Homeಮುಖಪುಟರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

- Advertisement -
- Advertisement -

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಶನಿವಾರ (ಡಿಸೆಂಬರ್ 6) ಪತ್ರ ಬರೆದಿದ್ದಾರೆ.

ವಿಮಾನ ಪ್ರಯಾಣಿಕರ ಸುರಕ್ಷತೆಗಾಗಿ ತಂದ ನಿಯಮವನ್ನು ವಿಮಾನಯಾನ ಸಂಸ್ಥೆಗಳು ತಮ್ಮ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡವರು, ಜನರಿಗೆ ಅತಿ ಹೆಚ್ಚು ದರ ವಿಧಿಸಿದವು. ಆ ನಂತರ ನಿಯಮವೇ ವಿಫಲವಾದಾಗ ಅದನ್ನು ರದ್ದುಗೊಳಿಸಿ ಸರ್ಕಾರ ಮತ್ತು ವಿಮಾನಯಾನ ನಿಯಂತ್ರಣ ಪ್ರಾಧಿಕಾರಗಳು ತಮ್ಮ ದೊಡ್ಡ ತಪ್ಪನ್ನು ಮುಚ್ಚಿಹಾಕಿದವು ಎಂಬುದು ಜಾನ್ ಬ್ರಿಟ್ಟಾಸ್ ಅವರ ಮುಖ್ಯ ಆರೋಪವಾಗಿದೆ.

“ದೇಶದ ಅತಿ ದೊಡ್ಡ ವಿಮಾನಯಾನ ಕಂಪನಿಯಾದ ಇಂಡಿಗೋ (ಇದು ದೇಶೀಯ ಮಾರುಕಟ್ಟೆಯಲ್ಲಿ 63-65% ಪಾಲನ್ನು ಹೊಂದಿದೆ) ಇದ್ದಕ್ಕಿದ್ದಂತೆ ಸಾವಿರಾರು ವಿಮಾನಗಳನ್ನು ರದ್ದುಗೊಳಿಸಿದ್ದರಿಂದ ಅಥವಾ ತಡಮಾಡಿದ್ದರಿಂದ ದೇಶದಾದ್ಯಂತ ವಿಮಾನ ಪ್ರಯಾಣ ವ್ಯವಸ್ಥೆ ಸಂಪೂರ್ಣವಾಗಿ ತತ್ತರಿಸಿ ಹೋಯಿತು”

“ಒಂದೇ ಖಾಸಗಿ ಕಂಪನಿಗೆ ಇಷ್ಟೊಂದು ದೊಡ್ಡ ಮಾರುಕಟ್ಟೆ ಪ್ರಾಬಲ್ಯ (monopoly) ಇರುವುದರಿಂದ, ಆ ಒಂದು ಕಂಪನಿಯ ವೈಫಲ್ಯವೇ ಒಟ್ಟಾರೆಯಾಗಿ ದೇಶದ ವಿಮಾನಯಾನ ವ್ಯವಸ್ಥೆಯ ವೈಫಲ್ಯವಾಗಿ ಪರಿಣಮಿಸಿತು”

“ಇದರಿಂದ ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ನೆಲದಲ್ಲಿ ಮಲಗುವ ಪರಿಸ್ಥಿತಿ ಉಂಟಾಯಿತು. ತೀವ್ರ ಆನಾರೋಗ್ಯದಿಂದ ಇದ್ದ ತಮ್ಮ ಸಂಬಂಧಿಕರನ್ನು ತುರ್ತಾಗಿ ನೋಡಲು ಹೊರಟವರು, ಮೃತ ಸಂಬಂಧಿಕರ ಮುಖವನ್ನು ಕೊನೆಯದಾಗಿ ಕಾಣಲು ತೆರಳುತ್ತಿದ್ದವರು, ಆಪ್ತರ ಮದುವೆಯಲ್ಲಿ ಪಾಲ್ಗೊಳ್ಳಲು ಹೊರಟವರು, ಉದ್ಯೋಗ ಸಂದರ್ಶನಕ್ಕೆ ಹಾಜರಾಗಲು ಅಥವಾ ಕೆಲಸದ ಮೊದಲ ದಿನ ಕಚೇರಿಗೆ ತೆರಳಲು ಹೊರವರು ಸೇರಿದಂತೆ ಸಾವಿರಾರು ಜನರು ಸಂಕಷ್ಟಗಳನ್ನು ಎದುರಿಸಿದರು. ಹಾಗಾಗಿ, ವಿಮಾನಯಾನ ಬಿಕ್ಕಟ್ಟಿನಿಂದ ಉಂಟಾದ ಮಾನವೀಯ ನೋವು ಮತ್ತು ಆರ್ಥಿಕ ನಷ್ಟ ಎರಡೂ ಎಂದಿಗೂ ಕಂಡಿರದಷ್ಟು ದೊಡ್ಡದು ಮತ್ತು ಸಾಕ್ಷ್ಯಕ್ಕೆ ನಿಲುಕದ್ದು” ಎಂದು ಜಾನ್ ಬ್ರಿಟ್ಟಾಸ್ ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಈ ಒತ್ತಡವನ್ನು ಮೊದಲೇ ಊಹಿಸಬಹುದಾಗಿದ್ದರೂ, ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದ ನಂತರ, ಮೊದಲು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದ ಸುರಕ್ಷಾ ನಿಯಮಗಳನ್ನೇ ತುರ್ತಾಗಿ ದುರ್ಬಲಗೊಳಿಸಲಾಯಿತು ಅಥವಾ ಹಿಂತೆಗೆದುಕೊಳ್ಳಲಾಯಿತು. ಇದು ಗಂಭೀರವಾದ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ: ಪ್ರಯಾಣಿಕರ ಸುರಕ್ಷತೆಯನ್ನು ಕೇವಲ ವ್ಯಾಪಾರಿ ಲಾಭ ಮತ್ತು ಸೌಲಭ್ಯಕ್ಕಾಗಿ ತ್ಯಾಗ ಮಾಡಲಾಯಿತೇ? ಎಂದು ಬ್ರಿಟ್ಟಾಸ್ ಪ್ರಶ್ನಿಸಿದ್ದಾರೆ.

ವಿಮಾನಯಾನವನ್ನು ನೋಡಿಕೊಳ್ಳುವ ಸರ್ಕಾರದ ನಿಯಂತ್ರಣ ಸಂಸ್ಥೆಗಳು ತಮ್ಮ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ. ಎರಡು ದೊಡ್ಡ ವಿಮಾನ ಕಂಪನಿಗಳು ಬಹುತೇಕ ಎಲ್ಲಾ ವಿಮಾನ ಸೇವೆಗಳನ್ನು ತಮ್ಮ ಕಬಳಿಕೆಯಲ್ಲಿ ಇಟ್ಟುಕೊಂಡಿವೆ, ಇದರಿಂದ ಇತರ ಕಂಪನಿಗಳಿಗೆ ಸ್ಪರ್ಧೆ ಮಾಡುವ ಅವಕಾಶ ಕಡಿಮೆಯಾಗುತ್ತಿದೆ.

ಅದೇ ಸಮಯದಲ್ಲಿ, ಹಲವಾರು ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗಿ ಕಂಪನಿಗಳಿಗೆ ವಹಿಸಲಾಗಿ, ಅವುಗಳನ್ನು ವ್ಯವಹಾರದಂತೆ ನಡೆಸಲಾಗುತ್ತಿದೆ. ಇದರ ಪರಿಣಾಮವಾಗಿ ಹೊಸ ವಿಮಾನ ನಿಲ್ದಾಣಗಳು ಅಥವಾ ಚಿಕ್ಕ ಪ್ರಾದೇಶಿಕ ವಿಮಾನ ನಿಲ್ದಾಣಗಳಿಗೆ ಬೆಳೆಯಲು ಅವಕಾಶ ಸಿಗುತ್ತಿಲ್ಲ.

“ಇದಲ್ಲದೆ, ವಿಮಾನಗಳ ಸುರಕ್ಷತಾ ನಿಯಮಗಳನ್ನು ಕೂಡ ಸಡಿಲಗೊಳಿಸಲಾಗುತ್ತಿದೆ. ವಿಮಾನಯಾನ ಕಂಪನಿಗಳು ಜನರಿಂದ ಹೆಚ್ಚು ಹಣ ವಸೂಲಿ ಮಾಡಿ ಲಾಭ ಪಡೆಯುತ್ತಿದ್ದರೂ, ಸರ್ಕಾರ ಇದನ್ನು ತಡೆಯಲು ಕ್ರಮಕೈಗೊಳ್ಳುತ್ತಿಲ್ಲ. ಸರ್ಕಾರಕ್ಕೆ ಅಧಿಕಾರವೂ ಇದೆ, ಸಂಸತ್ ಸಮಿತಿಯ ಸಲಹೆಯೂ ಇದೆ. ಆದರೂ, ಅವರು ಸರಿಯಾದ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ” ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಆರೋಪಿಸಿದ್ದಾರೆ.

“ವಿಮಾನಯಾನ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳು ತುಂಬಾ ಗಂಭೀರವಾದದ್ದು, ಅದನ್ನು ಆಂತರಿಕ ಪರಿಶೀಲನೆಗಳು ಅಥವಾ ಸಲಹಾ ಪತ್ರಗಳ ಮೂಲಕ ಸರಿಪಡಿಸುವುದು ಸಾಧ್ಯವಿಲ್ಲ. ಸರ್ಕಾರದ ಮೇಲಿನ ಜನರ ನಂಬಿಕೆ ಉಳಿಯಬೇಕಾದರೆ, ಸಂಪೂರ್ಣವಾಗಿ ಸ್ವತಂತ್ರ, ಪಾರದರ್ಶಕ ಮತ್ತು ನಿಗದಿತ ಅವಧಿಯಲ್ಲಿ ಮುಗಿಯುವ ದೊಡ್ಡ ತನಿಖೆಯನ್ನು ಆರಂಭಿಸಬೇಕು. ಈ ತನಿಖೆಗೆ ನಿಯಂತ್ರಣ ಇಲಾಖೆಯ ದಾಖಲೆಗಳು, ವಿಮಾನಯಾಣ ಕಂಪನಿಗಳು ಎಷ್ಟು ಸಿದ್ಧವಾಗಿದ್ದವು ಎಂಬ ಮಾಹಿತಿಗಳು, ಹಾಗೂ ಟಿಕೆಟ್ ದರ ಏರಿಕೆಯ ವಿವರಗಳು ಎಲ್ಲವೂ ಲಭ್ಯವಾಗಬೇಕು. ಈ ಎಲ್ಲಾ ವಿಷಯಗಳನ್ನು ಸಂಪೂರ್ಣವಾಗಿ ಪರಿಶೀಲಿಸಲು ಒಂದು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಥವಾ ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಬೇಕು. ಜೊತೆಗೆ, ದೊಡ್ಡ ಪ್ರಮಾಣದ ವಿಳಂಬಗಳು ಅಥವಾ ಸೇವಾ ವ್ಯತ್ಯಯಗಳು ಸಂಭವಿಸಿದಾಗ ಪ್ರಯಾಣಿಕರಿಗೆ ಸ್ವಯಂ ಪರಿಹಾರ, ನ್ಯಾಯಯುತ ಸೇವೆ ಮತ್ತು ಪಾರದರ್ಶಕ ಟಿಕೆಟ್ ದರ ದೊರಕುವಂತೆ ಮಾಡಲು ‘ಪ್ರಯಾಣಿಕರ ಹಕ್ಕುಗಳ ಕಾಯ್ದೆ’ಯನ್ನು ತಕ್ಷಣ ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಂಸದ ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...