Homeಮುಖಪುಟಮಧ್ಯಪ್ರದೇಶ: ಬಿಜೆಪಿ ಸಚಿವರ ಕುರಿತು ವರದಿ ಮಾಡಿದ ಪತ್ರಕರ್ತನ ವಿರುದ್ಧ 11 ಎಫ್‌ಐಆರ್‌ ದಾಖಲು

ಮಧ್ಯಪ್ರದೇಶ: ಬಿಜೆಪಿ ಸಚಿವರ ಕುರಿತು ವರದಿ ಮಾಡಿದ ಪತ್ರಕರ್ತನ ವಿರುದ್ಧ 11 ಎಫ್‌ಐಆರ್‌ ದಾಖಲು

- Advertisement -
- Advertisement -

ಮಧ್ಯಪ್ರದೇಶ ಬಿಜೆಪಿ ಸರಕಾರದ ಸಚಿವರೊಬ್ಬರ ಬಗ್ಗೆ ವರದಿ ಮಾಡಿದ ಪತ್ರಕರ್ತರೊಬ್ಬರ ಮೇಲೆ 11 ಎಫ್‌ಐಆರ್‌ಗಳನ್ನು ಹಾಕಲಾಗಿದೆ.

ಮಧ್ಯಪ್ರದೇಶದಲ್ಲಿ ನ.17 ರಂದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದಕ್ಕೂ ಮೊದಲೇ ಪತ್ರಕರ್ತನ ಮೇಲೆ ಸರಣಿ ಕೇಸ್ ದಾಖಲು ಮತ್ತು ಬಂಧನವು ದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಯಾವ ರೀತಿ ಇದೆ ಎನ್ನುವುದನ್ನು ಮತ್ತೆ ಬಹಿರಂಗಪಡಿಸುತ್ತದೆ.

ಸೆ.7 ರಂದು ‘ದೈನಿಕ್ ಖುಲಾಸಾ’ದ ವರದಿಗಾರ ಜಲಮ್ ಸಿಂಗ್ ಕಿರಾರ್ ಅವರು  ಮಧ್ಯಪ್ರದೇಶದ ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ಅವರು ಮಹಿಳೆಯೊಂದಿಗೆ ಕಾಣಿಸಿಕೊಂಡಿರುವ ವಿವಾದಾತ್ಮಕ ವೀಡಿಯೊವ ಬಗ್ಗೆ ವರದಿ ಮಾಡಿದ್ದಾರೆ. ವರದಿಯಲ್ಲಿ ಗುಣಾದಲ್ಲಿ ವೈರಲ್ ಆಗಿರುವ ವೀಡಿಯೊದ ಕುರಿತು ಬರೆಯುತ್ತಾ, ರಾಜಕಾರಣಿಯೊಬ್ಬರು ವೀಡಿಯೋದಿಂದಾಗಿ ಚುನಾವಣಾ ಟಿಕೆಟ್ ಕಳೆದುಕೊಳ್ಳಬಹುದು ಎಂದು ಅವರು ಮಹೇಂದ್ರ ಸಿಂಗ್ ಹೆಸರನ್ನು ಉಲ್ಲೇಖಿಸದೆ ಬರೆದಿದ್ದರು.

ಇದರ ಬೆನ್ನಲ್ಲೇ  ವರದಿಗಾರ ಜಲಮ್ ಸಿಂಗ್ ಕಿರಾರ್ ವಿರುದ್ಧ 11 ಎಫ್‌ಐಆರ್‌ಗಳು ದಾಖಲಾಗಿದ್ದವು. ಬ್ಲಾಕ್‌ಮೇಲ್‌ ಆರೋಪದ ಮೇಲೆ ಸಿಂಗ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಸೆಪ್ಟೆಂಬರ್‌ನಲ್ಲಿ ದೈನಿಕ್ ಭಾಸ್ಕರ್ ವರದಿ ಮಾಡಿದೆ.

ಕೋಟ್ವಾಲಿಯ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯೆ ದೂರು ದಾಖಲಿಸಿದ್ದಾರೆ. ವದಂತಿಗಳನ್ನು ಹರಡುವ ಮೂಲಕ ಸಿಂಗ್ ಸಿಸೋಡಿಯಾ ಅವರ ಇಮೇಜ್‌ಗೆ ಧಕ್ಕೆ ತಂದಿದ್ದಾರೆ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ವರದಿಗಾರ ಜಲಮ್ ಸಿಂಗ್ ಕಿರಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153, 384 ಮತ್ತು 385 ಮತ್ತು 469ರಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಸೆ.13 ರಂದು ಕೋಟಾದಿಂದ ಪತ್ರಕರ್ತ ಸಿಂಗ್ ಅವರನ್ನು ಬಂಧಿಸಲಾಯಿತು. ಸುಮಾರು ಡಜನ್ ಎಫ್‌ಐಆರ್‌ಗಳನ್ನು ಗುಣ ಮತ್ತು ಶಿವಪುರಿ ಜಿಲ್ಲೆಗಳಲ್ಲಿ ದಾಖಲಿಸಲಾಗಿದೆ ಎಂದು ಅವರ ಕುಟುಂಬದ ಸದಸ್ಯರು ನ್ಯೂಸ್‌ಲಾಂಡ್ರಿ  ಜೊತೆ ಮಾತನಾಡುತ್ತಾ ಹೇಳಿದ್ದಾರೆ.

11 ಎಫ್‌ಐಆರ್‌ಗಳಲ್ಲಿ ಎಂಟು ಎಫ್‌ಐಆರ್‌ಗಳು ಆಡಳಿತಾರೂಢ ಬಿಜೆಪಿಗೆ ಸಂಬಂಧಿಸಿದ ವ್ಯಕ್ತಿಗಳಿಂದ ದಾಖಲಾಗಿವೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿದೆ.

ಸಿಂಗ್ ಅವರು ತನ್ನ ವರದಿಯಲ್ಲಿ ಯಾವುದೇ ರಾಜಕಾರಣಿಯ ಹೆಸರು ಉಲ್ಲೇಖಿಸಿಲ್ಲ. ಆದರೂ ಸಚಿವರೊಬ್ಬರು ಸಿಂಗ್ ವಿರುದ್ಧ ಇತರರು ಹೆಚ್ಚು ದೂರುಗಳು ನೀಡುವಂತೆ ಮಾಡಿದ್ದಾರೆ ಹಾಗೂ ಅದಕ್ಕಾಗಿ ಆಡಳಿತದ ಮೇಲೆ ಒತ್ತಡ ಹೇರಿದ್ದಾರೆ ಎಂದು ದೈನಿಕ ಖುಲಾಸಾದ ಸಂಪಾದಕ ಸುರೇಶ್ ಆಚಾರ್ಯ ಹೇಳಿದ್ದಾರೆ.

ಎಲ್ಲಾ ಎಫ್‌ಐಆರ್‌ಗಳನ್ನು ಯಾವುದೇ ತನಿಖೆಯಿಲ್ಲದೆ ದಾಖಲಿಸಲಾಗಿದೆ. ಪರವಾಗಿಲ್ಲ, ನ್ಯಾಯಾಲಯ ಸಾಕ್ಷಿ ಕೇಳಲಿದೆ ಎಂದು ಆಚಾರ್ಯ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ  ಪತ್ರಕರ್ತರನ್ನು ಪ್ರತಿನಿಧಿಸುವ ವಕೀಲ ಮನೋಹರ್ ಮಿರೋಟಾ, ಸಿಂಗ್ ಅವರಿಗೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಅದನ್ನು ತಿರಸ್ಕರಿಸಲಾಗಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: ಇದು ಆತ್ಮಹತ್ಯೆಯಲ್ಲ, ಕನಸುಗಳ ಕೊಲೆ: ತೆಲಂಗಾಣ ಸರಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...