Homeಮುಖಪುಟಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ: ಎಚ್.ವಿಶ್ವನಾಥ್

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ: ಎಚ್.ವಿಶ್ವನಾಥ್

ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ?

- Advertisement -
- Advertisement -

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ದುಬಾರಿ ಟೋಲ್ ವಸೂಲಿ ಮಾಡುತ್ತಿರುವುದರ ವಿರುದ್ಧ​ ಮಾರ್ಚ್ 17ರಂದು ಹೆದ್ದಾರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಕಾಮಗಾರಿಯಲ್ಲಿ ದೊಡ್ಡ ಅಕ್ರಮವಾಗಿದ್ದು, ಹೆದ್ದಾರಿಗೆ ಸರಬರಾಜು ಆಗಿರುವ ಸಾಮಗ್ರಿಗಳು ಪ್ರತಾಪ್ ಸಿಂಹ ಬೆಂಬಲಿಗರಿಗೆ ಸೇರಿದ್ದಾಗಿವೆ. ಆ ರೀತಿಯಲ್ಲಿ ಕೋಟ್ಯಾಂತರ ರೂ ಕಮಿಷನ್ ಹೊಡೆದಿದ್ದಾರೆ. ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ ಎಂದು ಪ್ರಶ್ನಿಸಿದರು.

ದಶಪಥ ರಸ್ತೆ ಬಗ್ಗೆ ಸಾಮಾನ್ಯ ಜನರಿಗೆ ಗೊತ್ತಿಲ್ಲ. ಒಂದು ಕಡೆ ಪ್ರತಾಪ್ ಸಿಂಹ ನಾನೇ ಇದರ ರುವಾರಿ ಅಂತಾರೆ. ಆದರೆ 2014 ರಲ್ಲಿ ನಾನು, ಧ್ರುವನಾರಾಯಣ್ ಸಂಸದರಾಗಿದ್ದೆವು. ಮೊದಲು ಇದ್ದ 4 ಪಥದ ರಸ್ತೆಗೆ ಎಸ್. ಎಂ ಕೃಷ್ಣ ಅವರ ಕಾಲಾವಧಿಯಲ್ಲಿ ಅನುಮೋದನೆ ಸಿಕ್ಕಿತ್ತು. ನಂತರ ಎಚ್.ಸಿ ಮಹಾದೇವಪ್ಪ ಅವರು ಪಿಡಬ್ಲ್ಯುಡಿ ಸಚಿವರಾಗಿದ್ದಾಗ ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಯಿತು. ಯುಪಿಎ ಸರ್ಕಾರದ ಮನಮೋಹನ್ ಸಿಂಗ್ ಈ ರಸ್ತೆ ಅಭಿವೃದ್ಧಿಗೆ ಅನುಮೋದನೆ ಕೊಟ್ಟಿದ್ದರು. ಈಗ ಬಿಜೆಪಿಯವರು ನಾವು ಮಾಡಿಸಿದ್ದು ಅಂತ ಬೊಗಳೆ ಬಿಡುತ್ತಿದ್ದಾರೆ. ಯಾರಪ್ಪನ ದುಡ್ಡು ತಂದು ಕೊಟ್ಟಿದ್ದೀರೀ? ಜನರ ಬೆವರಿನ ದುಡ್ಡಿನಿಂದ ಮಾಡಿಸಿದ್ದು ಇದು. ನಿಮ್ಮ ಮನೆಯಿಂದ ತಂದಿದ್ದ ದುಡ್ಡಲ್ಲ ಎಂದರು.

ಬಿಜೆಪಿ ಅವರು ತಮ್ಮ ಮನೆಯಿಂದ ತಂದು ಮಾಡಿಸಿದ ಹಾಗೆ ಮಾತಾಡುತ್ತಾರೆ. ಯುಪಿಎ ಸರ್ಕಾರದಲ್ಲಿ ಸುಮಾರು 3 ಸಾವಿರ ಕೋಟಿಗೆ ಅನುಮೋದನೆ ಸಿಕ್ಕಿತ್ತು. ನಂತರ ಬಿಜೆಪಿ ಸರ್ಕಾರ 6 ಸಾವಿರ ಕೋಟಿಗೆ ತಂತು. ಈಗ 9 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ. ಇದು ಖಾಸಗಿ ಹೆದ್ದಾರಿ ನಿರ್ಮಾಣ ಕಂಪನಿ ವತಿಯಿಂದ ನಿರ್ಮಿಸಲಾಗುತ್ತಿದೆ. ಇವರು ಗಡ್ಕರಿ ಸಂಬಂಧಿ. 40% ಸರ್ಕಾರ ಕೊಟ್ಟರೆ ಇನ್ನು ಉಳಿದ 60% ಹಣವನ್ನು ಟೋಲ್ ಮೂಲಕ ಸಂಗ್ರಹಿಸಲಾಗುತ್ತದೆ ಎಂದು ಆರೋಪಿಸಿದರು.

ಅರ್ಧ ಶೇವ್ ಮಾಡಿದ ಹಾಗೆ ಇನ್ನೂ ಕಾಮಗಾರಿ ಮುಗಿಯದಿದ್ದರೂ ಟೋಲ್ ಸಂಗ್ರಹಿಸಿಲು ಸರ್ಕಾರ ಹೊರಟಿದೆ. ಇನ್ನೂ ಸರ್ವೀಸ್ ರಸ್ತೆ ಕಾಮಗಾರಿ ಮುಗಿದಿಲ್ಲ. ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಇದರಿಂದಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸಾವಿರಾರು ಜನರ ಜೀವನ ಬೀದಿಗೆ ಬಿದ್ದಿದೆ. ಇದೆಲ್ಲದರ ವಿರುದ್ಧ ಪ್ರತಿಭಟನೆ ನಡೆಸುತ್ತೇನೆ ಎಂದು ವಿಶ್ವನಾಥ್ ಹೇಳಿದ್ದಾರೆ.

ಇದನ್ನೂ ಓದಿ; ಲಂಚಾರೋಪಿ ಮಾಡಾಳ್ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಲೋಕಾಯುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...