Homeಮುಖಪುಟಮಹಾರಾಷ್ಟ್ರ ಸಿಎಂ ಉದ್ದವ್‌ ಠಾಕ್ರೆ ನನ್ನ ವಿರುದ್ಧ ಸ್ಪರ್ಧಿಸಲಿ: ಸಂಸದೆ ನವನೀತ್‌ ಸವಾಲು

ಮಹಾರಾಷ್ಟ್ರ ಸಿಎಂ ಉದ್ದವ್‌ ಠಾಕ್ರೆ ನನ್ನ ವಿರುದ್ಧ ಸ್ಪರ್ಧಿಸಲಿ: ಸಂಸದೆ ನವನೀತ್‌ ಸವಾಲು

- Advertisement -
- Advertisement -

“ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಚುನಾವಣೆಯಲ್ಲಿ ನನ್ನ ವಿರುದ್ಧ ಸ್ಪರ್ಧಿಸಲಿ” ಎಂದು ಅಮರಾವತಿ ಸಂಸದೆ ನವನೀತ್ ರಾಣಾ ಸವಾಲು ಹಾಕಿದ್ದಾರೆ. ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಲಾರ್ಡ್ ರಾಮ ಮತ್ತು ಮುಂಬೈನ ಜನರು ಶಿವಸೇನೆಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸವಾದ ‘ಮಾತೋಶ್ರೀ’ ಹೊರಗೆ ತಮ್ಮ ಬೆಂಬಲಿಗರೊಂದಿಗೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರಿಗೆ ಮೇ 4ರಂದು ಬುಧವಾರ ಜಾಮೀನು ದೊರೆತಿದೆ.

ಶಿವಸೇನೆಯ ಅಧ್ಯಕ್ಷರೂ ಆಗಿರುವ ಠಾಕ್ರೆ ಅವರು ನವೆಂಬರ್ 2019ರಲ್ಲಿ ಸಿಎಂ ಆದರು. ಅವರು ಮೇ 2020ರಲ್ಲಿ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನವನೀತ್ ರಾಣಾ, “ಉದ್ಧವ್ ಠಾಕ್ರೆ ಅವರು ಒಂದು ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಜನರಿಂದ ನೇರವಾಗಿ ಗೆದ್ದು ಬರಲಿ ಎಂದು ನಾನು ಸವಾಲು ಹಾಕುತ್ತೇನೆ. ನಾನು ಅವರ ವಿರುದ್ಧ ಹೋರಾಡುತ್ತೇನೆ” ಎಂದಿದ್ದಾರೆ.

“ನಾನು ಪ್ರಾಮಾಣಿಕತೆಯಿಂದ ಕಠಿಣ ಪರಿಶ್ರಮದಿಂದ ಚುನಾವಣೆಯಲ್ಲಿ ಗೆಲ್ಲುತ್ತೇನೆ, ಅವರಿಗೆ (ಸಿಎಂ) ಜನ ಶಕ್ತಿ ತಿಳಿಯಲಿದೆ” ಎಂದು ತಿಳಿಸಿದ್ದಾರೆ.

“ನಾನು 14 ದಿನ ಜೈಲಿನಲ್ಲಿದ್ದ ಅಪರಾಧವೇನು? ನೀವು ನನ್ನನ್ನು 14 ವರ್ಷಗಳ ಕಾಲ ಜೈಲಿನಲ್ಲಿ ಇಡಬಹುದು, ಆದರೆ ನಾನು ಭಗವಾನ್ ರಾಮ ಮತ್ತು ಹನುಮಂತನ ನಾಮಗಳನ್ನು ಜಪಿಸುವುದನ್ನು ನಿಲ್ಲಿಸುವುದಿಲ್ಲ” ಎಂದಿದ್ದಾರೆ ನವನೀತ್‌.

ಮುಂಬೈನಲ್ಲಿ ಪ್ರಚಾರ ಮಾಡುತ್ತೇನೆ. ಶಿವಸೇನೆಯ ಭ್ರಷ್ಟ ಆಡಳಿತವನ್ನು ಕೊನೆಗೊಳಿಸಲು ರಾಮಭಕ್ತರನ್ನು ಬೆಂಬಲಿಸುತ್ತೇನೆ ಎಂದು ನವನೀತ್‌ ಹೇಳಿದ್ದಾರೆ. ರಾಜ್ಯದಲ್ಲಿ ಶಿವಸೇನೆಯು ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಜೊತೆ ಅಧಿಕಾರವನ್ನು ಹಂಚಿಕೊಂಡಿದೆ. ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಕೂಡ ಶಿವಸೇನೆಯ ಹಿಡಿತದಲ್ಲಿದೆ.

ಸಿಎಂ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಚುನಾವಣಾ ಕಣಕ್ಕೆ ಇಳಿದ್ದರು. ಆ ಮೂಲಕ ಠಾಕ್ರೆ ಕುಟುಂಬದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ ಮೊದಲಿಗರೆಂದು ಗುರುತಿಸಿಕೊಂಡರು. ಆದಿತ್ಯ ಠಾಕ್ರೆ ಅವರು 2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ವರ್ಲಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.

ಇದನ್ನೂ ಓದಿರಿ: ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸ ‘ಮಾತೋಶ್ರೀ’ ಹೊರಗೆ ತಮ್ಮ ಬೆಂಬಲಿಗರೊಂದಿಗೆ ಹನುಮಾನ್ ಚಾಲೀಸಾ ಪಠಣ ಮಾಡಲು ಯತ್ನಿಸಿದ ನಂತರ ರಾಣಾ ದಂಪತಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

“ತಲಾ ರೂ 50,000 ಜಾಮೀನು ಬಾಂಡ್ ಅನ್ನು ಒದಗಿಸಿದ ನಂತರ ಜಾಮೀನು ನೀಡಲಾಯಿತು. ಈ ಅಪರಾಧವನ್ನು ಮತ್ತೆ ಮಾಡದಂತೆ ರಾಣಾ ದಂಪತಿಗೆ ಆದೇಶಿಸಲಾಗಿದೆ” ಎಂದು ಬಾರ್‌ ಅಂಡ್ ಬೆಂಚ್‌ ವರದಿ ಮಾಡಿದೆ.

ರಾಣಾರನ್ನು ಏಪ್ರಿಲ್ 23 ರಂದು ಬಂಧಿಸಲಾಯಿತು. ಹನುಮಾನ್ ಚಾಲೀಸಾ ಪಠಿಸುವ ಕಾರ್ಯಕ್ರಮ ಘೋಷಿಸಿದ ನಂತರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಅಪರಾಧ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...