Homeಮುಖಪುಟರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

- Advertisement -
- Advertisement -

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಶನಿವಾರ (ಡಿಸೆಂಬರ್ 6) ಪತ್ರ ಬರೆದಿದ್ದಾರೆ.

ವಿಮಾನ ಪ್ರಯಾಣಿಕರ ಸುರಕ್ಷತೆಗಾಗಿ ತಂದ ನಿಯಮವನ್ನು ವಿಮಾನಯಾನ ಸಂಸ್ಥೆಗಳು ತಮ್ಮ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡವರು, ಜನರಿಗೆ ಅತಿ ಹೆಚ್ಚು ದರ ವಿಧಿಸಿದವು. ಆ ನಂತರ ನಿಯಮವೇ ವಿಫಲವಾದಾಗ ಅದನ್ನು ರದ್ದುಗೊಳಿಸಿ ಸರ್ಕಾರ ಮತ್ತು ವಿಮಾನಯಾನ ನಿಯಂತ್ರಣ ಪ್ರಾಧಿಕಾರಗಳು ತಮ್ಮ ದೊಡ್ಡ ತಪ್ಪನ್ನು ಮುಚ್ಚಿಹಾಕಿದವು ಎಂಬುದು ಜಾನ್ ಬ್ರಿಟ್ಟಾಸ್ ಅವರ ಮುಖ್ಯ ಆರೋಪವಾಗಿದೆ.

“ದೇಶದ ಅತಿ ದೊಡ್ಡ ವಿಮಾನಯಾನ ಕಂಪನಿಯಾದ ಇಂಡಿಗೋ (ಇದು ದೇಶೀಯ ಮಾರುಕಟ್ಟೆಯಲ್ಲಿ 63-65% ಪಾಲನ್ನು ಹೊಂದಿದೆ) ಇದ್ದಕ್ಕಿದ್ದಂತೆ ಸಾವಿರಾರು ವಿಮಾನಗಳನ್ನು ರದ್ದುಗೊಳಿಸಿದ್ದರಿಂದ ಅಥವಾ ತಡಮಾಡಿದ್ದರಿಂದ ದೇಶದಾದ್ಯಂತ ವಿಮಾನ ಪ್ರಯಾಣ ವ್ಯವಸ್ಥೆ ಸಂಪೂರ್ಣವಾಗಿ ತತ್ತರಿಸಿ ಹೋಯಿತು”

“ಒಂದೇ ಖಾಸಗಿ ಕಂಪನಿಗೆ ಇಷ್ಟೊಂದು ದೊಡ್ಡ ಮಾರುಕಟ್ಟೆ ಪ್ರಾಬಲ್ಯ (monopoly) ಇರುವುದರಿಂದ, ಆ ಒಂದು ಕಂಪನಿಯ ವೈಫಲ್ಯವೇ ಒಟ್ಟಾರೆಯಾಗಿ ದೇಶದ ವಿಮಾನಯಾನ ವ್ಯವಸ್ಥೆಯ ವೈಫಲ್ಯವಾಗಿ ಪರಿಣಮಿಸಿತು”

“ಇದರಿಂದ ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ನೆಲದಲ್ಲಿ ಮಲಗುವ ಪರಿಸ್ಥಿತಿ ಉಂಟಾಯಿತು. ತೀವ್ರ ಆನಾರೋಗ್ಯದಿಂದ ಇದ್ದ ತಮ್ಮ ಸಂಬಂಧಿಕರನ್ನು ತುರ್ತಾಗಿ ನೋಡಲು ಹೊರಟವರು, ಮೃತ ಸಂಬಂಧಿಕರ ಮುಖವನ್ನು ಕೊನೆಯದಾಗಿ ಕಾಣಲು ತೆರಳುತ್ತಿದ್ದವರು, ಆಪ್ತರ ಮದುವೆಯಲ್ಲಿ ಪಾಲ್ಗೊಳ್ಳಲು ಹೊರಟವರು, ಉದ್ಯೋಗ ಸಂದರ್ಶನಕ್ಕೆ ಹಾಜರಾಗಲು ಅಥವಾ ಕೆಲಸದ ಮೊದಲ ದಿನ ಕಚೇರಿಗೆ ತೆರಳಲು ಹೊರವರು ಸೇರಿದಂತೆ ಸಾವಿರಾರು ಜನರು ಸಂಕಷ್ಟಗಳನ್ನು ಎದುರಿಸಿದರು. ಹಾಗಾಗಿ, ವಿಮಾನಯಾನ ಬಿಕ್ಕಟ್ಟಿನಿಂದ ಉಂಟಾದ ಮಾನವೀಯ ನೋವು ಮತ್ತು ಆರ್ಥಿಕ ನಷ್ಟ ಎರಡೂ ಎಂದಿಗೂ ಕಂಡಿರದಷ್ಟು ದೊಡ್ಡದು ಮತ್ತು ಸಾಕ್ಷ್ಯಕ್ಕೆ ನಿಲುಕದ್ದು” ಎಂದು ಜಾನ್ ಬ್ರಿಟ್ಟಾಸ್ ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಈ ಒತ್ತಡವನ್ನು ಮೊದಲೇ ಊಹಿಸಬಹುದಾಗಿದ್ದರೂ, ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದ ನಂತರ, ಮೊದಲು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದ ಸುರಕ್ಷಾ ನಿಯಮಗಳನ್ನೇ ತುರ್ತಾಗಿ ದುರ್ಬಲಗೊಳಿಸಲಾಯಿತು ಅಥವಾ ಹಿಂತೆಗೆದುಕೊಳ್ಳಲಾಯಿತು. ಇದು ಗಂಭೀರವಾದ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ: ಪ್ರಯಾಣಿಕರ ಸುರಕ್ಷತೆಯನ್ನು ಕೇವಲ ವ್ಯಾಪಾರಿ ಲಾಭ ಮತ್ತು ಸೌಲಭ್ಯಕ್ಕಾಗಿ ತ್ಯಾಗ ಮಾಡಲಾಯಿತೇ? ಎಂದು ಬ್ರಿಟ್ಟಾಸ್ ಪ್ರಶ್ನಿಸಿದ್ದಾರೆ.

ವಿಮಾನಯಾನವನ್ನು ನೋಡಿಕೊಳ್ಳುವ ಸರ್ಕಾರದ ನಿಯಂತ್ರಣ ಸಂಸ್ಥೆಗಳು ತಮ್ಮ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ. ಎರಡು ದೊಡ್ಡ ವಿಮಾನ ಕಂಪನಿಗಳು ಬಹುತೇಕ ಎಲ್ಲಾ ವಿಮಾನ ಸೇವೆಗಳನ್ನು ತಮ್ಮ ಕಬಳಿಕೆಯಲ್ಲಿ ಇಟ್ಟುಕೊಂಡಿವೆ, ಇದರಿಂದ ಇತರ ಕಂಪನಿಗಳಿಗೆ ಸ್ಪರ್ಧೆ ಮಾಡುವ ಅವಕಾಶ ಕಡಿಮೆಯಾಗುತ್ತಿದೆ.

ಅದೇ ಸಮಯದಲ್ಲಿ, ಹಲವಾರು ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗಿ ಕಂಪನಿಗಳಿಗೆ ವಹಿಸಲಾಗಿ, ಅವುಗಳನ್ನು ವ್ಯವಹಾರದಂತೆ ನಡೆಸಲಾಗುತ್ತಿದೆ. ಇದರ ಪರಿಣಾಮವಾಗಿ ಹೊಸ ವಿಮಾನ ನಿಲ್ದಾಣಗಳು ಅಥವಾ ಚಿಕ್ಕ ಪ್ರಾದೇಶಿಕ ವಿಮಾನ ನಿಲ್ದಾಣಗಳಿಗೆ ಬೆಳೆಯಲು ಅವಕಾಶ ಸಿಗುತ್ತಿಲ್ಲ.

“ಇದಲ್ಲದೆ, ವಿಮಾನಗಳ ಸುರಕ್ಷತಾ ನಿಯಮಗಳನ್ನು ಕೂಡ ಸಡಿಲಗೊಳಿಸಲಾಗುತ್ತಿದೆ. ವಿಮಾನಯಾನ ಕಂಪನಿಗಳು ಜನರಿಂದ ಹೆಚ್ಚು ಹಣ ವಸೂಲಿ ಮಾಡಿ ಲಾಭ ಪಡೆಯುತ್ತಿದ್ದರೂ, ಸರ್ಕಾರ ಇದನ್ನು ತಡೆಯಲು ಕ್ರಮಕೈಗೊಳ್ಳುತ್ತಿಲ್ಲ. ಸರ್ಕಾರಕ್ಕೆ ಅಧಿಕಾರವೂ ಇದೆ, ಸಂಸತ್ ಸಮಿತಿಯ ಸಲಹೆಯೂ ಇದೆ. ಆದರೂ, ಅವರು ಸರಿಯಾದ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ” ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಆರೋಪಿಸಿದ್ದಾರೆ.

“ವಿಮಾನಯಾನ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳು ತುಂಬಾ ಗಂಭೀರವಾದದ್ದು, ಅದನ್ನು ಆಂತರಿಕ ಪರಿಶೀಲನೆಗಳು ಅಥವಾ ಸಲಹಾ ಪತ್ರಗಳ ಮೂಲಕ ಸರಿಪಡಿಸುವುದು ಸಾಧ್ಯವಿಲ್ಲ. ಸರ್ಕಾರದ ಮೇಲಿನ ಜನರ ನಂಬಿಕೆ ಉಳಿಯಬೇಕಾದರೆ, ಸಂಪೂರ್ಣವಾಗಿ ಸ್ವತಂತ್ರ, ಪಾರದರ್ಶಕ ಮತ್ತು ನಿಗದಿತ ಅವಧಿಯಲ್ಲಿ ಮುಗಿಯುವ ದೊಡ್ಡ ತನಿಖೆಯನ್ನು ಆರಂಭಿಸಬೇಕು. ಈ ತನಿಖೆಗೆ ನಿಯಂತ್ರಣ ಇಲಾಖೆಯ ದಾಖಲೆಗಳು, ವಿಮಾನಯಾಣ ಕಂಪನಿಗಳು ಎಷ್ಟು ಸಿದ್ಧವಾಗಿದ್ದವು ಎಂಬ ಮಾಹಿತಿಗಳು, ಹಾಗೂ ಟಿಕೆಟ್ ದರ ಏರಿಕೆಯ ವಿವರಗಳು ಎಲ್ಲವೂ ಲಭ್ಯವಾಗಬೇಕು. ಈ ಎಲ್ಲಾ ವಿಷಯಗಳನ್ನು ಸಂಪೂರ್ಣವಾಗಿ ಪರಿಶೀಲಿಸಲು ಒಂದು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಥವಾ ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಬೇಕು. ಜೊತೆಗೆ, ದೊಡ್ಡ ಪ್ರಮಾಣದ ವಿಳಂಬಗಳು ಅಥವಾ ಸೇವಾ ವ್ಯತ್ಯಯಗಳು ಸಂಭವಿಸಿದಾಗ ಪ್ರಯಾಣಿಕರಿಗೆ ಸ್ವಯಂ ಪರಿಹಾರ, ನ್ಯಾಯಯುತ ಸೇವೆ ಮತ್ತು ಪಾರದರ್ಶಕ ಟಿಕೆಟ್ ದರ ದೊರಕುವಂತೆ ಮಾಡಲು ‘ಪ್ರಯಾಣಿಕರ ಹಕ್ಕುಗಳ ಕಾಯ್ದೆ’ಯನ್ನು ತಕ್ಷಣ ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಂಸದ ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್

ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರು ವಾರ್ಷಿಕ ಭಾಷಣ ಮಾಡುವ ಸಂಪ್ರದಾಯವನ್ನು ರದ್ದುಗೊಳಿಸುವ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌ ರವಿ ನಡುವೆ ಜಟಾಪಟಿ ನಡೆದು,...

ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ

ದನ ಕಳ್ಳತನದ ಶಂಕೆಯ ಮೇಲೆ ಗುಂಪೊಂದು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ (ಜ.19) ಅಸ್ಸಾಂನ ಕೊಕ್ರಜಾರ್‌ನಲ್ಲಿ ನಡೆದಿದೆ. ಬಲಿಪಶುಗಳು, ರಸ್ತೆ ನಿರ್ಮಾಣ ಯೋಜನೆಯೊಮದರಲ್ಲಿ...

ಕರ್ನಾಟಕ: ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಮೇಲಿನ ಅಪರಾಧಗಳು ಶೇ. 37.7 ರಷ್ಟು ಏರಿಕೆ; ಬೆಂಗಳೂರಿನದೇ ಅಗ್ರಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ, ಈ ಸಮುದಾಯಗಳ ಮೇಲಿನ ಅಪರಾಧಗಳು ಕಳೆದ ಐದು ವರ್ಷಗಳಲ್ಲಿ ಶೇ. 37.74 ರಷ್ಟು ಹೆಚ್ಚಾಗಿದ್ದು,...

‘ನಿತಿನ್ ನಬಿನ್ ನನ್ನ ಬಾಸ್, ನಾನು ಕೆಲಸಗಾರ..’; ಬಿಜೆಪಿ ನೂತನ ಮುಖ್ಯಸ್ಥರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ವಯಸ್ಸಿನ ನಿತಿನ್ ನಬಿನ್ ಅವರನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಪಕ್ಷದ ಪರಂಪರೆಯನ್ನು ಮುಂದುವರಿಸುವ 'ಸಹಸ್ರಮಾನದ' ವ್ಯಕ್ತಿ ಎಂದು ಕರೆದರು. "ಪಕ್ಷದ...

ವಿಧಾನಸಭೆ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಸಾಲುಗಳು ಕೈಬಿಟ್ಟ ಕೇರಳ ರಾಜ್ಯಪಾಲ : ಸಿಎಂ ಪಿಣರಾಯಿ ವಿಜಯನ್ ಆರೋಪ

ತಮಿಳುನಾಡಿನ ಬಳಿಕ ಕೇರಳ ವಿಧಾನಸಭೆಯಲ್ಲೂ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮಂಗಳವಾರ (ಜ.20) ಜಟಾಪಟಿ ನಡೆದಿದೆ. ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣದಲ್ಲಿನ ಕೇಂದ್ರ ಸರ್ಕಾರವನ್ನು ಟೀಕಿಸುವ ಕೆಲ ಸಾಲುಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್...

ಶಬರಿಮಲೆ ಚಿನ್ನ ಕಳವು ಪ್ರಕರಣ: ಕೇರಳ, ಕರ್ನಾಟಕ, ತಮಿಳುನಾಡಿನ 21 ಸ್ಥಳಗಳಲ್ಲಿ ಇಡಿ ದಾಳಿ

ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ED) ಮಂಗಳವಾರ ಮೂರು ರಾಜ್ಯಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ...

ಡಿಜಿಪಿ ರಾಮಚಂದ್ರ ರಾವ್ ವಿಡಿಯೊ ಪ್ರಕರಣ: ‘ಯಾವುದೇ ಇಲಾಖೆಯೂ ಇಂತಹ ಘಟನೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’: ಡಾ. ಜಿ. ಪರಮೇಶ್ವರ್

ಬೆಂಗಳೂರು: ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯೊಂದಿಗೆ ಅಸಭ್ಯ ವರ್ತನೆ ನಡೆಸಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ, ಪಕ್ಷ ಮುನ್ನಡೆಸುವ ಜವಾಬ್ದಾರಿ ವಹಿಸಿಕೊಂಡ ಅತ್ಯಂತ ಕಿರಿಯ ನಾಯಕ 

ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರಾಗಿ 45 ವರ್ಷದ ನಿತಿನ್ ನಬಿನ್ 2026 ಜನವರಿ 20ರ, ಮಂಗಳವಾರ ಔಪಚಾರಿಕವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಸ್ತುತ ಕೇಂದ್ರ ಸಚಿವರಾಗಿರುವ ಜೆ.ಪಿ. ನಡ್ಡಾ ಅವರ ಸ್ಥಾನದಲ್ಲಿ...