Homeಮುಖಪುಟನಕಲಿ ಲಸಿಕೆ ಜಾಲದಿಂದ ಮೋಸಹೋದ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ : ಓರ್ವನ ಬಂಧನ

ನಕಲಿ ಲಸಿಕೆ ಜಾಲದಿಂದ ಮೋಸಹೋದ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ : ಓರ್ವನ ಬಂಧನ

- Advertisement -
- Advertisement -

ನಕಲಿ ಲಸಿಕೆ ಜಾಲದಿಂದ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸಂಸದೆ ಮಿಮಿ ಚಕ್ರವರ್ತಿ ಮೋಸ ಹೋಗಿದ್ದಾರೆ. ಮಂಗಳವಾರ ಕಾಸ್ಬಾ ಪ್ರದೇಶದಲ್ಲಿ ನಡೆದಿದ್ದ ಲಸಿಕಾ ಅಭಿಯಾನದಲ್ಲಿ ಸಂಸದೆ ಕೊರೊನಾ ಲಸಿಕೆ ತೆಗೆದುಕೊಂಡಿದ್ದರು.

ಈ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರದಲ್ಲಿ ಐಎಎಸ್ ಅಧಿಕಾರಿಯಂತೆ ನಟಿಸಿ ಕೊಲ್ಕತ್ತಾದಲ್ಲಿ ಹಲವು ವ್ಯಾಕ್ಸಿನೇಷನ್‌ಗಳ ಮೇಲ್ವಿಚಾರಣೆ ನಡೆಸುತ್ತಿದ್ದ ವ್ಯಕ್ತಿಯನ್ನು ಬುಧವಾರ ಬಂಧಿಸಲಾಗಿದೆ. ನೂರಾರು ಜನರಿಗೆ ನಕಲಿ ಲಸಿಕೆಗಳನ್ನು ನೀಡಿರುವ ಸಾಧ್ಯತೆ ಹಿನ್ನೆಲೆ ಕೊಲ್ಕತ್ತಾ ಪೊಲೀಸರು ತೀವ್ರ ತನಿಖೆಗೆ ಆರಂಭಿಸಿದ್ದಾರೆ.

ಕೊಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ ಜಂಟಿ ಆಯುಕ್ತರಂತೆ ಸೋಗು ಹಾಕಿಕೊಂಡು ಲಸಿಕಾ ಶಿಬಿರವನ್ನು ಆಯೋಜಿಸಿದ ಹೊಸೆನ್‌ಪುರದ ದೇಬಂಜನ್ ದೇಬ್ ಎಂಬ 28 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿಬಿರದಲ್ಲಿದ್ದ ಜನರಿಗೆ ನಿಜವಾದ ಅಥವಾ ನಕಲಿ ಲಸಿಕೆಗಳನ್ನು ನೀಡಲಾಗಿದೆಯೇ ಎಂದು ಕಂಡುಹಿಡಿಯಲು ಪೊಲೀಸರು ಲಸಿಕಾ ಸ್ಯಾಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: ‘ಕೇಂದ್ರ ಸರ್ಕಾರ’ ಅಲ್ಲ, ‘ಒಕ್ಕೂಟ ಸರ್ಕಾರ’: ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌‌!

ವ್ಯಾಕ್ಸಿನೇಷನ್ ಕೇಂದ್ರದಲ್ಲಿ ಲಸಿಕೆ ತೆಗೆದುಕೊಂಡ ನಂತರ ಯಾವುದೇ ಅಧಿಕೃತ ಪ್ರಮಾಣಪತ್ರ ದೊರೆಯದೆ ಇದ್ದಾಗ ನಟಿ, ಸಂಸದೆ ಮಿಮಿ ಚಕ್ರವರ್ತಿ ಪೊಲೀಸರಿಗೆ ದೂರು ನೀಡಿದ್ದಾರೆ. ಶಿಬಿರದಲ್ಲಿ ಸುಮಾರು 250 ಜನರಿಗೆ ಲಸಿಕೆ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಶಿಬಿರಕ್ಕೆ ಆಹ್ವಾನಿಸಿದಾಗ ದೇಬಂಜನ್ ದೇವ್ ಐಎಎಸ್ ಅಧಿಕಾರಿ ಎಂದು ಹೇಳಿಕೊಂಡಿದ್ದಾರೆ. ಕೋಲ್ಕತಾ ಮುನ್ಸಿಪಲ್ ಕಾರ್ಪೊರೇಷನ್ ಈ ಇನಾಕ್ಯುಲೇಷನ್ ಪ್ರಯತ್ನವನ್ನು ಆಯೋಜಿಸಿದೆ ಎಂದು ಅವರು ಹೇಳಿದರು.

ಕೋಲ್ಕತಾ ಮುನ್ಸಿಪಲ್ ಕಾರ್ಪೊರೇಶನ್‌ನ ಜಂಟಿ ಆಯುಕ್ತರು ಟ್ರಾನ್ಸ್ಜೆಂಡರ್ ಮತ್ತು ವಿಶೇಷ ಸಾಮರ್ಥ್ಯ ಹೊಂದಿರುವ ಜನರಿಗೆ ಲಸಿಕೆ ಶಿಬಿರವನ್ನು ಆಯೋಜಿಸುತ್ತಿದ್ದಾರೆ ಎಂದು ನಾನು ಶಿಬಿರದಲ್ಲಿ ಭಾಗವಹಿಸಿದ್ದೆ. ಜನರು ಲಸಿಕೆ ತೆಗೆದುಕೊಳ್ಳುವಂತೆ ಪ್ರೋತ್ಸಾಹಿಸಲು ಮತ್ತು ಕೊರೊನಾ ವೈರಸ್ ಹರಡುವುದನ್ನು ತಡೆಯಲು ನಾನು ಶಿಬಿರದಲ್ಲಿ ಲಸಿಕೆ ತೆಗೆದುಕೊಂಡೆ ಎಂದು ಹೇಳಿದ್ದಾರೆ.

ಆರೋಪಿತ ವ್ಯಕ್ತಿಯು ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸುವ ನೀಲಿ ಬೀಕನ್ ಲೈಟ್, ಲಾಂಛನ ಮತ್ತು ಸ್ಟಿಕ್ಕರ್ ಹೊಂದಿರುವ ಧ್ವಜವನ್ನು ಅಳವಡಿಸಿಕೊಂಡಿದ್ದ ಕಾರನ್ನು ಬಳಸುತ್ತಿದ್ದರು ಎಂದು ಸಂಸದೆ ತಿಳಿಸಿದ್ದು,  ಪೊಲೀಸರು ಕಾರನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರು ವಶಪಡಿಸಿಕೊಂಡಿರುವ ಲಸಿಕಾ ಬಾಟಲ್‌ಗಳ ಮೇಲೆ ಅವಧಿ ಮುಗಿತದ ದಿನಾಂಕ ಇಲ್ಲ ಎಂಬುದು ತಿಳಿದು ಬಂದಿದ್ದು, ಈ ಬಾಟಲುಗಳು ನಿಜವಾದವೋ ಅಥವಾ ನಕಲಿಯೋ ಎಂದು ಕಂಡುಹಿಡಿಯಲು ಪರೀಕ್ಷೆಗೆ ಕಳುಹಿಸಲಾಗುವುದು. ಈ ನಿಟ್ಟಿನಲ್ಲಿ ಆರೋಪಿತರನ್ನು ವಿಚಾರಣೆ ನಡೆಸಲಾಗುವುದು ಎಂದು ಕೋಲ್ಕತಾ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೋನಾ 3ನೇ ಅಲೆ ನಿರ್ವಹಣೆಗೆ 10 ಜನ ತಜ್ಞರ ಸಮಿತಿ ರಚಿಸಿದ ಪಶ್ಚಿಮ ಬಂಗಾಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...