Homeಮುಖಪುಟಮಧ್ಯ ಪ್ರದೇಶ ನರ್ಸಿಂಗ್ ಕಾಲೇಜು ಹಗರಣ: ಪ್ರತಿ ಸಂಸ್ಥೆಯಿಂದ 2-10 ಲಕ್ಷ ರೂ. ಲಂಚ ಪಡೆದ...

ಮಧ್ಯ ಪ್ರದೇಶ ನರ್ಸಿಂಗ್ ಕಾಲೇಜು ಹಗರಣ: ಪ್ರತಿ ಸಂಸ್ಥೆಯಿಂದ 2-10 ಲಕ್ಷ ರೂ. ಲಂಚ ಪಡೆದ ಸಿಬಿಐ ಅಧಿಕಾರಿಗಳು!

- Advertisement -
- Advertisement -

ಮಧ್ಯ ಪ್ರದೇಶದ ನರ್ಸಿಂಗ್ ಕಾಲೇಜು ಹಗರಣಕ್ಕೆ ಸಂಬಂಧಿಸಿದಂತೆ ನಡೆಸಿದ ಪರಿಶೀಲನೆಯಲ್ಲಿ ತಮ್ಮ ಅಧಿಕಾರಿಗಳೇ ಪೂರಕ ವರದಿ ನೀಡಲು ಪ್ರತಿ ಸಂಸ್ಥೆಯಿಂದ 2-10 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿರುವುದು ಬಯಲಾಗಿದೆ ಎಂದು ಕೇಂದ್ರೀಯ ತನಿಖಾ ತಂಡ (ಸಿಬಿಐ) ಹೇಳಿದೆ.

ಮಧ್ಯ ಪ್ರದೇಶ ಪೊಲೀಸ್ ಇಲಾಖೆಯಿಂದ ಸಿಬಿಐಗೆ ನಿಯೋಜನೆ ಮೇಲೆ ಬಂದಿರುವ ಇನ್ಸ್‌ಪೆಕ್ಟರ್‌ಗಳಾದ ರಾಹುಲ್ ರಾಜ್, ಸುಶೀಲ್ ಕುಮಾರ್ ಮಜೋಕಾ ಮತ್ತು ರಿಷಿ ಕಾಂತ್ ಅಸಾಥೆ ಸೇರಿದಂತೆ 22 ಮಂದಿಯ ವಿರುದ್ದ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ರಾಹುಲ್‌ ರಾಜ್‌ನನ್ನು ಭಾನುವಾರ ಬಂಧಿಸಿದೆ ಎಂದು ಸಿಬಿಐನ ಉಪ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ಪ್ರಸಾದ್ ತಿಳಿಸಿದ್ದಾರೆ.

ಸಿಬಿಐ ಎಫ್‌ಐಆರ್‌ನಲ್ಲಿ ನರ್ಸಿಂಗ್ ಕೋರ್ಸ್‌ಗಳನ್ನು ನೀಡುತ್ತಿರುವ 8 ಕಾಲೇಜುಗಳ ನಿರ್ದೇಶಕರು, ಅಧ್ಯಕ್ಷರು ಮತ್ತು ತಪಾಸಣಾ ತಂಡಗಳ ಪರವಾಗಿ ಲಂಚ ಸಂಗ್ರಹಿಸಿದ ಸಿಬ್ಬಂದಿ ಮತ್ತು ಮಧ್ಯವರ್ತಿಗಳನ್ನು ಹೆಸರಿಸಿದೆ.

ಸಿಬಿಐ ದಾಖಲಿಸಿದ ಪ್ರಕರಣ, ಸಂಸ್ಥೆ ಭ್ರಷ್ಟಾಚಾರದ ವಿರುದ್ದ ಶೂನ್ಯ-ಸಹಿಷ್ಣು ನೀತಿಯನ್ನು ಹೊಂದಿದೆ. ಸಂಸ್ಥೆಯ ಮೌಲ್ಯಗಳಿಂದ ವಿಮುಖರಾಗುವ ತನ್ನ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲೂ ಹಿಂಜರಿಯುವುದಿಲ್ಲ ಎಂಬುವುದನ್ನು ತೋರಿಸುತ್ತದೆ ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶದ ಮೇರೆಗೆ ರಾಜ್ಯದ ನರ್ಸಿಂಗ್ ಕಾಲೇಜುಗಳಲ್ಲಿ ತಪಾಸಣೆ ನಡೆಸಲು ಸಿಬಿಐ ತಂಡವನ್ನು ರಚಿಸಿತ್ತು. ಇದರಲ್ಲಿ ಸಿಬಿಐ ಅಧಿಕಾರಿಗಳ ಜೊತೆಗೆ ಭಾರತೀಯ ನರ್ಸಿಂಗ್ ಕೌನ್ಸಿಲ್‌ನಿಂದ ನಾಮನಿರ್ದೇಶನಗೊಂಡ ಸಿಬ್ಬಂದಿ ಮತ್ತು ರಾಜ್ಯದ ಅಧಿಕಾರಿಗಳು ಇದ್ದಾರೆ.

ನರ್ಸಿಂಗ್ ಕಾಲೇಜು ಹಗರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಗಳಿಗೆ ಪೂರಕವಾಗಿ ವರದಿ ನೀಡಲು ತಮ್ಮ ಅಧಿಕಾರಿಗಳೇ ಲಂಚ ಪಡೆದಿದ್ದಾರೆ ಎಂಬ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ತಪಾಸಣೆ ತಂಡ ಎಫ್‌ಐಆರ್ ದಾಖಲಿಸಿದೆ.

ಪ್ರತಿ ನರ್ಸಿಂಗ್ ಕಾಲೇಜಿನಿಂದ ಮಧ್ಯವರ್ತಿಗಳ ಮೂಲಕ 2 ರಿಂದ 10 ಲಕ್ಷದವರೆಗೆ ಹಣ ಸಂಗ್ರಹಿಸುತ್ತಿದ್ದ ಸಿಬಿಐ ಅಧಿಕಾರಿಗಳು, ಮಧ್ಯವರ್ತಿಗಳಿಗೆ 25 ರಿಂದ 50 ಸಾವಿರದವರೆಗೆ ನೀಡುತ್ತಿದ್ದರು ಎಂದು ತನಿಖೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...