Homeಮುಖಪುಟರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

- Advertisement -
- Advertisement -

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಶನಿವಾರ (ಡಿಸೆಂಬರ್ 6) ಪತ್ರ ಬರೆದಿದ್ದಾರೆ.

ವಿಮಾನ ಪ್ರಯಾಣಿಕರ ಸುರಕ್ಷತೆಗಾಗಿ ತಂದ ನಿಯಮವನ್ನು ವಿಮಾನಯಾನ ಸಂಸ್ಥೆಗಳು ತಮ್ಮ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡವರು, ಜನರಿಗೆ ಅತಿ ಹೆಚ್ಚು ದರ ವಿಧಿಸಿದವು. ಆ ನಂತರ ನಿಯಮವೇ ವಿಫಲವಾದಾಗ ಅದನ್ನು ರದ್ದುಗೊಳಿಸಿ ಸರ್ಕಾರ ಮತ್ತು ವಿಮಾನಯಾನ ನಿಯಂತ್ರಣ ಪ್ರಾಧಿಕಾರಗಳು ತಮ್ಮ ದೊಡ್ಡ ತಪ್ಪನ್ನು ಮುಚ್ಚಿಹಾಕಿದವು ಎಂಬುದು ಜಾನ್ ಬ್ರಿಟ್ಟಾಸ್ ಅವರ ಮುಖ್ಯ ಆರೋಪವಾಗಿದೆ.

“ದೇಶದ ಅತಿ ದೊಡ್ಡ ವಿಮಾನಯಾನ ಕಂಪನಿಯಾದ ಇಂಡಿಗೋ (ಇದು ದೇಶೀಯ ಮಾರುಕಟ್ಟೆಯಲ್ಲಿ 63-65% ಪಾಲನ್ನು ಹೊಂದಿದೆ) ಇದ್ದಕ್ಕಿದ್ದಂತೆ ಸಾವಿರಾರು ವಿಮಾನಗಳನ್ನು ರದ್ದುಗೊಳಿಸಿದ್ದರಿಂದ ಅಥವಾ ತಡಮಾಡಿದ್ದರಿಂದ ದೇಶದಾದ್ಯಂತ ವಿಮಾನ ಪ್ರಯಾಣ ವ್ಯವಸ್ಥೆ ಸಂಪೂರ್ಣವಾಗಿ ತತ್ತರಿಸಿ ಹೋಯಿತು”

“ಒಂದೇ ಖಾಸಗಿ ಕಂಪನಿಗೆ ಇಷ್ಟೊಂದು ದೊಡ್ಡ ಮಾರುಕಟ್ಟೆ ಪ್ರಾಬಲ್ಯ (monopoly) ಇರುವುದರಿಂದ, ಆ ಒಂದು ಕಂಪನಿಯ ವೈಫಲ್ಯವೇ ಒಟ್ಟಾರೆಯಾಗಿ ದೇಶದ ವಿಮಾನಯಾನ ವ್ಯವಸ್ಥೆಯ ವೈಫಲ್ಯವಾಗಿ ಪರಿಣಮಿಸಿತು”

“ಇದರಿಂದ ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ನೆಲದಲ್ಲಿ ಮಲಗುವ ಪರಿಸ್ಥಿತಿ ಉಂಟಾಯಿತು. ತೀವ್ರ ಆನಾರೋಗ್ಯದಿಂದ ಇದ್ದ ತಮ್ಮ ಸಂಬಂಧಿಕರನ್ನು ತುರ್ತಾಗಿ ನೋಡಲು ಹೊರಟವರು, ಮೃತ ಸಂಬಂಧಿಕರ ಮುಖವನ್ನು ಕೊನೆಯದಾಗಿ ಕಾಣಲು ತೆರಳುತ್ತಿದ್ದವರು, ಆಪ್ತರ ಮದುವೆಯಲ್ಲಿ ಪಾಲ್ಗೊಳ್ಳಲು ಹೊರಟವರು, ಉದ್ಯೋಗ ಸಂದರ್ಶನಕ್ಕೆ ಹಾಜರಾಗಲು ಅಥವಾ ಕೆಲಸದ ಮೊದಲ ದಿನ ಕಚೇರಿಗೆ ತೆರಳಲು ಹೊರವರು ಸೇರಿದಂತೆ ಸಾವಿರಾರು ಜನರು ಸಂಕಷ್ಟಗಳನ್ನು ಎದುರಿಸಿದರು. ಹಾಗಾಗಿ, ವಿಮಾನಯಾನ ಬಿಕ್ಕಟ್ಟಿನಿಂದ ಉಂಟಾದ ಮಾನವೀಯ ನೋವು ಮತ್ತು ಆರ್ಥಿಕ ನಷ್ಟ ಎರಡೂ ಎಂದಿಗೂ ಕಂಡಿರದಷ್ಟು ದೊಡ್ಡದು ಮತ್ತು ಸಾಕ್ಷ್ಯಕ್ಕೆ ನಿಲುಕದ್ದು” ಎಂದು ಜಾನ್ ಬ್ರಿಟ್ಟಾಸ್ ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಈ ಒತ್ತಡವನ್ನು ಮೊದಲೇ ಊಹಿಸಬಹುದಾಗಿದ್ದರೂ, ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದ ನಂತರ, ಮೊದಲು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದ ಸುರಕ್ಷಾ ನಿಯಮಗಳನ್ನೇ ತುರ್ತಾಗಿ ದುರ್ಬಲಗೊಳಿಸಲಾಯಿತು ಅಥವಾ ಹಿಂತೆಗೆದುಕೊಳ್ಳಲಾಯಿತು. ಇದು ಗಂಭೀರವಾದ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ: ಪ್ರಯಾಣಿಕರ ಸುರಕ್ಷತೆಯನ್ನು ಕೇವಲ ವ್ಯಾಪಾರಿ ಲಾಭ ಮತ್ತು ಸೌಲಭ್ಯಕ್ಕಾಗಿ ತ್ಯಾಗ ಮಾಡಲಾಯಿತೇ? ಎಂದು ಬ್ರಿಟ್ಟಾಸ್ ಪ್ರಶ್ನಿಸಿದ್ದಾರೆ.

ವಿಮಾನಯಾನವನ್ನು ನೋಡಿಕೊಳ್ಳುವ ಸರ್ಕಾರದ ನಿಯಂತ್ರಣ ಸಂಸ್ಥೆಗಳು ತಮ್ಮ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ. ಎರಡು ದೊಡ್ಡ ವಿಮಾನ ಕಂಪನಿಗಳು ಬಹುತೇಕ ಎಲ್ಲಾ ವಿಮಾನ ಸೇವೆಗಳನ್ನು ತಮ್ಮ ಕಬಳಿಕೆಯಲ್ಲಿ ಇಟ್ಟುಕೊಂಡಿವೆ, ಇದರಿಂದ ಇತರ ಕಂಪನಿಗಳಿಗೆ ಸ್ಪರ್ಧೆ ಮಾಡುವ ಅವಕಾಶ ಕಡಿಮೆಯಾಗುತ್ತಿದೆ.

ಅದೇ ಸಮಯದಲ್ಲಿ, ಹಲವಾರು ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗಿ ಕಂಪನಿಗಳಿಗೆ ವಹಿಸಲಾಗಿ, ಅವುಗಳನ್ನು ವ್ಯವಹಾರದಂತೆ ನಡೆಸಲಾಗುತ್ತಿದೆ. ಇದರ ಪರಿಣಾಮವಾಗಿ ಹೊಸ ವಿಮಾನ ನಿಲ್ದಾಣಗಳು ಅಥವಾ ಚಿಕ್ಕ ಪ್ರಾದೇಶಿಕ ವಿಮಾನ ನಿಲ್ದಾಣಗಳಿಗೆ ಬೆಳೆಯಲು ಅವಕಾಶ ಸಿಗುತ್ತಿಲ್ಲ.

“ಇದಲ್ಲದೆ, ವಿಮಾನಗಳ ಸುರಕ್ಷತಾ ನಿಯಮಗಳನ್ನು ಕೂಡ ಸಡಿಲಗೊಳಿಸಲಾಗುತ್ತಿದೆ. ವಿಮಾನಯಾನ ಕಂಪನಿಗಳು ಜನರಿಂದ ಹೆಚ್ಚು ಹಣ ವಸೂಲಿ ಮಾಡಿ ಲಾಭ ಪಡೆಯುತ್ತಿದ್ದರೂ, ಸರ್ಕಾರ ಇದನ್ನು ತಡೆಯಲು ಕ್ರಮಕೈಗೊಳ್ಳುತ್ತಿಲ್ಲ. ಸರ್ಕಾರಕ್ಕೆ ಅಧಿಕಾರವೂ ಇದೆ, ಸಂಸತ್ ಸಮಿತಿಯ ಸಲಹೆಯೂ ಇದೆ. ಆದರೂ, ಅವರು ಸರಿಯಾದ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ” ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಆರೋಪಿಸಿದ್ದಾರೆ.

“ವಿಮಾನಯಾನ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳು ತುಂಬಾ ಗಂಭೀರವಾದದ್ದು, ಅದನ್ನು ಆಂತರಿಕ ಪರಿಶೀಲನೆಗಳು ಅಥವಾ ಸಲಹಾ ಪತ್ರಗಳ ಮೂಲಕ ಸರಿಪಡಿಸುವುದು ಸಾಧ್ಯವಿಲ್ಲ. ಸರ್ಕಾರದ ಮೇಲಿನ ಜನರ ನಂಬಿಕೆ ಉಳಿಯಬೇಕಾದರೆ, ಸಂಪೂರ್ಣವಾಗಿ ಸ್ವತಂತ್ರ, ಪಾರದರ್ಶಕ ಮತ್ತು ನಿಗದಿತ ಅವಧಿಯಲ್ಲಿ ಮುಗಿಯುವ ದೊಡ್ಡ ತನಿಖೆಯನ್ನು ಆರಂಭಿಸಬೇಕು. ಈ ತನಿಖೆಗೆ ನಿಯಂತ್ರಣ ಇಲಾಖೆಯ ದಾಖಲೆಗಳು, ವಿಮಾನಯಾಣ ಕಂಪನಿಗಳು ಎಷ್ಟು ಸಿದ್ಧವಾಗಿದ್ದವು ಎಂಬ ಮಾಹಿತಿಗಳು, ಹಾಗೂ ಟಿಕೆಟ್ ದರ ಏರಿಕೆಯ ವಿವರಗಳು ಎಲ್ಲವೂ ಲಭ್ಯವಾಗಬೇಕು. ಈ ಎಲ್ಲಾ ವಿಷಯಗಳನ್ನು ಸಂಪೂರ್ಣವಾಗಿ ಪರಿಶೀಲಿಸಲು ಒಂದು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಥವಾ ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಬೇಕು. ಜೊತೆಗೆ, ದೊಡ್ಡ ಪ್ರಮಾಣದ ವಿಳಂಬಗಳು ಅಥವಾ ಸೇವಾ ವ್ಯತ್ಯಯಗಳು ಸಂಭವಿಸಿದಾಗ ಪ್ರಯಾಣಿಕರಿಗೆ ಸ್ವಯಂ ಪರಿಹಾರ, ನ್ಯಾಯಯುತ ಸೇವೆ ಮತ್ತು ಪಾರದರ್ಶಕ ಟಿಕೆಟ್ ದರ ದೊರಕುವಂತೆ ಮಾಡಲು ‘ಪ್ರಯಾಣಿಕರ ಹಕ್ಕುಗಳ ಕಾಯ್ದೆ’ಯನ್ನು ತಕ್ಷಣ ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಂಸದ ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಸ್ಮಾನ್ ಹಾದಿ ಹತ್ಯೆ : ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದ ಬಾಂಗ್ಲಾ ಪೊಲೀಸರು

ಬಾಂಗ್ಲಾದೇಶದ ರಾಜಕೀಯ ಕಾರ್ಯಕರ್ತ ಉಸ್ಮಾನ್ ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪಲಾಯನ ಮಾಡಿದ್ದಾರೆ ಎಂದು ಢಾಕಾ ಮೆಟ್ರೋಪಾಲಿಟನ್ ಪೊಲೀಸರು (ಡಿಎಂಪಿ) ತಿಳಿಸಿದ್ದಾರೆ ಎಂದು ದಿ ಡೈಲಿ...

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿಎಂ ಸಿದ್ದರಾಮಯ್ಯ

ನರೇಗಾ ಯೋಜನೆಗೆ ಮರುನಾಮಕರಣದ ಮೂಲಕ ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿಯ ಭಾರತ್...

ವಿದ್ಯಾರ್ಥಿಗಳ ಪ್ರತಿಭಟನೆ: ರಾಜಕೀಯ ನಾಯಕರನ್ನು ಗೃಹಬಂಧನದಲ್ಲಿ ಇರಿಸಿದ ಜಮ್ಮು-ಕಾಶ್ಮೀರ ಪೊಲೀಸರು

ಸರ್ಕಾರ ಮೀಸಲಾತಿ ನೀತಿಯನ್ನು ತರ್ಕಬದ್ಧಗೊಳಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆ & ಕೆ ವಿದ್ಯಾರ್ಥಿಗಳು ಪ್ರತಿಭಟನೆ ಘೋಷಿಸುತ್ತಿದ್ದಂತೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶನಿವಾರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸಂಸದ ಮತ್ತು ಪೀಪಲ್ಸ್...

ಆರ್‌ಎಸ್‌ಎಸ್‌-ಬಿಜೆಪಿ ಸಂಘಟನಾ ಶಕ್ತಿ ಶ್ಲಾಘಿಸಿದ ದಿಗ್ವಿಜಯ ಸಿಂಗ್‌ಗೆ ಶಶಿ ತರೂರ್‌ ಬೆಂಬಲ : ಪವನ್‌ ಖೇರಾ ತಿರುಗೇಟು

ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಆರ್‌ಎಸ್‌ಎಸ್‌ನ ಸಂಘಟನಾ ಶಕ್ತಿಯನ್ನು ಶ್ಲಾಘಿಸಿ ಹೇಳಿಕೆ ನೀಡಿರುವುದು ಪಕ್ಷದೊಳಗೆ ಮುಜುಗರ, ಅಸಮಾಧಾನ ಮತ್ತು ಅಪಸ್ವರಕ್ಕೆ ಕಾರಣವಾಗಿದೆ ಎಂಬ ಚರ್ಚೆಗಳು ನಡೆಯುತ್ತಿವೆ. ಆದರೆ, ಸಿಂಗ್ ಹೇಳಿಕೆಯನ್ನು ಕಾಂಗ್ರೆಸ್‌...

ಕೋಗಿಲು ಬಳಿ ಒತ್ತುವರಿ ತೆರವು: ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಹೈಕಮಾಂಡ್: ಪರಿಹಾರ ಕ್ರಮ ಜಾರಿಗೆ ತರುವಂತೆ ಸಿಎಂ, ಡಿಸಿಎಂಗೆ ಒತ್ತಾಯ 

ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಪ್ರಕರಣ ಇದೀಗ ಕಾಂಗ್ರೆಸ್ ಪಕ್ಷದೊಳಗೆ ಬಿರುಕಿಗೂ ಕಾರಣವಾಗಿದೆ. ಮನೆಗಳ ತೆರವು ವಿಚಾರ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷಕ್ಕೆ ಅಹಿತಕರವಾಗಿ ಪರಿಣಮಿಸುತ್ತಿದ್ದಂತೆಯೇ...

ಛತ್ತೀಸ್‌ಗಢ : ಹಿಂಸಾಚಾರಕ್ಕೆ ತಿರುಗಿದ ಕಲ್ಲಿದ್ದಲು ಗಣಿ ವಿರೋಧಿ ಹೋರಾಟ : ಹಲವು ಪೊಲೀಸರಿಗೆ ಗಾಯ, ವಾಹನಗಳಿಗೆ ಬೆಂಕಿ

ಛತ್ತೀಸ್‌ಗಢದ ರಾಯ್‌ಗಢ ಜಿಲ್ಲೆಯ ತಮ್ನಾರ್ ಪ್ರದೇಶದಲ್ಲಿ ಕಲ್ಲಿದ್ದಲು ಗಣಿಗಾರಿಕೆ ಯೋಜನೆಯನ್ನು ವಿರೋಧಿಸಿ ಶನಿವಾರ (ಡಿ.27) ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರು ಗಾಯಗೊಂಡಿದ್ದಾರೆ ಮತ್ತು...

ತ್ರಿಪುರಾ: ಮಸೀದಿಗೆ ಮದ್ಯದ ಬಾಟಲಿಗಳನ್ನು ಇಟ್ಟು ಬೆಂಕಿ ಹಚ್ಚಲು ಯತ್ನ: ಬಜರಂಗದಳ ಧ್ವಜ ಕಟ್ಟಿದ ದುಷ್ಕರ್ಮಿಗಳು

ತ್ರಿಪುರಾದ ಧಲೈ ಜಿಲ್ಲೆಯ ಮಸೀದಿಯನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ, ಇದನ್ನು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಬೆದರಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಪ್ರಯತ್ನ ಎಂದು ನಿವಾಸಿಗಳು ಮತ್ತು ಮಸೀದಿ ಅಧಿಕಾರಿಗಳು ಹೇಳಿದ್ದಾರೆ.  ಮನು-ಚೌಮಾನು ರಸ್ತೆಯಲ್ಲಿರುವ...

‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

"ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು" ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ. ಡಿಸೆಂಬರ್...

“ನನಗೆ ಏನೂ ಆಗುವುದಿಲ್ಲ”: ಅತ್ಯಾಚಾರ ಮಾಡಿ ಸಂತ್ರಸ್ತೆಗೆ ಧಮ್ಕಿ ಹಾಕಿದ ಬಿಜೆಪಿ ಕೌನ್ಸಿಲರ್ ಪತಿ 

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಬಿಜೆಪಿ ಕೌನ್ಸಿಲರ್ ಒಬ್ಬರ ಪತಿ ಮಹಿಳೆಯೊಬ್ಬರ ಮೇಲೆ ಚಾಕು ತೋರಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಮಾಡಿ, ನಂತರ ಅದನ್ನು ತೋರಿಸಿ ಪದೇ ಪದೇ ಲೈಂಗಿಕ ಸಂಬಂಧ ಹೊಂದುವಂತೆ...

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನಕ್ಕೆ ದೇಶದಾದ್ಯಂತ ತೀವ್ರ ವಿರೋಧ : ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್

ಅರಾವಳಿ ಬೆಟ್ಟಗಳ ಹೊಸ ವ್ಯಾಖ್ಯಾನದಿಂದ ಪರಿಸರದ ಮೇಲಾಗುವ ಹಾನಿಯ ಕುರಿತು ದೇಶದ ಜನರು ತೀವ್ರ ಆತಂಕ ಮತ್ತು ಕಳವಳ ವ್ಯಕ್ತಪಡಿಸುತ್ತಿರುವ ಹಿನ್ನೆಲೆ, ಸುಪ್ರೀಂ ಕೋರ್ಟ್‌ ಈ ಕುರಿತು ಸ್ವಯಂ ಪ್ರೇರಿತ (Suo Motu...