Homeಮುಖಪುಟಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ: ಎಚ್.ವಿಶ್ವನಾಥ್

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ: ಎಚ್.ವಿಶ್ವನಾಥ್

ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ?

- Advertisement -
- Advertisement -

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ದುಬಾರಿ ಟೋಲ್ ವಸೂಲಿ ಮಾಡುತ್ತಿರುವುದರ ವಿರುದ್ಧ​ ಮಾರ್ಚ್ 17ರಂದು ಹೆದ್ದಾರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಕಾಮಗಾರಿಯಲ್ಲಿ ದೊಡ್ಡ ಅಕ್ರಮವಾಗಿದ್ದು, ಹೆದ್ದಾರಿಗೆ ಸರಬರಾಜು ಆಗಿರುವ ಸಾಮಗ್ರಿಗಳು ಪ್ರತಾಪ್ ಸಿಂಹ ಬೆಂಬಲಿಗರಿಗೆ ಸೇರಿದ್ದಾಗಿವೆ. ಆ ರೀತಿಯಲ್ಲಿ ಕೋಟ್ಯಾಂತರ ರೂ ಕಮಿಷನ್ ಹೊಡೆದಿದ್ದಾರೆ. ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ ಎಂದು ಪ್ರಶ್ನಿಸಿದರು.

ದಶಪಥ ರಸ್ತೆ ಬಗ್ಗೆ ಸಾಮಾನ್ಯ ಜನರಿಗೆ ಗೊತ್ತಿಲ್ಲ. ಒಂದು ಕಡೆ ಪ್ರತಾಪ್ ಸಿಂಹ ನಾನೇ ಇದರ ರುವಾರಿ ಅಂತಾರೆ. ಆದರೆ 2014 ರಲ್ಲಿ ನಾನು, ಧ್ರುವನಾರಾಯಣ್ ಸಂಸದರಾಗಿದ್ದೆವು. ಮೊದಲು ಇದ್ದ 4 ಪಥದ ರಸ್ತೆಗೆ ಎಸ್. ಎಂ ಕೃಷ್ಣ ಅವರ ಕಾಲಾವಧಿಯಲ್ಲಿ ಅನುಮೋದನೆ ಸಿಕ್ಕಿತ್ತು. ನಂತರ ಎಚ್.ಸಿ ಮಹಾದೇವಪ್ಪ ಅವರು ಪಿಡಬ್ಲ್ಯುಡಿ ಸಚಿವರಾಗಿದ್ದಾಗ ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಯಿತು. ಯುಪಿಎ ಸರ್ಕಾರದ ಮನಮೋಹನ್ ಸಿಂಗ್ ಈ ರಸ್ತೆ ಅಭಿವೃದ್ಧಿಗೆ ಅನುಮೋದನೆ ಕೊಟ್ಟಿದ್ದರು. ಈಗ ಬಿಜೆಪಿಯವರು ನಾವು ಮಾಡಿಸಿದ್ದು ಅಂತ ಬೊಗಳೆ ಬಿಡುತ್ತಿದ್ದಾರೆ. ಯಾರಪ್ಪನ ದುಡ್ಡು ತಂದು ಕೊಟ್ಟಿದ್ದೀರೀ? ಜನರ ಬೆವರಿನ ದುಡ್ಡಿನಿಂದ ಮಾಡಿಸಿದ್ದು ಇದು. ನಿಮ್ಮ ಮನೆಯಿಂದ ತಂದಿದ್ದ ದುಡ್ಡಲ್ಲ ಎಂದರು.

ಬಿಜೆಪಿ ಅವರು ತಮ್ಮ ಮನೆಯಿಂದ ತಂದು ಮಾಡಿಸಿದ ಹಾಗೆ ಮಾತಾಡುತ್ತಾರೆ. ಯುಪಿಎ ಸರ್ಕಾರದಲ್ಲಿ ಸುಮಾರು 3 ಸಾವಿರ ಕೋಟಿಗೆ ಅನುಮೋದನೆ ಸಿಕ್ಕಿತ್ತು. ನಂತರ ಬಿಜೆಪಿ ಸರ್ಕಾರ 6 ಸಾವಿರ ಕೋಟಿಗೆ ತಂತು. ಈಗ 9 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ. ಇದು ಖಾಸಗಿ ಹೆದ್ದಾರಿ ನಿರ್ಮಾಣ ಕಂಪನಿ ವತಿಯಿಂದ ನಿರ್ಮಿಸಲಾಗುತ್ತಿದೆ. ಇವರು ಗಡ್ಕರಿ ಸಂಬಂಧಿ. 40% ಸರ್ಕಾರ ಕೊಟ್ಟರೆ ಇನ್ನು ಉಳಿದ 60% ಹಣವನ್ನು ಟೋಲ್ ಮೂಲಕ ಸಂಗ್ರಹಿಸಲಾಗುತ್ತದೆ ಎಂದು ಆರೋಪಿಸಿದರು.

ಅರ್ಧ ಶೇವ್ ಮಾಡಿದ ಹಾಗೆ ಇನ್ನೂ ಕಾಮಗಾರಿ ಮುಗಿಯದಿದ್ದರೂ ಟೋಲ್ ಸಂಗ್ರಹಿಸಿಲು ಸರ್ಕಾರ ಹೊರಟಿದೆ. ಇನ್ನೂ ಸರ್ವೀಸ್ ರಸ್ತೆ ಕಾಮಗಾರಿ ಮುಗಿದಿಲ್ಲ. ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಇದರಿಂದಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸಾವಿರಾರು ಜನರ ಜೀವನ ಬೀದಿಗೆ ಬಿದ್ದಿದೆ. ಇದೆಲ್ಲದರ ವಿರುದ್ಧ ಪ್ರತಿಭಟನೆ ನಡೆಸುತ್ತೇನೆ ಎಂದು ವಿಶ್ವನಾಥ್ ಹೇಳಿದ್ದಾರೆ.

ಇದನ್ನೂ ಓದಿ; ಲಂಚಾರೋಪಿ ಮಾಡಾಳ್ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಲೋಕಾಯುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...