Homeಮುಖಪುಟಮಧ್ಯಪ್ರದೇಶ: ಬಿಜೆಪಿ ಸಚಿವರ ಕುರಿತು ವರದಿ ಮಾಡಿದ ಪತ್ರಕರ್ತನ ವಿರುದ್ಧ 11 ಎಫ್‌ಐಆರ್‌ ದಾಖಲು

ಮಧ್ಯಪ್ರದೇಶ: ಬಿಜೆಪಿ ಸಚಿವರ ಕುರಿತು ವರದಿ ಮಾಡಿದ ಪತ್ರಕರ್ತನ ವಿರುದ್ಧ 11 ಎಫ್‌ಐಆರ್‌ ದಾಖಲು

- Advertisement -
- Advertisement -

ಮಧ್ಯಪ್ರದೇಶ ಬಿಜೆಪಿ ಸರಕಾರದ ಸಚಿವರೊಬ್ಬರ ಬಗ್ಗೆ ವರದಿ ಮಾಡಿದ ಪತ್ರಕರ್ತರೊಬ್ಬರ ಮೇಲೆ 11 ಎಫ್‌ಐಆರ್‌ಗಳನ್ನು ಹಾಕಲಾಗಿದೆ.

ಮಧ್ಯಪ್ರದೇಶದಲ್ಲಿ ನ.17 ರಂದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದಕ್ಕೂ ಮೊದಲೇ ಪತ್ರಕರ್ತನ ಮೇಲೆ ಸರಣಿ ಕೇಸ್ ದಾಖಲು ಮತ್ತು ಬಂಧನವು ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಯಾವ ರೀತಿ ಇದೆ ಎನ್ನುವುದನ್ನು ಮತ್ತೆ ಬಹಿರಂಗಪಡಿಸುತ್ತದೆ.

ಸೆ.7 ರಂದು ‘ದೈನಿಕ್ ಖುಲಾಸಾ’ದ ವರದಿಗಾರ ಜಲಮ್ ಸಿಂಗ್ ಕಿರಾರ್ ಅವರು  ಮಧ್ಯಪ್ರದೇಶದ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ಅವರು ಮಹಿಳೆಯೊಂದಿಗೆ ಕಾಣಿಸಿಕೊಂಡಿರುವ ವಿವಾದಾತ್ಮಕ ವೀಡಿಯೊವ ಬಗ್ಗೆ ವರದಿ ಮಾಡಿದ್ದಾರೆ. ವರದಿಯಲ್ಲಿ ಗುಣಾದಲ್ಲಿ ವೈರಲ್ ಆಗಿರುವ ವೀಡಿಯೊದ ಕುರಿತು ಬರೆಯುತ್ತಾ, ರಾಜಕಾರಣಿಯೊಬ್ಬರು ವೀಡಿಯೋದಿಂದಾಗಿ ಚುನಾವಣಾ ಟಿಕೆಟ್ ಕಳೆದುಕೊಳ್ಳಬಹುದು ಎಂದು ಅವರು ಮಹೇಂದ್ರ ಸಿಂಗ್ ಹೆಸರನ್ನು ಉಲ್ಲೇಖಿಸದೆ ಬರೆದಿದ್ದರು.

ಇದರ ಬೆನ್ನಲ್ಲೇ  ವರದಿಗಾರ ಜಲಮ್ ಸಿಂಗ್ ಕಿರಾರ್ ವಿರುದ್ಧ 11 ಎಫ್‌ಐಆರ್‌ಗಳು ದಾಖಲಾಗಿದ್ದವು. ಬ್ಲಾಕ್‌ಮೇಲ್‌ ಆರೋಪದ ಮೇಲೆ ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಸೆಪ್ಟೆಂಬರ್‌ನಲ್ಲಿ ದೈನಿಕ್ ಭಾಸ್ಕರ್ ವರದಿ ಮಾಡಿದೆ.

ಕೋಟ್ವಾಲಿಯ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯೆ ದೂರು ದಾಖಲಿಸಿದ್ದಾರೆ. ವದಂತಿಗಳನ್ನು ಹರಡುವ ಮೂಲಕ ಸಿಂಗ್ ಸಿಸೋಡಿಯಾ ಅವರ ಇಮೇಜ್‌ಗೆ ಧಕ್ಕೆ ತಂದಿದ್ದಾರೆ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ವರದಿಗಾರ ಜಲಮ್ ಸಿಂಗ್ ಕಿರಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153, 384 ಮತ್ತು 385 ಮತ್ತು 469ರಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಸೆ.13 ರಂದು ಕೋಟಾದಿಂದ ಪತ್ರಕರ್ತ ಸಿಂಗ್ ಅವರನ್ನು ಬಂಧಿಸಲಾಯಿತು. ಸುಮಾರು ಡಜನ್ ಎಫ್‌ಐಆರ್‌ಗಳನ್ನು ಗುಣ ಮತ್ತು ಶಿವಪುರಿ ಜಿಲ್ಲೆಗಳಲ್ಲಿ ದಾಖಲಿಸಲಾಗಿದೆ ಎಂದು ಅವರ ಕುಟುಂಬದ ಸದಸ್ಯರು ನ್ಯೂಸ್‌ಲಾಂಡ್ರಿ  ಜೊತೆ ಮಾತನಾಡುತ್ತಾ ಹೇಳಿದ್ದಾರೆ.

11 ಎಫ್‌ಐಆರ್‌ಗಳಲ್ಲಿ ಎಂಟು ಎಫ್‌ಐಆರ್‌ಗಳು ಆಡಳಿತಾರೂಢ ಬಿಜೆಪಿಗೆ ಸಂಬಂಧಿಸಿದ ವ್ಯಕ್ತಿಗಳಿಂದ ದಾಖಲಾಗಿವೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿದೆ.

ಸಿಂಗ್ ಅವರು ತನ್ನ ವರದಿಯಲ್ಲಿ ಯಾವುದೇ ರಾಜಕಾರಣಿಯ ಹೆಸರು ಉಲ್ಲೇಖಿಸಿಲ್ಲ. ಆದರೂ ಸಚಿವರೊಬ್ಬರು ಸಿಂಗ್ ವಿರುದ್ಧ ಇತರರು ಹೆಚ್ಚು ದೂರುಗಳು ನೀಡುವಂತೆ ಮಾಡಿದ್ದಾರೆ ಹಾಗೂ ಅದಕ್ಕಾಗಿ ಆಡಳಿತದ ಮೇಲೆ ಒತ್ತಡ ಹೇರಿದ್ದಾರೆ ಎಂದು ದೈನಿಕ ಖುಲಾಸಾದ ಸಂಪಾದಕ ಸುರೇಶ್ ಆಚಾರ್ಯ ಹೇಳಿದ್ದಾರೆ.

ಎಲ್ಲಾ ಎಫ್‌ಐಆರ್‌ಗಳನ್ನು ಯಾವುದೇ ತನಿಖೆಯಿಲ್ಲದೆ ದಾಖಲಿಸಲಾಗಿದೆ. ಪರವಾಗಿಲ್ಲ, ನ್ಯಾಯಾಲಯ ಸಾಕ್ಷಿ ಕೇಳಲಿದೆ ಎಂದು ಆಚಾರ್ಯ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ  ಪತ್ರಕರ್ತರನ್ನು ಪ್ರತಿನಿಧಿಸುವ ವಕೀಲ ಮನೋಹರ್ ಮಿರೋಟಾ, ಸಿಂಗ್ ಅವರಿಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಅದನ್ನು ತಿರಸ್ಕರಿಸಲಾಗಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: ಇದು ಆತ್ಮಹತ್ಯೆಯಲ್ಲ, ಕನಸುಗಳ ಕೊಲೆ: ತೆಲಂಗಾಣ ಸರಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...