Homeಮುಖಪುಟರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

- Advertisement -
- Advertisement -

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಶನಿವಾರ (ಡಿಸೆಂಬರ್ 6) ಪತ್ರ ಬರೆದಿದ್ದಾರೆ.

ವಿಮಾನ ಪ್ರಯಾಣಿಕರ ಸುರಕ್ಷತೆಗಾಗಿ ತಂದ ನಿಯಮವನ್ನು ವಿಮಾನಯಾನ ಸಂಸ್ಥೆಗಳು ತಮ್ಮ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡವರು, ಜನರಿಗೆ ಅತಿ ಹೆಚ್ಚು ದರ ವಿಧಿಸಿದವು. ಆ ನಂತರ ನಿಯಮವೇ ವಿಫಲವಾದಾಗ ಅದನ್ನು ರದ್ದುಗೊಳಿಸಿ ಸರ್ಕಾರ ಮತ್ತು ವಿಮಾನಯಾನ ನಿಯಂತ್ರಣ ಪ್ರಾಧಿಕಾರಗಳು ತಮ್ಮ ದೊಡ್ಡ ತಪ್ಪನ್ನು ಮುಚ್ಚಿಹಾಕಿದವು ಎಂಬುದು ಜಾನ್ ಬ್ರಿಟ್ಟಾಸ್ ಅವರ ಮುಖ್ಯ ಆರೋಪವಾಗಿದೆ.

“ದೇಶದ ಅತಿ ದೊಡ್ಡ ವಿಮಾನಯಾನ ಕಂಪನಿಯಾದ ಇಂಡಿಗೋ (ಇದು ದೇಶೀಯ ಮಾರುಕಟ್ಟೆಯಲ್ಲಿ 63-65% ಪಾಲನ್ನು ಹೊಂದಿದೆ) ಇದ್ದಕ್ಕಿದ್ದಂತೆ ಸಾವಿರಾರು ವಿಮಾನಗಳನ್ನು ರದ್ದುಗೊಳಿಸಿದ್ದರಿಂದ ಅಥವಾ ತಡಮಾಡಿದ್ದರಿಂದ ದೇಶದಾದ್ಯಂತ ವಿಮಾನ ಪ್ರಯಾಣ ವ್ಯವಸ್ಥೆ ಸಂಪೂರ್ಣವಾಗಿ ತತ್ತರಿಸಿ ಹೋಯಿತು”

“ಒಂದೇ ಖಾಸಗಿ ಕಂಪನಿಗೆ ಇಷ್ಟೊಂದು ದೊಡ್ಡ ಮಾರುಕಟ್ಟೆ ಪ್ರಾಬಲ್ಯ (monopoly) ಇರುವುದರಿಂದ, ಆ ಒಂದು ಕಂಪನಿಯ ವೈಫಲ್ಯವೇ ಒಟ್ಟಾರೆಯಾಗಿ ದೇಶದ ವಿಮಾನಯಾನ ವ್ಯವಸ್ಥೆಯ ವೈಫಲ್ಯವಾಗಿ ಪರಿಣಮಿಸಿತು”

“ಇದರಿಂದ ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ನೆಲದಲ್ಲಿ ಮಲಗುವ ಪರಿಸ್ಥಿತಿ ಉಂಟಾಯಿತು. ತೀವ್ರ ಆನಾರೋಗ್ಯದಿಂದ ಇದ್ದ ತಮ್ಮ ಸಂಬಂಧಿಕರನ್ನು ತುರ್ತಾಗಿ ನೋಡಲು ಹೊರಟವರು, ಮೃತ ಸಂಬಂಧಿಕರ ಮುಖವನ್ನು ಕೊನೆಯದಾಗಿ ಕಾಣಲು ತೆರಳುತ್ತಿದ್ದವರು, ಆಪ್ತರ ಮದುವೆಯಲ್ಲಿ ಪಾಲ್ಗೊಳ್ಳಲು ಹೊರಟವರು, ಉದ್ಯೋಗ ಸಂದರ್ಶನಕ್ಕೆ ಹಾಜರಾಗಲು ಅಥವಾ ಕೆಲಸದ ಮೊದಲ ದಿನ ಕಚೇರಿಗೆ ತೆರಳಲು ಹೊರವರು ಸೇರಿದಂತೆ ಸಾವಿರಾರು ಜನರು ಸಂಕಷ್ಟಗಳನ್ನು ಎದುರಿಸಿದರು. ಹಾಗಾಗಿ, ವಿಮಾನಯಾನ ಬಿಕ್ಕಟ್ಟಿನಿಂದ ಉಂಟಾದ ಮಾನವೀಯ ನೋವು ಮತ್ತು ಆರ್ಥಿಕ ನಷ್ಟ ಎರಡೂ ಎಂದಿಗೂ ಕಂಡಿರದಷ್ಟು ದೊಡ್ಡದು ಮತ್ತು ಸಾಕ್ಷ್ಯಕ್ಕೆ ನಿಲುಕದ್ದು” ಎಂದು ಜಾನ್ ಬ್ರಿಟ್ಟಾಸ್ ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಈ ಒತ್ತಡವನ್ನು ಮೊದಲೇ ಊಹಿಸಬಹುದಾಗಿದ್ದರೂ, ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದ ನಂತರ, ಮೊದಲು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದ ಸುರಕ್ಷಾ ನಿಯಮಗಳನ್ನೇ ತುರ್ತಾಗಿ ದುರ್ಬಲಗೊಳಿಸಲಾಯಿತು ಅಥವಾ ಹಿಂತೆಗೆದುಕೊಳ್ಳಲಾಯಿತು. ಇದು ಗಂಭೀರವಾದ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ: ಪ್ರಯಾಣಿಕರ ಸುರಕ್ಷತೆಯನ್ನು ಕೇವಲ ವ್ಯಾಪಾರಿ ಲಾಭ ಮತ್ತು ಸೌಲಭ್ಯಕ್ಕಾಗಿ ತ್ಯಾಗ ಮಾಡಲಾಯಿತೇ? ಎಂದು ಬ್ರಿಟ್ಟಾಸ್ ಪ್ರಶ್ನಿಸಿದ್ದಾರೆ.

ವಿಮಾನಯಾನವನ್ನು ನೋಡಿಕೊಳ್ಳುವ ಸರ್ಕಾರದ ನಿಯಂತ್ರಣ ಸಂಸ್ಥೆಗಳು ತಮ್ಮ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ. ಎರಡು ದೊಡ್ಡ ವಿಮಾನ ಕಂಪನಿಗಳು ಬಹುತೇಕ ಎಲ್ಲಾ ವಿಮಾನ ಸೇವೆಗಳನ್ನು ತಮ್ಮ ಕಬಳಿಕೆಯಲ್ಲಿ ಇಟ್ಟುಕೊಂಡಿವೆ, ಇದರಿಂದ ಇತರ ಕಂಪನಿಗಳಿಗೆ ಸ್ಪರ್ಧೆ ಮಾಡುವ ಅವಕಾಶ ಕಡಿಮೆಯಾಗುತ್ತಿದೆ.

ಅದೇ ಸಮಯದಲ್ಲಿ, ಹಲವಾರು ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗಿ ಕಂಪನಿಗಳಿಗೆ ವಹಿಸಲಾಗಿ, ಅವುಗಳನ್ನು ವ್ಯವಹಾರದಂತೆ ನಡೆಸಲಾಗುತ್ತಿದೆ. ಇದರ ಪರಿಣಾಮವಾಗಿ ಹೊಸ ವಿಮಾನ ನಿಲ್ದಾಣಗಳು ಅಥವಾ ಚಿಕ್ಕ ಪ್ರಾದೇಶಿಕ ವಿಮಾನ ನಿಲ್ದಾಣಗಳಿಗೆ ಬೆಳೆಯಲು ಅವಕಾಶ ಸಿಗುತ್ತಿಲ್ಲ.

“ಇದಲ್ಲದೆ, ವಿಮಾನಗಳ ಸುರಕ್ಷತಾ ನಿಯಮಗಳನ್ನು ಕೂಡ ಸಡಿಲಗೊಳಿಸಲಾಗುತ್ತಿದೆ. ವಿಮಾನಯಾನ ಕಂಪನಿಗಳು ಜನರಿಂದ ಹೆಚ್ಚು ಹಣ ವಸೂಲಿ ಮಾಡಿ ಲಾಭ ಪಡೆಯುತ್ತಿದ್ದರೂ, ಸರ್ಕಾರ ಇದನ್ನು ತಡೆಯಲು ಕ್ರಮಕೈಗೊಳ್ಳುತ್ತಿಲ್ಲ. ಸರ್ಕಾರಕ್ಕೆ ಅಧಿಕಾರವೂ ಇದೆ, ಸಂಸತ್ ಸಮಿತಿಯ ಸಲಹೆಯೂ ಇದೆ. ಆದರೂ, ಅವರು ಸರಿಯಾದ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ” ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಆರೋಪಿಸಿದ್ದಾರೆ.

“ವಿಮಾನಯಾನ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳು ತುಂಬಾ ಗಂಭೀರವಾದದ್ದು, ಅದನ್ನು ಆಂತರಿಕ ಪರಿಶೀಲನೆಗಳು ಅಥವಾ ಸಲಹಾ ಪತ್ರಗಳ ಮೂಲಕ ಸರಿಪಡಿಸುವುದು ಸಾಧ್ಯವಿಲ್ಲ. ಸರ್ಕಾರದ ಮೇಲಿನ ಜನರ ನಂಬಿಕೆ ಉಳಿಯಬೇಕಾದರೆ, ಸಂಪೂರ್ಣವಾಗಿ ಸ್ವತಂತ್ರ, ಪಾರದರ್ಶಕ ಮತ್ತು ನಿಗದಿತ ಅವಧಿಯಲ್ಲಿ ಮುಗಿಯುವ ದೊಡ್ಡ ತನಿಖೆಯನ್ನು ಆರಂಭಿಸಬೇಕು. ಈ ತನಿಖೆಗೆ ನಿಯಂತ್ರಣ ಇಲಾಖೆಯ ದಾಖಲೆಗಳು, ವಿಮಾನಯಾಣ ಕಂಪನಿಗಳು ಎಷ್ಟು ಸಿದ್ಧವಾಗಿದ್ದವು ಎಂಬ ಮಾಹಿತಿಗಳು, ಹಾಗೂ ಟಿಕೆಟ್ ದರ ಏರಿಕೆಯ ವಿವರಗಳು ಎಲ್ಲವೂ ಲಭ್ಯವಾಗಬೇಕು. ಈ ಎಲ್ಲಾ ವಿಷಯಗಳನ್ನು ಸಂಪೂರ್ಣವಾಗಿ ಪರಿಶೀಲಿಸಲು ಒಂದು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಥವಾ ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಬೇಕು. ಜೊತೆಗೆ, ದೊಡ್ಡ ಪ್ರಮಾಣದ ವಿಳಂಬಗಳು ಅಥವಾ ಸೇವಾ ವ್ಯತ್ಯಯಗಳು ಸಂಭವಿಸಿದಾಗ ಪ್ರಯಾಣಿಕರಿಗೆ ಸ್ವಯಂ ಪರಿಹಾರ, ನ್ಯಾಯಯುತ ಸೇವೆ ಮತ್ತು ಪಾರದರ್ಶಕ ಟಿಕೆಟ್ ದರ ದೊರಕುವಂತೆ ಮಾಡಲು ‘ಪ್ರಯಾಣಿಕರ ಹಕ್ಕುಗಳ ಕಾಯ್ದೆ’ಯನ್ನು ತಕ್ಷಣ ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಂಸದ ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...