Homeಮುಖಪುಟಮಧ್ಯಪ್ರದೇಶ: ಬಿಜೆಪಿ ಸಚಿವರ ಕುರಿತು ವರದಿ ಮಾಡಿದ ಪತ್ರಕರ್ತನ ವಿರುದ್ಧ 11 ಎಫ್‌ಐಆರ್‌ ದಾಖಲು

ಮಧ್ಯಪ್ರದೇಶ: ಬಿಜೆಪಿ ಸಚಿವರ ಕುರಿತು ವರದಿ ಮಾಡಿದ ಪತ್ರಕರ್ತನ ವಿರುದ್ಧ 11 ಎಫ್‌ಐಆರ್‌ ದಾಖಲು

- Advertisement -
- Advertisement -

ಮಧ್ಯಪ್ರದೇಶ ಬಿಜೆಪಿ ಸರಕಾರದ ಸಚಿವರೊಬ್ಬರ ಬಗ್ಗೆ ವರದಿ ಮಾಡಿದ ಪತ್ರಕರ್ತರೊಬ್ಬರ ಮೇಲೆ 11 ಎಫ್‌ಐಆರ್‌ಗಳನ್ನು ಹಾಕಲಾಗಿದೆ.

ಮಧ್ಯಪ್ರದೇಶದಲ್ಲಿ ನ.17 ರಂದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದಕ್ಕೂ ಮೊದಲೇ ಪತ್ರಕರ್ತನ ಮೇಲೆ ಸರಣಿ ಕೇಸ್ ದಾಖಲು ಮತ್ತು ಬಂಧನವು ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಯಾವ ರೀತಿ ಇದೆ ಎನ್ನುವುದನ್ನು ಮತ್ತೆ ಬಹಿರಂಗಪಡಿಸುತ್ತದೆ.

ಸೆ.7 ರಂದು ‘ದೈನಿಕ್ ಖುಲಾಸಾ’ದ ವರದಿಗಾರ ಜಲಮ್ ಸಿಂಗ್ ಕಿರಾರ್ ಅವರು  ಮಧ್ಯಪ್ರದೇಶದ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ಅವರು ಮಹಿಳೆಯೊಂದಿಗೆ ಕಾಣಿಸಿಕೊಂಡಿರುವ ವಿವಾದಾತ್ಮಕ ವೀಡಿಯೊವ ಬಗ್ಗೆ ವರದಿ ಮಾಡಿದ್ದಾರೆ. ವರದಿಯಲ್ಲಿ ಗುಣಾದಲ್ಲಿ ವೈರಲ್ ಆಗಿರುವ ವೀಡಿಯೊದ ಕುರಿತು ಬರೆಯುತ್ತಾ, ರಾಜಕಾರಣಿಯೊಬ್ಬರು ವೀಡಿಯೋದಿಂದಾಗಿ ಚುನಾವಣಾ ಟಿಕೆಟ್ ಕಳೆದುಕೊಳ್ಳಬಹುದು ಎಂದು ಅವರು ಮಹೇಂದ್ರ ಸಿಂಗ್ ಹೆಸರನ್ನು ಉಲ್ಲೇಖಿಸದೆ ಬರೆದಿದ್ದರು.

ಇದರ ಬೆನ್ನಲ್ಲೇ  ವರದಿಗಾರ ಜಲಮ್ ಸಿಂಗ್ ಕಿರಾರ್ ವಿರುದ್ಧ 11 ಎಫ್‌ಐಆರ್‌ಗಳು ದಾಖಲಾಗಿದ್ದವು. ಬ್ಲಾಕ್‌ಮೇಲ್‌ ಆರೋಪದ ಮೇಲೆ ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಸೆಪ್ಟೆಂಬರ್‌ನಲ್ಲಿ ದೈನಿಕ್ ಭಾಸ್ಕರ್ ವರದಿ ಮಾಡಿದೆ.

ಕೋಟ್ವಾಲಿಯ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯೆ ದೂರು ದಾಖಲಿಸಿದ್ದಾರೆ. ವದಂತಿಗಳನ್ನು ಹರಡುವ ಮೂಲಕ ಸಿಂಗ್ ಸಿಸೋಡಿಯಾ ಅವರ ಇಮೇಜ್‌ಗೆ ಧಕ್ಕೆ ತಂದಿದ್ದಾರೆ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ವರದಿಗಾರ ಜಲಮ್ ಸಿಂಗ್ ಕಿರಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153, 384 ಮತ್ತು 385 ಮತ್ತು 469ರಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಸೆ.13 ರಂದು ಕೋಟಾದಿಂದ ಪತ್ರಕರ್ತ ಸಿಂಗ್ ಅವರನ್ನು ಬಂಧಿಸಲಾಯಿತು. ಸುಮಾರು ಡಜನ್ ಎಫ್‌ಐಆರ್‌ಗಳನ್ನು ಗುಣ ಮತ್ತು ಶಿವಪುರಿ ಜಿಲ್ಲೆಗಳಲ್ಲಿ ದಾಖಲಿಸಲಾಗಿದೆ ಎಂದು ಅವರ ಕುಟುಂಬದ ಸದಸ್ಯರು ನ್ಯೂಸ್‌ಲಾಂಡ್ರಿ  ಜೊತೆ ಮಾತನಾಡುತ್ತಾ ಹೇಳಿದ್ದಾರೆ.

11 ಎಫ್‌ಐಆರ್‌ಗಳಲ್ಲಿ ಎಂಟು ಎಫ್‌ಐಆರ್‌ಗಳು ಆಡಳಿತಾರೂಢ ಬಿಜೆಪಿಗೆ ಸಂಬಂಧಿಸಿದ ವ್ಯಕ್ತಿಗಳಿಂದ ದಾಖಲಾಗಿವೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿದೆ.

ಸಿಂಗ್ ಅವರು ತನ್ನ ವರದಿಯಲ್ಲಿ ಯಾವುದೇ ರಾಜಕಾರಣಿಯ ಹೆಸರು ಉಲ್ಲೇಖಿಸಿಲ್ಲ. ಆದರೂ ಸಚಿವರೊಬ್ಬರು ಸಿಂಗ್ ವಿರುದ್ಧ ಇತರರು ಹೆಚ್ಚು ದೂರುಗಳು ನೀಡುವಂತೆ ಮಾಡಿದ್ದಾರೆ ಹಾಗೂ ಅದಕ್ಕಾಗಿ ಆಡಳಿತದ ಮೇಲೆ ಒತ್ತಡ ಹೇರಿದ್ದಾರೆ ಎಂದು ದೈನಿಕ ಖುಲಾಸಾದ ಸಂಪಾದಕ ಸುರೇಶ್ ಆಚಾರ್ಯ ಹೇಳಿದ್ದಾರೆ.

ಎಲ್ಲಾ ಎಫ್‌ಐಆರ್‌ಗಳನ್ನು ಯಾವುದೇ ತನಿಖೆಯಿಲ್ಲದೆ ದಾಖಲಿಸಲಾಗಿದೆ. ಪರವಾಗಿಲ್ಲ, ನ್ಯಾಯಾಲಯ ಸಾಕ್ಷಿ ಕೇಳಲಿದೆ ಎಂದು ಆಚಾರ್ಯ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ  ಪತ್ರಕರ್ತರನ್ನು ಪ್ರತಿನಿಧಿಸುವ ವಕೀಲ ಮನೋಹರ್ ಮಿರೋಟಾ, ಸಿಂಗ್ ಅವರಿಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಅದನ್ನು ತಿರಸ್ಕರಿಸಲಾಗಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: ಇದು ಆತ್ಮಹತ್ಯೆಯಲ್ಲ, ಕನಸುಗಳ ಕೊಲೆ: ತೆಲಂಗಾಣ ಸರಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...