Homeಮುಖಪುಟಮಹಾರಾಷ್ಟ್ರ ಸಿಎಂ ಉದ್ದವ್‌ ಠಾಕ್ರೆ ನನ್ನ ವಿರುದ್ಧ ಸ್ಪರ್ಧಿಸಲಿ: ಸಂಸದೆ ನವನೀತ್‌ ಸವಾಲು

ಮಹಾರಾಷ್ಟ್ರ ಸಿಎಂ ಉದ್ದವ್‌ ಠಾಕ್ರೆ ನನ್ನ ವಿರುದ್ಧ ಸ್ಪರ್ಧಿಸಲಿ: ಸಂಸದೆ ನವನೀತ್‌ ಸವಾಲು

- Advertisement -
- Advertisement -

“ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಚುನಾವಣೆಯಲ್ಲಿ ನನ್ನ ವಿರುದ್ಧ ಸ್ಪರ್ಧಿಸಲಿ” ಎಂದು ಅಮರಾವತಿ ಸಂಸದೆ ನವನೀತ್ ರಾಣಾ ಸವಾಲು ಹಾಕಿದ್ದಾರೆ. ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಲಾರ್ಡ್ ರಾಮ ಮತ್ತು ಮುಂಬೈನ ಜನರು ಶಿವಸೇನೆಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸವಾದ ‘ಮಾತೋಶ್ರೀ’ ಹೊರಗೆ ತಮ್ಮ ಬೆಂಬಲಿಗರೊಂದಿಗೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರಿಗೆ ಮೇ 4ರಂದು ಬುಧವಾರ ಜಾಮೀನು ದೊರೆತಿದೆ.

ಶಿವಸೇನೆಯ ಅಧ್ಯಕ್ಷರೂ ಆಗಿರುವ ಠಾಕ್ರೆ ಅವರು ನವೆಂಬರ್ 2019ರಲ್ಲಿ ಸಿಎಂ ಆದರು. ಅವರು ಮೇ 2020ರಲ್ಲಿ ಮಹಾರಾಷ್ಟ್ರ ವಿಧಾನ ಪರಿಷತ್ತಿನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನವನೀತ್ ರಾಣಾ, “ಉದ್ಧವ್ ಠಾಕ್ರೆ ಅವರು ಒಂದು ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಜನರಿಂದ ನೇರವಾಗಿ ಗೆದ್ದು ಬರಲಿ ಎಂದು ನಾನು ಸವಾಲು ಹಾಕುತ್ತೇನೆ. ನಾನು ಅವರ ವಿರುದ್ಧ ಹೋರಾಡುತ್ತೇನೆ” ಎಂದಿದ್ದಾರೆ.

“ನಾನು ಪ್ರಾಮಾಣಿಕತೆಯಿಂದ ಕಠಿಣ ಪರಿಶ್ರಮದಿಂದ ಚುನಾವಣೆಯಲ್ಲಿ ಗೆಲ್ಲುತ್ತೇನೆ, ಅವರಿಗೆ (ಸಿಎಂ) ಜನ ಶಕ್ತಿ ತಿಳಿಯಲಿದೆ” ಎಂದು ತಿಳಿಸಿದ್ದಾರೆ.

“ನಾನು 14 ದಿನ ಜೈಲಿನಲ್ಲಿದ್ದ ಅಪರಾಧವೇನು? ನೀವು ನನ್ನನ್ನು 14 ವರ್ಷಗಳ ಕಾಲ ಜೈಲಿನಲ್ಲಿ ಇಡಬಹುದು, ಆದರೆ ನಾನು ಭಗವಾನ್ ರಾಮ ಮತ್ತು ಹನುಮಂತನ ನಾಮಗಳನ್ನು ಜಪಿಸುವುದನ್ನು ನಿಲ್ಲಿಸುವುದಿಲ್ಲ” ಎಂದಿದ್ದಾರೆ ನವನೀತ್‌.

ಮುಂಬೈನಲ್ಲಿ ಪ್ರಚಾರ ಮಾಡುತ್ತೇನೆ. ಶಿವಸೇನೆಯ ಭ್ರಷ್ಟ ಆಡಳಿತವನ್ನು ಕೊನೆಗೊಳಿಸಲು ರಾಮಭಕ್ತರನ್ನು ಬೆಂಬಲಿಸುತ್ತೇನೆ ಎಂದು ನವನೀತ್‌ ಹೇಳಿದ್ದಾರೆ. ರಾಜ್ಯದಲ್ಲಿ ಶಿವಸೇನೆಯು ಕಾಂಗ್ರೆಸ್‌ ಹಾಗೂ ಎನ್‌ಸಿಪಿ ಜೊತೆ ಅಧಿಕಾರವನ್ನು ಹಂಚಿಕೊಂಡಿದೆ. ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಕೂಡ ಶಿವಸೇನೆಯ ಹಿಡಿತದಲ್ಲಿದೆ.

ಸಿಎಂ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಚುನಾವಣಾ ಕಣಕ್ಕೆ ಇಳಿದ್ದರು. ಆ ಮೂಲಕ ಠಾಕ್ರೆ ಕುಟುಂಬದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ ಮೊದಲಿಗರೆಂದು ಗುರುತಿಸಿಕೊಂಡರು. ಆದಿತ್ಯ ಠಾಕ್ರೆ ಅವರು 2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ವರ್ಲಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.

ಇದನ್ನೂ ಓದಿರಿ: ಸಿದ್ದಾಪುರ: ಸಂವಿಧಾನಕ್ಕಿಂತ ವೇದಗಳೇ ಶ್ರೇಷ್ಠ ಎಂದ ಸ್ವಾಮೀಜಿಯನ್ನು ಟೀಕಿಸಿದ್ದಕ್ಕೆ ಎಫ್‌ಐಆರ್‌!

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸ ‘ಮಾತೋಶ್ರೀ’ ಹೊರಗೆ ತಮ್ಮ ಬೆಂಬಲಿಗರೊಂದಿಗೆ ಹನುಮಾನ್ ಚಾಲೀಸಾ ಪಠಣ ಮಾಡಲು ಯತ್ನಿಸಿದ ನಂತರ ರಾಣಾ ದಂಪತಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

“ತಲಾ ರೂ 50,000 ಜಾಮೀನು ಬಾಂಡ್ ಅನ್ನು ಒದಗಿಸಿದ ನಂತರ ಜಾಮೀನು ನೀಡಲಾಯಿತು. ಈ ಅಪರಾಧವನ್ನು ಮತ್ತೆ ಮಾಡದಂತೆ ರಾಣಾ ದಂಪತಿಗೆ ಆದೇಶಿಸಲಾಗಿದೆ” ಎಂದು ಬಾರ್‌ ಅಂಡ್ ಬೆಂಚ್‌ ವರದಿ ಮಾಡಿದೆ.

ರಾಣಾರನ್ನು ಏಪ್ರಿಲ್ 23 ರಂದು ಬಂಧಿಸಲಾಯಿತು. ಹನುಮಾನ್ ಚಾಲೀಸಾ ಪಠಿಸುವ ಕಾರ್ಯಕ್ರಮ ಘೋಷಿಸಿದ ನಂತರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಅಪರಾಧ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...