಂದು ಜಾನ್ ಬ್ರಿಟ್ಟಾಸ್ ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಈ ಒತ್ತಡವನ್ನು ಮೊದಲೇ ಊಹಿಸಬಹುದಾಗಿದ್ದರೂ, ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದ ನಂತರ, ಮೊದಲು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದ ಸುರಕ್ಷಾ ನಿಯಮಗಳನ್ನೇ ತುರ್ತಾಗಿ ದುರ್ಬಲಗೊಳಿಸಲಾಯಿತು ಅಥವಾ ಹಿಂತೆಗೆದುಕೊಳ್ಳಲಾಯಿತು. ಇದು ಗಂಭೀರವಾದ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ: ಪ್ರಯಾಣಿಕರ ಸುರಕ್ಷತೆಯನ್ನು ಕೇವಲ ವ್ಯಾಪಾರಿ ಲಾಭ ಮತ್ತು ಸೌಲಭ್ಯಕ್ಕಾಗಿ ತ್ಯಾಗ ಮಾಡಲಾಯಿತೇ? ಎಂದು ಬ್ರಿಟ್ಟಾಸ್ ಪ್ರಶ್ನಿಸಿದ್ದಾರೆ.

ವಿಮಾನಯಾನವನ್ನು ನೋಡಿಕೊಳ್ಳುವ ಸರ್ಕಾರದ ನಿಯಂತ್ರಣ ಸಂಸ್ಥೆಗಳು ತಮ್ಮ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ. ಎರಡು ದೊಡ್ಡ ವಿಮಾನ ಕಂಪನಿಗಳು ಬಹುತೇಕ ಎಲ್ಲಾ ವಿಮಾನ ಸೇವೆಗಳನ್ನು ತಮ್ಮ ಕಬಳಿಕೆಯಲ್ಲಿ ಇಟ್ಟುಕೊಂಡಿವೆ, ಇದರಿಂದ ಇತರ ಕಂಪನಿಗಳಿಗೆ ಸ್ಪರ್ಧೆ ಮಾಡುವ ಅವಕಾಶ ಕಡಿಮೆಯಾಗುತ್ತಿದೆ.

ಅದೇ ಸಮಯದಲ್ಲಿ, ಹಲವಾರು ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗಿ ಕಂಪನಿಗಳಿಗೆ ವಹಿಸಲಾಗಿ, ಅವುಗಳನ್ನು ವ್ಯವಹಾರದಂತೆ ನಡೆಸಲಾಗುತ್ತಿದೆ. ಇದರ ಪರಿಣಾಮವಾಗಿ ಹೊಸ ವಿಮಾನ ನಿಲ್ದಾಣಗಳು ಅಥವಾ ಚಿಕ್ಕ ಪ್ರಾದೇಶಿಕ ವಿಮಾನ ನಿಲ್ದಾಣಗಳಿಗೆ ಬೆಳೆಯಲು ಅವಕಾಶ ಸಿಗುತ್ತಿಲ್ಲ.

“ಇದಲ್ಲದೆ, ವಿಮಾನಗಳ ಸುರಕ್ಷತಾ ನಿಯಮಗಳನ್ನು ಕೂಡ ಸಡಿಲಗೊಳಿಸಲಾಗುತ್ತಿದೆ. ವಿಮಾನಯಾನ ಕಂಪನಿಗಳು ಜನರಿಂದ ಹೆಚ್ಚು ಹಣ ವಸೂಲಿ ಮಾಡಿ ಲಾಭ ಪಡೆಯುತ್ತಿದ್ದರೂ, ಸರ್ಕಾರ ಇದನ್ನು ತಡೆಯಲು ಕ್ರಮಕೈಗೊಳ್ಳುತ್ತಿಲ್ಲ. ಸರ್ಕಾರಕ್ಕೆ ಅಧಿಕಾರವೂ ಇದೆ, ಸಂಸತ್ ಸಮಿತಿಯ ಸಲಹೆಯೂ ಇದೆ. ಆದರೂ, ಅವರು ಸರಿಯಾದ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ” ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಆರೋಪಿಸಿದ್ದಾರೆ.

“ವಿಮಾನಯಾನ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳು ತುಂಬಾ ಗಂಭೀರವಾದದ್ದು, ಅದನ್ನು ಆಂತರಿಕ ಪರಿಶೀಲನೆಗಳು ಅಥವಾ ಸಲಹಾ ಪತ್ರಗಳ ಮೂಲಕ ಸರಿಪಡಿಸುವುದು ಸಾಧ್ಯವಿಲ್ಲ. ಸರ್ಕಾರದ ಮೇಲಿನ ಜನರ ನಂಬಿಕೆ ಉಳಿಯಬೇಕಾದರೆ, ಸಂಪೂರ್ಣವಾಗಿ ಸ್ವತಂತ್ರ, ಪಾರದರ್ಶಕ ಮತ್ತು ನಿಗದಿತ ಅವಧಿಯಲ್ಲಿ ಮುಗಿಯುವ ದೊಡ್ಡ ತನಿಖೆಯನ್ನು ಆರಂಭಿಸಬೇಕು. ಈ ತನಿಖೆಗೆ ನಿಯಂತ್ರಣ ಇಲಾಖೆಯ ದಾಖಲೆಗಳು, ವಿಮಾನಯಾಣ ಕಂಪನಿಗಳು ಎಷ್ಟು ಸಿದ್ಧವಾಗಿದ್ದವು ಎಂಬ ಮಾಹಿತಿಗಳು, ಹಾಗೂ ಟಿಕೆಟ್ ದರ ಏರಿಕೆಯ ವಿವರಗಳು ಎಲ್ಲವೂ ಲಭ್ಯವಾಗಬೇಕು. ಈ ಎಲ್ಲಾ ವಿಷಯಗಳನ್ನು ಸಂಪೂರ್ಣವಾಗಿ ಪರಿಶೀಲಿಸಲು ಒಂದು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಥವಾ ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಬೇಕು. ಜೊತೆಗೆ, ದೊಡ್ಡ ಪ್ರಮಾಣದ ವಿಳಂಬಗಳು ಅಥವಾ ಸೇವಾ ವ್ಯತ್ಯಯಗಳು ಸಂಭವಿಸಿದಾಗ ಪ್ರಯಾಣಿಕರಿಗೆ ಸ್ವಯಂ ಪರಿಹಾರ, ನ್ಯಾಯಯುತ ಸೇವೆ ಮತ್ತು ಪಾರದರ್ಶಕ ಟಿಕೆಟ್ ದರ ದೊರಕುವಂತೆ ಮಾಡಲು ‘ಪ್ರಯಾಣಿಕರ ಹಕ್ಕುಗಳ ಕಾಯ್ದೆ’ಯನ್ನು ತಕ್ಷಣ ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಂಸದ ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...