Homeಮುಖಪುಟರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

- Advertisement -
- Advertisement -

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಶನಿವಾರ (ಡಿಸೆಂಬರ್ 6) ಪತ್ರ ಬರೆದಿದ್ದಾರೆ.

ವಿಮಾನ ಪ್ರಯಾಣಿಕರ ಸುರಕ್ಷತೆಗಾಗಿ ತಂದ ನಿಯಮವನ್ನು ವಿಮಾನಯಾನ ಸಂಸ್ಥೆಗಳು ತಮ್ಮ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡವರು, ಜನರಿಗೆ ಅತಿ ಹೆಚ್ಚು ದರ ವಿಧಿಸಿದವು. ಆ ನಂತರ ನಿಯಮವೇ ವಿಫಲವಾದಾಗ ಅದನ್ನು ರದ್ದುಗೊಳಿಸಿ ಸರ್ಕಾರ ಮತ್ತು ವಿಮಾನಯಾನ ನಿಯಂತ್ರಣ ಪ್ರಾಧಿಕಾರಗಳು ತಮ್ಮ ದೊಡ್ಡ ತಪ್ಪನ್ನು ಮುಚ್ಚಿಹಾಕಿದವು ಎಂಬುದು ಜಾನ್ ಬ್ರಿಟ್ಟಾಸ್ ಅವರ ಮುಖ್ಯ ಆರೋಪವಾಗಿದೆ.

“ದೇಶದ ಅತಿ ದೊಡ್ಡ ವಿಮಾನಯಾನ ಕಂಪನಿಯಾದ ಇಂಡಿಗೋ (ಇದು ದೇಶೀಯ ಮಾರುಕಟ್ಟೆಯಲ್ಲಿ 63-65% ಪಾಲನ್ನು ಹೊಂದಿದೆ) ಇದ್ದಕ್ಕಿದ್ದಂತೆ ಸಾವಿರಾರು ವಿಮಾನಗಳನ್ನು ರದ್ದುಗೊಳಿಸಿದ್ದರಿಂದ ಅಥವಾ ತಡಮಾಡಿದ್ದರಿಂದ ದೇಶದಾದ್ಯಂತ ವಿಮಾನ ಪ್ರಯಾಣ ವ್ಯವಸ್ಥೆ ಸಂಪೂರ್ಣವಾಗಿ ತತ್ತರಿಸಿ ಹೋಯಿತು”

“ಒಂದೇ ಖಾಸಗಿ ಕಂಪನಿಗೆ ಇಷ್ಟೊಂದು ದೊಡ್ಡ ಮಾರುಕಟ್ಟೆ ಪ್ರಾಬಲ್ಯ (monopoly) ಇರುವುದರಿಂದ, ಆ ಒಂದು ಕಂಪನಿಯ ವೈಫಲ್ಯವೇ ಒಟ್ಟಾರೆಯಾಗಿ ದೇಶದ ವಿಮಾನಯಾನ ವ್ಯವಸ್ಥೆಯ ವೈಫಲ್ಯವಾಗಿ ಪರಿಣಮಿಸಿತು”

“ಇದರಿಂದ ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ನೆಲದಲ್ಲಿ ಮಲಗುವ ಪರಿಸ್ಥಿತಿ ಉಂಟಾಯಿತು. ತೀವ್ರ ಆನಾರೋಗ್ಯದಿಂದ ಇದ್ದ ತಮ್ಮ ಸಂಬಂಧಿಕರನ್ನು ತುರ್ತಾಗಿ ನೋಡಲು ಹೊರಟವರು, ಮೃತ ಸಂಬಂಧಿಕರ ಮುಖವನ್ನು ಕೊನೆಯದಾಗಿ ಕಾಣಲು ತೆರಳುತ್ತಿದ್ದವರು, ಆಪ್ತರ ಮದುವೆಯಲ್ಲಿ ಪಾಲ್ಗೊಳ್ಳಲು ಹೊರಟವರು, ಉದ್ಯೋಗ ಸಂದರ್ಶನಕ್ಕೆ ಹಾಜರಾಗಲು ಅಥವಾ ಕೆಲಸದ ಮೊದಲ ದಿನ ಕಚೇರಿಗೆ ತೆರಳಲು ಹೊರವರು ಸೇರಿದಂತೆ ಸಾವಿರಾರು ಜನರು ಸಂಕಷ್ಟಗಳನ್ನು ಎದುರಿಸಿದರು. ಹಾಗಾಗಿ, ವಿಮಾನಯಾನ ಬಿಕ್ಕಟ್ಟಿನಿಂದ ಉಂಟಾದ ಮಾನವೀಯ ನೋವು ಮತ್ತು ಆರ್ಥಿಕ ನಷ್ಟ ಎರಡೂ ಎಂದಿಗೂ ಕಂಡಿರದಷ್ಟು ದೊಡ್ಡದು ಮತ್ತು ಸಾಕ್ಷ್ಯಕ್ಕೆ ನಿಲುಕದ್ದು” ಎಂದು ಜಾನ್ ಬ್ರಿಟ್ಟಾಸ್ ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಈ ಒತ್ತಡವನ್ನು ಮೊದಲೇ ಊಹಿಸಬಹುದಾಗಿದ್ದರೂ, ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದ ನಂತರ, ಮೊದಲು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದ ಸುರಕ್ಷಾ ನಿಯಮಗಳನ್ನೇ ತುರ್ತಾಗಿ ದುರ್ಬಲಗೊಳಿಸಲಾಯಿತು ಅಥವಾ ಹಿಂತೆಗೆದುಕೊಳ್ಳಲಾಯಿತು. ಇದು ಗಂಭೀರವಾದ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ: ಪ್ರಯಾಣಿಕರ ಸುರಕ್ಷತೆಯನ್ನು ಕೇವಲ ವ್ಯಾಪಾರಿ ಲಾಭ ಮತ್ತು ಸೌಲಭ್ಯಕ್ಕಾಗಿ ತ್ಯಾಗ ಮಾಡಲಾಯಿತೇ? ಎಂದು ಬ್ರಿಟ್ಟಾಸ್ ಪ್ರಶ್ನಿಸಿದ್ದಾರೆ.

ವಿಮಾನಯಾನವನ್ನು ನೋಡಿಕೊಳ್ಳುವ ಸರ್ಕಾರದ ನಿಯಂತ್ರಣ ಸಂಸ್ಥೆಗಳು ತಮ್ಮ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ. ಎರಡು ದೊಡ್ಡ ವಿಮಾನ ಕಂಪನಿಗಳು ಬಹುತೇಕ ಎಲ್ಲಾ ವಿಮಾನ ಸೇವೆಗಳನ್ನು ತಮ್ಮ ಕಬಳಿಕೆಯಲ್ಲಿ ಇಟ್ಟುಕೊಂಡಿವೆ, ಇದರಿಂದ ಇತರ ಕಂಪನಿಗಳಿಗೆ ಸ್ಪರ್ಧೆ ಮಾಡುವ ಅವಕಾಶ ಕಡಿಮೆಯಾಗುತ್ತಿದೆ.

ಅದೇ ಸಮಯದಲ್ಲಿ, ಹಲವಾರು ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗಿ ಕಂಪನಿಗಳಿಗೆ ವಹಿಸಲಾಗಿ, ಅವುಗಳನ್ನು ವ್ಯವಹಾರದಂತೆ ನಡೆಸಲಾಗುತ್ತಿದೆ. ಇದರ ಪರಿಣಾಮವಾಗಿ ಹೊಸ ವಿಮಾನ ನಿಲ್ದಾಣಗಳು ಅಥವಾ ಚಿಕ್ಕ ಪ್ರಾದೇಶಿಕ ವಿಮಾನ ನಿಲ್ದಾಣಗಳಿಗೆ ಬೆಳೆಯಲು ಅವಕಾಶ ಸಿಗುತ್ತಿಲ್ಲ.

“ಇದಲ್ಲದೆ, ವಿಮಾನಗಳ ಸುರಕ್ಷತಾ ನಿಯಮಗಳನ್ನು ಕೂಡ ಸಡಿಲಗೊಳಿಸಲಾಗುತ್ತಿದೆ. ವಿಮಾನಯಾನ ಕಂಪನಿಗಳು ಜನರಿಂದ ಹೆಚ್ಚು ಹಣ ವಸೂಲಿ ಮಾಡಿ ಲಾಭ ಪಡೆಯುತ್ತಿದ್ದರೂ, ಸರ್ಕಾರ ಇದನ್ನು ತಡೆಯಲು ಕ್ರಮಕೈಗೊಳ್ಳುತ್ತಿಲ್ಲ. ಸರ್ಕಾರಕ್ಕೆ ಅಧಿಕಾರವೂ ಇದೆ, ಸಂಸತ್ ಸಮಿತಿಯ ಸಲಹೆಯೂ ಇದೆ. ಆದರೂ, ಅವರು ಸರಿಯಾದ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ” ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಆರೋಪಿಸಿದ್ದಾರೆ.

“ವಿಮಾನಯಾನ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳು ತುಂಬಾ ಗಂಭೀರವಾದದ್ದು, ಅದನ್ನು ಆಂತರಿಕ ಪರಿಶೀಲನೆಗಳು ಅಥವಾ ಸಲಹಾ ಪತ್ರಗಳ ಮೂಲಕ ಸರಿಪಡಿಸುವುದು ಸಾಧ್ಯವಿಲ್ಲ. ಸರ್ಕಾರದ ಮೇಲಿನ ಜನರ ನಂಬಿಕೆ ಉಳಿಯಬೇಕಾದರೆ, ಸಂಪೂರ್ಣವಾಗಿ ಸ್ವತಂತ್ರ, ಪಾರದರ್ಶಕ ಮತ್ತು ನಿಗದಿತ ಅವಧಿಯಲ್ಲಿ ಮುಗಿಯುವ ದೊಡ್ಡ ತನಿಖೆಯನ್ನು ಆರಂಭಿಸಬೇಕು. ಈ ತನಿಖೆಗೆ ನಿಯಂತ್ರಣ ಇಲಾಖೆಯ ದಾಖಲೆಗಳು, ವಿಮಾನಯಾಣ ಕಂಪನಿಗಳು ಎಷ್ಟು ಸಿದ್ಧವಾಗಿದ್ದವು ಎಂಬ ಮಾಹಿತಿಗಳು, ಹಾಗೂ ಟಿಕೆಟ್ ದರ ಏರಿಕೆಯ ವಿವರಗಳು ಎಲ್ಲವೂ ಲಭ್ಯವಾಗಬೇಕು. ಈ ಎಲ್ಲಾ ವಿಷಯಗಳನ್ನು ಸಂಪೂರ್ಣವಾಗಿ ಪರಿಶೀಲಿಸಲು ಒಂದು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಥವಾ ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಬೇಕು. ಜೊತೆಗೆ, ದೊಡ್ಡ ಪ್ರಮಾಣದ ವಿಳಂಬಗಳು ಅಥವಾ ಸೇವಾ ವ್ಯತ್ಯಯಗಳು ಸಂಭವಿಸಿದಾಗ ಪ್ರಯಾಣಿಕರಿಗೆ ಸ್ವಯಂ ಪರಿಹಾರ, ನ್ಯಾಯಯುತ ಸೇವೆ ಮತ್ತು ಪಾರದರ್ಶಕ ಟಿಕೆಟ್ ದರ ದೊರಕುವಂತೆ ಮಾಡಲು ‘ಪ್ರಯಾಣಿಕರ ಹಕ್ಕುಗಳ ಕಾಯ್ದೆ’ಯನ್ನು ತಕ್ಷಣ ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಂಸದ ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...