Homeಮುಖಪುಟಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ: ಎಚ್.ವಿಶ್ವನಾಥ್

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ: ಎಚ್.ವಿಶ್ವನಾಥ್

ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ?

- Advertisement -
- Advertisement -

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯಲ್ಲಿ ಸಂಸದ ಪ್ರತಾಪ್ ಸಿಂಹ ಕೋಟ್ಯಾಂತರ ರೂ ಕಮಿಷನ್ ತಿಂದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ದುಬಾರಿ ಟೋಲ್ ವಸೂಲಿ ಮಾಡುತ್ತಿರುವುದರ ವಿರುದ್ಧ​ ಮಾರ್ಚ್ 17ರಂದು ಹೆದ್ದಾರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಕಾಮಗಾರಿಯಲ್ಲಿ ದೊಡ್ಡ ಅಕ್ರಮವಾಗಿದ್ದು, ಹೆದ್ದಾರಿಗೆ ಸರಬರಾಜು ಆಗಿರುವ ಸಾಮಗ್ರಿಗಳು ಪ್ರತಾಪ್ ಸಿಂಹ ಬೆಂಬಲಿಗರಿಗೆ ಸೇರಿದ್ದಾಗಿವೆ. ಆ ರೀತಿಯಲ್ಲಿ ಕೋಟ್ಯಾಂತರ ರೂ ಕಮಿಷನ್ ಹೊಡೆದಿದ್ದಾರೆ. ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆಯನ್ನು ನೋಡಿ ಮತ್ತು ಈಗ ಪ್ರತಾಪ್ ಸಿಂಹ ಕಟ್ಟಿಸುತ್ತಿರುವ ಮನೆಯನ್ನು ನೋಡಿ. ಎಷ್ಟು ದೊಡ್ಡ ಮನೆ ಕಟ್ಟಿಸುತ್ತಿದ್ದಾರೆ ಗೊತ್ತೆ ಎಂದು ಪ್ರಶ್ನಿಸಿದರು.

ದಶಪಥ ರಸ್ತೆ ಬಗ್ಗೆ ಸಾಮಾನ್ಯ ಜನರಿಗೆ ಗೊತ್ತಿಲ್ಲ. ಒಂದು ಕಡೆ ಪ್ರತಾಪ್ ಸಿಂಹ ನಾನೇ ಇದರ ರುವಾರಿ ಅಂತಾರೆ. ಆದರೆ 2014 ರಲ್ಲಿ ನಾನು, ಧ್ರುವನಾರಾಯಣ್ ಸಂಸದರಾಗಿದ್ದೆವು. ಮೊದಲು ಇದ್ದ 4 ಪಥದ ರಸ್ತೆಗೆ ಎಸ್. ಎಂ ಕೃಷ್ಣ ಅವರ ಕಾಲಾವಧಿಯಲ್ಲಿ ಅನುಮೋದನೆ ಸಿಕ್ಕಿತ್ತು. ನಂತರ ಎಚ್.ಸಿ ಮಹಾದೇವಪ್ಪ ಅವರು ಪಿಡಬ್ಲ್ಯುಡಿ ಸಚಿವರಾಗಿದ್ದಾಗ ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಯಿತು. ಯುಪಿಎ ಸರ್ಕಾರದ ಮನಮೋಹನ್ ಸಿಂಗ್ ಈ ರಸ್ತೆ ಅಭಿವೃದ್ಧಿಗೆ ಅನುಮೋದನೆ ಕೊಟ್ಟಿದ್ದರು. ಈಗ ಬಿಜೆಪಿಯವರು ನಾವು ಮಾಡಿಸಿದ್ದು ಅಂತ ಬೊಗಳೆ ಬಿಡುತ್ತಿದ್ದಾರೆ. ಯಾರಪ್ಪನ ದುಡ್ಡು ತಂದು ಕೊಟ್ಟಿದ್ದೀರೀ? ಜನರ ಬೆವರಿನ ದುಡ್ಡಿನಿಂದ ಮಾಡಿಸಿದ್ದು ಇದು. ನಿಮ್ಮ ಮನೆಯಿಂದ ತಂದಿದ್ದ ದುಡ್ಡಲ್ಲ ಎಂದರು.

ಬಿಜೆಪಿ ಅವರು ತಮ್ಮ ಮನೆಯಿಂದ ತಂದು ಮಾಡಿಸಿದ ಹಾಗೆ ಮಾತಾಡುತ್ತಾರೆ. ಯುಪಿಎ ಸರ್ಕಾರದಲ್ಲಿ ಸುಮಾರು 3 ಸಾವಿರ ಕೋಟಿಗೆ ಅನುಮೋದನೆ ಸಿಕ್ಕಿತ್ತು. ನಂತರ ಬಿಜೆಪಿ ಸರ್ಕಾರ 6 ಸಾವಿರ ಕೋಟಿಗೆ ತಂತು. ಈಗ 9 ಸಾವಿರ ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ. ಇದು ಖಾಸಗಿ ಹೆದ್ದಾರಿ ನಿರ್ಮಾಣ ಕಂಪನಿ ವತಿಯಿಂದ ನಿರ್ಮಿಸಲಾಗುತ್ತಿದೆ. ಇವರು ಗಡ್ಕರಿ ಸಂಬಂಧಿ. 40% ಸರ್ಕಾರ ಕೊಟ್ಟರೆ ಇನ್ನು ಉಳಿದ 60% ಹಣವನ್ನು ಟೋಲ್ ಮೂಲಕ ಸಂಗ್ರಹಿಸಲಾಗುತ್ತದೆ ಎಂದು ಆರೋಪಿಸಿದರು.

ಅರ್ಧ ಶೇವ್ ಮಾಡಿದ ಹಾಗೆ ಇನ್ನೂ ಕಾಮಗಾರಿ ಮುಗಿಯದಿದ್ದರೂ ಟೋಲ್ ಸಂಗ್ರಹಿಸಿಲು ಸರ್ಕಾರ ಹೊರಟಿದೆ. ಇನ್ನೂ ಸರ್ವೀಸ್ ರಸ್ತೆ ಕಾಮಗಾರಿ ಮುಗಿದಿಲ್ಲ. ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿದ್ದಾರೆ. ಇದರಿಂದಾಗಿ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸಾವಿರಾರು ಜನರ ಜೀವನ ಬೀದಿಗೆ ಬಿದ್ದಿದೆ. ಇದೆಲ್ಲದರ ವಿರುದ್ಧ ಪ್ರತಿಭಟನೆ ನಡೆಸುತ್ತೇನೆ ಎಂದು ವಿಶ್ವನಾಥ್ ಹೇಳಿದ್ದಾರೆ.

ಇದನ್ನೂ ಓದಿ; ಲಂಚಾರೋಪಿ ಮಾಡಾಳ್ ಜಾಮೀನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಲೋಕಾಯುಕ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...